Breaking News

ರಾಜ್ಯ

ಬೆಳ್ಳಂಬೆಳಿಗ್ಗೆಸೈಫ್ ಅಲಿ ಖಾನ್ ಆರೋಪಿಯೊಬ್ಬನ ಬಂಧನ

ಸೈಫ್ ಅಲಿ ಖಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಹೋಟೆಲ್ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಹೆಸರಿನ ವ್ಯಕ್ತಿಯನ್ನು ಭಾನುವಾರ (ಜನವರಿ 19) ಬೆಳ್ಳಂಬೆಳಿಗ್ಗೆ ಪೊಲೀಸರು ಬಂಧಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಆರೋಪಿಯ ಚಿತ್ರವೂ ಬಹಿರಂಗಗೊಂಡಿದೆ. ಆದರೆ ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ …

Read More »

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು.:ಹೆಚ್. ಕೆ.ಪಾಟೀಲ್

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ ಎಚ್ಚರಿಕೆ ಕೊಟ್ಟಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಡೆದ ಸಂಸತ್ ಅಧಿವೇಶನದಲ್ಲಿ ಫಾರೆಸ್ಟ್ ಕ್ಲಿಯರೆನ್ಸ್ ಸಿಗಬಹುದೆಂಬ ಆಶಾವಾದ ನಮ್ಮದು ಆಗಿತ್ತು. ಆದರೆ ಕೇಂದ್ರ ಸರ್ಕಾರ ನಿರಾಶೆ ಮಾಡಿದೆ.‌ ಅದೇ ಚುನಾವಣೆಗಳು ಬಂದಾಗ ಪ್ರಧಾನಿ …

Read More »

ಕೃಷಿ ವಿವಿ ಅಮೃತ ಮಹೋತ್ಸ ಮತ್ತು ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಕುಲುಪತಿಗಳಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ… ಸಿಎಂ ಕುಲಪತಿಗಳ ವಿರುದ್ಧ ದೂರು..

ಕೃಷಿ ವಿವಿ ಅಮೃತ ಮಹೋತ್ಸ ಮತ್ತು ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಕುಲುಪತಿಗಳಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ… ಸಿಎಂ ಕುಲಪತಿಗಳ ವಿರುದ್ಧ ದೂರು..  ಕಳೆದ ಎರಡು ದಿನಗಳ ಹಿಂದೆ ಧಾರವಾಡ ಕೃಷಿ ವಿವಿಯಲ್ಲಿ ನಡೆದಿದ್ದ ಕೃಷಿವಿವಿ ಅಮೃತ ಮಹೋತ್ಸ ಮತ್ತು ಹಳೆ ವಿದ್ಯಾರ್ಥಿಗಳ‌ಸಮ್ಮಿಲನ ಕಾರ್ಯಕ್ರಮದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ವೇದಿಕೆಯ ಮೇಲೆ ಮಾತನಾಡಲು ಅವಕಾಶ ನೀಡದೇ ಕುಲಪತಿಗಳ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದ್ದು, …

Read More »

ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರ ಪ್ರತಿಭಟನೆ:ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ

ಅನ್ಯಾಯವಾದ ರೈತರಿಗೆ ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರು ಪ್ರತಿಭಟನೆ ಚಿಕ್ಕೋಡಿ: ಭೂಮಿ ಖರೀದಿಯ ವ್ಯಾಜ್ಯವು ನ್ಯಾಯಾಲಯದಲ್ಲಿ ಇರುವಾಗಲೇ ಚಿಕ್ಕೋಡಿ ಉಪನೋಂದನಾಧಿಕಾರಿ ಮತ್ತೊಬ್ಬರಿಗೆ ಆಸ್ತಿಗಳನ್ನು ಮಾರಾಟ ಮಾಡಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಬರುವ ಹದಿನೈದು ದಿನಗಳ ಒಳಗಾಗಿ ರೈತರಿಗೆ ನ್ಯಾಯ ಸಿಗದೇ ಹೋದರೆ ಮಿನಿವಿಧಾನಸೌಧದ ಮುಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿಕ್ಕೋಡಿ …

Read More »

