Breaking News
Home / ರಾಜಕೀಯ (page 797)

ರಾಜಕೀಯ

ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ. ಕುಡುತಿನಿ ಪಟ್ಟಣದ ಬುಡ್ಗ ಜಂಗಮ ಕಾಲನಿ ನಿವಾಸಿ ಓಂಕಾರಗೌಡನೇ ತನ್ನ ಮಗಳನ್ನು ಕೊಲೆ ಮಾಡಿದ ತಂದೆ. ಓಂಕಾರಗೌಡನ ಮಗಳು ಹೈಸ್ಕೂಲ್‌ನಲ್ಲಿ ಓದುತ್ತಿದ್ದಳು. ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು‌. ಈ ಬಗ್ಗೆ ಮನೆಯವರಿಗೆ ಗೊತ್ತಾಗಿತ್ತು. ಆ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದರೂ ಆಕೆ ಆ ಯುವಕನೊಡನೆ ಪ್ರೀತಿ- ಒಡನಾಟ …

Read More »

ಬದುಕಿನ ಯಾನ ಮುಗಿಸಿದ ಹಿರಿಯ ನಟ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಟಿ.ಎಸ್‌. ಲೋಹಿತಾಶ್ವ(80) ಅವರು ಮಂಗಳವಾರ ಮಧ್ಯಾಹ್ನ ಬಹುಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ಸಕ್ಕರೆ ಕಾಯಿಲೆ ಹಾಗು ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ನಾಲ್ಕೈದು ತಿಂಗಳ ಹಿಂದೆ ಎರಡು ಬಾರಿ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಈ ನಡುವೆ ಅನಾರೋಗ್ಯಕ್ಕೀಡಾದ ಅವರನ್ನು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್‌ ಆಸ್ಪತ್ರೆಗೆ ಕಳೆದ ಅ.4ರಂದು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲೇ ಅವರಿಗೆ ಹೃದಯಾಘಾತವೂ ಆಗಿತ್ತು. ಇದರಿಂದಾಗಿ ಮಿದುಳಿಗೂ ಹಾನಿಯಾಗಿತ್ತು. ನಂತರದಲ್ಲಿ ಅವರನ್ನು ಐಸಿಯುಗೆ …

Read More »

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ 44 ಜೀವರಕ್ಷಕ ಔಷಧಗಳ ಕೊರತೆ!

ಬೆಂಗಳೂರು: ರಾಜ್ಯದ ಸರ ಕಾರಿ ಆಸ್ಪತ್ರೆಗಳಲ್ಲಿ ಬರೊಬ್ಬರಿ 44 ಜೀವ ರಕ್ಷಕ ಔಷಧಗಳ ಕೊರತೆ ಉಂಟಾಗಿದೆ. ಆರೋಗ್ಯ ಇಲಾಖೆ ಅಧೀನದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ(ಕೆ.ಎಸ್‌.ಎಂ.ಎಸ್‌.ಸಿ.ಎಲ್) ನಿರ್ಲಕ್ಷ್ಯದಿಂದ 2020-21ನೇ ಸಾಲಿನ ಟೆಂಡರ್‌ಗಳ ಅಂತಿಮ ಪ್ರಕ್ರಿಯೆ ಮುಗಿಯದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿದೆ.   ರಾಜ್ಯದಲ್ಲಿರುವ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಗಂಭೀರ ಕಾಯಿಲೆ ನಿವಾರಣೆಗಿರುವ ಜೀವ ರಕ್ಷಕ ಔಷಧಗಳ ಕೊರತೆ ಪ್ರತಿ ವರ್ಷವೂ ಮರುಕಳಿಸುತ್ತಲೇ ಇದೆ. ಇದೀಗ 44 ಜೀವ …

Read More »

ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ ಅಥಣಿ-ಕೊಟ್ಟಲಗಿ ನೂರಾರು ವಿದ್ಯಾರ್ಥಿಗಳು

