Breaking News

ರಾಜಕೀಯ

ಫೋನ್‌ ಟ್ಯಾಪಿಂಗ್: ಡಿಜಿಪಿಗೆ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ ದೂರು

ವಿಜಯಪುರ: ‘ನನ್ನ ಹಾಗೂ ನನ್ನ ಕುಟುಂಬ ಮತ್ತು ನನ್ನ ಆಪ್ತರ ಫೋನ್ ಕರೆಗಳ ವಿವರವನ್ನು ಕೆಲವರು ತೆಗೆಸಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದ್ದು, ಆದ ಕಾರಣ ಯಾರಿಗೂ ನನ್ನ ಫೋನ್‌ ಕರೆಗಳ ವಿವರವನ್ನು(ಕಾಲ್‌ ಹಿಸ್ಟರಿ) ನೀಡಬಾರದು’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು, ಪೊಲೀಸ್ ಮಹಾನಿರ್ದೇಶಕರಿಗೆ(ಡಿಜಿಪಿ) ದೂರು ನೀಡಿದ್ದಾರೆ.   ‘ರಾಜಕೀಯ ದುರುದ್ದೇಶದಿಂದ ಕೆಲವರು ವಿಜಯಪುರ ಜಿಲ್ಲೆ ಹೊರತು ಪಡಿಸಿ ಬೆಳಗಾವಿ, ಬಾಗಲಕೋಟೆ, ಕಲಬುರಗಿ ಹಾಗೂ ಇತರೆ …

Read More »

ಅಥಣಿ ತಾಲೂಕಿನ ಐಗಳಿ ಮೂಲದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು : ಶನಿವಾರ ಹುಣಸೂರು ಬಳಿ ಅಥಣಿ ತಾಲೂಕಿನ ಐಗಳಿ ಮೂಲದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪತಿ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಈ ಕುರಿತು ಮೈಸೂರಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಗತಿವಾಹಿನಿ ಜೊತೆ ಮಾತನಾಡಿ, ಪ್ರಕರಣ ತನಿಖೆಯ ಹಂತದಲ್ಲಿದೆ. ಈವರೆಗೆ ಯಾರನ್ನೂ ಅಧಿಕೃತವಾಗಿ ಬಂಧಿಸಿಲ್ಲ. ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು. ಯುವತಿಯ ಮೊಬೈಲ್ ನ್ನು ವಶಕ್ಕೆ ಪಡೆದಿರುವ ಪೊಲೀಸರು …

Read More »

ಕೊಪ್ಪಳದ ಗವಿಮಠ ದರ್ಶನ ಪಡೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ

ಕೊಪ್ಪಳ: ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಸೋಮವಾರ ಕೊಪ್ಪಳಕ್ಕೆ ಭೇಟಿ ನೀಡಿದರು‌. ಇಲ್ಲಿನ ಪ್ರಸಿದ್ಧ ಗವಿಮಠಕ್ಕೆ ಬಂದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿ ಮಠದ ಪರಂಪರೆ, ಇತಿಹಾಸ, ಜಾತ್ರೆಯ ವಿಶೇಷತೆ, ಜಾತ್ರೆಗೆ ಬರುವ ಭಕ್ತರಿಗೆ ಊಟದ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಉಚಿತ ಪ್ರಸಾದ ವ್ಯವಸ್ಥೆ ಹೀಗೆ ಹಲವು ಮಾಹಿತಿಗಳನ್ನು ಪಡೆದುಕೊಂಡರು.   ಅಸ್ಸಾಂನಲ್ಲಿರುವ ವಾತಾವರಣ, ಅಲ್ಲಿನ ಜನರ ಬಗ್ಗೆ ಸ್ವಾಮೀಜಿ‌ ಮಾಹಿತಿ ಪಡೆದರು. …

Read More »

ಇತಿಹಾಸ ಬರೆದ ಆರ್ ಆರ್ ಆರ್; ಆಸ್ಕರ್ ಪ್ರಶಸ್ತಿ ಗೆದ್ದ ‘ನಾಟು ನಾಟು’

ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದ ಹಾಡನ್ನು ಚಂದ್ರಬೋಸ್ ಅವರು ಬರೆದಿದ್ದಾರೆ. ಈ ಹಾಡಿಗೆ ಈಗಾಗಲೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್, ಗೋಲ್ಡನ್ ಗ್ಲೋಬ್, ಹಾಲಿವುಡ್ ಮ್ಯೂಸಿಕ್ ಇನ್ ಮಿಡಿಯಾ …

Read More »

ಗೋವಾ: ದೆಹಲಿ ಪ್ರವಾಸಿಗರ ಮೇಲೆ ಮಾರಕಾಯುಧಗಳಿಂದ ದಾಳಿ

ಪಣಜಿ : ಪ್ರವಾಸಿ ತಾಣ ಗೋವಾಕ್ಕೆ ಭೇಟಿ ನೀಡಿದ್ದ ದೆಹಲಿಯ ಕುಟುಂಬದ ಮೇಲೆ ಅಂಜುನಾ ಪ್ರದೇಶದಲ್ಲಿ ಸ್ಥಳೀಯರು ಕತ್ತಿಗಳು ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿ ಗೋವಾ ಪೊಲೀಸರು ಮೂವರನ್ನು ಬಂಧಿಸಿದ್ದು, ಕೊಲೆ ಯತ್ನ ಆರೋಪ ಹೊರಿಸಿದ್ದಾರೆ. ದಾಳಿಕೋರರ ಬಗ್ಗೆ ಪೊಲೀಸರು ಮೃದು ಧೋರಣೆ ತೋರಿದ್ದಾರೆ ಎಂದು ಸಂತ್ರಸ್ತರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖಾಧಿಕಾರಿ ವಿರುದ್ಧ ಪ್ರಾಥಮಿಕ ತನಿಖೆಯನ್ನೂ ಆರಂಭಿಸಲಾಗಿದೆ. ದೆಹಲಿ ನಿವಾಸಿ …

Read More »

ರೌಡಿಗೆ ಕೈಮುಗಿದ ಪ್ರಧಾನಿಬಿಜೆಪಿ ನಾಯಕರನ್ನು ಅಣಕಿಸಿದಕಾಂಗ್ರೆಸ್

ಬೆಂಗಳೂರು: ಭ್ರಷ್ಟಾಚಾರವನ್ನೆ ಉಸಿರಾಗಿಸಿಕೊಂಡಿರುವ 40% ಸರ್ಕಾರದಲ್ಲಿ ಭ್ರಷ್ಟರಿಗೆ ರಾಜಮರ್ಯಾದೆ! ಕಳ್ಳರ ಬೆಂಬಲ ಕಳ್ಳರಿಗಷ್ಟೆ ಅಲ್ವೇ ಸಿಎಂ ಬೊಮ್ಮಾಯಿ ಅವರೇ ಎಂದು ರಾಜ್ಯ   ಬಿಜೆಪಿ ನಾಯಕರನ್ನು ಅಣಕಿಸಿದೆ. ಪ್ರಧಾನಿಯೇ ರೌಡಿಗೆ ಕೈಮುಗಿಯುವಾಗ ಇವರು ಭ್ರಷ್ಟರಿಗೆ ಬಡ್ತಿ ನೀಡದೆ ಇರುತ್ತಾರ? ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಭ್ರಷ್ಟೋತ್ಸವ ನಡೆಸುತ್ತಿರುವ ಭ್ರಷ್ಟ ಜನತಾ ಪಾರ್ಟಿ! ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ. ಎಲ್ಲೇ ಹೋದರೂ ಬಿಜೆಪಿಗೆ ಖಾಲಿ ಕುರ್ಚಿಗಳೇ ಸ್ವಾಗತಿಸುತ್ತವೆ! ಖಾಲಿ ಕುರ್ಚಿಗಳು ಬಿಜೆಪಿ ನಿರ್ನಾಮದ …

Read More »