ಶಿಕಾರಿಪುರದಿಂದ ಒಬ್ಬಂಟಿಯಾಗಿ ಪ್ರವಾಸ ಶುರುಮಾಡುತ್ತೇನೆ ಎಂದು ವಿಜಯೇಂದ್ರಗೆ ಸವಾಲೆಸೆದ ರಮೇಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯ ಅಂಕಲಗಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಶಾಸಕ ರಮೇಶ್ ಜಾರಕಿಹೊಳಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸವಾಲೆಸೆದರು. ಬಸನಗೌಡ ಪಾಟೀಲ್ ಮತ್ತು ಜಾರಕಿಹೊಳಿ ವಿಜಯೇಂದ್ರ ವಿರುದ್ಧ ಬೆಂಕಿಯುಗುಳುತ್ತಿದ್ದಾರೆ. ಓಡಾಡುವುದು ಕಷ್ಟವಾಗುತ್ತೆ ಅಂತ ವಿಜಯೇಂದ್ರ ಜಾರಕಿಹೊಳಿಗೆ ಹೇಳಿದ್ದು ಇಬ್ಬರಿಗೂ ಸಹ್ಯವಾಗುತ್ತಿಲ್ಲ. ತಾನು ಶಿಕಾರಿಪುರಕ್ಕೆ ಹೋಗಿ ವಿಜಯೇಂದ್ರ ಮನೆ ಮುಂದಿನಿಂದಲೇ ರಾಜ್ಯ ಪ್ರವಾಸ ಶುರುಮಾಡುತ್ತೇನೆ, ತಾನೊಬ್ಬನೇ ಅಲ್ಲಿಗೆ ಹೋಗುತ್ತೇನೆ, ದಿನಾಂಕವನ್ನು ವಿಜಯೇಂದ್ರನೇ ನಿಗದಿ ಮಾಡಲಿ ಎಂದು ಜಾರಕಿಹೊಳಿ ಸವಾಲೆಸೆದರು. ಪಕ್ಷದ …

Read More »

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು ಎಂದಿದ್ದಾರೆ.

ಬೆಳಗಾವಿ: “ಸುವರ್ಣ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದರು. “ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ …

Read More »

ಅತಿ ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭ

ಬೆಂಗಳೂರು: ಅತಿ ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆಯ ಮೂಲಕ ಕರ್ನಾಟಕದ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವ, ಕರ್ನಾಟಕ ಬಿಜೆಪಿ ಚುನಾವಣಾಧಿಕಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಸೇರಿ …

Read More »

ಬಿಜೆಪಿಯು ದ್ವೇಷ ಹಾಗೂ ಹಿಂಸೆಯ ರಾಜಕಾರಣ‌ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದೂರಿದರು.

ಹುಬ್ಬಳ್ಳಿ: “ಬೆಳಗಾವಿಯಲ್ಲಿ ನಡೆಸುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಿದೆ” ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣದಲ್ಲಿ 300 ಕೋಟಿ ಆಸ್ತಿ ಜಪ್ತಿ ಮಾಡಿರುವುದಾಗಿ ಇ.ಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಮೂಲಕ ಬಿಜೆಪಿ ದ್ವೇಷ ಹಾಗೂ ಹಿಂಸೆಯ ರಾಜಕಾರಣ‌ ಮಾಡುತ್ತಿದೆ. ಕಾಂಗ್ರೆಸ್​ನ ಪ್ರಭಾವಿ …

Read More »

ಸಮಸ್ಯೆ ಸುಳಿಯಲ್ಲಿ ಕಮರಿಪೇಟೆ ಪೊಲೀಸ್​ ಠಾಣೆ!

ಹುಬ್ಬಳ್ಳಿ: ಸಮಸ್ಯೆಯ ಸುಳಿಯಲ್ಲಿರುವ ಕಮರಿಪೇಟೆ ಪೊಲೀಸ್​ ಠಾಣೆ ಕಟ್ಟಡದ ಸ್ಥಳಾಂತರಕ್ಕೆ ಕಾಲ ಕೂಡಿ ಬಂದಿದೆಯಾದರೂ, ಸ್ಥಳಾಂತರ ಭಾಗ್ಯ ಮಾತ್ರ ಇನ್ನೂ ಬಂದಿಲ್ಲ! 15 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಕಟ್ಟಡ ಇದಾಗಿದ್ದು, ರಾಜಕಾಲುವೆ ಮೇಲೆಯೇ ನಿರ್ಮಿಸಲಾಗಿದೆ. ಇದೇ ರಾಜಕಾಲುವೆ ಮೇಲೆ ಪಕ್ಕದ ರಾಷ್ಟ್ರೀಯ ಹೆದ್ದಾರಿ ಸಹ ಹಾದು ಹೋಗಿದ್ದು, ಕಾಲುವೆಯ ತಳಭಾಗ ಅಲ್ಲಲ್ಲಿ ಶಿಥಿಲವಾಗಿದೆ. ಠಾಣೆಯ ಎದುರು ಸರಕು ತುಂಬಿದ​ ಲಾರಿಯೋ ಅಥವಾ ಬೃಹತ್ ವಾಹನವೋ ಸಾಗಿದರೂ ಸಾಕು, ಕಾಲುವೆಯ ತಡೆಗೋಡೆ …

Read More »

ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸ ಮಾಡುತ್ತೇವೆ : ಡಿ ಕೆ ಶಿ

ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎನ್ನುವ ಮೂಲಕ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಹೇಳಿಕೆಗೆ ಡಿಸಿಎಂ ಡಿ‌. ಕೆ ಶಿವಕುಮಾರ್ ತಿರುಗೇಟು ನೀಡಿದರು. ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗನಲ್ಲಿ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆ ಜ. 18 ರಂದು ಪೂರ್ವಭಾವಿ …

Read More »