Breaking News
Home / ರಾಜ್ಯ (page 1369)

ರಾಜ್ಯ

ಸತೀಶ ಜಾರಕಿಹೊಳಿ ನೇತೃತ್ವದಲ್ಲಿಯೇ ಚುನಾವಣೆ: ಲಕ್ಷ್ಮೀ ಹೆಬ್ಬಾಳ್ಕರ್

ನವೆಂಬರ್ 23ರಂದು ಚನ್ನರಾಜ್ ಹಟ್ಟಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೆಯನ್ನು ಕಾರ್ಯಾಧ್ಯಕ್ಷರು, ನಮ್ಮ ನಾಯಕರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿಯೇ ಮಾಡುತ್ತೇವೆ. ಅವರ ಜವಾಬ್ದಾರಿ ತಗೊಂಡ ಮೇಲೆಯೇ ಟಿಕೆಟ್ ಘೋಷಣೆ ಆಗಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಎಂಎಲ್‍ಸಿ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಕುಟುಂಬ ರಾಜಕಾರಣ ಮಾಡುವುದಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಪ್ರತಿಕ್ರಯಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸತೀಶ ಜಾರಕಿಹೊಳಿ ಭವಿಷ್ಯ …

Read More »

ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಹರ್ಷದ್ ಗದ್ಯಾಳ ಮನೆಯಲ್ಲಿ ರಮೇಶ ಜಾರಕಿಹೊಳಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಸಭೆ

ಎಂಎಲ್‍ಸಿ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಅಥಣಿಯಲ್ಲಿ ಸಹೋದರನ ಪರ ಮತಬೇಟೆ ಆರಂಭಿಸಿದ್ದಾರೆ. ಹೌದು ಗುರುವಾರ ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಹರ್ಷದ್ ಗದ್ಯಾಳ ಮನೆಯಲ್ಲಿ ರಮೇಶ ಜಾರಕಿಹೊಳಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಸಭೆ ನಡೆಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ವೇಳೆ ಕಾಗವಾಡದ ರಾಜು ಕಾಗೆ ಮತ್ತು ಅಥಣಿಯ ಹರ್ಷದ …

Read More »

ನಾದಬ್ರಹ್ಮ ಹಂಸಲೇಖ ವಿರುದ್ಧ ಟ್ರೋಲ್ ಮಾಡುವವರಿಗೆ ಕಠಿಣ ಕ್ರಮ

ನಾದಬ್ರಹ್ಮ ಹಂಸಲೇಖ ವಿರುದ್ಧ ಟ್ರೋಲ್ ಮಾಡುವವರಿಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ಪ್ರತಿಭಟನೆ ಜರುಗಿದೆ. ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಾಕಷ್ಟು ಟೀಕೆಗೆ ಒಳಗಾಗಿದ್ದ ಹಂಸಲೇಖ ಅವರ ಪರ ಬೆಂಗಳೂರು ವಿವಿ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಹಂಸಲೇಖ ಅವರ ವಿರುದ್ಧ ದಾಖಲಾಗಿರುವಂತಹ FIR ರದ್ದುಗೊಳಿಸಿ, ಟ್ರೋಲಿಗರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇನ್ನೂ ಇದು ಹಂಸಲೇಖ …

Read More »

ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ

ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ ಯಮಕನಮರಡಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. …

Read More »

ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಳಗಾವಿ: ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಸಹೋದರ ಚೆನ್ನರಾಜ್‌ ಹಟ್ಟಿಹೊಳಿ ಅವರನ್ನು ರಾಜ್ಯ ಕಾಂಗ್ರೆಸ್‌ ನಾಯಕತ್ವ ಅಭ್ಯರ್ಥಿಯಾಗಿ ಅನಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಜಾರಕಿಹೊಳಿ ಸಹೋದರರಾದ ರಮೇಶ್‌ ಮತ್ತು ಬಾಲಚಂದ್ರ ಅವರು ತಮ್ಮ ಕಿರಿಯ ಸಹೋದರ ಲಖನ್‌ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು …

Read More »

ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಕಂಟ್ರಾಕ್ಟರ್ ನನ್ನ ಬರ್ಬರವಾಗಿ ಕತ್ತು ಸೀಳಿ ಕೊಂದ ಗಂಡ

ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಕೊಂದ 29 ವರ್ಷದ ಯುವಕನನ್ನು ಕನೋಟಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಪಿಯನ್ನು ಕನೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯಪುರ ಸಮೀಪದ ಸೂರಜ್ ನಗರದ ನಿವಾಸಿ ಸೋನು ರಾಯ್ಗರ್ ಅಲಿಯಾಸ್ ಸುನಿಲ್ ರಾಯ್ಗರ್ ಎಂದು ಪೊಲೀಸರು ಗುರುತಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತ ರಾಜು ಬೈರ್ವಾ (40) ಭಾನುವಾರ ವಿಜಾಪುರ ಪ್ರದೇಶದ ಬಳಿ ಕುತ್ತಿಗೆ ಸೀಳಿರುವ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಾಜು …

Read More »

ಶಿಶುಪಾಲನಾ ರಜೆ: ಮನಸ್ಸಿಗೆ ಬಂದಂತೆ ಪಡೆಯುವಂತಿಲ್ಲ; ಇಲ್ಲಿದೆ ಸ್ಪಷ್ಟೀಕರಣ

ಬೆಂಗಳೂರು – ರಾಜ್ಯ ಸರಕಾರಿ ಮಹಿಳಾ ನೌಕರರಿಗಾಗಿ ಸರಕಾರ ಈ ವರ್ಷದಿಂದ ಜಾರಿಗೊಳಿಸಿರುವ ಶಿಶುಪಾಲನಾ ರಜೆ ಕುರಿತು ಉಂಟಾಗಿದ್ದ ಹಲವು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಸರಕಾರ ಮಾಡಿದೆ. ವಿಶೇಷವಾಗಿ ಪ್ರಾಥಮಿಕ ಶಾಲೆಗಳಲ್ಲಿ ಈ ರಜೆಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಕೆಲವರು ಸ್ಪಷ್ಟೀಕರಣ ಕೋರಿ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಸರಕಾರ ಸುತ್ತೋಲೆ ಹೊರಡಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಶಿಶುಪಾಲನಾ ರಜೆ ಅನ್ವಯವಾಗಲಿದೆ. ಆದರೆ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ರಜೆ ಪಡೆಯಬೇಕು ಎಂದು …

Read More »

ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್

ಬೆಳಗಾವಿ: ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್ ನಡೆದ ಆರೋಪ ಕೇಳಿಬಂದಿದೆ. ಕಮ್ಯೂನಿಟಿ ಹೆಲ್ತ್ ಆಫಿಸರ್ಸ್ ಹುದ್ದೆಗಳ ನೇಮಕಾತಿ ವೇಳೆ ವಂಚನೆ ನಡೆದಿರುವ ಆರೋಪವಿದೆ. ಬೆಳಗಾವಿ ಜಿಲ್ಲೆಯಲ್ಲಿ 476 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. 1600 ಅಭ್ಯರ್ಥಿಗಳು ಪರೀಕ್ಷೆ ಬರೆದು 1267 ಮಂದಿ ಪಾಸ್ ಆಗಿದ್ದರು. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಾಖಲೆ ಪರಿಶೀಲನೆ ನಡೆಸಿದ್ದ ಸದರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಒಂದು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿದ್ದರು. …

Read More »

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು ಕೇಂದ್ರಕ್ಕೆ ರವಾನಿಸಲಾಗಿದೆ ಎಂದರು.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿ ಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ದಾವಣಗೆರೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಮೊನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದಾರೆ. ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು …

Read More »

ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಆಗುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಟಿಕೆಟ್​ಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್​ನಿಂದ ಆರ್. ಪ್ರಸನ್ನ ಕುಮಾರ್, ವೈ.ಹೆಚ್. ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದರು‌.ಇದೀಗ ಶಿವಮೊಗ್ಗ ಜಿಲ್ಲೆಯ 1 ಸ್ಥಾನಕ್ಕೆ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. …

Read More »