Breaking News
Home / ರಾಜ್ಯ (page 1325)

ರಾಜ್ಯ

ಬೆಳಗಾವಿಯ ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನದ ವಿವಿಧ ಕಟ್ಟಡಗಳ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಯ ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನದ ನೂತನ ಅತಿಥಿ ಗೃಹ, ವ್ಯಾಯಾಮ ಶಾಲೆ, ಸೆಂಟನರಿ ಹಾಲ್ ನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು. ಬೆಳಗಾವಿಯ ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನ ವಂಟಮೂರಿಯ ರಾಜಾ ಲಖಮಗೌಡ ಅವರು ಸ್ಥಾಪಿಸಿದ್ದ 103 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನದಲ್ಲಿ ನೂತನವಾಗಿ ನಿರ್ಮಿಸಿರುವ ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಅವರ ತಂದೆಯ ಹೆಸರಿನ ಅತಿಥಿ …

Read More »

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ‘ದೊಡ್ಡ ಹುದ್ದೆ’ಯ ಮುನ್ಸೂಚನೆ ಕೊಟ್ಟ ಹೈಕಮಾಂಡ್!

ಬೆಂಗಳೂರು, ಡಿ.20: ಕರ್ನಾಟಕ ಬಜೆಪಿಯ ಪ್ರಮುಖ ಮಹಿಳಾ ನಾಯಕಿ, ಪ್ರಸ್ತುತ ಕೇಂದ್ರದಲ್ಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ವಿವಾದಗಳಿಂದ ದೂರ ಉಳಿಯುತ್ತಿರುವುದು ಹಾಗೂ ಎಲ್ಲದ್ದಕ್ಕೂ ಪ್ರತಿಕ್ರಿಯಿಸದಿರುವುದರ ಹಿಂದೆ ಬಿಜೆಪಿ ಹೈಕಮಾಂಡ್‌ನ ವಿಶೇಷ ಸೂಚನೆಯಿಂದ ಎಂಬ ಮಾತುಗಳು ಕೇಳಿಬರುತ್ತಿವೆ.   ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರು ಕೆಲವು ತಿಂಗಳಿಂದ ತಾವಾಯಿತು, ತಮ್ಮ ಕೆಲಸವಾಯಿತು ಎಂಬಂತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು, …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …

Read More »

ವಾಟ್ಸ್‌ಆಯಪ್‌ ಗ್ರೂಪ್‌ಗಳಿಗೆ ಪೋರ್ನ್‌ ವಿಡಿಯೋ ಕಳುಹಿಸಿದ ಶಿಕ್ಷಕ: ಮೊಬೈಲ್‌ ನೋಡಿದ ವಿದ್ಯಾರ್ಥಿಗಳು ಶಾಕ್‌

ಚೆನ್ನೈ: ಕುಡಿದ ಮತ್ತಿನಲ್ಲಿ ಗಣಿತ ಶಿಕ್ಷಕನೊಬ್ಬ ರಾತ್ರಿ ವೇಳೆ ಪೋರ್ನ್‌ ವಿಡಿಯೋ ಒಂದನ್ನು ವಾಟ್ಸ್‌ಆಯಪ್‌ ಗ್ರೂಪ್‌ಗಳಿಗೆ ಕಳುಹಿಸಿದ್ದಾರೆ. ಈ ವಿಡಿಯೋ ಆನ್‌ಲೈನ್‌ ಕ್ಲಾಸ್‌ಗಾಗಿ ವಿದ್ಯಾರ್ಥಿಗಳು ಇರುವ ಗ್ರೂಪ್‌ಗಳಿಗೂ ಹೋಗಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ದಂಗಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.   ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಗ್ರೂಪ್‌ನಲ್ಲಿ ಕೆಲವು ಇವರ ಕ್ಲಾಸ್‌ನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು. ಬೆಳಗ್ಗೆ ಆನ್‌ಲೈನ್‌ ಕ್ಲಾಸ್‌ಗಾಗಿ ಮೊಬೈಲ್‌ ನೋಡಿದಾಗ ವಿದ್ಯಾರ್ಥಿಗಳು ದಂಗಾಗಿ …

Read More »

ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಇಂದು ವಿಧೇಯಕ ಮಂಡನೆ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವ ವಿಧೇಯಕವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಚುನಾವಣಾ ಕಾನೂನು ತಿದ್ದುಪಡಿ ವಿಧೇಯಕ -2021 ಮಂಡನೆ ಮಾಡಲು ಮುಂದಾಗಿದೆ. ಒಬ್ಬನೇ ಮತದಾರ ಹಲವು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದನ್ನು ಪತ್ತೆ ಹಚ್ಚಿ ಅದನ್ನು ಪಟ್ಟಿಯಿಂದ ತೆಗೆದು ಹಾಕಲು ಇದರಿಂದ ಅನುಕೂಲವಾಗುತ್ತದೆ. ಹೊಸ ಮತದಾರರಿಗೆ ವರ್ಷಕ್ಕೆ ನಾಲ್ಕು ಸಲ ಮತದಾರರ ಪಟ್ಟಿಗೆ ಹೆಸರು …

Read More »

ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ ಅಶೋಕ್‌ ಹಾರನಹಳ್ಳಿ ಆಯ್ಕೆ

ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಅಶೋಕ್‌ ಹಾರನಹಳ್ಳಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಶೋಕ್‌ ಹಾರನಹಳ್ಳಿ, ಎಸ್‌. ರಘುನಾಥ್ ಮತ್ತು ಆರ್‌. ಲಕ್ಷ್ಮೀಕಾಂತ್ ಸ್ಪರ್ಧಿಸಿದ್ದರು. ಅಶೋಕ್‌ ಹಾರನಹಳ್ಳಿ ಮತ್ತು ರಘುನಾಥ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಹಾರನಹಳ್ಳಿ ಅವರು 455 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಅಶೋಕ್‌ ಹಾರನಹಳ್ಳಿ 4,424 ಮತಗಳನ್ನು ಪಡೆದರು. ಪ್ರತಿಸ್ಪರ್ಧಿಗಳಾದ ಎಸ್‌. ರಘುನಾಥ್ 3,969 ಮತಗಳು ಮತ್ತು ಆರ್‌.ಲಕ್ಷ್ಮೀಕಾಂತ್ 2,239 ಮತಗಳನ್ನು ಪಡೆದರು. …

Read More »

ದೇಶಾದ್ಯಂತ ಇಂದು ಕೈಗಾರಿಕೆಗಳು ಬಂದ್, 35 ಸಾವಿರ ಕೋಟಿ ರೂ. ನಷ್ಟ ಸಾಧ್ಯತೆ

ನವದೆಹಲಿ: ಕಚ್ಚಾ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ದೇಶವ್ಯಾಪಿ ಮುಷ್ಕರ ಕೈಗೊಂಡಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು ಬಂದ್ ಆಗಲಿವೆ. ಎಂಎಸ್‌ಎಂಇ ಬಂದ್ ನಿಂದಾಗಿ ಸುಮಾರು 35 ಸಾವಿರ ಕೋಟಿ ರೂ. ನಷ್ಟು ಉತ್ಪಾದನೆ ನಷ್ಟವಾಗಲಿದೆ. 10 ಲಕ್ಷ ಕೈಗಾರಿಕೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಇಷ್ಟೊಂದು ಪ್ರಮಾಣದ ಉತ್ಪಾದನೆ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಅಖಿಲ ಭಾರತ ಎಂಎಸ್‌ಎಂಇ ಸಂಘಟನೆಯ ಸದಸ್ಯ …

Read More »

ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್

ಕೋವಿಶೀಲ್ಡ್‌ನ ಎರಡು ಡೋಸ್‌ಗಳನ್ನು ಪಡೆದವರ ಪೈಕಿ ಮೂರರಿಂದ ಏಳು ತಿಂಗಳ ಬಳಿಕವೂ ಕೋವಿಡ್‌-19 ವಿರುದ್ಧ ಪ್ರತಿರೋಧದ ಶಕ್ತಿ ಉತ್ತಮವಾಗಿರುವ ವಿಚಾರವು 500ರಷ್ಟು ಆರೋಗ್ಯ ಸೇವಾ ಸಿಬ್ಬಂದಿ ಮೇಲೆ ನಡೆಸಿರುವ ಅಧ್ಯಯದಲ್ಲಿ ತಿಳಿದುಬಂದಿದೆ. ಪುಣೆ ಮೂಲದ ಬಿಜೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಾಸ್ಸೋನ್ ಆಸ್ಪತ್ರೆಗಳು ಈ ಅಧ್ಯಯನವನ್ನು ಜಂಟಿಯಾಗಿ ನಡೆಸಿವೆ. ಮೇಲ್ಕಂಡ ಕಾರಣದಿಂದಾಗಿ, ಸದ್ಯದ ಮಟ್ಟಿಗೆ ಬೂಸ್ಟರ್‌ ಡೋಸ್‌ಗಿಂತಲೂ ಎರಡನೇ ಲಸಿಕೆಯ ಕವರೇಜ್‌ ಅನ್ನು ಹೆಚ್ಚಿಸುವತ್ತ ಗಮನ ನೀಡಬೇಕಾದ ಅಗತ್ಯವಿದೆ …

Read More »

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….  

Read More »

ಬೆಳಗಾವಿ ನಗರ ಹಾಗೂ ಬೆಳಗಾವಿ, ತಾಲೂಕಾ ವ್ಯಾಪ್ತಿಯಲ್ಲಿ ಕಲಂ 144ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಜಾರಿಯಾಲ್ಲಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ಅವಮಾನಪಡಿಸಿದ ಘಟನೆಗೆ ಪ್ರತಿರೋಧವಾಗಿ ಕೆಲವು ಸಂಘಟಣಿಗಳು ಡಿಸೆಂಬರ್ 17ರ ರಾತ್ರಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಹಲವೆಡೆ ಕಡೆ ಕಲ್ಲು ತೂರಾಟ ಹಾಗೂ ಅನಗೋಳದಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣಗಳು ನಡೆದಿದ್ದವು. ಎಂಇಎಸ್ ಪುಂಡಾಟ, …

Read More »