ಚಿತ್ರದುರ್ಗ: ನ್ಯಾಯಬೆಲೆ ಅಂಗಡಿ ಮಹಿಳೆಗೆ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಕ್ಕೆ ಸಂಬಂಧಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಅವಿನಾಶ್ ಬಂಧನಕ್ಕೊಳಗಾಗಿದ್ದಾರೆ. ಬಡಾವಣೆ ಠಾಣೆ ಪೊಲೀಸರು ಆರೋಪಿ ಅವಿನಾಶ್ನ ಬಂಧಿಸಿದ್ದು, ಭೀಮ್ ಆರ್ಮಿ ಉಪಾಧ್ಯಕ್ಷ ಪ್ರದೀಪ್ ಪರಾರಿಯಾಗಿದ್ದಾರೆ. ನ್ಯಾಯಬೆಲೆ ಅಂಗಡಿ ಮಹಿಳೆಗೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂಬ ದೂರಿನನ್ವಯ ಅರೆಸ್ಟ್ ಮಾಡಲಾಗಿದೆ. ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಮಹಿಳೆಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಕೇಳಿಬಂದಿತ್ತು. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ …
Read More »ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟ, ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು. ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ …
Read More »ಬೈಕ್ ಅನ್ನು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ.
ದಾವಣಗೆರೆ: ತಡ ರಾತ್ರಿ ಬೈಕ್ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಸವಾರರ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ. ಜಗದೀಶ್ (42) ವಿಶ್ವನಾಥ (31) ಹಣ ಕಳೆದುಕೊಂಡ ರೈತರು. ಇಬ್ಬರೂ ರೈತರು ವೀಳ್ಯದೆಲೆ ಮಾರಾಟ ಮಾಡಿ, ಗ್ರಾಮಕ್ಕೆ ವಾಪಸ್ಸಾಗುವಾಗ ತಡ ರಾತ್ರಿ ಈ ಘಟನೆ ನಡೆದಿದೆ. ಹರಿಹರ ತಾಲೂಕಿನ ಬೆಳ್ಳೂಡಿ- ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಮೇಲೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ರೈತರಿಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ …
Read More »ಮತ್ತೊಬ್ಬನ ಜೊತೆ ಹೆಂಡತಿಯ ರಾಸಲೀಲೆ: ಹೆಂಡತಿಯ ಕತ್ತು ಸೀಳಿ ಬೆರಳುಗಳನ್ನು ಕತ್ತರಿಸಿದ ಗಂಡ!
ಹೈದರಾಬಾದ್: ಆಗಸ್ಟ್ 27 ರಂದು ವಿವಾಹವಾಗಿದ್ದ ವ್ಯಕ್ತಿಯೊಬ್ಬರು ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪ್ರಗತಿನಗರದಲ್ಲಿ ಶನಿವಾರ ನಡೆದಿದೆ. ಮೃತ ಸುಧಾರಾಣಿ ಮೂಲತಃ ಕಾಮರೆಡ್ಡಿ ಜಿಲ್ಲೆಯವರಾಗಿದ್ದು, ಒಂದು ವಾರದಿಂದ ಬಾಚುಪಲ್ಲಿಯಲ್ಲಿ ಪತಿಯೊಂದಿಗೆ ನೆಲೆಸಿದ್ದರು. ಕಿರಣ್ ತನ್ನ ಹೆಂಡತಿ ಅಕ್ರಮ ವಿವಾಹೇತರ ಸಂಬಂಧ ಹೊಂದಿದ್ದು, ಆಕೆಯೊಂದಿಗೆ ನಿತ್ಯ ಜಗಳವಾಡುತ್ತಿದ್ದ ಎನ್ನಲಾಗಿದೆ. ಇತ್ತೀಚೆಗಷ್ಟೇ ಕುಟುಂಬದ ಹಿರಿಯರು ಇಬ್ಬರ ಜಗಳವನ್ನು ಬಗೆಹರಿಸಿ ಹೈದರಾಬಾದ್ಗೆ ಕಳುಹಿಸಿದ್ದಾರೆ. ಕಿರಣ್ ಕೋರಿಕೆಯ ಮೇರೆಗೆ ಸುಧಾರಾಣಿ ಅವರ ಪೋಷಕರು …
