Breaking News

ರಾಜಕೀಯ

ಬೀನ್ಸ್‌ ಬೆಲೆ ಇಳಿಕೆ; ಟೊಮೆಟೊ ದುಬಾರಿ

ಮೈಸೂರು: ದ್ವಿಶತಕ ದಾಟಿದ್ದ ಬೀನ್ಸ್‌ ಬೆಲೆಯು ಈ ವಾರ ಅರ್ಧದಷ್ಟು ಇಳಿಕೆ ಆಗಿದ್ದು, ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಟೊಮೆಟೊ ಧಾರಣೆ ಏರುಮುಖವಾಗಿದೆ. ವಾರದ ಹಿಂದಷ್ಟೇ ಬೀನ್ಸ್‌ ಪ್ರತಿ ಕೆ.ಜಿ.ಗೆ ₹200ರವರೆಗೆ ಮಾರಾಟವಾಗಿ ಕೊಳ್ಳುವವರ ಕಣ್ಣಲ್ಲಿ ನೀರು ತರಿಸಿತ್ತು. ರಾಜ್ಯದಾದ್ಯಂತ ಕಳೆದೊಂದು ತಿಂಗಳಿಂದ ಹದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಬೀನ್ಸ್‌ ಬೆಳೆಯಲು ಆರಂಭಿಸಿದ್ದು, ಮಾರುಕಟ್ಟೆಗೆ ಉತ್ಪನ್ನದ ಆವಕ ಏರತೊಡಗಿದೆ. ಈ ಹಿನ್ನೆಲೆಯಲ್ಲಿ ಇದರ ಬೆಲೆ ಗಣನೀಯ ಇಳಿಕೆ ಕಂಡಿದೆ. ಮೈಸೂರು …

Read More »

ವರ್ಷದ ಬಳಿಕ ಬಾಗಿಲು ತೆರೆಯಲಿದೆ ಸಂಸದರ ಕಚೇರಿ

ಕಾರವಾರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಚೇರಿಯು ಸುಮಾರು ಒಂದು ವರ್ಷದ ಬಳಿಕ ಬಾಗಿಲು ತೆರೆಯಲಿದೆ. ಇದಕ್ಕಾಗಿ ಸಿದ್ಧತೆ ನಡೆದಿದೆ. ಜನರು ದೂರು, ಅಹವಾಲು ಸಲ್ಲಿಕೆಗೆ ಅನುಕೂಲವಾಗುವಂತೆ ಜಿಲ್ಲಾಕೇಂದ್ರದಲ್ಲಿ ಸಂಸದರ ಅಧಿಕೃತ ಕಚೇರಿ ತೆರೆಯಲಾಗುತ್ತದೆ. ಉತ್ತರ ಕನ್ನಡ ಸಂಸದರ ಕಚೇರಿ ಕಳೆದ ಹಲವು ತಿಂಗಳುಗಳಿಂದ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿತ್ತು ಎಂಬ ಆರೋಪಗಳಿದ್ದವು. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಯ ಬಾಗಿಲು …

Read More »

ಅಪ್ಪನಿದ್ದ ಸೆಲ್‌ಗೆ ಮಗ: ಅತ್ಯಾಚಾರ ಕೇಸ್‌ನಲ್ಲಿ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನ

ಬೆಂಗಳೂರು, ಜೂನ್ 10: ಹಾಸನ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಪ್ರಕರಣ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಆದೇಶ ಹೊರಡಿಸಿದೆ. ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು. ಪ್ರಜ್ವಲ್ ಮೇಲೆ ಇನ್ನು ಎರಡು ಅತ್ಯಾಚಾರ …

Read More »

ಮೋದಿ ಗೆದ್ದಿರುವುದು 1.5 ಲಕ್ಷ ಮತಗಳ ಅಂತರದಲ್ಲಿ ಮಾತ್ರ: ಸಂತೋಷ್ ಲಾಡ್

ಧಾರವಾಡ: ‘ಮೋದಿ ಅಲೆ ಕೆಲವು ಕಡೆ ಮಾತ್ರ ಇದೆ, ಎಲ್ಲ ಕಡೆ ಇಲ್ಲ. ಮೋದಿ ಅವರು ಗೆದ್ದಿರುವುದೇ 1.5 ಲಕ್ಷ ಮತಗಳ ಅಂತರದಲ್ಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕುಟುಕಿದರು. ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರಧಾನಿಗಳು 5 ಲಕ್ಷಕ್ಕೂ ಹೆಚ್ಚು ಅಂತರ ಪಡೆದವರೇ ಹೆಚ್ಚು. ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಎರಡನೇ ಪ್ರಧಾನಿ ಮೋದಿ. ಚಂದ್ರಶೇಖರ್ ಅವರು 1.5 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು ಎಂದರು. …

Read More »

ಕಾರು ಚಾಲಕನ ನಿಯಂತ್ರಣ ತಪ್ಪಿ, ಕಬ್ಬಿನ ಗದ್ದೆಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ- ಇಬ್ಬರ ಸಾವು

