Breaking News
Home / ರಾಜಕೀಯ (page 849)

ರಾಜಕೀಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ.

ಬೆಂಗಳೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಪ್ರಸಕ್ತ ವರ್ಷದ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಅಂತಿಮವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆಯಲು ತೀರ್ಮಾನಿಸಿದೆವು. ದಸರಾ ಉದ್ಘಾಟನೆಗೆ ಬರುವಂತೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದ್ದು …

Read More »

ಮಾಲಿನ್ಯ ಪ್ರಮಾಣಪತ್ರ ಇಲ್ಲವೆಂದು ಎಲೆಕ್ಟ್ರಿಕ್ ಸ್ಕೂಟರ್‌ಗೆ ದಂಡ ಹಾಕಿದ ಪೊಲೀಸ್!

ತಿರುವನಂತಪುರ: ಎಲೆಕ್ಟ್ರಿಕ್ ವಾಹನ ಒಂದಕ್ಕೆ ವಾಯು ಮಾಲಿನ್ಯ ಪ್ರಮಾಣಪತ್ರ (ಪಿಯುಸಿ) ಕೊಟ್ಟಿಲ್ಲ ಎಂದು ಟ್ರಾಫಿಕ್ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಕೇರಳದಲ್ಲಿ ನಡೆದಿದೆ. ಅಸಲಿಗೆ ಎಲೆಕ್ಟ್ರಿಕ್ ವಾಹನಗಳಿಗೆ ಪಿಯುಸಿ ಪ್ರಮಾಣಪತ್ರ ಅಗತ್ಯ ಇಲ್ಲ.   ಆದರೆ, ಕೇರಳದ ಮಣಪ್ಪುರಂ ಜಿಲ್ಲೆಯ ನೀಲಾಂಚರಿಯಲ್ಲಿ ಯುವಕನೊಬ್ಬ ‘ಏಥರ್’ ಕಂಪನಿಯ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಸ್ಥಳೀಯ ಟ್ರಾಫಿಕ್ ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ₹250 …

Read More »

ಪುರುಷರ ಲೈಂಗಿಕ ಸಾಮರ್ಥ್ಯ ಮ್ಯಾಗಿ ಥರಾ: ನಟಿ ರೆಜಿನಾ ಹೇಳಿಕೆ

ಮುಂಬೈ: ಪುರುಷರ ಲೈಂಗಿಕ ಸಾಮರ್ಥ್ಯ ಮ್ಯಾಗಿ ನೂಡಲ್ಸ್ ಥರಾ, ಎರಡೇ ನಿಮಿಷ ಎಂದು ಜೋಕ್ ಮಾಡಿರುವ ನಟಿ ರೆಜಿನಾ ಈಗ ಟ್ರೋಲ್ ಗೊಳಗಾಗಿದ್ದಾರೆ. ಡಾಕಿನಿ ಸಿನಿಮಾ ಖ್ಯಾತಿಯ ನಟಿ ರೆಜಿನಾ ಈ ಸಿನಿಮಾದ ಪ್ರಚಾರದ ವೇಳೆ ಇಂತಹದ್ದೊಂದು ಹೇಳಿಕೆ ನೀಡಿದ್ದು, ಪಡ್ಡೆ ಹುಡುಗರು ಆಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಇನ್ನಿಲ್ಲದಂತೆ ಟ್ರೋಲ್ ಮಾಡುತ್ತಿದ್ದಾರೆ. ರೆಜಿನಾ ಈ ಮೊದಲು ಕನ್ನಡದ ಸೂರ್ಯಕಾಂತಿ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಇಂತಹದ್ದೊಂದು ವಿವಾದದ ಮೂಲಕ ಭಾರೀ ಸುದ್ದಿ …

Read More »

