ಬಾಗಲಕೋಟೆ: ಆರ್ಎಸ್ಎಸ್ ಮುಖಂಡರೊಬ್ಬರು ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ. ಸಿದ್ದು ಚಿಕ್ಕದಾನಿ ಮುಧೋಳ (55) ಮೃತರು. ಇವರು ಆರ್ಎಸ್ಎಸ್ನಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಿದ್ದು ಕಳೆದ ರಾತ್ರಿ ಬಾಗಲಕೋಟೆ ಹೋಗಿ ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ. ಮುಧೋಳ ಪಟ್ಟಣದ ನಿವಾಸಿಯಾಗಿರುವ ಇವರು, ಶಿವಾಜಿ ಸರ್ಕಲ್ ಬಳಿ ಮಂಜುನಾಥ ಮೊಬೈಲ್ ಶಾಪ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಲೋಕಾಪೂರ ಪಟ್ಟಣದ ಸಮೀಪ ಇರುವ …
Read More »ಡೇಂಜರ್ ಸ್ಟುಡೆಂಟ್ಸ್…!! ಗಣಿತದಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯ ವಿದ್ಯಾರ್ಥಿನಿಯರು ಮಾಡಿದ್ದೇನು?
ಉಳ್ಳಾಲ (ಮಂಗಳೂರು): ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಒಂದು ಅಂಕ ಕಡಿಮೆ ನೀಡಿದರು ಎಂದು ಸಿಟ್ಟಾಗಿದ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತಮ್ಮ ಗಣಿತ ಶಿಕ್ಷಕಿಯ ನೀರಿನ ಬಾಟಲ್ಗೆ ಅವಧಿ ಮುಗಿದು ಹೋದ ಮಾತ್ರೆಯನ್ನು ಹಾಕಿದ್ದಾರೆ. ಈ ಬಾಟಲ್ನಲ್ಲಿರುವ ನೀರು ಕುಡಿದಿದ್ದರಿಂದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಶಾಲೆಯಲ್ಲಿ ಎಸ್ಡಿಎಂಸಿಯಿಂದ ತುರ್ತು ಸಭೆ ನಡೆಸಿ, ವಿದ್ಯಾರ್ಥಿನಿಯರಿಬ್ಬರಿಗೆ ಟಿಸಿ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿರುವ …
Read More »ಡಿಜಿಟಲ್ ಮಾಧ್ಯಮ ನ್ಯೂಸ್ಕ್ಲಿಕ್ ಪ್ರಕರಣ: ಪತ್ರಕರ್ತೆ ಮನೆ ಮೇಲೆ ದಾಳಿ!
ಪತನಂತಿಟ್ಟ (ಕೇರಳ): ಚೀನಾ ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆದ ಆರೋಪದ ಮೇರೆಗೆ ಡಿಜಿಟಲ್ ಮಾಧ್ಯಮ ನ್ಯೂಸ್ಕ್ಲಿಕ್ (Newsclick)ಗೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ಇತ್ತೀಚೆಗಷ್ಟೇ ದೆಹಲಿ ಪೊಲೀಸರು ದಾಳಿ ನಡೆಸಿದ್ದರು. ಕೆಲ ಪತ್ರಕರ್ತರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಶುಕ್ರವಾರವೂ ದಾಳಿ ನಡೆಸಿದ ದೆಹಲಿ ಪೊಲೀಸರು, ಮಲಯಾಳಿ ಪತ್ರಕರ್ತೆ ಹಾಗೂ ನ್ಯೂಸ್ಕ್ಲಿಕ್ನ ಮಾಜಿ ಉದ್ಯೋಗಿ ಅನುಷಾ ಪೌಲ್ ಅವರ ಲ್ಯಾಪ್ಟಾಪ್ ಮತ್ತು ಫೋನ್ ವಶಪಡಿಸಿಕೊಂಡಿದ್ದಾರೆ. ಕೊಡುಮೋನ್ ಬಳಿಯ ಅವರ ನಿವಾಸದ ಮೇಲೆ ದಾಳಿ …
Read More »ಅಥಣಿಯಲ್ಲಿ ಕಾಣೆಯಾದ ವಿದ್ಯಾರ್ಥಿಗಳು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪತ್ತೆ
