Breaking News
Home / ರಾಜಕೀಯ (page 836)

ರಾಜಕೀಯ

ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್‌?

ಬೆಂಗಳೂರು: ದಂಡ ಸಂಗ್ರಹ ನಮ್ಮ ಉದ್ದೇಶವಲ್ಲ. ಸಂಚಾರ ನಿಯಮ ಬಗ್ಗೆ ವಾಹನ ಸವಾರರಿಗೆ ಜಾಗೃತಿ ಮೂಡಿಸುವುದೇ ಮೊದಲ ಆದ್ಯತೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಮಧ್ಯೆ ಪೂರ್ವ ವಿಭಾಗದ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ವೊಬ್ಬರು ತಮ್ಮ ಅಧೀನ ಸಿಬ್ಬಂದಿಗೆ ಪ್ರತಿ ದಿನ 40 ಪ್ರಕರಣ ದಾಖಲಿಸಬೇಕು ಎಂದು ಆದೇಶ ನೀಡಿರುವ ಪತ್ರವೊಂದು ವೈರಲ್‌ ಆಗಿದೆ.   ನಿತ್ಯ ಕನಿಷ್ಠ 40 ಪ್ರಕರಣ ದಾಖಲಿಸಿಕೊಳ್ಳಬೇಕು. ನಿಗದಿತ ಸಂಖ್ಯೆಯಲ್ಲಿ ಕೇಸ್‌ ದಾಖಲಿಸದಿದ್ದರೆ ಕರ್ತವ್ಯ …

Read More »

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

ಕೇರಳ: ಪತ್ರಕರ್ತೆಯೊಬ್ಬರಿಗೆ ನಟನೊಬ್ಬ ಅಸಭ್ಯವಾಗಿ ನಿಂದಿಸಿದ ಪ್ರಕರಣ ಸುದ್ದಿಯಲ್ಲಿರುವಾಗಲೇ ಮಲಯಾಳಂ ಸಿನಿಮಾರಂಗದಲ್ಲಿ ಮತ್ತೊಂದು ಘಟನೆ ನಡೆದಿದೆ. ಸಿನಿತಾರೆಯರು ತಮ್ಮ ಚಿತ್ರದ ಪ್ರಮೋಷನ್‌ ಗಾಗಿ ಮಾಲ್‌, ಥಿಯೇಟರ್‌ ಗೆ ಹೋಗುವಾಗ, ಅಭಿಮಾನಿಗಳು, ಫೋಟೋ ತೆಗೆದುಕೊಳ್ಳಲು ಮುಗಿಬೀಳುತ್ತಾರೆ.‌ ಮಂಗಳವಾರ ಕೇರಳದ ಕೋಜಿಕೋಡ್‌ ಮಾಲ್ ವೊಂದರಲ್ಲಿ “ಸ್ಯಾಟರ್‌ ಡೇ ನೈಟ್”‌ ಎನ್ನುವ ಸಿನಿಮಾ ಪ್ರಚಾರದಲ್ಲಿ ಖ್ಯಾತ ನಟ, ನಟಿಯರು ಭಾಗಿಯಾಗಿದ್ದರು.   ಮೆಚ್ಚಿನ ಕಲಾವಿದರನ್ನು ನೋಡಲು ಅಭಿಮಾನಿಗಳು, ಪ್ರೇಕ್ಷಕರು ಮುಗಿಬಿದ್ದಿದ್ದು, ಅವರನ್ನು ನಿಯಂತ್ರಣ ಮಾಡಲು ಪೊಲೀಸರು …

Read More »

ಜೇಮ್ಸ್, ಲಕ್ಕಿಮ್ಯಾನ್ ವೀಕ್ಷಿಸದೇ ಇದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್‌ರಿಂದ ಕೊನೆಗೂ ಸಿನಿಮಾ ವೀಕ್ಷಣೆ

ಪುನೀತ್ ರಾಜ್‌ಕುಮಾರ್ ಅಗಲಿಕೆಯ ನಂತರದ ಕೆಲ ದಿನಗಳ ಕಾಲ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಚ್ಚಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ತಾ ಇರಲಿಲ್ಲ. ರಾಜ್ಯ ಸರ್ಕಾರ ಏರ್ಪಡಿಸಿದ್ದ ಅಪ್ಪು ನಮನ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ದುಃಖ ತಡೆಯಲಾರದೇ ಕಾರ್ಯಕ್ರಮದ ಮಧ್ಯದಲ್ಲಿಯೇ ಹೊರನಡೆದಿದ್ದದರು. ಹೀಗೆ ಅಪ್ಪು ಅಗಲಿಕೆಯ ನೋವಿನಲ್ಲಿದ್ದ ಅಶ್ವಿನಿ ಅವರಿಗೆ ಫೆಬ್ರವರಿ ತಿಂಗಳಿನಲ್ಲಿ ತಮ್ಮ ತಂದೆ ಭಾಗಮನೆ ರೇವನಾಥ್ ನಿಧನ ಮತ್ತಷ್ಟು ನೋವನ್ನು ಉಂಟು ಮಾಡಿತ್ತು. ಪುನೀತ್ …

