Breaking News
Home / ರಾಜ್ಯ (page 12)

ರಾಜ್ಯ

ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ: ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಬೆಲ್ಲದ್ ಆರೋಪ

ಹುಬ್ಬಳ್ಳಿ, ಏಪ್ರಿಲ್ 18: ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮುಂದುವರೆಸಿವೆ. ಇದೀಗ ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ ಸೃಷ್ಟಿ ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ …

Read More »

ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ಕಲಬುರಗಿ: ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ ಎರಡು ಸಾವಿರ ಬರ‌ ಪರಿಹಾರ ನೀಡಿದೆ ಎಂದು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು. ನಗರದ ಜಿಲ್ಲಾ ಚುನಾವಣಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬರಗಾಲದಲ್ಲಿ 18-20 ಸಾವಿರ ರೂ.ಪರಿಹಾರ ನೀಡಲಾಗಿದೆ. ಆದರೆ, ಈಗಿನ ಸಿದ್ದರಾಮಯ್ಯ ಸರ್ಕಾರ ಕೇವಲ ಎರಡು ಸಾವಿರ ರೂಪಾಯಿಗಳನ್ನು ಭಿಕ್ಷುಕರಂತೆ ರೈತರಿಗೆ …

Read More »

ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಎ. 19ರಂದು(ಶುಕ್ರವಾರ) ನಡೆಯಲಿದ್ದು, ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಒಟ್ಟು 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜತೆಗೆ, ಅರುಣಾಚಲ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗೂ ಮತದಾನ ನಡೆಯಲಿದೆ.   ಮೊದಲ ಹಂತದಲ್ಲಿ 8 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರ ಅದೃಷ್ಟ ಪರೀಕ್ಷೆ ನಡೆಯಲಿದೆ. ಮೊದಲ …

Read More »

ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ಪಾವಗಡ: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮದ್ರೇನಹಳ್ಳಿ ‌ಅರಣ್ಯ ಪ್ರದೆಶದ ಬಳಿ ನಡೆದಿದೆ. ತಾಲೂಕಿನ ಬೆಳ್ಳಿಬಟ್ಟಲ ಗ್ರಾಮದ ಗ್ರಾ.ಪಂ.ಸದಸ್ಯ ಕೃಷ್ಣಪ್ಪ ಮೃತಪಟ್ಟವರು. ಕೃಷ್ಣಪ್ಪ ಹಾಗೂ ಹೆಂಡತಿ ಗುಂಡಮ್ಮ ಏ.17 ಬುಧವಾರ ರಾತ್ರಿ 9 ಗಂಟೆಗೆ ತಾಲೂಕಿನ ಅಚ್ಚಮ್ಮನಹಳ್ಳಿ ಗ್ರಾಮದಿಂದ ತಮ್ಮ ಸ್ವಗ್ರಾಮ ಬೆಳ್ಳಿ ಬಟ್ಟಲುಗೆ ಹೋಗುವಾಗ ಶೈಲಾಪುರ ಮತ್ತು‌ಕೊಟಗುಡ್ಡ ಗ್ರಾಮಗಳ ‌ಮಧ್ಯೆ ಮದ್ರೇನಹಳ್ಳಿ ಎಂಬ ‌ಅರಣ್ಯ ಪ್ರದೆಶದ ಬಳಿ‌ ಆಕಸ್ಮಿಕವಾಗಿ ಬೈಕ್ ಗೆ ಕಾಡು ಹಂದಿಗಳು …

Read More »

ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ: ನಮ್ಮ ಸ್ಪರ್ಧೆಯು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ದೃಷ್ಟಿಯಲ್ಲಿ ದುಸ್ಸಾಹಸ ಆಗಿರಬಹುದು, ಆದರೆ ಧಾರವಾಡ ಮತದಾರರ ದೃಷ್ಟಿಯಲ್ಲಿ ಇದು ಸಾಹಸವಾಗಿದೆ. ಅವರು ನನ್ನೊಂದಿಗೆ ಮಾತನಾಡಿದ್ದಾರೆ, ಆದರೆ ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಅವರಿಗೆ ತಿಳಿಸಿರುವೆ ಎಂದು ಫಕೀರ ದಿಂಗಾಲೇಶ್ವರ ಶ್ರೀಗಳು ತಿಳಿಸಿದರು.   ಬುಧವಾರ ಇಲ್ಲಿನ ಬನಶಂಕರಿ ಬಡಾವಣೆಯಲ್ಲಿ ಮುಸ್ಲಿಂ ಧರ್ಮ ಗುರುಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡುತ್ತಿರುವುದು …

Read More »

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ದಾಸರಹಳ್ಳಿ ಕೃಷ್ಣಮೂರ್ತಿ ‘ಕೈ’ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ ನೀಡಿದರು. ಈ ವೇಳೆ ಮಾತನಾಡಿದ ಕರಡಿ ಸಂಗಣ್ಣ, ನಾವೆಲ್ಲರೂ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಶತಾಯಗತಾಯ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ …

Read More »

ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 18 ರಿಂದ 20 ಸೀಟ್ ಗೆಲ್ಲುತ್ತೇವೆ. ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರೆಯುತ್ತಾರೆ. ಡಿಸಿಎಂ ಆಗಿ ಡಿಕೆಶಿಯವರು ಮುಂದುವರೆಯುತ್ತಾರೆ. ಅವರವರ ಎರಡು ಖುರ್ಚಿಗಳು ಫುಲ್ಲಾಗಿದೆ ಎಂದರು. ಈಶ್ವರಪ್ಪ ನವರು ಎಲ್ಲಾ ತಯಾರಿ ಮಾಡಿದ್ದರು, ಬೊಮ್ಮಾಯಿಯವರು ಅವರಿಗೆ ಹೇಳದೆ ಬಂದರು. ಈಶ್ವರಪ್ಪ ನವರ ಗತಿ ಏನಾಯ್ತು.ಬೊಮ್ಮಾಯಿ ಒಬ್ಬ ಮುಖ್ಯಮಂತ್ರಿ …

Read More »

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಸಿಇಟಿ ಗುರುವಾರದಿಂದ ಆರಂಭಗೊಳ್ಳಲಿದ್ದು ದಾಖಲೆಯ 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ 2.60 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು ಈವರೆಗಿನ ದಾಖಲೆಯಾಗಿತ್ತು. ಆದರೆ ಈ ವರ್ಷ ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು ಹೊಸ …

Read More »

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.20ರಿಂದ 24ರವರೆಗೆ ಭರ್ಜರಿ ಮತಬೇಟೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಲಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ …

Read More »

ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲಿದ್ದಾರಾ ದಚ್ಚು?, ಎಚ್‌ಡಿಕೆ ಪರ ಇನ್ನೂ ಪ್ರಚಾರಕ್ಕಿಳಿಯದ ಸುಮಲತಾ-ಗುಟ್ಟೇನು?

ಮಂಡ್ಯ, ಏಪ್ರಿಲ್, 18: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣಗಳು ದಿನದಿಂದ ದಿನಕ್ಕೆ ಸುಡು ಬಿಸಲಿಲಿನಂತೆ ರಂಗೆರುತ್ತಿವೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮಾಡಲು ಸಿನಿಮಾ ಸ್ಟಾರ್‌ಗಳು ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್‌ ಅವರು ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿಳ ಪ್ರಚಾರ ಮಾಡಲಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದ್ದು, ಈ ವಿಚಾರ ಇದೀಗ ಭಾರೀ ಸಂಚಲನ ಮೂಡಿಸಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ …

Read More »