ಚಿಕ್ಕೋಡಿ(ಬೆಳಗಾವಿ): ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮೂರು ಮಕ್ಕಳು ಕಾಣೆಯಾಗಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮಕ್ಕಳು ಪತ್ತೆಯಾಗಿದ್ದು, ಪೋಷಕರ ಆತಂಕ ದೂರಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿಯ ಮೂವರು ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಅಥಣಿ ಪಟ್ಟಣದಲ್ಲಿ ಕಾಣೆಯಾಗಿದ್ದರು. ಶಾಲೆಗೆ ಹೋಗಿ ಬರುತ್ತೇನೆ ಎಂದು ಮಕ್ಕಳು ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಆತಂಕಗೊಂಡು ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬಸ್ಥರು ಶೋಧ ಕಾರ್ಯ ನಡೆಸಿದರು, ಹುಡುಕಾಟ ಸಮಯದಲ್ಲಿ …
Read More »ಅಮೆರಿಕದಲ್ಲಿ ಭಾರತ ಮೂಲದ ಟೆಕ್ಕಿ ದಂಪತಿ, ಇಬ್ಬರು ಮಕ್ಕಳು ಶವವಾಗಿ ಪತ್ತೆ
ನ್ಯೂಯಾರ್ಕ್ (ಅಮೆರಿಕ): ನ್ಯೂ ಜೆರ್ಸಿಯಲ್ಲಿ ಭಾರತದ ಉತ್ತರ ಪ್ರದೇಶ ಮೂಲದ ದಂಪತಿ ಹಾಗೂ ಅವರ ಇಬ್ಬರು ಮಕ್ಕಳ ಮೃತದೇಹ ದೊರೆತಿದೆ. ಇವರ ವಾಸದ ಮನೆಯಲ್ಲೇ ನಾಲ್ವರ ಶವಗಳಿದ್ದವು. ಕೊಲೆ ಹಾಗೂ ಆತ್ಮಹತ್ಯೆ ಶಂಕೆಯ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತೇಜ್ ಪ್ರತಾಪ್ ಸಿಂಗ್ (43), ಸೋನಾಲ್ ಪರಿಹಾರ್ (42), 10 ವರ್ಷದ ಮಗ ಹಾಗೂ 6 ವರ್ಷದ ಮಗಳು ಮೃತರೆಂದು ಗುರುತಿಸಲಾಗಿದೆ. ಬುಧವಾರ ಸಂಜೆ 4:30ರ ಸುಮಾರಿಗೆ ಇಲ್ಲಿನ ಪ್ಲಾನ್ಸ್ಬರೋ ಮನೆಯಲ್ಲಿ …
Read More »ಪ್ರತಿ ಗ್ರಾಮ ಪಂಚಾಯಿತಿಗೊಂದು ಪಬ್ಲಿಕ್ ಶಾಲೆ ನಿರ್ಮಾಣ: ಡಿಸಿಎಂ ಡಿ.ಕೆ.ಶಿ.
ರಾಮನಗರ: ರಾಜ್ಯದಲ್ಲಿ 2,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಮಾಗಡಿಯಿಂದ ಚಾಲನೆ ದೊರೆತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರ ಪ್ರದೇಶಗಳಿಗೆ ಜನರು ಶಿಕ್ಷಣಕ್ಕಾಗಿ ವಲಸೆ ಹೋಗುವುದು ತಪ್ಪಬೇಕು. ಪ್ರತಿ ಗ್ರಾ.ಪಂ.ಪಂಚಾಯಿತಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕಟ್ಟಬೇಕು ಎಂಬುದು ನನ್ನ ಕನಸು. ಆದಷ್ಟು ಬೇಗ ಯೋಜನೆಯನ್ನು ಕಾರ್ಯಗತಗೊಳಿಸುತ್ತೇವೆ ಎಂದು ಅವರು ತಿಳಿಸಿದರು. ಕುದೂರಿನಲ್ಲಿ ಸುಮಾರು 6 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಶಾಲೆ ನಿರ್ಮಿಸಲು …
Read More »ಮೈಸೂರು ದಸರಾ: 135 ಕಿ.ಮೀ ವಿದ್ಯುತ್ ದೀಪಾಲಂಕಾರದಲ್ಲಿ ಮಿನುಗಲಿದೆ ಸಾಂಸ್ಕೃತಿಕ ನಗರಿ
