Breaking News
Home / ರಾಜಕೀಯ (page 863)

ರಾಜಕೀಯ

ಸಚಿವರೊಂದಿಗೆ ಎಚ್.ಡಿ.ದೇವೇಗೌಡ ಅವರ ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು:ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಪುಟ ಸಹುದ್ಯೋಗಿಗಳೊಂದಿಗೆ ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದ ಮಾಜಿ ಪ್ರಧಾನ ಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಕ್ಷೇಮ ವಿಚಾರಿಸಿದರು.   ಸಿಎಂ ಅವರೊಂದಿಗೆ ಸಚಿವರಾದ ಆರ್.ಅಶೋಕ್, ಮಾಧುಸ್ವಾಮಿ, ಗೋಪಾಲಯ್ಯ, ಬೈರತಿ ಬಸವರಾಜು, ಸೋಮಣ್ಣ, ಮುನಿರತ್ನ ಅವರೂ ಸದನದ ಕಲಾಪದ ನಡುವೆಯೂ ಸಿಎಂ ಬೊಮ್ಮಾಯಿ ಅವರೊಂದಿಗೆ ಭೇಟಿ …

Read More »

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ರಿಟೈರ್ಡ್ ಆದ R.T.O. ಜೈಲಿಗೆ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಾರಿಗೆ ಅಧಿಕಾರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಮತ್ತು 63 ಲಕ್ಷ ರೂ. ಭಾರಿ ಮೊತ್ತದ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪಿ.ಶಾಂತಕುಮಾರ ತಂದೆ ಮನ್ನಸ್ವಾಮಿ, ಎಆರ್‍ಟಿಓ ಆರ್‍ಟಿ, ಠಾಣೆ ಹುಮನಾಬಾದ ಜಿಲ್ಲಾ: ಬೀದರ್ ಇವರು ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ಮತ್ತು ಲಂಚಗುಳಿತನದಿಂದ ಅಕ್ರಮ ಆಸ್ತಿಯನ್ನು ಸಂಪಾದಿಸಿದರ ಕುರಿತು ಗುಪ್ತ ಮಹಿತಿ ಕಲೆಹಾಕಿ ಆರ್.ಕೆ. …

Read More »

2.69 ಕೋಟಿ ರೂ. ಲಪಟಾಯಿಸಿದ್ದ ಅಸಿಸ್ಟೆಂಟ್​ ಬ್ಯಾಂಕ್​ ಮ್ಯಾನೇಜರ್​; ತಲೆಮರೆಸಿಕೊಂಡಿದ್ದವ ಕೊನೆಗೂ ಸಿಕ್ಕಿಬಿದ್ದ..

ಉತ್ತರಕನ್ನಡ: ಬ್ಯಾಂಕ್​ನಲ್ಲಿ ಕೋಟ್ಯಂತರ ರೂಪಾಯಿಯನ್ನು ಲಪಟಾಯಿಸಿ ತಲೆಮರೆಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಈ ಪ್ರಕರಣ ನಡೆದಿತ್ತು. ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕುಮಾರ್ ಬೋನಾಲ್ ಎಂಬಾತ ಬ್ಯಾಂಕ್​ನಿಂದಲೇ 2.69 ಕೋಟಿ ರೂ. ಲಪಟಾಯಿಸಿದ್ದ. ಆಂಧ್ರಪ್ರದೇಶ ಮೂಲದ ಈತ ಇನ್ನೊಬ್ಬ ಉದ್ಯೋಗಿಯ ಲಾಗಿನ್​ ದುರ್ಬಳಕೆ ಮಾಡಿಕೊಂಡು 2.69 ಕೋಟಿ ರೂ. ಲಪಟಾಯಿಸಿದ್ದ. ಈ ಕುರಿತು ಯಲ್ಲಾಪುರ ಪೊಲೀಸ್ …

Read More »

ಮೈಸೂರು ಅರಮನೆಯಲ್ಲಿ ಸೆ.26ರಿಂದ ಖಾಸಗಿ ದರ್ಬಾರ್​

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಇದರ ನಡುವೆಯೇ ರಾಜವಂಶಸ್ಥರು ನಡೆಸುವ ನವರಾತ್ರಿ ಉತ್ಸವಕ್ಕೂ ಸಿದ್ಧತೆ ಶುರುವಾಗಿದೆ. ಮಂಗಳವಾರ ಅಂಬಾವಿಲಾಸ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ಸಂಪ್ರದಾಯಬದ್ಧವಾಗಿ ನೆರವೇರಿತು.   ಅರಮನೆಯ ನೆಲಮಾಳಿಗೆಯ ಖಜಾನೆಯಲ್ಲಿ ಭದ್ರವಾಗಿ ಇಡಲಾಗಿದ್ದ ಸಿಂಹಾಸನವನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್​ ಸಮ್ಮುಖದಲ್ಲಿ ಹೊರ ತೆಗೆಯಲಾಯಿತು. ಬಿಡಿಬಿಡಿಯಾಗಿದ್ದ ಸಿಂಹಾಸನದ ಭಾಗಗಳನ್ನು ಬಿಗಿ ಪೊಲೀಸ್​ ಬಂದೋಬಸ್ತ್​ನಲ್ಲಿ ದರ್ಬಾರ್​ ಹಾಲ್​ಗೆ ತರಲಾಯಿತು. ದರ್ಬಾರ್​ ನಡೆಯುವ ಹಾಲ್​ನಲ್ಲಿ ಶುಭ ವೃಶ್ಚಿಕ ಲಗ್ನದಲ್ಲಿ …

Read More »

ಸಂಕಷ್ಟದಲ್ಲಿ ಮುರುಘಾ ಮಠದ ವಿದ್ಯಾಸಂಸ್ಥೆಯ 3 ಸಾವಿರ ಸಿಬ್ಬಂದಿ..!

ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.   ಹೌದು, ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇದರಿಂದ ಎಸ್ ಜೆ ಎಂ ವಿದ್ಯಾಸಂಸ್ಥೆಯ ಸಿಬ್ಬಂದಿಗೆ …

Read More »

ಕಾರು-ಬೈಕ್ ಭೀಕರ ಅಪಘಾತ: ಸವಾರರಿಬ್ಬರೂ ಸ್ಥಳದಲ್ಲೇ ಸಾವು, ಚಾಲಕ ಕಾರು ಬಿಟ್ಟು ಪರಾರಿ..

ವಿಜಯಪುರ: ಕಾರು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ಈ ಅಪಘಾತವಾಗಿದೆ. ಕಾರು ಮತ್ತೆ ಬೈಕ್​ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕಸ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಡಗಾನೂರ ತಾಂಡಾದ ಬಾಬು ಚೌವ್ಹಾಣ, ಅಶೋಕ ನಾಯಕ್ ಸಾವಿಗೀಡಾದವರು. ಅಪಘಾತದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದು ತಿಳಿಯುತ್ತಿದ್ದಂತೆ ಚಾಲಕ …

Read More »

ವೈಯಕ್ತಿಕ ಸ್ವಾರ್ಥಕ್ಕಾಗಿ ಮೃತ್ಯುಂಜಯ ಸ್ವಾಮೀಜಿ ಹೋರಾಟ: ಪಂಚಮಸಾಲಿ ಮುಖಂಡರ ಆರೋಪ

ಕೊಪ್ಪಳ: ‘ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶಿಗ್ಗಾವಿಯಲ್ಲಿ ತಮ್ಮ ಸ್ವಾರ್ಥ ಸಾಧನೆಗೆ ಹೋರಾಟ ಮಾಡುತ್ತಿದ್ದಾರೆ’ ಎಂದು ಕೊಪ್ಪಳ ಜಿಲ್ಲಾ ಲಿಂಗಾಯತ ಪಂಚಮಸಾಲಿ (ಪಂಚಸೈನ್ಯ) ಸಮಾಜದ ಸಂಘಟನೆ ಮುಖಂಡರು ಆರೋಪಿಸಿದ್ದಾರೆ.   ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಬಾದವಾಡಗಿ ‘ಮುಖ್ಯಮಂತ್ರಿ ಮನೆ ಮುಂದೆ ಏಕಾಏಕಿ ಧರಣಿ ಸರಿಯಲ್ಲ. ಇದರಿಂದ ಏನೂ ಪ್ರಯೋಜನವಿಲ್ಲ. ರಾಜಕೀಯ ಉದ್ದೇಶವಿಟ್ಟುಕೊಂಡು ಹೋರಾಟ …

Read More »

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ.   ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು …

Read More »

ಬೆಂಗಳೂರು: ಕಾರಿಗೆ ಬೈಕ್ ವಿಮೆ- ಅಪಘಾತವಾದಾಗ ಸತ್ಯಾಂಶ ಬಯಲು!

ಬೆಂಗಳೂರು, ಸೆಪ್ಟೆಂಬರ್ 20: ವಾಹನಗಳಿಗೆ ಇನ್ಸುರೆನ್ಸ್ (ವಿಮೆ)ಯನ್ನು ಮಾಡಿಸುವುದು ಬಹಳ ಮುಖ್ಯವಾಗುತ್ತದೆ. ವಾಹನಗಳಿಗೆ ವಿಮೆಯನ್ನು ಮಾಡಿಸುವುದರಿಂದ ಅಪಘಾತವಾದ ಸಮಯದಲ್ಲಿ ಬಹಳಷ್ಟು ಅನುಕೂಲಗಳಿವೆ. ಆದರೆ ಖಾಸಗಿ ಕಂಪನಿ ವಿಮೆಯನ್ನು ಮಾಡಿಸುವ ಗ್ರಾಹಕರು ಎಚ್ಚರವಾಗಿರಬೇಕು. ನಾಲ್ಕು ಚಕ್ರದ ವಾಹನದ ವಿಮೆ ಎಂದು ದ್ವಿಚಕ್ರ ವಾಹನ ವಿಮೆ ನೀಡಿ ವಂಚಿಸುತ್ತಿದ್ದವನನ್ನು ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಾಹನಗಳಿಗೆ ಇನ್ಸುರೆನ್ಸ್ ಮಾಡಿಸುವುದು ಪೊಲೀಸರ ದಂಡ ಪ್ರಯೋಗಕ್ಕೆ ಹೆದರಿಯಲ್ಲ. ವಿಮೆ ಮಾಡಿಸುವುದು ಜೀವ ಜೀವನಕ್ಕಾಗಿ ಎಂಬುದನ್ನು ಮನಗಾಣಬೇಕಿದೆ. …

Read More »

ಮೀಸಲಾತಿಗೆ ಯಡಿಯೂರಪ್ಪ ಅಡ್ಡಿ.. ಸಿಎಂ ಬೊಮ್ಮಾಯಿ ಮನೆ ಮುಂದೆ ಸತ್ಯಾಗ್ರಹಕ್ಕೆ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿರುವ ಸತ್ಯಾಗ್ರಹಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದರು. ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಆಯೋಜಿಸಿರುವ ಸತ್ಯಾಗ್ರಹಕ್ಕೆ ಶಾಲಾ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಮೀಜಿ ಚಾಲನೆ ನೀಡಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ನಾಲ್ಕನೇ ಬಾರಿ ಮಾತು ತಪ್ಪಿದರೆ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡ್ತೇವೆ ಅಂತಾ …

Read More »