Read More »ಗೋಲ್ಡನ್ ಟೆಂಪಲ್ನ ಅದ್ಭುತ ವೈಮಾನಿಕ ಫೋಟೋ ಹಂಚಿಕೊಂಡ ಉದ್ಯಮಿ ಮಹೀಂದ್ರಾ
ಅಮೃತಸರದ ಗೋಲ್ಡನ್ ಟೆಂಪಲ್ನ ಅದ್ಭುತ ವೈಮಾನಿಕ ಚಿತ್ರಣವನ್ನು ಶುಕ್ರವಾರ ಟ್ವಿಟ್ಟರ್ ನಲ್ಲಿ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡಿದ್ದು, ಗುರುಪುರಬ್ ಸಂದರ್ಭದಲ್ಲಿ ಜನರಿಗೆ ಶುಭ ಹಾರೈಸಿದ್ದಾರೆ.ವಿದ್ಯುತ್ ದೀಪಗಳಿಂದ ಸುಂದರವಾಗಿ ಬೆಳಗಿರುವ ಗೋಲ್ಡನ್ ಟೆಂಪಲ್, ಅಕಾಲ್ ತಖ್ತ್ ಮತ್ತು ಸರೋವರದ ಅದ್ಭುತ ವೈಮಾನಿಕ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ. ಈ ವೇಳೆ ಎಲ್ಲರಿಗೂ ಟ್ವೀಟ್ ಮುಖಾಂತರ ಉದ್ಯಮಿ ಆನಂದ್ ಮಹೀಂದ್ರಾ ಅವರು ಗುರುಪುರಬ್ನ ಶುಭಾಶಯಗಳನ್ನು ತಿಳಿಸಿದ್ದಾರೆ. ಆನಂದ್ ಮಹೀಂದ್ರಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ …
Read More »ಹಿಟ್ಲರ್ ಆಡಳಿತ ಅಂತ್ಯ – ರಾಜ್ಯದಲ್ಲೂ ಕೃಷಿ ಕಾಯ್ದೆ ಹಿಂಪಡೆಯಲು ಮಾಜಿ ಸಚಿವ ಜಯಚಂದ್ರ ಆಗ್ರಹ
ರೈತರ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆಬಾಗಿದ್ದು ಹಿಟ್ಲರ್ ಆಡಳಿತ ಕೊನೆಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಕೃಷಿ ಕಾಯ್ದೆಗಳನ್ನು ರಾಜ್ಯದಲ್ಲೂ ಹಿಂಪಡೆಯಬೇಕು ಎಂದು ಮಾಜಿ ಸಚಿವ ಟಿ.ಬಿ.ಜಯಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಹೋರಾಟದಲ್ಲಿ 700 ರೈತರು ಪ್ರಾಣ ಕಳೆದುಕೊಂಡರು. ಆದರೂ ಕೃಷಿ ಕಾಯ್ದೆ ರದ್ದುಪಡಿಸದ ಕೇಂದ್ರ ಸರ್ಕಾರ ಮುಂದಿನ ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ಈಗ ಹಿಂಪಡೆಯುವ ತೀರ್ಮಾನಕ್ಕೆ ಬಂದಿದ್ದು ಬಿಜೆಪಿಗೆ ಜ್ಞಾನೋದಯವಾಗಿದೆ ಎಂದು …
Read More »ರೈಲು ಹಳಿಯ ಮೇಲೆ ಬಾಂಬ್ ಸ್ಫೋಟ
