Breaking News

ರಾಜಕೀಯ

ಸಿದ್ದರಾಮಯ್ಯ ಗಾಢ ನಿದ್ರೆಯಿಂದ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ: ಬೊಮ್ಮಾಯಿ

ಬೆಂಗಳೂರು: ನರೇಂದ್ರ ಮೋದಿ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯ ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಡಿರುವ ಟ್ವೀಟ್‌ಗೆ ತಿರುಗೇಟು ನೀಡಿರುವ ಅವರು, ಯುಪಿಎ 2004-2014ರ ಹತ್ತು ವರ್ಷದ ಆಡಳಿತದಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ 81,795.19 ಕೋಟಿ ರೂ. ಹಾಗೂ ಅನುದಾನ ಹಂಚಿಕೆ ರೂಪದಲ್ಲಿ …

Read More »

ದಕ್ಷಿಣ ಮುಂಬೈ ಕ್ಷೇತ್ರಕ್ಕಾಗಿ ಕಾಂಗ್ರೆಸ್ ತೊರೆದ ದಿಯೋರಾ

ದಕ್ಷಿಣ ಮುಂಬೈ ಕ್ಷೇತ್ರಕ್ಕಾಗಿ ಕಾಂಗ್ರೆಸ್ ತೊರೆದ ದಿಯೋರಾ   ಮುಂಬೈ ಜನವರಿ 17: ಲೋಕಸಭೆ ಚುನಾವಣೆ (Loksabha Election) ಸಮೀಪಿಸುತ್ತಿದ್ದಂತೆ ಸೀಟು ಹಂಚಿಕೆ (Seat Sharing) ವಿಚಾರ ಚರ್ಚೆಯಲ್ಲಿದೆ.ಮಹಾರಾಷ್ಟ್ರ(Maharashtra) ಮಹಾಯುತಿ ಮೈತ್ರಿಕೂಟದ ಸೀಟು ಹಂಚಿಕೆ ಹೇಗಿರುತ್ತೆ? ಇದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಮೂಲಕ ಮುಂಬೈನಲ್ಲಿ 6 ಸ್ಥಾನಗಳಿಗೆ ಮಹಾಮೈತ್ರಿಕೂಟದ ಪ್ರಾಥಮಿಕ ಸೂತ್ರವನ್ನು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. 6ರಲ್ಲಿ 4 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಶಿವಸೇನಾ 2 …

Read More »

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಎರಡು ಲಕ್ಷ ರೂ. ಪರಿಹಾರ ವಿತರಣೆ

ಮಂಗಳೂರು, ಜನವರಿ 17: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತನಿಗೆ ರಾಜ್ಯ ಸರ್ಕಾರದ ವತಿಯಿಂದ ಬುಧವಾರ ಎರಡು ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು. ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಎಂಎಲ್ ಸಿ ಐವಾನ್ ಡಿಸೋಜಾ ಮನವಿ ಮಾಡಿದ್ದರು. ಅದರಂತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗಿದೆ. ಪರಿಹಾರದ ಚೆಕ್ ಅನ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಡಿಸಿ ಸಂತೋಷ್ …

Read More »

ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್, ನಿದ್ದೆರಾಮಯ್ಯ ಎಂದೇ ನಿಮಗೆ ಹೆಸರಿದೆ: ಆರ್ ಅಶೋಕ್

ಬೆಂಗಳೂರು, ಜ.17: ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ಎಂದು ಬರೆದು ನಿನ್ನೆ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ (Narendra Modi) ನಿದ್ದೆ ಮಾಡುವ ರೀತಿಯ ಫೋಟೋ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ ಕೂಡ ಟ್ವೀಟ್ ಮೂಲಕ ತಿರುಗೇಟು ನೀಡಿತ್ತು. ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಬಿಜೆಪಿ (BJP) ವ್ಯಂಗ್ಯವಾಡಿತ್ತು. ಸದ್ಯ ಈಗ …

Read More »

ಧಾರವಾಡ ಕರ್ನಾಟಕ ವಿವಿಯಲ್ಲಿ 10 ವರ್ಷ ಹಿಂದಿನ ಅಕ್ರಮಗಳ ತನಿಖೆಗೆ ಮರುಜೀವ ನೀಡಿದ ರಾಜ್ಯಪಾಲ, ಆರೋಪಿಗಳ ಎದೆಯಲ್ಲಿ ಢವಢವ

