Breaking News

ರಾಜ್ಯ

ಕಾರ್ಮಿಕ ನ್ಯಾಯಾಲಯದ ಪೀಠಾಧಿಕಾರಿ ನೇಮಕ ವಿಳಂಬವಾದರೆ 10 ಲಕ್ಷ ರೂ ದಂಡ: ಕೆಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ನಗರದಲ್ಲಿರುವ ಕೈಗಾರಿಕಾ ನ್ಯಾಯಾಧೀಕರಣ (ಕಾರ್ಮಿಕ ನ್ಯಾಯಾಲಯ) ದ ಪೀಠಾಸೀನಾಧಿಕಾರಿಯ ನೇಮಕಾತಿ ವಿಚಾರದಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮುಂದಿನ ಮೂರು ವಾರಗಳಲ್ಲಿ ಈ ಸಂಬಂಧ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ 10 ಲಕ್ಷ ರೂ ದಂಡ ತೆತ್ತಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೈಗಾರಿಕಾ ಕಾನೂನು ಅಭ್ಯಾಸಕಾರರ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ …

Read More »

ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!

ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಬೀದರ್: ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ …

Read More »

ನವೆಂಬರ್ 2ರಿಂದ ಪ್ರಸಿದ್ಧ ಹಾಸನಾಂಬ ದೇವಾಲಯ ಓಪನ್

ನವೆಂಬರ್ 2ರಂದು ಪ್ರಸಿದ್ಧ ಅಧಿದೇವತೆ ಹಾಸನಾಂಬೆ ದೇವಸ್ಥಾನ ತೆರೆಯಲಾಗುತ್ತಿದ್ದು ಅಪಾರ ಭಕ್ತರು ಆಗಮಿಸುವ ನಿರೀಕ್ಷೆಯ ಮೇಲೆ ನಿಗಾ ಇಡಲು ಜಿಲ್ಲಾಡಳಿತ ಹೊಸ ನಿಯಮಗಳನ್ನು ರೂಪಿಸಿದೆ. ಹಾಸನ: ನವೆಂಬರ್ 2ರಂದು ಪ್ರಸಿದ್ಧ ಅಧಿದೇವತೆ ಹಾಸನಾಂಬೆ ದೇವಸ್ಥಾನ ತೆರೆಯಲಾಗುತ್ತಿದ್ದು ಅಪಾರ ಭಕ್ತರು ಆಗಮಿಸುವ ನಿರೀಕ್ಷೆಯ ಮೇಲೆ ನಿಗಾ ಇಡಲು ಜಿಲ್ಲಾಡಳಿತ ಹೊಸ ನಿಯಮಗಳನ್ನು ರೂಪಿಸಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಬರುವ …

Read More »

ಬರ ಪರಿಸ್ಥಿತಿ: ಕೇಂದ್ರದಿಂದ 17,901.73 ಕೋಟಿ ರೂ. ಪರಿಹಾರ ಕೋರಿದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ. 17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ.17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗ ಕೇಂದ್ರ …

Read More »

ದರ್ಶನ್, ರಾಕ್​ಲೈನ್ ವೆಂಕಟೇಶ್‌ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಶೋಧ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಹೊಂದಿರುವ ಆರೋಪದಡಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ನಟ ದರ್ಶನ್ ತೂಗುದೀಪ ಸೇರಿದಂತೆ ನಾಲ್ವರ ಮನೆಗಳ ಮೇಲೆ ಶೋಧ ವಾರೆಂಟ್ ಪಡೆದು ಪರಿಶೀಲನೆ ನಡೆಸಿದರು. ನಟರಾದ ಜಗ್ಗೇಶ್, ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಇಲಾಖೆಯ ನಾಲ್ಕು ತಂಡಗಳು ಪ್ರತ್ಯೇಕವಾಗಿ ತೆರಳಿದ್ದು, ನೊಟೀಸ್ ನೀಡಿ, ಮನೆಯ ಇಂಚಿಂಚೂ ಶೋಧಿಸಿವೆ. ಆರ್.ಆರ್.ನಗರದಲ್ಲಿರುವ ದರ್ಶನ್ ಮನೆಗೆ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ …

Read More »

ವಿಶ್ವಕಪ್‌ ಕ್ರಿಕೆಟ್ ಇತಿಹಾಸದಲ್ಲೇ ಅತಿದೊಡ್ಡ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ! ನೆದರ್ಲೆಂಡ್ಸ್‌ ವಿರುದ್ಧ 309 ರನ್‌ಗಳ ಜಯಭೇರಿ

ಆಸ್ಟ್ರೇಲಿಯಾ ನೀಡಿರುವ 400 ರನ್​ಗಳ ಗುರಿ ಬೆನ್ನತ್ತುವಲ್ಲಿ ವಿಫಲವಾದ ನೆದರ್ಲೆಂಡ್ಸ್‌ 309 ರನ್‌ಗಳ ಭಾರಿ ಅಂತರದ ಸೋಲು ಕಂಡಿತು. ನವದೆಹಲಿ: ಐದು ಬಾರಿ ಏಕದಿನ ವಿಶ್ವಕಪ್​ ಗೆದ್ದಿರುವ ಆಸ್ಟ್ರೇಲಿಯಾ ಇಂದು ತಮ್ಮ ಹಳೆಯ ಚಾರ್ಮ್‌ ಪ್ರದರ್ಶಿಸಿತು. ನೆದರ್ಲೆಂಡ್ಸ್​ ವಿರುದ್ಧ ಬ್ಯಾಟಿಂಗ್​ ಮತ್ತು ಬೌಲಿಂಗ್‌ನಲ್ಲಿ ಚಾಂಪಿಯನ್​ ರೀತಿಯ ಪ್ರದರ್ಶನ ನೀಡಿ 29 ಓವರ್​ ಮತ್ತು 309 ರನ್‌ಗಳಿಂದ ಪಂದ್ಯ ಗೆದ್ದುಕೊಂಡಿತು. ಆಸ್ಟ್ರೇಲಿಯಾ ನೀಡಿದ 400 ರನ್‌ಗಳ ಬೃಹತ್​ ಗುರಿ ಬೆನ್ನತ್ತಿದ ಡಚ್ಚರು 21 …

Read More »

ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ.

ಬೆಳಗಾವಿ: ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ. ಕಲರ್​ಫುಲ್ ಲೈಟಿಂಗ್ಸ್‌ನಿಂದ​ ಕಂಗೊಳಿಸುತ್ತಿದ್ದ ಕೋಟೆಯಲ್ಲಿ ಜನರು ಸೆಲ್ಫಿ ಫೋಟೋ ತೆಗೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಉತ್ಸವಕ್ಕೆ ಬಂದವರು ಕೋಟೆ ಅಭಿವೃದ್ಧಿಯಾಗಿ, ಪ್ರಸಿದ್ಧ ಪ್ರವಾಸಿ ತಾಣವಾಗಬೇಕು, ದಸರಾ ಮಾದರಿಯಲ್ಲಿ ಕಿತ್ತೂರು ಉತ್ಸವ ಜರುಗಬೇಕು ಎಂದು ಆಶಿಸಿದರು. ವೀರರಾಣಿ ಚನ್ನಮ್ಮಾಜಿ ಆಳಿದ ಕೋಟೆಯಲ್ಲಿ ಯುವಕ, ಯುವತಿಯರು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬಸ್ಥರು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಸ್ತು ಪ್ರದರ್ಶನದಲ್ಲಿ ಮಾರಾಟಕ್ಕೆ ಇಟ್ಟಿರುವ ವಿವಿಧ ವಸ್ತುಗಳ …

Read More »

ಮಹಿಳೆಗೆ ಯಾವುದೇ ಜವಾಬ್ದಾರಿ ನೀಡಿದರೂ ಆಕೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ವಿಶ್ವಾಸದ್ರೋಹವನ್ನು ಸ್ತ್ರೀಕುಲ ಎಂದೂ ಮಾಡುವುದಿಲ್ಲ.: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳೆಗೆ ಯಾವುದೇ ಜವಾಬ್ದಾರಿ ನೀಡಿದರೂ ಆಕೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ವಿಶ್ವಾಸದ್ರೋಹವನ್ನು ಸ್ತ್ರೀಕುಲ ಎಂದೂ ಮಾಡುವುದಿಲ್ಲ. ಆದರೆ ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯನ್ನು ಸಹಿಸಿಕೊಳ್ಳುವುದಿಲ್ಲ ಎನ್ನುವ ಅಪವಾದವಿದೆ. ತೊಡೆದು ಹಾಕಲು ನಾವೆಲ್ಲ ಒಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕಿತ್ತೂರು ಉತ್ಸವದಲ್ಲಿ ಬುಧವಾರ ರಾಜ್ಯಮಟ್ಟದ ಮಹಿಳಾಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. ಚಂದ್ರಯಾನ ಸೇರಿದಂತೆ ಪ್ರತಿಯೊಂದು ಸಾಧನೆಯಲ್ಲೂ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಈಗ …

Read More »

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ.. ಆಲೆಮನೆಯನ್ನೇ ಸ್ಕ್ಯಾನಿಂಗ್ ಸೆಂಟರ್ ಆಗಿ ಪರಿವರ್ತಿಸಿದ್ದ ನಾಲ್ವರ ಸೆರೆ

ಬೆಂಗಳೂರು : ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ದಂಧೆಯನ್ನು ಪತ್ತೆ ಹಚ್ಚಿರುವ ಬೈಯಪ್ಪನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವೀರೇಶ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್​ 15ರಂದು ಪಿಎಸ್‌ಐ ಮಂಜುನಾಥ್ ನೇತೃತ್ವದ ತಂಡ ರಾತ್ರಿ ಹೊತ್ತು ಗಸ್ತು ತಿರುಗುತ್ತಿತ್ತು. ಈ ವೇಳೆ ಅನುಮಾನಾಸ್ಪದವಾಗಿ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಗೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು …

Read More »

ಕಾನೂನು ಆಯೋಗದ ಜೊತೆ ಕೋವಿಂದ್ ನೇತೃತ್ವದ​ ಸಮಿತಿ ಸಭೆ

ನವದೆಹಲಿ : “ಒಂದು ದೇಶ, ಒಂದು ಚುನಾವಣೆ” ಸಾಧ್ಯತೆ ಬಗ್ಗೆ ಪರಿಶೀಲಿಸಲು ನೇಮಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಗೆ ಕಾನೂನು ಆಯೋಗವು ತನ್ನ ವಿಸ್ತೃತ ವರದಿಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ. ಕೋವಿಂದ್​ ನೇತೃತ್ವದ ಸಮಿತಿಯು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಮಧ್ಯೆ ಕಾನೂನು ಆಯೋಗವು ವರದಿಯನ್ನು ನೀಡಲು ಮುಂದಾಗಿದೆ. ಈ ಸಂಬಂಧ ಚುನಾವಣಾ ಸುಧಾರಣೆ ಕುರಿತು ಚರ್ಚೆ ನಡೆಸಲು ಕಾನೂನು ಆಯೋಗ ಮತ್ತು ಸಮಿತಿ ಬುಧವಾರ ಸಭೆ …

Read More »