ಅಥಣಿ ಉತ್ತಮ ರಸ್ತೆ ನಿರ್ಮಿಸಿ ಮತ್ತು ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿ ರಾಮತೀರ್ಥ ಗ್ರಾಮದ ನೂರಾರು ವಿದ್ಯಾರ್ಥಿಗಳು ಅಥಣಿ-ಕೊಟ್ಟಲಗಿ ರಾಜ್ಯ ಹೆದ್ದಾರಿಯ ರಾಮತೀರ್ಥ ಕ್ರಾಸ್ ಬಳಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳೀಯ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ರಾಮತೀರ್ಥ ಕ್ರಾಸ್ ನಿಂದ ರಾಮತೀರ್ಥ ಗ್ರಾಮಕ್ಕೆ ಬಸ್ಸು ಬರುವುದಿಲ್ಲ, ಪ್ರಯಾಣಿಕರನ್ನು ಹಾಗೆಯೇ ಕ್ರಾಸಿನಲ್ಲಿ ಇಳಿಸಿ ಹೋಗುತ್ತಾರೆ, ಕೇಳಿದರೆ ರಸ್ತೆ ಸರಿಯಿಲ್ಲ ಅದಕ್ಕೆ ಬಸ್ಸು …

Read More »

ಬ್ಯಾಂಕಾಕ್ ದೇಶದಲ್ಲಿ ಬೆಳಗಾವಿಯ ಕೀರ್ತಿಯನ್ನು ಈ ನೃತ್ಯಗಾರರು ಹೆಚ್ಚಿಸಿದ್ದಾರೆ.

ಬ್ಯಾಂಕಾಕ್ ದೇಶದಲ್ಲಿ ನಡೆದ ಅಂತರಾಷ್ಟ್ರೀಯ ನೃತ್ಯ ಚಾಂಪಿಯನ್‍ಶಿಪ್ IIGF  2022ರಲ್ಲಿ ಬೆಳಗಾವಿಯ ಎಮ್ ಸ್ಟೈಲ್ ಡ್ಯಾನ್ಸ ಮತ್ತು ಜುಂಬಾ ಫಿಟ್‍ನೆಸ್ ಅಕಾಡೆಮಿ ನೃತ್ಯಗಾರರು ಒಳ್ಳೆಯ ಪ್ರದರ್ಶನ ನೀಡುವ ಮೂಲಕ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 265 ಸ್ಪರ್ಧಿಗಳಲ್ಲಿ ಅಗ್ರ 20ನೇ ಸ್ಥಾನಕ್ಕೆ ಬೆಳಗಾವಿಯ ಎಮ್ ಸ್ಟೈಲ್ ಡ್ಯಾನ್ಸ ಮತ್ತು ಜುಂಬಾ ಫಿಟ್‍ನೆಸ್ ಅಕಾಡೆಮಿ ನೃತ್ಯಗಾರರು ಅರ್ಹತೆ ಪಡೆದಿದ್ದಾರೆ. ಅಗ್ರ 20ರ 2ನೇ ಸುತ್ತಿನಲ್ಲಿ ಬ್ಯಾಂಕಾಕ್‍ನ ಪಟ್ಟಾಯದಲ್ಲಿ ಬೆಳ್ಳಿ ಮತ್ತು …

Read More »

ಶಿರಹಟ್ಟಿಯಲ್ಲಿ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿದ ಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿದರು. ರಾಜ್ಯಾಧ್ಯಂತ ಜನ ಸಂಕಲ್ಪ ಯಾತ್ರೆ ಮೂಲಕ ಮುಂಬರುವ ಚುನಾವಣೆಗೆ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿರುವ ಬಿಜೆಪಿ ಮಂಗಳವಾರ ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಂಡಿತ್ತು. ಈ ವೇಳೆ ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು.