Read More »

ಹೃದಯ ವೈಫಲ್ಯ ಪತ್ತೆಗೆ ಹೊಸ ತಂತ್ರಜ್ಞಾನ: 8 ನಿಮಿಷ ಸಾಕು !

ಲಂಡನ್ : ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾನಿಲಯದ ಸಂಶೋಧಕರು ವಿನೂತನ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಮಾನವನ ಹೃದಯ ವೈಫಲ್ಯವನ್ನು ತ್ವರಿತವಾಗಿ ಪತ್ತೆ ಮಾಡುತ್ತದೆ. ಸಾಂಪ್ರದಾಯಿಕ ಎಂಆರ್‌ಐ ಮೂಲಕ ಹೃದ್ರೋಗವನ್ನು ಪತ್ತೆಹಚ್ಚಲು 20 ನಿಮಿಷಗಳನ್ನು ತೆಗೆದುಕೊಂಡರೆ, ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಇತ್ತೀಚಿನ ತಂತ್ರಜ್ಞಾವು ಈ ಪ್ರಕ್ರಿಯೆಯನ್ನು ಕೇವಲ 8 ನಿಮಿಷಗಳಲ್ಲಿ ಪೂರ್ಣಗೊಳಿಸುತ್ತದೆ ಎಂದು ಸಂಶೋಧಕ ಹೊಸಮಾದಿನ್ ಅಸಾದಿ ಬಹಿರಂಗಪಡಿಸಿದ್ದಾರೆ. ಎಂಆರ್​ಐ ತಂತ್ರಜ್ಞಾನವನ್ನು ಬಳಸಿಕೊಂಡು ನಾವು ಹೃದಯ ರಕ್ತದ ಹರಿವಿನ 4-ಆಯಾಮದ (4-D) ಚಿತ್ರಗಳನ್ನು ಅಭಿವೃದ್ಧಿಪಡಿಸಿದ್ದೇವೆ. ‘ಫೋರ್ಡಿ …

Read More »

ಟ್ರಿಪ್​ ಹೋದಾಗ ನದಿಗಿಳಿದು ಕೊಚ್ಚಿಹೋದ ಮೂವರು ವಿದ್ಯಾರ್ಥಿನಿಯರು

ಆಂಧ್ರಪ್ರದೇಶ: ಖುಷಿಯ ಕ್ಷಣಗಳನ್ನು ಕಳೆಯಲಿ ಎಂದು ಶಿಕ್ಷಕರು ಮಕ್ಕಳನ್ನು ವಿಹಾರಕ್ಕೆ ಕರೆದುಕೊಂಡು ಹೋದರೆ ಅದು ದುರಂತದಲ್ಲಿ ಕೊನೆಯಾಗಿದೆ. ವಿಹಾರಕ್ಕೆ ಹೋಗಿದ್ದ ವೇಳೆ ನದಿಗೆ ಇಳಿದಿದ್ದ ಮೂವರು ವಿದ್ಯಾರ್ಥಿನಿಯರು ನೀರು ಪಾಲಾದ ದುರ್ಘಟನೆ ಇಂದು ನಡೆದಿದೆ. ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ವೇಟಪಾಲೆಂನ ಖಾಸಗಿ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಸಕಿಲೇರು ನದಿಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಮಕ್ಕಳು ನೀರಿನಲ್ಲಿ ಆಟವಾಡಿದ್ದಾರೆ. ಅದರಲ್ಲಿ ಮೂವರು ವಿದ್ಯಾರ್ಥಿನಿಯರು ನೀರಿನ ರಭಸಕ್ಕೆ ಕೊಚ್ಚಿ …

Read More »