ರಾಜ್ಯಪಾಲರು ಕರ್ನಾಟಕ ವಿಶ್ವವಿದ್ಯಾಲಯದ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಯನಿರ್ವಹಣಾ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ. ಆದರೆ, ಅದೇ ಕಾಲಘಟ್ಟದಲ್ಲಿ ಜರುಗಿದ್ದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 14 ಗಂಭೀರ ಹಗರಣಗಳ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗ ಸಲ್ಲಿಸಿದ್ದ ವರದಿಗಳ ಕುರಿತು ವರದಿ ಕೇಳದಿರುವುದು ಕುತೂಹಲ ಮೂಡಿಸಿದೆ.ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿ, ಅಂಕಪಟ್ಟಿ, ಕಾಮಗಾರಿ ಹಾಗೂ …

Read More »

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮೈಸೂರಿನ ರೈತ 19 ಲಕ್ಷದ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?

ಮೈಸೂರಿನ ರೈತ ದೊರೆಸ್ವಾಮಿ ಹೇಳುವಂತೆ ಇದುವರೆಗೂ ಬಡ್ಡಿ ಸೇರಿ 18, 98,000 ರೂಪಾಯಿ ಸಾಲ ಮರು ಪಾವತಿ ಮಾಡಿದರಂತೆ. ಆದರೂ ಬ್ಯಾಂಕ್‌ನವರು ದೊರೆಸ್ವಾಮಿ ಅವರ ಮನೆಯನ್ನು ಏಕ ವ್ಯಕ್ತಿಗೆ ಹರಾಜು ಹಾಕಿದ್ದಾರಂತೆ.ರೈತ ದೇಶದ ಬೆನ್ನೆಲುಬು, ಅನ್ನದಾತ ಅನ್ನೋದು ಕೇವಲ ಘೋಷಣೆಗಷ್ಟೇ ಸೀಮಿತವಾಗಿದೆ. ಇದಕ್ಕೆ ಸಾಕ್ಷಿ ರೈತರಿಗೆ ಆಗುತ್ತಿರುವ ಮೋಸ. ಮೈಸೂರಿನಲ್ಲಿ ಬ್ಯಾಂಕೊಂದು ಸಾಲ ಪಡೆದ ರೈತ ಸಾಲ ತೀರಿಸಿದ್ದರೂ ಸಹ ಮನೆ ಹರಾಜು ಹಾಕಿದ ಆರೋಪ ಕೇಳಿ ಬಂದಿದೆ. ಬ್ಯಾಂಕ್ …

Read More »

ಮುಂಜಾನೆಯೇ ಎರಡೂವರೆ ಗಂಟೆ ನೀರಿನಲ್ಲಿ ತೇಲಿದ ಬಾಲಕ – ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ

ಕಲಿಕೆಯ ಹಂತದಲ್ಲಿ ಶಫಿನ್‌ನಲ್ಲಿದ್ದ ಈಜು ಪ್ರತಿಭೆಯನ್ನು ಅನಿರೀಕ್ಷಿತವಾಗಿ ಕಂಡುಕೊಂಡೆ. ಗಮನಾರ್ಹವಾದ ಪ್ರಾವೀಣ್ಯತೆಯನ್ನು ಪ್ರದರ್ಶಿಸುತ್ತಿದ್ದ. ತರಬೇತಿ ನಂತರ ಈಗ ದಾಖಲೆ ಮಾಡಿರೋದು ಸಂತೋಷ ತಂದಿದೆ ಅಂತಾ ಕೋಚ್ ಆರೋಮಲ್ ಹೇಳಿದ್ದಾರೆ.ಕರಾವಳಿಯಲ್ಲಿ ಸಮುದ್ರವಿದೆ. ಇಲ್ಲಿನ ಬಹುತೇಕರಿಗೆ ಈಜು ಹುಟ್ಟುತ್ತಾನೆ ಬಂದಿರುತ್ತೆ. ಆದ್ರೆ ಇಲ್ಲೊಬ್ಬ ಬಾಲಕ ಈಜನ್ನು ಶಾಲೆಯಲ್ಲಿ ಕಲಿತು ಕೇವಲ ಈಜೋದು ಮಾತ್ರವಲ್ಲದೇ ನೀರಿನಲ್ಲಿ ತೇಲುವ ವಿದ್ಯೆಯನ್ನೂ ಕರಗತ ಮಾಡಿಕೊಂಡಿದ್ದಾನೆ. ಅಷ್ಟೆ ಅಲ್ಲ. ಬರೋಬ್ಬರಿ ಎರಡೂವರೆ ಗಂಟೆ ನೀರಿನಲ್ಲಿ ತೇಲೊ ಮೂಲಕ ನೊಬೆಲ್ …

