Breaking News

ರಾಜ್ಯ

2023: ಧೂಮಪಾನಿಗಳ ಜೇಬಿಗೆ ಬಿಸಿ ಮುಟ್ಟಿಸಿದ ‘ಅಮೃತಕಾಲದ ಬಜೆಟ್’

ನವದೆಹಲಿ: ‌2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬುಧವಾರ ಮಂಡಿಸಿದ್ದಾರೆ. ಸಿಗರೇಟ್ ಮೇಲಿನ ತೆರಿಗೆಯನ್ನು ಶೇಕಡ 16ಕ್ಕೆ ಹೆಚ್ಚಳ ಮಾಡಿರುವುದಾಗಿ ನಿರ್ಮಲಾ ಘೋಷಿಸಿದರು.   ಕೇಂದ್ರ ಬಜೆಟ್‌ನಲ್ಲಿ ಸಿಗರೇಟ್ ಮೇಲಿನ ತೆರಿಗೆಯನ್ನು ಹೆಚ್ಚಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಗಾಡ್‌ಫ್ರೇ ಫಿಲಿಪ್ಸ್ ಇಂಡಿಯಾ ಮತ್ತು ಐಟಿಸಿ ಲಿಮಿಟೆಡ್ ಸೇರಿದಂತೆ ಸಿಗರೇಟ್ ಕಂಪನಿಗಳ ಷೇರುಗಳು ಷೇರುಪೇಟೆ ಸಂವೇದಿ ಸೂಚ್ಯಂಕದಲ್ಲಿ (ಬಿಎಸ್‌ಇ) ಶೇಕಡ 5 ರಷ್ಟು ಕುಸಿತ …

Read More »

ಕೇಂದ್ರ ಬಜೆಟ್‌ ವಿಚಾರ ದೂರದೃಷ್ಟಿ ಇಲ್ಲದ ಬಜೆಟ್‌: ಮಲ್ಲಿಕಾರ್ಜುನ ಖರ್ಗೆ ಟೀಕೆ

ನವದೆಹಲಿ: ಬಿಜೆಪಿ ಮೇಲಿನ ಜನರ ನಂಬಿಕೆ ನಿರಂತರವಾಗಿ ಕುಸಿಯುತ್ತಿದೆ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡಿಸಿರುವ ಇಂದಿನ ಬಜೆಟ್ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.   ಕೇಂದ್ರ ಬಜೆಟ್‌ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ಇದು ಕೇವಲ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಂಡನೆ ಮಾಡಿರುವ ಬಜೆಟ್ ಇದಾಗಿದ್ದು, ದೇಶವನ್ನು ಗಮನದಲ್ಲಿರಿಸಿಕೊಂಡಿಲ್ಲ. ಮುಖ್ಯವಾಗಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇದು ದೂರದೃಷ್ಟಿ …

Read More »

ತಂದೆಯಿಂದಲೇ ಮಗಳ ಅತ್ಯಾಚಾರ

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಿನ್ನೆಲೆ ಗೃಹಿಣಿ (Woman) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ (Bengaluru) ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ರೆ, ಕಲಬುರಗಿಯಲ್ಲಿ (Kalburagi Case) ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಎಸಗಲಾಗಿದೆ. ಮಾಧುರಿ (26) ವಿಷ‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 2016ರಲ್ಲಿ ಗುರುಪ್ರಸಾದ್ ಎಂಬಾತನನ್ನ ಮಾಧುರಿ ಮದುವೆಯಾಗಿದ್ದರು (Marriage). ಮದುವೆಯಾದ ಮೇಲೆ ಮಾಧುರಿಗೆ …

Read More »

20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಬಿಳಿ ಕಾಗೆ! ಕೇಂದ್ರ ಬಜೆಟ್​​ಗೆ ಟೀಕೆ, ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕಾಂಗ್ರೆಸ್

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು 2023-24ನೇ ಸಾಲಿನ ಬಜೆಟ್‌ (India Budget 2023) ಮಂಡನೆ ಮಾಡಿದ್ದಾರೆ. ಬಜೆಟ್​ ಬಳಿಕ ಸಹಜವಾಗಿಯೇ ಒಂದಷ್ಟು ವಲಯಗಳಿಗೆ ಬಿಸಿ ಏರಿಕೆಯ ಬಿಸಿ ತಟ್ಟಿದರೆ, ಇನ್ನೊಂದಷ್ಟು ವಲಯಗಳಿಗೆ ನಿಟ್ಟುಸಿರು ಬಿಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷದ ನಾಯಕರು ಬಜೆಟ್‌ನ್ನು (Budget 2023) ವಿರೋಧಿಸಿ ಟೀಕೆಗಳ ಸುರಿಮಳೆಯನ್ನೇ ಮಾಡಿದ್ದಾರೆ. 20 ಲಕ್ಷ ಕೋಟಿ …

Read More »

ಕೇಂದ್ರ ಬಜೆಟ್; ಕರ್ನಾಟಕಕ್ಕೆ ಬಂಪರ್ ಗಿಫ್ಟ್* ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಭದ್ರಾಮೇಲ್ದಂಡೆ ಯೋಜನೆಗಾಗಿ ಅನುದಾನ ಘೋಷಿಸಲಾಗಿದೆ. ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬರಗಾಲಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಿಸಲಾಗಿದೆ ಎಂದುತಿಳಿಸಿದ್ದಾರೆ.

