Breaking News

ರಾಜ್ಯ

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​

ಬೆಂಗಳೂರು: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ …

Read More »

ಗೋವಿಂದ ಗೋವಿಂದ ಕೋಟಿ ಕೋಟಿ ಗೋವಿಂದ – ಸದನದಲ್ಲಿ ದೋಸ್ತಿ ನಾಯಕರಿಂದ ಅಹೋರಾತ್ರಿ ಪ್ರತಿಭಟನೆ

ಬೆಂಗಳೂರು: ಅಬಕಾರಿ ಸಚಿವ ಆರ್‌ಬಿ ತಿಮ್ಮಾಪೂರ (RB Timmapur) ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಬಿಜೆಪಿ-ಜೆಡಿಎಸ್ (BJP-JDS) ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ತಮಟೆ, ಭಜನೆ ಮಾಡಿ ಅಹೋರಾತ್ರಿ ಪ್ರತಿಭಟಿಸಿದ ಶಾಸಕರು ಅಬಕಾರಿ ಇಲಾಖೆಯಲ್ಲಿ (Excise Department) 6 ಸಾವಿರ ಕೋಟಿ ರೂ. ಹಗರಣ ನಡೆದಿದೆ. ಅಸ್ಸಾಂ, ತಮಿಳುನಾಡು, ಕೇರಳ ಚುನಾವಣೆಗೆ ಈ ಹಣಕ ಬಳಕೆ ಮಾಡಲಾಗುತ್ತದೆ. ತಿಮ್ಮಾಪೂರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಮೊಗಸಾಲೆ …

Read More »

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ  ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು  ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೀದರ್  ಜಿಲ್ಲೆಯ ಔರಾದ್  ತಾಲೂಕಿನ ಜಮಲಪೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಮಕ್ಕಳಿಗೆ ಬಿಸಿಯೂಟ ಬಡಿಸಲಾಗಿತ್ತು. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡ ಮಕ್ಕಳನ್ನು ಕಂಡು ಶಿಕ್ಷಕರು ಹಾಗೂ ಪೋಷಕರು ಗಾಬರಿಗೊಂಡಿದ್ದು, ತಕ್ಷಣವೇ ಎಲ್ಲರನ್ನೂ ಔರಾದ್ ತಾಲೂಕು …

Read More »

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

ಬೆಂಗಳೂರು : 2026ನೇ ಸಾಲಿಗೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಹತ್ತಿರದ ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಕೆಇಎ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದವರು ಒಳಮೀಸಲಾತಿ ವಿವರಗಳನ್ನು ಹಾಗೂ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತಗೊಂಡಿರುವ ಆರ್ .ಡಿ. ಸಂಖ್ಯೆಯನ್ನು ಆನ್ ಲೈನ್ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.

Read More »

ಅಬಕಾರಿ ಇಲಾಖೆಯಲ್ಲಿ ಬ್ರಹಾಂಡ ಭ್ರಷ್ಟಾಚಾರ : ಅಶೋಕ್‌ ಗುಡುಗು

ಬೆಂಗಳೂರು ಜ.3- ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅಧಿವೇಶನದಲ್ಲಿಂದು ಬಿಡಿಸಿಟ್ಟರು. ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆಗೆ ಕೈಗೆತ್ತಿಕೊಂಡ ಅಶೋಕ್‌ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಇಲಾಖೆಗಳಿಗಿಂತಲೂ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿದೆ. ಪ್ರತಿಯೊಂದು ಮದ್ಯದ ಅಂಗಡಿಯಿಂದಲೂ ಮಂತ್ಲಿ ನಿಗದಿಯಾಗಿದೆ. ವರ್ಗಾವಣೆ, ಹೊಸ ಪರವಾನಗಿ ನೀಡಲು, ನವೀಕರಣ ಮಾಡಲು, ಹೆಸರು …

Read More »

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ …

Read More »

ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್‌್ಸಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು …

Read More »

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು  ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ  ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ  ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮೂಡಿಗೆರೆ ಅರಣ್ಯ (Forest) ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ …

Read More »

ರಾಷ್ಟ್ರೀಯ ಮಟ್ಟದ ಲೆಗ್​ ಬಾಲ್​ ಕ್ರಿಕೆಟ್​ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ

ರಾಷ್ಟ್ರೀಯ ಮಟ್ಟದ ಲೆಗ್​ ಬಾಲ್​ ಕ್ರಿಕೆಟ್​ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ ಚಿಕ್ಕಮಗಳೂರು: ರೆಡ್​ ಬಾಲ್​, ವೈಟ್​ ಬಾಲ್​ ಕ್ರಿಕೆಟ್​ ಬಗ್ಗೆ ಕೇಳಿದ್ದೇವೆ. ಇದರ ನಡುವೆ, ಲೆಗ್​ ಬಾಲ್​ ಕ್ರಿಕೆಟ್​ ಕೂಡಾ ಜನಪ್ರಿಯತೆ ಪಡೆಯುತ್ತಿದೆ. ಈ ಕ್ರೀಡೆಯಲ್ಲಿ ಚಿಕ್ಕಮಗಳೂರಿನ 18 ಮಕ್ಕಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಜ್ಜಾಗಿದ್ದಾರೆ. ಲೆಗ್ ಬಾಲ್ ಕ್ರಿಕೆಟ್ ದಕ್ಷಿಣ ಏಷ್ಯಾ ದೇಶಗಳಾದ ಭಾರತ, ನೇಪಾಳ, ಭೂತನ್‌ನಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಪ್ರತಿ ತಂಡದಲ್ಲಿ 11 ಜನರು ಆಟಗಾರರಿರುತ್ತಾರೆ. …

Read More »

ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದೆ

ಬೆಳಗಾವಿ: ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ನಾಶಪಡಿಸಲಾಗಿದೆ ಎಂದು ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡಾಲ ಅಂಕಲಗಿ ಗ್ರಾಮದ ಕೌರಿಗುಡ್ಡದಲ್ಲಿ ಮರಗಳನ್ನು ಕತ್ತರಿಸಲಾಗಿದೆ. ಕಂದಾಯ ಇಲಾಖೆಗೆ ಸೇರಿದ 50 ಎಕರೆ ಜಾಗವನ್ನು ಇಂಧನ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಸೋಲಾರ್ ಪ್ಲ್ಯಾಂಟ್ ನಿರ್ಮಿಸಲು ಲೀಸ್ ಮೂಲಕ ಜಮೀನು ನೀಡಲು ಅನುಮೋದನೆ ನೀಡಲಾಗಿದೆ. ಸೋಲಾರ್ ಪ್ಲ್ಯಾಂಟ್ ಅಳವಡಿಸಲು ಸಾವಿರಾರು ಮರಗಳನ್ನು ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ …

Read More »