Read More »

ಶ್ರೀರಾಮನ ಕಟೌಟ್, ಪ್ಲೆಕ್ಸ್​​ನ್ನು ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು

ಜನವರಿ 17: ಶ್ರೀರಾಮನ (Sri ram) ಕಟೌಟ್ ಹಾಗೂ ಪ್ಲೆಕ್ಸ್​ ಅನ್ನು ದುಷ್ಕರ್ಮಿಗಳು ಬ್ಲೇಡ್​​ನಿಂದ ಹರಿದಿರುವ ಘಟನೆ ಮುಳಬಾಗಿಲು (Mulabagilu) ನಗರದ ಗುಣಗಂಟೆಪಾಳ್ಯದಲ್ಲಿ ನಡೆದಿದೆ. ಜನವರಿ 22 ರಂದುಅಯೋಧ್ಯೆ(Ayodhya) ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​​ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್​​ ಟ್ರಸ್ಟ್​​ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ …

Read More »

ಅಯೋಧ್ಯೆಯಲ್ಲಿ ರಾಮನ ಸಾಕ್ಷಾತ್ಕಾರಕ್ಕೆ ಹಾರೋಹಳ್ಳಿಯ ಕಲ್ಲು ಅಷ್ಟೇ ಅಲ್ಲ; ಮಣ್ಣು ಸಹ ಬಳಕೆ

ರಾಮ ಮೂರ್ತಿ ಕೆತ್ತನೆಗೆ ಬಳಸಿರುವ ಕೃಷ್ಣ ಶಿಲೆ ಕರಗಲ್ಲ, ಸಿಡಿಯಲ್ಲ, ಆಸಿಡ್ ಹಾಕಿದ್ರು ಏನೂ ಆಗಲ್ಲ. ಯಾವಾಗ ಇಲ್ಲಿನ ಕಲ್ಲು ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆಯಾಗುತ್ತಿರುವ ಮೂರ್ತಿ ಅಂತ ಅಂತಿಮವಾಯಿತೋ.. ಇದೀಗಾ ಆ ಸ್ಥಳದ ಮಣ್ಣನ್ನು ಸಹ ಅಯೋಧ್ಯೆಯ ಗುರುಗಳು ಬಂದು ತೆಗೆದುಕೊಂಡು ಹೋಗಿದ್ದಾರಂತೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಈ‌ ನಡುವೆ ಮೂವರು ಶಿಲ್ಪಿಗಳಿಂದ ಬಾಲ ರಾಮನ ಮೂರ್ತಿ ಕೂಡ ಕೆತ್ತ‌ನೆಯಾಗಿದೆ. ಈ ಬಾಲ ರಾಮನ ಮೂರ್ತಿಗೆ ಕಲ್ಲು ಹೋಗಿದ್ದು …

Read More »

ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ, ಅಧಿಕಾರದಲ್ಲಿರುವವರು ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಬಿಜೆಪಿಗೆ ಸಿಎಂ ಟಾಗ್

ಬೆಳಗಾವಿ, ಜನವರಿ 17: ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ. ಇಂದು ಅಧಿಕಾರದಲ್ಲಿರುವವರು ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಅವರು ಎಂದಾದರೂ ತ್ಯಾಗ, ಬಲಿದಾನ ಮಾಡಿದ್ದಾರೆಯೇ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಬಿಜೆಪಿಗೆ ಟಾಂಗ್​ ನೀಡಿದ್ದಾರೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಮಾತನಾಡಿದ ಅವರು, ಸಿಪಾಯಿ ದಂಗೆಗೂ ಮೊದಲು ಟಿಪ್ಪು ಸುಲ್ತಾನ್, ವೆಂಕಟಪ್ಪ ನಾಯಕ, ಕಿತ್ತೂರು ಚೆನ್ನಮ್ಮ, ರಾಯಣ್ಣ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಇದನ್ನು ನಾವು ಯಾರೂ ಮರೆಯಲು ಸಾಧ್ಯವಿಲ್ಲ …

Read More »