ಕಾಂಗ್ರೆಸ್ಸಿಗೆ ಹೇಳಿಕೊಳ್ಳುವ ನೇತೃತ್ವವೇ ಇಲ್ಲ, ಬಾಯಿ ಬಿಟ್ಟರೆ ಬಣ್ಣಗೇಡು: ಸಿ.ಟಿ. ರವಿ

ಕುಷ್ಟಗಿ:ಕಾಂಗ್ರೆಸ್ಸಿಗೆ ಹೇಳಿಕೊಳ್ಳುವ ನೇತೃತ್ವವೇ ಇಲ್ಲ, ಬಾಯಿ ಬಿಟ್ಟರೆ ಬಣ್ಣಗೇಡು ಎನ್ನುವಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಆಕ್ಸಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವದ ಅವಹೇಳನವನ್ನು ರಾಹುಲ್‌ಗಾಂಧಿ ಮಾಡಿದರು. ಯಾರು ನಮ್ಮ ದೇಶವನ್ನುಇನ್ನೂರು ವರ್ಷಗಳ ಕಾಲ ಕೊಳ್ಳೆ ಹೊಡೆದರೋ ಅವರನ್ನು ಮಧ್ಯ ಪ್ರವೇಶ ಮಾಡಿ ಎಂದು ದೇಶದ ಸಾರ್ವಭೌಮಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪರಕೀಯರ …

Read More »

ಸೋಮಣ್ಣ ನಮ್ಮ ಜೊತೆಯೇ ಇರುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ‘ಸಚಿವ ವಿ. ಸೋಮಣ್ಣ ನಮ್ಮ ಜೊತೆನೆ ಇದ್ದಾರೆ. ಮುಂದೆಯೂ ಜೊತೆಗೇ ಇರುತ್ತಾರೆ. ಯಾವುದೇ ಊಹಾಪೋಹ ಬೇಡ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿ. ಸೋಮಣ್ಣ ಅವರ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ. ನಮ್ಮ ಭೇಟಿ ಕೇವಲ ಔಪಚಾರಿಕ’ ಎಂದರು. ‘ಒಂದಿಷ್ಟು ಯೋಜನೆಗಳ ಕ್ರೆಡಿಟ್ ಪಡೆಯಲು ಕೆಲವರು ಮುಂದಾಗಿದ್ದಾರೆ. ಕ್ರೆಡಿಟ್ ವಾರ್ ಸಹಜ. ಪಕ್ಕದ ಮನೆಯವರು ಗಂಡು ಹಡೆದರೆ, ಇವರು …

Read More »

ಫೈಟರ್ ರವಿಗೆ ಕೈಮುಗಿದು ನಿಂತ ಮೋದಿ: ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

ಬೆಂಗಳೂರು: ಮಲ್ಲಿಕಾರ್ಜುನ್‌ (ಫೈಟರ್‌ ರವಿ) ಎಂಬುವವರ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಫೈಟರ್‌ ರವಿ ಅವರನ್ನು ರೌಡಿ ಶೀಟರ್‌ ಎಂದು ಕಾಂಗ್ರೆಸ್‌ ಆರೋಪಿಸಿದೆ.       ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಮಂಡ್ಯ ಮತ್ತು ಧಾರವಾಡದ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಆಗಮಿಸಿದ್ದರು. ಮಂಡ್ಯದಲ್ಲಿ ಆಯೋಜಿಸಿದ್ದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೆಂದು ಮೈಸೂರಿಗೆ ಬಂದಿಳಿದಿದ್ದ …

Read More »

ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ಸಭೆ ನಡೆಸಿದ ಧರ್ಮೇಂದ್ರ ಪ್ರಧಾನ

ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ಬಾಗಲಕೋಟೆ, ಬೆಳಗಾವಿ, ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ ಸಂಸದರು, ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು.   ‘ಪಕ್ಷದ ಕೆಲವು ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಪ್ರಧಾನ ಪ್ರತ್ಯೇಕವಾಗಿ ನಾಯಕರ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಲು ಪ್ರಯತ್ನಿಸಿದರು. ಎಲ್ಲರೂ ಒಂದಾಗಿ ಹೋಗುವಂತೆ ಸೂಚಿಸಿದರು’ …

Read More »