ತವಗ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ

ಗೋಕಾಕ: ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ತವಗ ಗ್ರಾಮ ಪಂಚಾಯಿತಿ ಭಾಜನವಾಗಿದೆ. ಸಂಪೂರ್ಣ ಸ್ವಚ್ಛತೆ, ಹೆಚ್ಚು ಶೌಚಾಲಯ ನಿರ್ಮಿಸಿದ್ದನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ 5 ಲಕ್ಷ ನಗದು, ಅಭಿನಂದನಾ ಪತ್ರವನ್ನೊಳಗೊಂಡಿದೆ. ಕನಸಗೇರಿ, ಕೈತನಾಳ, ಕೈ- ಹೊಸೂರ ಗ್ರಾಮಗಳನ್ನು ಒಳಗೊಂಡ ತವಗ ಗ್ರಾಮ ಪಂಚಾಯಿತಿ ಒಟ್ಟು 23 ಸದಸ್ಯರನ್ನು ಹೊಂದಿದೆ. ಒಟ್ಟು 11,500 ಕ್ಕಿಂತ ಹೆಚ್ಚಿನ ಜನಸಂಖ್ಯೆ ಈ ಪಂಚಾಯಿತಿ ವ್ಯಾಪ್ತಿಯಲ್ಲಿದೆ. …

Read More »

ಪಿಎಫ್ಐ ಸಂಘಟನೆ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕಟೀಲ್​

ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‌. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …

Read More »

ಆಲಿಯಾ ಜೊತೆ ಹಾಸಿಗೆ ಹಂಚಿಕೊಳ್ಳುವುದು ಕಷ್ಟ: ರಣಬೀರ್‌ಗೆ ಇಂದೆಥಾ ಸಂಕಷ್ಟ..?

ನಟ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ಬಾಲಿವುಡ್‌ನ ಕ್ಯೂಟ್‌ ಕಪಲ್‌. 2022 ಏಪ್ರಿಲ್‌ 14ರಂದು ಮದುವೆಯಾಗಿರುವ ಈ ಜೋಡಿ ಸದ್ಯ ತಂದೆ-ತಾಯಿಯಾಗುವ ಖುಷಿಯಲ್ಲಿದ್ದಾರೆ. ಜೊತೆಗೆ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ತೆರೆ ಮೇಲೆ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ‘ಬ್ರಹ್ಮಾಸ್ತ್ರ’ ಚಿತ್ರ ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು, ಸದ್ಯ ಚಿತ್ರತಂಡ ಗೆಲುವಿನ ಖುಷಿಯಲ್ಲಿದೆ.   ರಣಬೀರ್‌ ಕಪೂರ್‌ ಅವರ ವಿವಾದಾತ್ಮಕ ಹೇಳಿಕೆಯೊಂದರಿಂದ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಬಾಯ್ಕಾಟ್‌ ಬಿಸಿ …

Read More »

PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ದೇಶದಲ್ಲಿ ಪಿಎಫ್‌ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದ ಬೆನ್ನಲ್ಲೇ ಹೊಸ ಬೇಡಿಕೆ ಇಡುವ ಮೂಲಕ ಕಾಂಗ್ರೆಸ್‌ಮುಂದಾಗಿದೆ. ಅದರರಲ್ಲೂಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್‌ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ …

Read More »

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ಮಾಹಿತಿ

ನವದೆಹಲಿ: ನೀವು ತಂದೆಯಾಗಿದ್ದರೆ ನಿಮ್ಮ ಮಗಳ ಭವಿಷ್ಯವನ್ನು ಆರ್ಥಿಕವಾಗಿ ಸಮೃದ್ಧವಾಗಿರಿಸಬಹುದು. ಮಗಳು ಎಂದಿಗೂ ಹಣದ ಸಮಸ್ಯೆ ಎದುರಿಸಬಾರದು ಅಂತಾ ಬಯಸಿದರೆ ಸರ್ಕಾರದ ಈ ಅದ್ಭುತ ಯೋಜನೆಯಲ್ಲಿ ಹೂಡಿಕೆ ಪ್ರಾರಂಭಿಸಬಹುದು. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಮಗಳು 21 ವರ್ಷಗಳಲ್ಲಿ ಮಿಲಿಯನೇರ್ ಆಗುತ್ತಾಳೆ. ಈ ಯೋಜನೆಯಲ್ಲಿ ನೀವು ಪ್ರತಿದಿನ 416 ರೂ. ಹೂಡಿಕೆ ಮಾಡಬೇಕು. ಈ 416 ರೂ. ಸಣ್ಣ ಮೊತ್ತದ ಹೂಡಿಕೆಯು ನಿಮ್ಮ ಮಗಳಿಗೆ 65 ಲಕ್ಷ ರೂ.ನಷ್ಟು …

Read More »