ರಾಜಕೀಯ

ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

ಬೆಳಗಾವಿ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿಯಲ್ಲಿ ನಡೆದಿದೆ. ಹನುಮಂತ ಖೋತ (34) ಹಾಗೂ ಖಂಡೋಬಾ ಖೋತ (32) ಮೃತಪಟ್ಟ ದುರ್ದೈವಿಗಳು.   ಕಳೆದ ಹಲವಾರು ವರ್ಷಗಳಿಂದ ಈ ಇಬ್ಬರು ಸಹೋದರರ ನಡುವೆ ಜಮೀನು ವಿವಾದ ಇತ್ತು ಎನ್ನಲಾಗಿದೆ ಅಲ್ಲದೆ ವಿವಾದ ಬಗೆಹರಿಸಲು ರಾಜಿ ಸಂಧಾನ ಮಾಡಿದ್ದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ. ಈ ನಡುವೆ ಮತ್ತೆ ಇಬ್ಬರು …

Read More »

ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ… ಯಾವುದು ಅಗ್ಗ: ಕ್ಯಾನ್ಸರ್‌ ಔಷಧ ಪೆಟ್ರೋಲ್‌ ದರ 2 ರೂ. ಇಳಿಕೆ ಮೊಬೈಲ್‌ ಫೋನ್‌ ಆಮದು ಚಿನ್ನ, ಆಮದು ಬೆಳ್ಳಿ ಚರ್ಮದ ವಸ್ತು ಸೀ ಫುಡ್‌ ವಿದ್ಯುತ್‌ ತಂತಿ ಎಕ್ಸರೇ ಮೆಷಿನ್‌ ಸೋಲಾರ್‌ ಪ್ಯಾನಲ್ …

Read More »

ಸಾಲದ ಹೊರೆ ತಾಳದೇ ರೈತ ಆತ್ಮಹತ್ಯೆ

ಕಾರಟಗಿ: ಸಾಲದ ಹೊರೆಯಿಂದ ಬಳಲಿದ್ದ ತಾಲ್ಲೂಕಿನ ಹುಳ್ಕಿಹಾಳ ಗ್ರಾಮದ ರೈತ ನರಸಪ್ಪ ಗಂಗಾವತಿ (45) ಹೊಲದಲ್ಲಿ ರಾಸಾಯನಿಕ ಕುಡಿದು ಆಸ್ಪ‍ತ್ರೆಯಲ್ಲಿ ಮೃತಪಟ್ಟಿದ್ದಾರೆ. ನರಸಪ್ಪ ಹೊಲದ ಮೇಲೆ ₹2.50 ಲಕ್ಷ ಮತ್ತು ಕೈಗಡವಾಗಿ ₹6ರಿಂದ ₹7 ಲಕ್ಷ ಸಾಲ ಮಾಡಿದ್ದು, ಬೆಳೆ ಸರಿಯಾಗಿ ಬಾರದ್ದರಿಂದ ಸಾಲ ಹೇಗೆ ತೀರಿಸಬೇಕು ಎಂದು ಗೋಳಾಡುತ್ತಿದ್ದ. ಈ ಕುರಿತು ನಾನು ಹಾಗೂ ನನ್ನ ಇನ್ನುಳಿದ ಮಕ್ಕಳು ಬುದ್ಧಿವಾದ ಹೇಳಿದ್ದರೂ ಯಾರೊಂದಿಗೂ ಹೆಚ್ಚು ಮಾತನಾಡದೆ ಮಾನಸಿಕವಾಗಿದ್ದ. ಭಾನುವಾರ …

Read More »

ಸಿಎಂ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ಬಿಜೆಪಿಯಿಂದ ನಿರಂತರ ಪ್ರಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬೆಂಗಳೂರು: ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ …

Read More »

