ಮೈಸೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಂಜುನಾಥ ಅಲಿಯಾಸ್ ಸ್ಯಾಂಟ್ರೊ ರವಿಗೆ ಜ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನಗರದ ಆರನೇ ಹೆಚ್ಚುವರಿ ಮತ್ತು ಸೆಶೆನ್ಸ್ ನ್ಯಾಯಾಲಯವು ಸೋಮವಾರ ಆದೇಶ ನೀಡಿತು. ಜಾಮೀನು ಮತ್ತು ಇತರ ಆಕ್ಷೇಪಣೆಗಳಿಗೆ ಜ.18ರಂದು ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ಆದೇಶಿಸಿದರು. ಅವರ ಮುಂದೆ ಬೆಳಿಗ್ಗೆ 11:10ಕ್ಕೆ ಬಿಗಿ ಭದ್ರತೆಯೊಂದಿಗೆ ಸ್ಯಾಂಟ್ರೊ ರವಿಯನ್ನು ಹಾಜರುಪಡಿಸಲಾಯಿತು. ಸರ್ಕಾರಿ ವಕೀಲರು ವಾದಿಸಿ, ‘ಸ್ಯಾಂಟ್ರೊ ರವಿ …
Read More »ಅಂಬೇಡ್ಕರ್ ಸ್ಪರ್ಧಾ ಪರೀಕ್ಷೆ ಪೋಸ್ಟರ್ ಬಿಡುಗಡೆ ಗೊಳಿಸಿ ಸತೀಶ್ ಜಾರಕಿಹೊಳಿ : ಪ್ರಥಮ ಬಹುಮಾನ 5 ಲಕ್ಷ ರೂ
ಬೆಳಗಾವಿ : ಡಾ. ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಸದರಿ ಪರೀಕ್ಷೆಯ ಪೋಸ್ಟರ್ ಅನ್ನು ಬೆಳಗಾವಿ ನಗರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಶಾಸಕರಾದ ಸತೀಶ್ ಜಾರಕಿಹೊಳಿ ಬಿಡುಗಡೆ ಮಾಡಿ, ಪರೀಕ್ಷೆಗೆ ಶುಭ ಕೋರುತ್ತ “ಎಲ್ಲರೂ ಈ ವಿಶೇಷ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಬೇಕು” ಎಂದರು. ಈ ಬಗ್ಗೆ ಮಾತನಾಡಿದ ಪರಿಷತ್ ರಾಜ್ಯ …
Read More »2 ಎ ಮೀಸಲಾತಿಗಾಗಿ ರಾಜಧಾನಿಯಲ್ಲಿ
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ, ರಾಜಧಾನಿಯಲ್ಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಶನಿವಾರದಿಂದ ಮತ್ತೊಂದು ಸುತ್ತಿನ ಹೋರಾಟ ಆರಂಭವಾಗಿದೆ. ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದ ಪ್ರತಿಭಟನಕಾರರು ಅಲ್ಲಿಂದ ಶನಿವಾರ ಬೆಂಗಳೂರಿಗೆ ಬಂದರು. ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ‘ಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ಪಂಚಮಸಾಲಿ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿದ್ದೇವೆ. ಅಂತಿಮ …