ಮೈಸೂರು : ಈ ಬಾರಿ ನಾಡಹಬ್ಬ ದಸರಾವನ್ನು ಸಾಂಪ್ರದಾಯಕವಾಗಿ ಆಚರಿಸಲು ನಿರ್ಧಾರಿಸಲಾಗಿದೆ. ಜೊತೆಗೆ ದಸರಾ ಸಂದರ್ಭದಲ್ಲಿ ನಗರದ 135 ಕಿ. ಮೀ ವ್ಯಾಪ್ತಿಯ ಪ್ರಮುಖ ವೃತ್ತಗಳು, ರಸ್ತೆಗಳು ಹಾಗೂ ಸರ್ಕಾರಿ ಪಾರಂಪರಿಕ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಈ ವೇಳೆ ಪ್ರತಿ ವೃತ್ತದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು, ಸೋಮನಾಥೇಶ್ವರ ದೇವಾಲಯ ಹಾಗೂ ಚಂದ್ರಯಾನ 3 ಮಾದರಿಗಳು ದೀಪಾಲಂಕಾರದಲ್ಲಿ ಮಿಂಚಲಿವೆ. ಈ ಬಾರಿಯ ದಸರಾ ದೀಪಾಲಂಕಾರ ಎಲ್ಲೆಲ್ಲಿ ಇರಲಿದೆ, ಎಷ್ಟು ಖರ್ಚಾಗಲಿದೆ ಎಂಬ ಮಾಹಿತಿ …
Read More »5 ಗ್ಯಾರಂಟಿ ಸೇರಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ: “ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಸೇರಿದಂತೆ ಯಾವುದೇ ನಿಯಮಿತ ಅಭಿವೃದ್ಧಿ ಕಾಮಗಾರಿ ಹಾಗೂ ಕಾರ್ಯಕ್ರಮಕ್ಕೆ ಹಣದ ಕೊರತೆ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗಳು ಕುಂಠಿತಗೊಂಡಿವೆ ಅನ್ನೋದು ಸುಳ್ಳು. ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದ್ದೇ ಅವರು. ನಾವು ಈ ಹಿಂದೆ ಆಡಳಿತ ನಡೆಸಿದ್ದೆವು. ಯಾವತ್ತೂ ಇಷ್ಟು ಪ್ರಮಾಣದ …
Read More »ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ
ಮಂಗಳೂರು (ದಕ್ಷಿಣ ಕನ್ನಡ): ಮೂರು ವರ್ಷದ ಬಳಿಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಮತ್ತು ನಿರ್ವಹಣೆ ಅಕ್ಟೋಬರ್ 31ರಿಂದ ದೇಶದ ಪ್ರತಿಷ್ಠಿತ ಉದ್ದಿಮೆ ಕಂಪನಿ ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ. ಇನ್ನು ಮುಂದೆ ಈ ಏರ್ಪೋರ್ಟ್ನ ಆಗುಹೋಗುಗಳು ಅದಾನಿ ಸಮೂಹದಿಂದಲೇ ನಡೆಯಲಿದೆ. 2020ರ ಅಕ್ಟೋಬರ್ 31ರಂದು ಮಂಗಳೂರು ಸೇರಿದಂತೆ ಅಹಮದಾಬಾದ್, ಲಕ್ನೋ, ಜೈಪುರ, ಗುವಾಹಟಿ ಹಾಗೂ ತ್ರಿವೆಂಡ್ರಂ ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಗ್ರೂಪ್ ತನ್ನ ವಶಕ್ಕೆ ಪಡೆದುಕೊಂಡಿತ್ತು. …
Read More »ಆರ್ಟಿಐ ಅರ್ಜಿದಾರರ ಮಾಹಿತಿ ಒದಗಿಸುವಂತೆ ಕೋರಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ
ಬೆಂಗಳೂರು: ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್ 6 ರಂದು ಹೊರಡಿಸಿದ್ದ ನಿರ್ದೇಶನವನ್ನು ಇದೀಗ ಹಿಂಪಡೆದುಕೊಂಡಿದೆ. ಜೂನ್ 6ರಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಮಾಹಿತಿ ಹಕ್ಕಿನ ಅಡಿ ಹೆಚ್ಚು ಬಾರಿ ಅರ್ಜಿಸಲ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸುವಂತೆ ಸೂಚನೆ ನೀಡಿತ್ತು. ಆ ಮೂಲಕ ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರ ಅಧಿಕಾರವನ್ನು …
Read More »
Laxmi News 24×7