Breaking News

ರಾಜ್ಯ

ದೊಡ್ಡಗೌಡರ ಮಧ್ಯಪ್ರವೇಶ; ಇಂದಿನ ಸಭೆ ರದ್ದು

ಬೆಂಗಳೂರು:ಹಾಸನ ವಿಧಾನಸಭೆ ಕ್ಷೇತ್ರದ ಟಿಕೆಟ್‌ ವಿಚಾರ ಕಗ್ಗಂಟಾಗಿರುವ ನಡುವೆಯೇ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಜೆಡಿಎಸ್‌ ಸಭೆಯೇ ರದ್ದಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.   ಎಚ್‌.ಡಿ.ರೇವಣ್ಣ ಅವರು ದೇವೇಗೌಡರ ಮೇಲೆ ಒತ್ತಡ ಹಾಕಿ ಸಭೆಯನ್ನು ಮುಂದೂಡುವಂತೆ ಮಾಡಿದ್ದು, ಈ ತಿಕ್ಕಾಟದಲ್ಲಿ ಎಚ್‌.ಡಿ ರೇವಣ್ಣ ಅವರೇ ಮೇಲುಗೈ ಸಾಧಿಸಿದ್ದಾರೆ ಎಂದು ಹೇಳಲಾಗಿದೆ. ತೀವ್ರ ಜಿದ್ದಾಜಿದ್ದಿ ಹಾಗೂ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಹಾಸನ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿ ಶನಿವಾರ ಶೃಂಗೇರಿಯಲ್ಲಿ …

Read More »

ಮರ್ಯಾದೆಗೆ ಅಂಜಿ ಮಗಳ ರುಂಡ-ಮುಂಡ ಬೇರ್ಪಡಿಸಿದ ತಂದೆ!

ಆಂಧ್ರಪ್ರದೇಶ : ತಂದೆಯೊಬ್ಬ, ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಕೊಲೆ ಮಾಡಿ ಕಾಡಿನಲ್ಲಿ ಎಸೆದಿದ್ದಾನೆ. ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ. ರೆಡ್ಡಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗಳಾದ ಪ್ರಸನ್ನಗೆ ಎರಡು ವರ್ಷಗಳ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ …

Read More »

ಇಲ್ಲಿದೆ 20 ವರ್ಷ ಚಿಕ್ಕವರಾಗಿ ಕಾಣುವ ಡಾ. ಮಾರ್ಕ್​ ಹೇಳಿದ ಆರೋಗ್ಯ ಗುಟ್ಟು

ವಯಸ್ಸಾಗುವುದು ಸಹಜ. ಆದರೆ ವಯಸ್ಸಾದರೂ ಯುವಕರಂತೆ ಕಾಣುವುದು ಕಷ್ಟ. ಆದರೆ ಬಹಳಷ್ಟು ಜನರು ತಮ್ಮ ಮೂಲ ವಯಸ್ಸಿಗಿಂತ ಹಲವಾರು ವರ್ಷ ಚಿಕ್ಕವರಂತೆ ಕಾಣುತ್ತಾರೆ ಮತ್ತು ಅವರಲ್ಲಿ ಒಬ್ಬರು 63 ವರ್ಷದ ಡಾ ಮಾರ್ಕ್ ಹೈಮನ್ ಅವರು ಸುಮಾರು 20 ವರ್ಷ ಚಿಕ್ಕವರಾಗಿ ಕಾಣುತ್ತಾರೆ. ಇದರ ರಹಸ್ಯವನ್ನು ಅವರು ಬಹಿರಂಗಪಡಿಸಿದ್ದಾರೆ. ಡಾ ಹೈಮನ್ Instagram ನಲ್ಲಿ 23 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಯಂಗ್ ಫಾರೆವರ್ ಪುಸ್ತಕದ ಲೇಖಕರಾಗಿದ್ದಾರೆ. ಒಬ್ಬ …

Read More »

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ

ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ. ಇದರ ಜೊತೆಗೆ ಪ್ರಧಾನಿ …

Read More »