Read More »ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚನೆ: ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ‘ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದಂತೆ ವರಿಷ್ಠರು ಭಾನುವಾರ ಬೆಳಿಗ್ಗೆ ಫೋನ್ ಮಾಡಿ ತಿಳಿಸಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಷಯವಾಗಿ ಚರ್ಚಿಸುವ ಸಂಬಂಧ ದೆಹಲಿಗೆ ಬರುವಂತೆಯೂ ಪಕ್ಷದ ವರಿಷ್ಠರು ನನಗೆ ಆಹ್ವಾನಿಸಿದ್ದಾರೆ. ಮೀಸಲಾತಿ ಕುರಿತಂತೆ ಕೇಂದ್ರದಿಂದ ಸಿಹಿ ಸುದ್ದಿ ಸಿಗುವ ಆಶಾಭಾವ ಇದೆ’ ಎಂದು ಹೇಳಿದರು. ‘ಪಕ್ಷದಲ್ಲಿ ಇರಲು ಸಾಧ್ಯವಿಲ್ಲದಿದ್ದರೆ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ: ಕೈದಿ ವಿಚಾರಣೆ
ಬೆಳಗಾವಿ: ಭೂಗತಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯ ಎಂದು ಹೇಳಿಕೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿಯನ್ನು, ಮಹಾರಾಷ್ಟ್ರದ ಪೊಲೀಸರು ಭಾನುವಾರ ಇಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದರು. ತನಿಖೆಗೆ ಮಹಾರಾಷ್ಟ್ರದ ಎಟಿಎಸ್ ಮತ್ತು ನಾಗ್ಪುರದ ಪೊಲೀಸರ ತಂಡ ಧಾವಿಸಿದ್ದು, ಕೈದಿಯಿಂದ ಮಾಹಿತಿ ಕಲೆ ಹಾಕಿತು. ಆತನಿಂದ ಡೈರಿ ಜಪ್ತಿ ಮಾಡಿದೆ. ಆದರೆ, ಕರೆ ಮಾಡಲು ಬಳಸಿದ್ದ ಮೊಬೈಲ್ ಸಿಕ್ಕಿಲ್ಲ. ಕೊಲೆ ಸೇರಿ …
Read More »2ಎ ಮೀಸಲಾತಿ ಸಿಗುವವರೆಗೂ ಸಿಂಹಾಸನದಲ್ಲಿ ಕೂರುವುದಿಲ್ಲ: ವಚನಾನಂದ ಸ್ವಾಮೀ
ದಾವಣಗೆರೆ: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಬೆಳ್ಳಿ ಸಿಂಹಾಸನದಲ್ಲಿ ಕೂರುವುದಿಲ್ಲ’ ಎಂದು ಪೀಠಾಧಿಪತಿ ವಚನಾನಂದ ಸ್ವಾಮೀಜಿ ಪ್ರಕಟಿಸಿದರು. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇತ್ರದಲ್ಲಿ ಭಾನುವಾರ ನಡೆದ ಹರಜಾತ್ರೆ ಹಾಗೂ ‘ಪಂಚಮ ಪೀಠಾರೋಹಣ’ ಸಮಾರಂಭದಲ್ಲಿ ಅವರು ಸಿಂಹಾಸನದಲ್ಲಿ ಕೂರಲು ನಿರಾಕರಿಸಿದರು. ‘ಸಮುದಾಯಕ್ಕೆ ಮೀಸಲಾತಿ ಸಿಗುವಂತೆ ಮಾಡಿ ಜನರ ಹೃದಯ ಸಿಂಹಾಸನದಲ್ಲಿ ಕೂರಲು ಇಚ್ಛೆ ಪಡುತ್ತೇನೆ. ಪಂಚಮ ಪೀಠಾರೋಹಣ ಮಾಡುವುದಿಲ್ಲ’ ಎಂದು …
Read More »ಗಂಗಾಮತಸ್ಥರಿಗೆ ST ಮೀಸಲಾತಿ ಸೌಲಭ್ಯ : ಸಿಎಂ
ಹಾವೇರಿ: ‘ಅಂಬಿಗರ ಸಮಾಜಕ್ಕೆ (ಗಂಗಾಮತಸ್ಥರು) ಪರಿಶಿಷ್ಟ ಪಂಗಡದ (ಎಸ್ಟಿ) ಮೀಸಲಾತಿ ಸೌಲಭ್ಯ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸಮಾಜದ ಬೇಡಿಕೆಯನ್ನು ಈಡೇರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು. ತಾಲ್ಲೂಕಿನ ನರಸೀಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ‘ಪರಿಶಿಷ್ಟ ಪಂಗಡದ ಮೀಸಲಾತಿ ಅಡಿ ಪರಿಗಣಿಸಲು ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಲಾಗಿದೆ. ಕೇಂದ್ರದ …