ನವದೆಹಲಿ,ನ.20- ಜಾರ್ಖಂಡ್ನ ಧನ್ಬಾದ್ ವಿಭಾಗದಲ್ಲಿ ರೈಲು ಹಳಿಯ ಮೇಲೆ ಸ್ಫೋಟ ಸಂಭವಿಸಿ ಒಂದು ಡೀಸೆಲ್ ಎಂಜಿನ್ ಹಳಿತಪ್ಪಿದ ಘಟನೆ ಇಂದು ಮುಂಜಾನೆ ಜರುಗಿದೆ. ಇದು ಒಂದು ಬಾಂಬ್ ಸ್ಫೋಟವಾಗಿದ್ದು ಧನಬಾದ್ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಣದ ನಡುವೆ ಸೋಟಗೊಂಡಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಇದು ಒಂದು ನಕ್ಸಲ್ ಸಂಬಂತ ಘಟನೆಯಾಗಿದೆ ಎಂದು ಮೂಲಗಳು ಸೂಚಿಸಿವೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಹಳಿಯ ಮೇಲೆ ಸಂಚಾರ ಪುನರಾರಂಭವಾಗುವುದನ್ನು ಕಾಯಲಾಗುತ್ತಿದೆ …
Read More »ಪ್ರಸಂಗ ಬಂದರೆ ಬ್ರಾಹ್ಮಣರು ತಲವಾರ ಹಿಡಿಯಲೂ ಸಿದ್ಧ ಎಂದು ಬ್ರಾಹ್ಮಣ ಸಮಾಜದ ಮುಖಂಡ ಅನಿಲ ಪೋತದಾರ
ಬೆಳಗಾವಿ: ಪೇಜಾವರ ಶ್ರೀಗಳು ಮಾನವ ಧರ್ಮ ಸ್ವೀಕಾರ ಮಾಡಿದವರು. ದಲಿತರಿರುವಲ್ಲಿಗೆ ಸ್ವತಃ ಹೋಗಿ ಪ್ರವಚನ ಮಾಡಿದ್ದಾರೆ. ದಲಿತರನ್ನು ಉದ್ಧಾರ ಮಾಡುವಲ್ಲಿ ಶ್ರಮಿಸಿದ್ದಾರೆ. ಇಂತಹ ವ್ಯಕ್ತಿಯ ವಿರುದ್ಧ ಮಾತನಾಡುವ ಹಂಸಲೇಖ ಅವರಿಗೆ ನಾಚಿಕೆಯಾಗಬೇಕು. ಬ್ರಾಹ್ಮಣರಿಗೆ ಏನನ್ನಾದರೂ ಅನ್ನಬಹುದೆಂಬ ಕಾಲವೊಂದಿತ್ತು ಆದರೆ ಈಗ ಹಾಗಿಲ್ಲ. ಬ್ರಾಹ್ಮಣರ ಜನಿವಾರವನ್ನು ಮಾತ್ರ ನೀವು ನೋಡಿದ್ದೀರಿ. ಅವರ ಹೃದಯದಲ್ಲಿರುವ ತಲವಾರವನ್ನು ನೀವು ನೋಡಿಲ್ಲ. ಪ್ರಸಂಗ ಬಂದರೆ ಬ್ರಾಹ್ಮಣರು ತಲವಾರ ಹಿಡಿಯಲೂ ಸಿದ್ಧ ಎಂದು ಬ್ರಾಹ್ಮಣ ಸಮಾಜದ ಮುಖಂಡ ಅನಿಲ …
Read More »ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ:B.S.Y.
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಸ್ವಲ್ಪ ತಡವಾದರೂ ಈ ದೃಢ ನಿರ್ಧಾರ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ. ಪ್ರತಿಷ್ಠೆ ಬದಿಗಿಟ್ಟುರೈತರ ಹೋರಾಟ ನೋಡಿದ ಮೇಲೆ ನರೇಂದ್ರ ಮೋದಿಯವರು ಮೂರು ಕಾಯ್ದೆ ಹಿಂಪಡೆದಿದ್ದು, ದೇಶದಲ್ಲಿ ರೈತರ ವಿಶ್ವಾಸ, …
Read More »ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ
ಬಾಗಲಕೋಟೆ: ರೈತರ ಆದಾಯ ದ್ವಿಗುಣಗೊಳಿಸಬೇಕು. ರೈತರಿಗೆ ಅನುಕೂಲ ಆಗಬೇಕೆಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ತಂದಿದ್ರು. ಆದ್ರೆ ಎಲ್ಲೊ ಒಂದು ಕಡೆ ಹೊಸ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲ ಆಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಷಾದ ವ್ಯಕ್ತಪಡಿಸಿದರು. ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಹೊಸ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ತಿಳಿಸಿ ಹೇಳುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ …
Read More »