Breaking News

ರಾಜಕೀಯ

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ

ಮಂಗಳೂರು, ಅಕ್ಟೋಬರ್ 27: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ …

Read More »

ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರದ ಪ್ರಾರಂಭ

ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರದ ಪ್ರಾರಂಭ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರ ಯಳ್ಳೂರಿನಲ್ಲಿ ನೂತನ ಕೇಂದ್ರ ಪ್ರಾರಂಭ ದಿಂಡೋರಿ ಪ್ರಣೀತ ಅ. ಭಾ. ಶ್ರೀ ಸ್ವಾಮಿ ಸಮರ್ಥ ಸೇವಾ ಕೇಂದ್ರದ ಹೊಸ ಶಾಖೆ ಇಂದು ಅದ್ಧೂರಿ ಸಂಭ್ರಮದ ಪಲ್ಲಕ್ಕಿ ಮೆರವಣಿಗೆ ಅಖಿಲ ಭಾರತ ಶ್ರೀ ಸ್ವಾಮಿ ಸಮರ್ಥ ಸೇವಾ ಕೇಂದ್ರದ ವತಿಯಿಂದ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಇಂದು ಶ್ರೀ …

Read More »

ಗಾಂಜಾ ಸೇವಿಸಿ ಅಸಹಜ ವರ್ತನೆ… 8 ಜನರ ವಿರುದ್ಧ ಕ್ರಮ ಕೈಗೊಂಡ ಬೆಳಗಾವಿ ಪೊಲೀಸ್…

ಗಾಂಜಾ ಸೇವಿಸಿ ಅಸಹಜ ವರ್ತನೆ… 8 ಜನರ ವಿರುದ್ಧ ಕ್ರಮ ಕೈಗೊಂಡ ಬೆಳಗಾವಿ ಪೊಲೀಸ್… ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ 8 ವ್ಯಕ್ತಿಗಳನ್ನು ಪೊಲೀಸರು ಬೇರೆ ಬೇರೆ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಹಲಗಾ ಗ್ರಾಮದ ಯಲ್ಲಪ್ಪ ಭೀಮಪ್ಪ ಯೇಶೂಟೆ (58) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥ ಸೇವಿಸಿ ವರ್ತಿಸುತ್ತಿದ್ದಾಗ ಹಿರೆಬಾಗೇವಾಡಿ ಠಾಣೆಯ ಪಿಎಸ್‌ಐ ಚಿ. ಕೆ. ಮಿಟಗಾರ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, …

Read More »

ಒಂದು ಲಕ್ಷ ಲಂಚ ಕೇಳಿದ, ಬೆಳಗಾವಿಯ ಇಂಜಿನಿಯರ್ EE ಅಶೋಕ್ ಶಿರೂರ ಅರೆಸ್ಟ್…..

ಒಂದು ಲಕ್ಷ ಲಂಚ ಕೇಳಿದ, ಬೆಳಗಾವಿಯ ಇಂಜಿನಿಯರ್ EE ಅಶೋಕ್ ಶಿರೂರ ಅರೆಸ್ಟ್….. ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾದಿನ ಪಡಿಸಿ ಕೊಂಡ ಜಮೀನು ಗೆ ಪರಿಹಾರ ದ ಚೆಕ್ ನೀಡಲು 1ಲಕ್ಷ್ಮ ಲಂಚ ಕೇಳಿದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ರ ಬಂಧನ ರಾಯಬಾಗ ತಾಲೂಕಾ ಖೇಮಲಾಪುರ ಗ್ರಾಮದ ಯಾಸಿನ್ ಪೇಂಢಾರಿ ಯವರ 14 ಗುಂಟೆ ಜಮೀನನು ಮುಗಲಖೊಡ್ ಮತ್ತು ಹಾರೂಗೇರಿ ಪಟ್ಟಣ …

Read More »

ರಸ್ತೆ ದುರಸ್ತಿಗೆ ರೋಡ್​ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆ

ರಸ್ತೆ ದುರಸ್ತಿಗೆ ರೋಡ್​ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆ   ಹಾವೇರಿ: ರಾಣೆಬೆನ್ನೂರಿನ ಗೌರಿಶಂಕರ್ ನಗರದ 2ನೇ ಹಂತ 1ನೇ ಕ್ರಾಸ್ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿ ರೈತ ಸಂಘಟನೆ ಹಾಗೂ ಸ್ಥಳೀಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಎರಡನೇ ಹಂತ, ಮೊದಲನೇ ಕ್ರಾಸ್ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ರೋಡ್​ನಲ್ಲಿ ಹೋಮ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ …

Read More »

ರೈತನ ಮೇಲೆ ಹುಲಿ ದಾಳಿ ಪ್ರಕರಣ: ನಿರ್ಲಕ್ಷ್ಯ ತೋರಿದ್ದರೆ ಅಧಿಕಾರಿಗಳ ಮೇಲೆ ಕ್ರಮ- ಸಚಿವ ಖಂಡ್ರೆ

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ (ಮುಳ್ಳೂರು) ಬಳಿ ರೈತರೊಬ್ಬರ ಮೇಲೆ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ …

Read More »

ಮೋಂಥಾ ಚಂಡಮಾರುತದ ಎಫೆಕ್ಟ್: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ

ಬೆಂಗಳೂರು: ಮೋಂಥಾ ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ತೀರದ ಮೂಲಕ ಹಾದುಹೋಗಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27 (ಇಂದಿನಿಂದ) ಅ. 29ರ ವರೆಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಇಂದು, ನಾಳೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರ ಅವಧಿಯಲ್ಲಿ …

Read More »

ಪತ್ನಿ ಮೃತಪಟ್ಟ 3 ಗಂಟೆಯ ಬಳಿಕ ಪತಿ ಸಾವು; ಒಟ್ಟಿಗೆ ಅಂತ್ಯಕ್ರಿಯೆ

ಬೀದರ್: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ದಂಪತಿಗಳು ಒಂದೇ ದಿನ ಸಾವಿಗೀಡಾದ ಘಟನೆ ನಡೆದಿದೆ. ಗುಂಡಪ್ಪ ಹೋಡಗೆ (85), ಲಕ್ಷ್ಮಿಬಾಯಿ ಹೋಡಗೆ (83) ಸಾವಿನಲ್ಲೂ ಒಂದಾದ ದಂಪತಿ. ದಂಪತಿಗಳಿಬ್ಬರು ಕೆಲ ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೊದಲು ಲಕ್ಷ್ಮೀಬಾಯಿ ಹೋಡಗೆ ಅವರು ಶುಕ್ರವಾರ ಸಂಜೆ ನಿಧನ ಹೊಂದಿದರು. ಇವರ ಸಾವಿನ ಸುದ್ದಿ ವಿಷಯ ತಿಳಿದು ಮೂರು ಗಂಟೆ ನಂತರ ಗುಂಡಪ್ಪ ಹೋಡಗೆ ಸಹ ಕೊನೆಯುಸಿರೆಳೆದಿದ್ದಾರೆ. ಆರೇಳು ದಶಕ …

Read More »

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ: ಪರಮೇಶ್ವರ್

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ: ಪರಮೇಶ್ವರ್ ಬೆಂಗಳೂರು: ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಗತ್ಯವಿದ್ರೆ ಬಿಹಾರ ಚುನಾವಣೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್. ನಾವು ಇಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅವಶ್ಯಕತೆ ಇದ್ದರೆ ಬಿಹಾರ ಚುನಾವಣೆ ನಂತರ …

Read More »

ನವದೆಹಲಿಯಲ್ಲಿ ಎಐಸಿಸಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ನವದೆಹಲಿಯಲ್ಲಿ ಎಐಸಿಸಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನವದೆಹಲಿಯಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಕಮೀಟಿಯ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ತನ್ನ ಉಸ್ತುವಾರಿಯ ವ್ಯಾಪ್ತಿಯಲ್ಲಿ ಬರುವ ದಾದರಾ ನಗರದ ಹವೇಳಿ ಚುನಾವಣೆಯಲ್ಲಿ ಓಟ್ ಜೋರಿ ಸಂದರ್ಭದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದರು ಲೋಕಲ್ ಬೌಡಿ ಚುನಾವಣೆಯಲ್ಲಿ ದಾಮನ ಮತ್ತು ದೀವ್ ಯಲ್ಲಿಯೂ …

Read More »