Read More »ಸವದತ್ತಿ : ಹಾಳು ಕೊಂಪೆಯಾದ ‘ಮಿನಿಹಂಪಿ’
ಹೂಲಿ (ಸವದತ್ತಿ ತಾ.): ಮೈ ನವಿರೇಳಿಸುವಂಥ ಶಿಲ್ಪಕಲಾಕೃತಿ ಹೊಂದಿದ ಈ ಜಾಗ ಹಾಳು ಕೊಂಪೆಯಾಗಿದೆ. ಶಿಲ್ಪವೈಭವದ ಶ್ರೀಮಂತಿಕೆಯ ಕಾರಣದಿಂದ ಇದಕ್ಕೆ ‘ಮಿನಿಹಂಪಿ’ ಎಂದೇ ಕರೆಯಲಾಗುತ್ತದೆ. ರೋಮಾಂಚಕ ಇತಿಹಾಸವನ್ನು ತನ್ನ ಒಡಲೊಳಗೆ ಹುದುಗಿಸಿ ಇಟ್ಟುಕೊಂಡ ಮಂದಿರಗಳು, ಕಟ್ಟಡಗಳು ದುಷ್ಕರ್ಮಿಗಳ ಉಪಟಳಕ್ಕೆ ನಲುಗಿ ಹೋಗಿವೆ. ಸವದತ್ತಿಯಿಂದ ರಾಮದುರ್ಗಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಹೂಲಿ ಎಂಬ ಗ್ರಾಮದ ಕತೆ-ವ್ಯಥೆ ಇದು. ಪುರಾತನ ಕಾಲದ 101 ದೇವಸ್ಥಾನಗಳು, 101 ಬಾವಿಗಳನ್ನು ಹೊಂದಿದ್ದು ಈ ಊರಿನ ಹಿರಿಮೆ. …
Read More »ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
ಬೆಂಗಳೂರು: ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (ಎನ್ಎಫ್ಎಸ್ಯು) ಸ್ಥಾಪನೆಗೆ ಭಾರತ ಸರ್ಕಾರದ ಗೃಹ ಸಚಿವಾಲಯವು ತಾತ್ವಿಕ ಅನುಮೋದನೆಯನ್ನು ನೀಡಿದೆ. ಟ್ವಿಟರ್ನಲ್ಲಿ ಸುದ್ದಿ ಹಂಚಿಕೊಂಡಿರುವ ಕೇಂದ್ರ ಸಚಿವ ಮತ್ತು ಧಾರವಾಡ ಸಂಸದಪ್ರಲ್ಹಾದ ಜೋಶಿ, ಅವಳಿ ನಗರಗಳಿಗೆ ರಾಷ್ಟ್ರೀಯ ಪ್ರಾಮುಖ್ಯತೆಯ ಮತ್ತೊಂದು ಸಂಸ್ಥೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.ಎನ್ಎಫ್ಎಸ್ಯು ಅಪರಾಧ ತನಿಖಾ ಕ್ಷೇತ್ರದಲ್ಲಿ ನುರಿತ ಮಾನವಶಕ್ತಿಯನ್ನು ಸೃಷ್ಟಿಸುತ್ತದೆ ಮತ್ತು ತನಿಖೆ, ತಡೆಗಟ್ಟುವಿಕೆ ಮತ್ತು ಅಪರಾಧಗಳ ಪತ್ತೆಗೆ ಸಂಬಂಧಿಸಿದ ಹೊಸ ವಿಧಾನಗಳನ್ನು ಅಭಿವೃದ್ಧಿಪಡಿಸಲು …
Read More »ವಾಡಿ: ಗೂಡ್ಸ್ ರೈಲು ಅಪಘಾತ. ತಪ್ಪಿದ ದುರಂತ
ವಾಡಿ: ಹಳಿ ತುಂಡಾದ ಪರಿಣಾಮ ಸುಮಾರು ಮೂವತ್ತು ಬೋಗಿಗಳುಳ್ಳ ಗೂಡ್ಸ್ ರೈಲು ಅಪಘಾತಕ್ಕೀಡಾದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಲಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಶನಿವಾರ ಮಧ್ಯಾಹ್ನ ಹೈದರಾಬಾದ್ ನಿಂದ ವಾಡಿ ಮಾರ್ಗವಾಗಿ ಬರುತ್ತಿದ್ದ ಸಿಮೆಂಟ್ ಸಾಗಾಣಿಕೆ ಗೂಡ್ಸ್ ರೈಲು ಚಿತ್ತಾಪುರ ನಿಲ್ದಾಣ ದಾಟಿದ ಕೆಲವೇ ಹೊತ್ತಿನಲ್ಲಿ ಬೋಗಿಗಳು ಹಳಿ ತಪ್ಪಿ ಉರುಳಿ ಬಿದ್ದಿವೆ. ಘಟನೆಯಿಂದ ಎರಡು ಬೋಗಿಗಳು ಮುಗುಚಿ ಬಿದ್ದಿದ್ದು. ಬೋಗಿಗಳಲ್ಲಿದ್ದ ನೂರಾರು ಟನ್ ತೂಕದ ಸಿಮೆಂಟ್ ಚೀಲಗಳು …
Read More »
Laxmi News 24×7