ವಿದ್ಯಾರ್ಥಿಗಳಿಂದ ತಾಯಂದಿರ ಪಾದಪೂಜೆ-

ಮೂಡಲಗಿ: ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಭವಿಷ್ಯ ಕಟ್ಟಿಕೊಳ್ಳಬೇಕು. ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕು ಎಂದು ಮುಖ್ಯಾಧ್ಯಾಪಕ ಎ.ವಿ. ಗಿರೆಣ್ಣವರ ಹೇಳಿದರು. ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು ಎಂದು ಸಲಹೆ ನೀಡಿದರು. …

Read More »

ಬಿಜೆಪಿಯನ್ನೇ ಬೆಂಬಲಿಸಿ: ವೀರಶೈವ-ಲಿಂಗಾಯತರಿಗೆ ಯಡಿಯೂರಪ್ಪ ಮನವಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಮ್ಮ ಬೆಂಬಲವನ್ನು ಮುಂದುವರೆಸಿ ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಮನವಿ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ 79ರ ಹರೆಯದ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ನೀವು ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರವೂ ಸಮುದಾಯ ಬಿಜೆಪಿಯನ್ನು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ …

Read More »

ಗುಜರಾತ್ ನ ಗ್ರಾಮಗಳಿಗೆ ಭೇಟಿ ನೀಡಿದ್ರೆ `ಗುಜರಾತ್ ಮಾಡೆಲ್’ ಗೊತ್ತಾಗುತ್ತೆ:H.D.K.

ಎಲ್ಲರೂ ಗುಜರಾತ್ ಮಾಡೆಲ್ ಅಂತಾರೆ, ಅದರೆ ಗುಜರಾತ್ ನ ಗ್ರಾಮಗಳಿಗೆ ಭೇಟಿ ನೀಡಿದ್ರೆ ಗುಜರಾತ್ ಮಾಡೆಲ್ ಅನ್ನೋದು ಗೊತ್ತಾಗುತ್ತೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರ ಫೈಲ್ಸ್ ರೀತಿಯಲ್ಲೇ ಗುಜರಾತ್ ಫೈಲ್ಸ್ ಪುಸ್ತಕ ಇದೆ. ಗುಜರಾತ್ ಗಲಭೆ ವೇಳೆ ಏನೆಲ್ಲಾ ಆಯ್ತು ಅನ್ನೋದು ಪುಸ್ತಕದಲ್ಲಿ ಇದೆ. ಗುಜರಾತ್ ಪೈಲ್ಸ್ ಪುಸ್ತಕದಲ್ಲಿ ಗಲಭೆಯ ಸಂಪೂರ್ಣ ಮಾಹಿತಿ ಇದೆ ಎಂದರು. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಪ್ರಧಾನಿ ಮೋದಿ ಅವರು …

Read More »

ಶಾಲಾ ದಾಖಲಾತಿಯಲ್ಲಿ ವಿದ್ಯಾರ್ಥಿ ಹೆಸರು, ಜನ್ಮದಿನಾಂಕ ಸೇರಿ ಇತರೆ ತಿದ್ದುಪಡಿ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು : ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜನ್ಮದಿನಾಂಕ, ಜಾತಿ ಇತ್ಯಾದಿ ತಿದ್ದುಪಡಿ ಸಂಬಂದ ರಾಜ್ಯ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜಾತಿ, ಜನ್ಮ ದಿನಾಂಕ ಇತ್ಯಾದಿ ತಿದ್ದುಪಡಿ ಮಾಡುವ ಸಂಬಂಧ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿ ಅಧಿಕಾರವನ್ನು ಉಲ್ಲೇಖಿತ ಸುತ್ತೋಲೆಗಳಲ್ಲಿ ಜಿಲ್ಲಾ ಉಪನಿರ್ದೇಶಕರಿಗೆ ಪ್ರತ್ಯಾಯೋಜಿಸಿ ಅದರಂತೆ ಕ್ರಮವಹಿಸಲಾಗುತ್ತಿದೆ. ಈ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ …

Read More »

ಬೊಮ್ಮಾಯಿಯವರು ಕಣ್ಣು ಬಿಡಲು ಇನ್ನೆಷ್ಟು ಶಿಕ್ಷಕರ ಹೆಣ ಬೀಳಬೇಕು?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಶ್ರೀ ಬಸರಿಶಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   https://www.instagram.com/reel/CpEyv87Dkf5/?igshid=NDk5N2NlZjQ= ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »