Breaking News

ರಾಜಕೀಯ

ಮೇಕೆ ಮರಿ ರಕ್ಷಿಸಲು ಹೋಗಿ ಕುರಿಗಾಹಿ ನೀರುಪಾಲು!

ವಿಜಯಪುರ : ಕಾಲುವೆಗೆ ಬಿದ್ದಂತಹ ಮೇಕೆ ಮರಿಯನ್ನು ರಕ್ಷಿಸಲು ಕಾಲುವೆಗೆ ಜಿಗಿದ ಕುರಿಗಾರಿ ಒಬ್ಬ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಾಲತವಾಡ ಸಮೀಪದ ನಾಗಬೇನಾಳ ಬಳಿ ನಡೆದಿದೆ. ನೀರುಪಾಲಾದ ಕುರಿಗಾಹಿಯನ್ನು ನಾಗಬೇನಾಳ ಗ್ರಾಮದ ಮಂಜುನಾಥ್ ಮಾದರ(28) ಎಂದು ಗುರುತಿಸಲಾಗಿದೆ. ಕುರಿಕಾಯಲು ನಾಗಬೇನಾಳ ಸಮೀಪದ ಚಕ್ ಪೋಸ್ಟ್‌ ಹತ್ತಿರದ ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಕುರಿಕಾಯುತ್ತಿದ್ದ. ಈ ಸಮಯದಲ್ಲಿ ಕುರಿ ಮರಿಯೊಂದು ಜಾರಿ ಕಾಲುವೆಗೆ ಬಿದ್ದಿದೆ. ಆ ಮರಿಯನ್ನು …

Read More »

ಪ್ರಯಾಣದರ ಹೆಚ್ಚಳ ಸುಳಿವು ನೀಡಿದ ಸಚಿವ

ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ನಿಟ್ಟಿನಲ್ಲಿ ಮುಂದೆ ಕ್ರಮ ಕೈಗೊಳ್ಳಬೇಕಾಗಿ ಬರಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಮುಂದೆ ಬಸ್ ಪ್ರಯಾಣದರ ಹೆಚ್ಚಳ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿ ಬರಬಹುದು ಎಂದು ಹೇಳುವ ಮೂಲಕ ಬಸ್ ಪ್ರಯಾಣದರ ಹೆಚ್ಚಳದ ಸುಳಿವು ನೀಡಿದ್ದಾರೆ.   ಶಕ್ತಿ ಯೋಜನೆಯಿಂದಾಗಿ ಸಾರಿಗೆ …

Read More »

ವಧು-ವರರ ಸಮಾವೇಶ 28ರಂದು

ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್‌ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು.   ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ-ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ …

Read More »

ಬೆಂಗಳೂರು- ಕಾರವಾರ: 26, 28ರಂದು ವಿಶೇಷ ರೈಲು

ಹುಬ್ಬಳ್ಳಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಂಗಳೂರು ಮತ್ತು ಕಾರವಾರ ನಡುವೆ ಜುಲೈ 26 ಮತ್ತು 28ರಂದು ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಎರಡೂ ದಿನ ಮಧ್ಯರಾತ್ರಿ 12.30ಕ್ಕೆ ಹೊರಡುವ ವಿಶೇಷ ರೈಲು (06567) ಸಂಜೆ 4ಕ್ಕೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು ಅವತ್ತೇ ರಾತ್ರಿ 11.30ಕ್ಕೆ ಕಾರವಾರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 3.30ಕ್ಕೆ ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ …

Read More »

ಇಬ್ಬರು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಮೂಢನಂಬಿಕೆ ನಂಬಿ ತನ್ನ ಇಬ್ಬರು ಪುತ್ರಿಯರಿಗೆ ಫಿನಾಯಿಲ್‌ ಕುಡಿಸಿ ಕೊಂದಿದ್ದ ಅನಿಲ ಚಂದ್ರಕಾಂತ ಬಾಂದೇಕರ ಎಂಬ ಆರೋಪಿಗೆ ಇಲ್ಲಿನ ಆರನೇ ಹೆಚ್ಚುವರಿ ಜಿಲ್ಲಾ ಸೆಷೆನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ, ಮಂಗಳವಾರ ತೀರ್ಪು ಪ್ರಕಟಿಸಿದೆ. ತಾಲ್ಲೂಕಿನ ಕಂಗ್ರಾಳಿ ಕೆ.ಎಚ್ ಗ್ರಾಮದ ಅನಿಲ ಬಾಂದೇಕರ, ತನ್ನ ಮನೆ ಮಾರಾಟಕ್ಕೆ ಮುಂದಾಗಿದ್ದ. ಖರೀದಿಗೆ ಯಾರೂ ಬಾರದ್ದರಿಂದ ನೊಂದುಕೊಂಡಿದ್ದ. ತನ್ನ ಇಬ್ಬರು ಮಕ್ಕಳನ್ನು ಕೊಂದು, ತನ್ನ ರಕ್ತವನ್ನು …