ಮಹಾರಾಷ್ಟ್ರ-ಕರ್ನಾಟಕ‌ ಸಂಪರ್ಕ‌ ಕಲ್ಪಿಸುವ ಕುಡಚಿ- ಉಗಾರ್‌ಖುರ್ದ್‌ ಸೇತುವೆ ಬಂದ್

ಮಹಾರಾಷ್ಟ್ರ-ಕರ್ನಾಟಕ‌ ಸಂಪರ್ಕ‌ ಕಲ್ಪಿಸುವ ಕುಡಚಿ- ಉಗಾರ್‌ಖುರ್ದ್‌ ಸೇತುವೆ ಬಂದ್ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಮತ್ತು ಉಗಾರ್‌ಖುರ್ದ್‌ ನಡುವಿನ ಸಂಪರ್ಕ ಕಲ್ಪಿಸುವ ಬೃಹತ್ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಎರಡೂ ರಾಜ್ಯಗಳ ಸಂಪರ್ಕ ಬಂದಾಗಿದೆ. ಕೃಷ್ಣಾ ನದಿಯ ಅಬ್ಬರದ ಹಿನ್ನೆಲೆ, ಸೇತುವೆ ಮೇಲೆ ನದಿ‌ ನೀರು ಹರಿಯುತ್ತಿದ್ದು, ಸಧ್ಯಕ್ಕೆ 1 ಲಕ್ಷ 45 ಸಾವಿರ ಕ್ಯೂಸೇಕ್‌ ನಷ್ಟು ನೀರು ಕೃಷ್ಣೆಗೆ ಒಳಹರಿಯುತ್ತಿದೆ. ಪೊಲೀಸರು ಸೇತುವೆ ಬಳಿ ಬ್ಯಾರಿಕೇಡ್‌ ಹಾಕಿ ಬಂದೋಬಸ್ತ …

Read More »

D.K. Shivakumar 15 ದಿನಗಳಲ್ಲಿ ಮತ್ತೆ ತಿಹಾರ್‌ ಜೈಲಿಗೆ: ಯತ್ನಾಳ್‌

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್‌ ಸುಪ್ರೀಂ ಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು …

Read More »

“ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ “ಯುವನಿಧಿ’ ಆರಂಭದಲ್ಲೇ ಹಿನ್ನಡೆ ಕಾಣುತ್ತಿದ್ದು, ನೋಂದಾಯಿತ “ಲಕ್ಷ’ ಫಲಾನುಭವಿಗಳ ಪೈಕಿ ಹಣ ದೊರೆಯುತ್ತಿರುವುದು ಕೆಲವು “ಸಾವಿರ’ ಮಂದಿಗೆ ಮಾತ್ರ! ಯೋಜನೆಯ ಫಲಾನುಭವಿಗಳು “ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಉದ್ಯೋಗಿಯಾಗಿಲ್ಲ’ ಎಂದು ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಕಡ್ಡಾಯವಾಗಿ ಸ್ವಯಂ ಘೋಷಣೆ ಪ್ರಮಾಣಪತ್ರವನ್ನು ಜಿಲ್ಲಾ ಉದ್ಯೋಗಾಧಿಕಾರಿಗೆ ನೀಡಬೇಕು ಎಂದು ಇತ್ತೀಚೆಗೆ ರಾಜ್ಯ ಸರಕಾರ ಹೊಸ ಆದೇಶ ನೀಡಿತ್ತು. ಆದರೆ ಸಾಕಷ್ಟು ಮಂದಿ …

Read More »

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಪ್ರಮುಖ ನಿರೀಕ್ಷೆಗಳೇನು?

2024: ಇಂದು (ಜುಲೈ 23) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ ಅವರು ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ದಾಖಲೆಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಹಾಗೆಯೇ ಈ ಬಜೆಟ್‌ನಲ್ಲಿ ಹಲವರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಹಾಗಾದರೆ ಪ್ರಮುಖವಾಗಿ ಕರ್ನಾಟಕದ ನಿರೀಕ್ಷೆಗಳೇನು ಎಂದು ಇಲ್ಲಿ ತಿಳಿಯಿರಿ. ರಾಜ್ಯದಲ್ಲಿ ವಿವಿಧ ಹಂತಗಳಲ್ಲಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಮತ್ತು ಅನುದಾನ, ಹೊಸ ಮಾರ್ಗಗಳ ನಿರ್ಮಾಣ ಮತ್ತು ಇರುವ …

Read More »

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದೆ. ಅವರನ್ನು ಉಳುವರೆ ಗ್ರಾಮದ ವೃದ್ದೆ ಸಣ್ಣಿ ಹನುಮಂತ ಗೌಡ(61) ಎಂದು ಗುರುತಿಸಲಾಗಿದೆ. ಮಣ್ಣು ಕುಸಿದ ಸ್ಥಳ, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹೆದ್ದಾರಿಯಲ್ಲಿ ಇದುವರೆಗೆ ಶೇಕಡ 70ರಷ್ಟು ಮಣ್ಣು ತೆಗೆಯಲಾಗಿದ್ದು, ಇಂದು …

Read More »

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು ಕನಕಪುರ: ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ ಹಾಕಿದೆ. ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಅನೀಶ್‌ ಎಡಗೈ ತುಂಡಾಗಿದ್ದು ಬೆಂಗಳೂರಿನ ಸೇಂಟ್ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯಲ್ಲಿ ತೀವ್ರವಾಗಿ …

Read More »