ಹಂದಿಗುಂದ: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಬ್ಬಿನ ಗದ್ದೆಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಗ್ರಾಮದ ಹೊರವಲಯದಲ್ಲಿ ಶನಿವಾರ ಸಂಜೆ ನಡೆದಿದೆ. ಸಮೀಪದ ಪಾಲಬಾವಿಯ ಮಹಾಲಿಂಗ ನಿಂಗನೂರ(47), ಈರಪ್ಪ ಉಗಾರೆ(32) ಮೃತಪಟ್ಟವರು. ಈ ಘಟನೆಯಲ್ಲಿ ಇಮಾಮ್ ಸನದಿ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಚಿಕಿತ್ಸೆಗಾಗಿ ಹಾರೂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಸದ್ದಾಮ್‌ ಪಠಾಣ ಪರಾರಿಯಾಗಿದ್ದಾರೆ. ‘ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ …

Read More »

3ನೇ ಬಾರಿಗೆ ಭಾರತದ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಪ್ರಧಾನಿ ಮೋದಿ ಅವರು ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಇಂದು 3ನೇ ಬಾರಿಗೆ ಭಾರತದ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗಾದ್ರೆ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ, 2014 ರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಯದಲ್ಲಿ ಹೇಗೆ ಕಾಣ್ತಾ ಇದ್ರು? ಇಂದು ಯಾವ ರೀತಿ ಕಂಡರು? ಬನ್ನಿ ನೋಡೋಣ. 2014ರ …

Read More »

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ,

ಮೈಸೂರು, ಜೂನ್.09: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ವಂಚನೆ (Cheat) ಮಾಡಿರುವ ಆರೋಪ ಮೈಸೂರಿನ (Mysuru) ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಕೇಳಿ ಬಂದಿದೆ. 25 ವರ್ಷದ ಯುವಕ 34 ವರ್ಷದ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ. ಮಹಿಳೆ ಗರ್ಭಿಣಿಯಾಗಿದ್ದು ಯುವಕ ನಾಪತ್ತೆಯಾಗಿದ್ದಾನೆ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ತೆ 2018ರಲ್ಲಿ ಪತಿಯಿಂದ ವಿಚ್ಛೇದನ ಪಡೆದು …

Read More »

ಇಂದೇ ನರೇಂದ್ರ ಮೋದಿ ಪ್ರಮಾಣ ವಚನ ಯಾಕೆ

ಬೆಂಗಳೂರು, ಜೂನ್‌ 09: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ಜೂನ್‌ 09 ಭಾನುವಾರ ಸಂಜೆ 7.15ಕ್ಕೆ ಮೋದಿ ಪದಗ್ರಹಣ ನಡೆಯಲಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುತ್ತಿರುವ ಇಂದಿನ ದಿನ ಹೇಗಿದೆ. ಜೋತಿಷ್ಯದ ಪ್ರಕಾರ ಇಂದಿನ ದಿನ ವಿಶೇಷ ಹೇಗಿದೆ ಎನ್ನುವುದರ ಬಗ್ಗೆ ವಿವರಣೆ ಇಲ್ಲಿದೆ ಓದಿ. ದೇಶದ ಪ್ರಧಾನಿ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮ’ ಹಗರಣ: ‘ಮೂವರು ಸಚಿವ’ರು ಶಾಮೀಲು?!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಈ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾಗಿತ್ತು. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಮೂವರು ಸಚಿವರು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ.   ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ರಾಜ್ಯ ಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ದೊರೆತಿದೆ. ಈ ಹಗರಣವು ಸರ್ಕಾರದ ಬುಡವನ್ನೇ …

Read More »

ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಹಾಲಹಂಡೆ ಜಲಪಾತ

ಗುಳೇದಗುಡ್ಡ : ಕಾನನ ಮಧ್ಯದೊಳಗೊಂದು ನೀರಿನ ಆರ್ಭಟ. ಎತ್ತ ನೋಡಿದರು ಹಚ್ಚಹಸಿರಿನ ಸಿರಿ, ನಿಶಬ್ದ ವಾತಾವಾರಣ. ಇದು ಕಂಡು ಬರುವುದು ತಾಲೂಕಿನ ಹಾನಾಪುರ ಎಸ್‌ಪಿ ಗ್ರಾಮದ ಗುಡ್ಡದ ಹಾಲಹಂಡೆ ಜಲಪಾತದಲ್ಲಿ. ಹಾನಾಪುರ ಎಸ್.ಪಿ. ಗ್ರಾಮದಿಂದ 1ಕಿಮೀ ದೂರದಲ್ಲಿರುವ ಈ ಹಾಲಹಂಡೆ ಜಲಪಾತ ನಿಜಕ್ಕೂ ಅಧ್ಭುತವಾಗಿದ್ದು, ಈ ಜಾಗಕ್ಕೆ ಭೇಟಿಕೊಟ್ಟರೇ ಸಾಕು ರಮಣೀಯ ದೃಶ್ಯವನ್ನು ಕಾಣಸಿಗಬಹುದು. ಇಲ್ಲಿ ಸುಮಾರು 80 ಅಡಿ ಎತ್ತರದಿಂದ ಧುಮ್ಮಿಕ್ಕುವ ಹಾಲಹಂಡೆ ಜಲಪಾತ ಈಗ ಪ್ರವಾಸಿಗರ ಗಮನ ಸೆಳೆದಿದೆ. …

Read More »