Read More »

ವಾಹನ ಸವಾರರೇ ಗಮನಿಸಿ : ಇನ್ಮುಂದೆ ಈ ರೂಲ್ಸ್ ಬ್ರೇಕ್ ಮಾಡಿದ್ರೆ ʻFIRʼ ಫಿಕ್ಸ್!

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು …

Read More »

ಪಂಚಾಯಿತಿ ನೌಕರರಿಗೆʼ ಗುಡ್‌ ನ್ಯೂಸ್‌

ಬೆಂಗಳೂರು : ರಾಜ್ಯದ ಪಂಚಾಯಿತಿ ನೌಖರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.   ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘವು ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ …

Read More »

ಕೃಷ್ಣಾ ನದಿಗೆ ಬಾಗಿನ ಬಿಡಲು ಹೋದವ ಮುಳುಗಿ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣಾ ನದಿ ತುಂಬಿರುವ ಕಾರಣ ಮಧ್ಯಾಹ್ನ ಪೂಜೆ ಸಲ್ಲಿಸಿ ಬಾಗಿನ ಬಿಡಲು ಹೋದಾಗ, ರೋಹನ್ ಪಾಟೀಲ್ (35) ನದಿಯಲ್ಲಿ ಮುಳುಗಿ ಸಾವನ್ನಪ್ಪಿದರು. ನದಿಯ ಮಧ್ಯದಲ್ಲಿ ಹೋಗುತ್ತಿದ್ದಾಗ ಪಿಟ್ಸ್ ಬಂದು ಮುಳುಗುತ್ತಿದ್ದ ರೋಹನ್ ನನ್ನು ನಾಲ್ಕೈದು ಜನರಿಂದ ಬದುಕಿಸಲು ಪ್ರಯತ್ನಿಸಲಾಯಿತಾದರೂ ಫಲಕಾರಿಯಾಗಿಲ್ಲ. ಸ್ಥಳೀಯ ಯುವಕರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ರೋಹನ್ ನಿಶ್ಚಿತಾರ್ಥದ ಎಂಟು ದಿನಗಳ …

Read More »

ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್‌

ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್‌ ಹೊಸದಿಲ್ಲಿ: ಈ ಬಾರಿಯ ಕೇಂದ್ರ ಬಜೆಟ್‌ “ಕಾಪಿಕ್ಯಾಟ್‌’ ಬಜೆಟ್‌ ಆಗಿದ್ದು, ಇದು ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್‌ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಮೋದಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಬಜೆಟ್‌ ಮಂಡನೆಯಾಗಿದೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆ ದು ಕೊಂಡಿ ರುವ ಖರ್ಗೆ, “ಮೋದಿ ಸರ್ಕಾರದ “ಕಾಪಿಕ್ಯಾಟ್‌ ಬಜೆಟ್‌’ಗೆ ಸರಿಯಾಗಿ ಕಾಂಗ್ರೆಸ್‌ನ ನ್ಯಾಯಪತ್ರವನ್ನು ನಕಲು ಮಾಡಲೂ ಬಂದಿಲ್ಲ. ತಮ್ಮ ಮಿತ್ರ …

Read More »

ಹಿರಣ್ಯಕೇಶಿ ನದಿಯ ಸೇತುವೆಯಲ್ಲಿ ಸವಾರರ ಹುಚ್ಚಾಟ

ಸಂಕೇಶ್ವರ: ಸಮೀಪದ ಹಿರಣ್ಯಕೇಶಿ ನದಿಯ ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ವಾಹನ ಸವಾರರು ಪ್ರಾಣಾಪಾಯವನ್ನೂ ಲೆಕ್ಕಿಸದೇ ನದಿ ನೀರಿನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ. ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಹಿರಣ್ಯಕೇಶಿ ನದಿ ಸೇತುವೆ ಜಲಾವೃತವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿರ್ಬಂಧಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೂ ಕೂಡಾ ವಾಹನ ಸವಾರರು ಜೀವದ ಹಂಗು ತೊರೆದು ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾರೆ.

Read More »