Read More »

ಕೇಂದ್ರ ಬಜೆಟ್‌ – 2023; ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬಜೆಟ್‌ ಮಂಡನೆ ಮಾಡಿದ್ದು, ಅದರ ಮುಖ್ಯಾಂಶಗಳು ಕೆಳಕಂಡಂತಿವೆ. * ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ * ಮಹಿಳೆಯರು, ಯುವಕರು, ರೈತರು, ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮನ್ನಣೆ * ಆಧಾರ್, ಯುಪಿಐ, ಕೋವಿನ್ ಡಿಜಿಟಲೀಕರಣದ ಮೂರು ಸಾಧನೆಗಳಿಗೆ ವಿಶ್ವ ಮಾನ್ಯತೆ * ಪ್ರಸಕ್ತ ವರ್ಷದಲ್ಲಿ ಆರ್ಥಿಕತೆ ಶೇಕಡ 7 ರಷ್ಟು ವೃದ್ಧಿ * ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ …

Read More »

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 76 ತಹಶೀಲ್ದಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಅಧಿಕಾರಿಗಳ ವರ್ಗಾವಣೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 76 ತಹಶೀಲ್ದಾರ್ ಅವರನ್ನು ವರ್ಗಾವಣೆ ( Tahsildar Transfer ) ಮಾಡಿ ಆದೇಶಿಸಿದೆ.   ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕಂದಾಯ …

Read More »

ಸಾಮಾನ್ಯ ಗುರುತಿನ ಚೀಟಿಯಾಗಿ ಇನ್ನು ಮುಂದೆ ‘ಪ್ಯಾನ್ ಕಾರ್ಡ್’ ಪರಿಗಣನೆ

ನವದೆಹಲಿ: ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್​ ಕಾರ್ಡ್​ನ್ನು ಸಾಮಾನ್ಯ ಗುರುತಿನ ಕಾರ್ಡ್​ ಆಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್​ನಲ್ಲಿ ಘೋಷಿಸಿದ್ದಾರೆ.   ವಿತ್ತ ಸಚಿವೆಯಾಗಿ ಇಂದು 5ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​​, ಪಾನ್​ ಕಾರ್ಡ್​ನ್ನು ಸಾಮಾನ್ಯ ಕಾರ್ಡ್​ ಆಗಿ ಬಳಕೆ ಮಾಡುವುದರಿಂದ ಬಂಡವಾಳದಾರರಿಗೆ ಮತ್ತಷ್ಟು ಸಹಕಾರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ಕೇಂದ್ರ ಮತ್ತು ರಾಜ್ಯ …

Read More »

ಕುಡಿದ ಮತ್ತಿನಲ್ಲಿ ಹೆಂಡತಿ- ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ

ಹುಬ್ಬಳ್ಳಿ: ಗಂಡನೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ತಾನು ಕೂಡ ನೇಣಿಗೆ ಶರಣಾದ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಸುಳ್ಳ ಗ್ರಾಮದ ಪಕ್ಕೀರಪ್ಪ ಮಾದರ ಎಂಬಾತ ಇಂದು ಬೆಳಗಿನ ನಾಲ್ಕು ಗಂಟೆ ಸುಮಾರಿಗೆ ಮನೆಯಲ್ಲಿನ ಟಿವಿ ಸೌಂಡ್ ಜಾಸ್ತಿ ಮಾಡಿ ಮಾರಕಾಸ್ತ್ರದಿಂದ ಹೆಂಡತಿ ಮುದಕವ್ವನ ಮೇಲೆ ಹಲ್ಲೆ ನಡೆಸಿದಾಗ ಜೋರಾಗಿ ಕಿರುಚಿದ್ದಾಳೆ. ಆಗ …

Read More »

ತಾಂತ್ರಿಕ ಸಮಸ್ಯೆ: ವಿದ್ಯಾರ್ಥಿಗಳು ಅತಂತ್ರ

ಬೆಳಗಾವಿ: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್)‌ ಸ್ಟೂಡೆಂಟ್‌ ಪೋರ್ಟಲ್‌ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ವಿದ್ಯಾರ್ಥಿಗಳನ್ನು ಹೈರಾಣಾಗಿಸಿದೆ.   ಆರ್‌ಸಿಯು ವ್ಯಾಪ್ತಿಯಲ್ಲಿ 400 ಪದವಿ ಕಾಲೇಜುಗಳಿದ್ದು, 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಎ, ಬಿಬಿಎ, ಬಿಸಿಎ, ಬಿ.ಎಸ್ಸಿ, ಬಿಎಸ್‌ಡಬ್ಲ್ಯು 1, 3 ಮತ್ತು 5ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಂದ ಪರೀಕ್ಷಾ ಅರ್ಜಿ ಆಹ್ವಾನಿಸಲಾಗಿದ್ದು, ಜ.6ರಿಂದ 31ರವರೆಗೆ ಈ …

Read More »