ಸ್ಮೃತಿ ಇರಾನಿ ಗೋವಾ ರೆಸ್ಟೋರೆಂಟ್‌ ವಿವಾದಕ್ಕೆ ಮತ್ತೊಂದು ಟ್ವಿಸ್ಟ್; RTI ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಗೋವಾದ ಅಸ್ಸಾಗಾವೊದಲ್ಲಿರುವ ಸಿಲ್ಲಿ ಸೋಲ್ಸ್‌ ಕೆಫೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್‌ನ ಪರವಾನಗಿಯನ್ನು ಮೋಸದಿಂದ ನವೀಕರಿಸಲಾಗಿದೆ ಎಂದು ಗೋವಾದ ಅಬಕಾರಿ ಆಯುಕ್ತರು ಜುಲೈನಲ್ಲಿ ನೋಟಿಸ್ ಸಲ್ಲಿಸಿದ್ದರು. ಈ ಕೆಫೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಪುತ್ರಿಯ ಪಾಲಿದೆ ಎಂಬ ಆರೋಪ ಕೇಳಿ ಬಂದಿತ್ತು. ಆದ್ರೆ ಕೆಫೆಗೂ ತಮ್ಮ ಕುಟುಂಬದವರಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಮೃತಿ ಇರಾನಿ ಕುಟುಂಬ …

Read More »

‘ರಾಜ್ಯೋತ್ಸವ’ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವೂ ಸಹ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಸಾರ್ವಜನಿಕರು, ಸಾಧಕರ ಹೆಸರುಗಳನ್ನು ನಾಮನಿರ್ದೇಶನ ಮಾಡಬಹುದಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಮಾಹಿತಿಯನ್ನು ನೀಡಿದೆ.   ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಸಾರ್ವಜನಿಕರು, ಸಾಧಕರ ಹೆಸರುಗಳನ್ನು ನಾಮ ನಿರ್ದೇಶನ ಮಾಡಬಹುದಾಗಿದ್ದು, ಈ ಪ್ರಕ್ರಿಯೆ ಸೆಪ್ಟೆಂಬರ್ 10 ರಿಂದ ಆರಂಭಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ …

Read More »

ಹಾನಿ ಪರಿಶೀಲನೆ: ಕೇಂದ್ರ ತಂಡಕ್ಕೆ ಹಾನಿ ಮನವರಿಕೆ: ಡಿಸಿ ನಿತೇಶ್ ಪಾಟೀಲ್

ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಕೇಂದ್ರ ನೆರೆ ಅಧ್ಯಯನ ತಂಡವು ಶನಿವಾರ(ಸೆ.10) ಪರಿಶೀಲನೆ ನಡೆಸಿತು. ಕೇಂದ್ರ ಜಲ ಆಯೋಗದ ಜಲಶಕ್ತಿ ಸಚಿವಾಲಯದ ನಿರ್ದೇಶಕರಾದ ಅಶೋಕ ಕುಮಾರ್ ವಿ. ಅವರ ನೇತೃತ್ವದ ಕೇಂದ್ರ ಅಧ್ಯಯನ ತಂಡದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ಧಾರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ವಿ.ವಿ.ಶಾಸ್ತ್ರಿ ಹಾಗೂ ಕರ್ನಾಟಕ ‌ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಅವರು ಜತೆಗಿದ್ದರು. ಬೆಳಗಾವಿಯಿಂದ ಪ್ರವಾಸ …

Read More »

ಬರೋಬ್ಬರಿ 47 ಸಾವಿರ ರೂ.ಗೆ ಮಾರಾಟವಾದ ಕುಂಬಳಕಾಯಿ.. ಅದೃಷ್ಟ ಎಂದರೆ ಇದೇನಾ?

ಸಾಮಾನ್ಯವಾಗಿ ಇಲ್ಲಿ ನಡೆಯುವ ಹರಾಜಿನಲ್ಲಿ ಟಗರು, ಹುಂಜ ಮುಂತಾದುವು 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ. ಆದರೆ ಇದಕ್ಕಿಂತಲೂ ದೊಡ್ಡ ಬೆಲೆಗೆ ಕುಂಬಳಕಾಯಿ ಮಾರಾಟವಾಗಿದ್ದು ಒಂದು ದಾಖಲೆಯಾಗಿದೆ. ಇಡುಕ್ಕಿ(ಕೇರಳ): ಒಂದು ಕುಂಬಳಕಾಯಿಯ ಬೆಲೆ 47 ಸಾವಿರ ರೂಪಾಯಿ ಅಂದರೆ ಯಾರೂ ನಂಬುವುದಿಲ್ಲ. ಆದರೂ ಇದು ಸತ್ಯ. ಕುಂಬಳಕಾಯಿಯೊಂದು ಬರೋಬ್ಬರಿ 47 ಸಾವಿರ ರೂಪಾಯಿಗೆ ಮಾರಾಟವಾಗಿದ್ದು ನಿಜ. ಇಡುಕ್ಕಿಯ ಗುಡ್ಡ ಪ್ರದೇಶದಲ್ಲಿರುವ ಚೆಮ್ಮನ್ನಾರ್ ಎಂಬಲ್ಲಿ ನಡೆದ ಓಣಂ ಹಬ್ಬದ ಹರಾಜಿನಲ್ಲಿ 5 …

Read More »

ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್

ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್‌ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್‌ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್‌ಗೆ ಸವಾಲ್‌ ಹಾಕಿದರು. …

Read More »

ಇಟಗಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನ: ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ರಗ್ಗು ಮಾರುವ ನೆಪದಲ್ಲಿ ಬಂದು ಸರಕಳ್ಳತನಕ್ಕೆ ಯತ್ನಿಸಿದ ನಾಲ್ವರಿಗೆ ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಖಾನಾಪೂರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಿನ್ನೆ ಸಾಯಂಕಾಲ ಸುಮಾರಿಗೆ ರಗ್ಗು ಮಾಡಿರುವುದಾಗಿ ಹೇಳಿಕೊಂಡು ನಾಲ್ವರು ಇಟಗಿ ಗ್ರಾಮಕ್ಕೆ ಬಂಧಿದ್ದರು. ಜನರ ಮನೆ, ಮನೆಗೆ ತೆರಳಿ ಉದ್ರಿಯಲ್ಲಿ ನೀಡುವುದಾಗಿ ಹೇಳಿಕೊಂಡು ಓಡಾಡಿದ್ದಾರೆ. ಈ ವೇಳೆ ಮಹಿಳೆಯೋರ್ವಳ ಕೊರಳಿನ ಸರ ಕದಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಮಹಿಳೆ …

Read More »

B.J.P. ಸರ್ಕಾರದ ‘ಜನಸ್ಪಂದನ’ ಇಂದು; ಸರ್ಕಾರದ ‘ರಿಪೋರ್ಟ್ ಕಾರ್ಡ್’ ಮಂಡಿಸುವ C.M.

ಬೆಂಗಳೂರು /ದೊಡ್ಡಬಳ್ಳಾಪುರ: ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದಿಡುವ ‘ಜನಸ್ಪಂದನ’ ಸಮಾವೇಶಕ್ಕೆ ದೊಡ್ಡಬಳ್ಳಾಪುರದಲ್ಲಿ ವೇದಿಕೆ ಸಜ್ಜಾಗಿದೆ. 2023 ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಆಶಯದಿಂದ ನಡೆಸುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.   ‘ಜನೋತ್ಸವ’ದ ಹೆಸರಿನಲ್ಲಿ ನಡೆಯಬೇಕಿದ್ದ ಈ ಕಾರ್ಯಕ್ರಮ ಮೂರು ಬಾರಿ ಮುಂದೂಡಿಕೆಯಾಗಿತ್ತು. ಇದೀಗ ‘ಜನಸ್ಪಂದನ’ದ ಹೆಸರಿನಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಸುಮಾರು 3 ಲಕ್ಷ ಜನ ಭಾಗವಹಿಸುವ …

Read More »