Read More »

ನಗರದಲ್ಲಿ ಇಂದು ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ನಗರದಲ್ಲಿ ಇಂದು ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ ಅವರು ತಮ್ಮ ಅಭಿವೃದ್ಧಿ ಪರ್ವ ಮತ್ತೆ ಮುಂದುವರೆಸಿದ್ದಾರೆ, ನಗರದಲ್ಲಿ ಇಂದು ಕೊನವಾಲ್ ಗಲ್ಲಿಯಲ್ಲಿ 36 ಲಕ್ಷ ವೆಚ್ಚದಲ್ಲಿ ಪವರ್ಸ್ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ, ರೇಡಿಯೋ ಕಾಂಪ್ಲೆಕ್ಸ್ ಬಳಿ ಚರಂಡಿ ಕಾಮಗಾರಗೆ 21 ಲಕ್ಷ, ರಾಮಲಿಂಗ ಖಿಂಡಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ 31 ಲಕ್ಷ, ಅನ್ಸುರಕರ್ ಗಲ್ಲಿಯಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ 16 ಲಕ್ಷ, ಹಾಗೂ …

Read More »

ಶಿರಗುಪ್ಪಿಯಲ್ಲಿ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆ

ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಕೆಎಲ್‍ಇ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಎಂಟು ತಾಲೂಕಗಳಿಂದ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆಗಳು ಜರುಗಿದವು. ಮಂಗಳವಾರ ಬೆಳಗೆ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಪರಿಷತ್ ಮಹಾಂತೇಶ್ ಕವಟಿಗಿಮಠ್ ಇವರು ಹಾಗೂ ಇತರ ಗಣ್ಯರಿಂದ ಬಲೂನ್‍ಗಳ ಹಾರಿಸುವ ಮುಖಾಂತರ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಮಾಜಿ ವಿಧಾನ ಪರಿಷತ್ತಿನ ಸದಸ್ಯ ಹಾಗೂ ಕೆಎಲ್‍ಇ …

Read More »

ಲೈಂಗಿಕ ದೌರ್ಜನ್ಯ: ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಜಿಲ್ಲಾ ನ್ಯಾಯಾಲಯ ನ.14 ರವರೆಗೆ ವಿಸ್ತರಿಸಿದೆ. ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗಿದ್ದರಿಂದ ಶಿವಮೂರ್ತಿ ಮುರುಘಾ ಶರಣರು, ಹಾಸ್ಟಲ್ ವಾರ್ಡನ್ ಹಾಗೂ ಪರಮಶಿವಯ್ಯ ಅವರನ್ನು ಎರಡನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ನ್ಯಾಯಾಂಗ ಬಂಧನದ ಅವಧಿಯನ್ನು …

Read More »

ಲಂಚ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಿ

ಚಿಕ್ಕಬಳ್ಳಾಪುರ: ಸಾರ್ವಜನಿಕರು ಯಾವುದೇ ಸರ್ಕಾರಿ ಕೆಲಸಗಳನ್ನು ಮಾಡಿಸಿಕೊಳ್ಳಲು ಆಡಳಿತ ವರ್ಗಕ್ಕೆ ಲಂಚ ಕೊಡಬಾರದು. ಅಧಿಕಾರಿ ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟರೆ ಜಿಲ್ಲಾ ಲೋಕಾಯುಕ್ತ ಕಚೇರಿ ಸಂಪರ್ಕಿಸಿ ದೂರು ಸಲ್ಲಿಸಿ ಎಂದು ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.   ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾರ್ವಜನಿಕ ದೂರು ಅರ್ಜಿಗಳ ಸ್ವೀಕಾರ, ಅಹವಾಲುಗಳ ವಿಲೇವಾರಿ ಮತ್ತು ವಿಚಾರಣೆ ಸಭೆಗೂ ಮುನ್ನ ಅವರು ಮಾತನಾಡಿದರು. ಆಡಳಿತ ವರ್ಗದ ಯಾರೊಬ್ಬರೂ ಲಂಚ …

Read More »