Breaking News

ರಾಜ್ಯ

ಬಿಎಸ್​ವೈ ಜೈಲಿಗೆ ಹೋಗಲು ಎಚ್ ಡಿ ಕುಮಾರಸ್ವಾಮಿ ಕಾರಣ: ಶಾಸಕ ಸವದಿ

ಚಿಕ್ಕೋಡಿ: ಮಾಜಿ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರು ಎಂದು ಆರೋಪ ಮಾಡಿ ದ್ವೇಷ ಸಾಧಿಸಲು ಯಡಿಯೂರಪ್ಪ ಹೋಗಿದ್ದವರು. ಅದೇ ಕುಮಾರಸ್ವಾಮಿ ಅವರು ಬಿಎಸ್​ವೈ ಅವರನ್ನು ಭ್ರಷ್ಟಾಚಾರ ಸುಳಿಯಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿದರು. ಆದರೆ, ಇವತ್ತು ಅಧಿಕಾರಿಗೋಸ್ಕರ ಇಬ್ಬರು ನಾಯಕರು ಸ್ವಾಭಿಮಾನ ಬದಿಗೆ ಒತ್ತಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, …

Read More »

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ತಂಬಾಕು ಅಂಗಡಿ ಮೇಲೆ ಪೊಲೀಸರ​ ದಾಳಿ

ಕಡಬ (ದಕ್ಷಿಣಕನ್ನಡ) : ಶಾಲೆ ಬಳಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಕಚೇರಿ ಸ್ಪಂದಿಸಿದೆ. ಈ ಸಂಬಂಧ ಕಡಬ ತಾಲೂಕಿನ ಬಿಳಿನೆಲೆ ಕೈಕಂಬ ಶಾಲೆಯ ಬಳಿ ಇರುವ ಅಂಗಡಿ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂಗಡಿಯಲ್ಲಿ ಮಾರಾಟ ಮಾಡುತ್ತಿದ್ದ ತಂಬಾಕು ಮತ್ತು ಸಿಗರೇಟ್​ ಮುಂತಾದವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ಇಲ್ಲಿನ …

Read More »

2000 ನೋಟುಗಳ ವಿನಿಮಯದ ಅವಧಿ ವಿಸ್ತರಿಸಿದ ಆರ್​ಬಿಐ: ಅಕ್ಟೋಬರ್​ 7 ಕೊನೆ ದಿನ

ನವದೆಹಲಿ: ಹಿಂಪಡೆಯಲಾಗಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ, ಠೇವಣಿ ಅವಧಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) ಇನ್ನಷ್ಟು ಕಾಲ ವಿಸ್ತರಿಸಿದೆ. ಇಂದೇ (ಸೆ.30)ಕೊನೆಯಾಗಿದ್ದ ಗಡುವನ್ನು ಅಕ್ಟೋಬರ್​ 7ರ ವರೆಗೆ ಕಾಲಾವಕಾಶ ನೀಡುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಆರ್​ಬಿಐ, ಬ್ಯಾಂಕ್​ ರಜೆಗಳಿಂದಾಗ ಅಡ್ಡಿ ಮತ್ತು ಜನರ ಅನುಕೂಲಕ್ಕಾಗಿ ಎರಡು ಸಾವಿರದ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಇನ್ನೂ 7 ದಿನಗಳ ಕಾಲಾವಕಾಶ ನೀಡಲಾಗಿದೆ. ಗ್ರಾಹಕರು ಬ್ಯಾಂಕ್​ಗಳಿಗೆ ತೆರಳಿ …

Read More »

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನೀರು ಬಿಡುವ ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು. ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ …

Read More »

ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಸಿಸಿಬಿ ಮಹಜರು

ದಾವಣಗೆರೆ: ಸಾಹಿತಿಗಳಿಗೆ ಎರಡು ವರ್ಷಗಳಿಂದ ಜೀವ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದ ಎಂಬ ಆರೋಪ ಎದುರಿಸುತ್ತಿರುವ ದಾವಣಗೆರೆಯ ಶಿವಾಜಿ ರಾವ್ ಜಾಧವ್ ಬಂಧನವಾಗಿದೆ. ಸಿಸಿಬಿ ಪೊಲೀಸರು ದಾವಣಗೆರೆ ನಗರದ ಈಡ್ಲ್ಯೂಎಸ್ ಕಾಲೋನಿಯ ಆರೋಪಿಯ ನಿವಾಸದಲ್ಲಿಂದು ಮಹಜರು ಮಾಡಿದರು. ಎರಡು ಕಾರುಗಳಲ್ಲಿ ಆಗಮಿಸಿದ ಸಿಸಿಬಿ ಅಧಿಕಾರಿಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಮಹಜರು ಮಾಡಿ ಮಾಹಿತಿ ಕಲೆ ಹಾಕಿ ಆರೋಪಿಗೆ ಸೇರಿದ ಪೆನ್ನು, ಡೈರಿ ಕೆಲ ಪುಸ್ತಕಗಳನ್ನು …

Read More »

‘ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ.

ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ …

Read More »

ಈ ವಾರದ ರಾಶಿ ಭವಿಷ್ಯ

ಮೇಷ: ಈ ವಾರವು ನಿಧಾನ ಗತಿಯಲ್ಲಿ ಪ್ರಾರಂಭಗೊಳ್ಳಲಿದ್ದು, ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಗಮನ ನೀಡಬೇಕು. ಇಲ್ಲದಿದ್ದರೆ ನೀವು ಸಮಸ್ಯೆಗೆ ಈಡಾಗಬಹುದು. ನಿಮ್ಮ ವಿರುದ್ಧ ಯಾವುದೇ ಪ್ರಕರಣವು ಬಾಕಿ ಇದ್ದಲ್ಲಿ, ಈ ವಾರದಲ್ಲಿ ನಿರ್ಣಯವು ನಿಮ್ಮ ಪರವಾಗಿ ಬರಲಿದೆ. ಇದರಿಂದ ನಿಮಗೆ ಲಾಭವಾಗಲಿದೆ. ಆರ್ಥಿಕವಾಗಿ ಸಮಯವು ಅನುಕೂಲಕರವೆನಿಸಲಿದೆ. ಸರ್ಕಾರ ಮತ್ತು ಆಡಳಿತಕ್ಕೆ ಸಂಬಂಧಿಸ ಜನರೊಂದಿಗೆ ನೀವು ಪಾಲ್ಗೊಳ್ಳಲಿದ್ದೀರಿ. ಉದ್ಯೋಗದಲ್ಲಿರುವವರಿಗೆ ಇದು ಉತ್ತಮ ಕಾಲ. ನೀವು ಉತ್ತಮ ಸ್ಥಾನದಲ್ಲಿರಲಿದ್ದು ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. …

Read More »

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ರವಿ ಚನ್ನಣ್ಣನವರ್ ವರ್ಗಾವಣೆ

ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ …

Read More »

ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶನಿವಾರದಂದು ಜರುಗಿದ ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನಕ್ಕೆ …

Read More »

ಅದ್ಧೂರಿ ಕಿಚಡಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ಬಾಗಲಕೋಟೆ: ಕಿಚಡಿ ಜಾತ್ರೆ ಎಂದೇ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಿಮ್ಮಡ ಗ್ರಾಮದ ಪ್ರಭುಲಿಂಗೇಶ್ವರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು‌ ಬಂದಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಕಿಚಡಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಗುರುವಾರ ನಡೆದ ಈ ಜಾತ್ರೆಗೆ ಭಕ್ತ ಸಾಗರ ಸಾಕ್ಷಿಯಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡಿ …

Read More »