Breaking News

ರಾಜ್ಯ

ವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ.? ಮಧು ಬಂಗಾರಪ್ಪ ಹೇಳಿಕೆ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕೇವಲ ಹಿಂದುತ್ವದಿಂದ ಜನರ ಹೊಟ್ಟೆ ತುಂಬುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಭಾವನಾತ್ಮಕವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಒಲವಿಲ್ಲ. ಆದರೆ, ಗೀತಕ್ಕ ಚುನಾವಣೆಯಲ್ಲಿ ನನ್ನ …

Read More »

ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ

ತಂದೆ ಮತ್ತು ಮಲ ತಾಯಿ ಸೇರಿಕೊಂಡು 17 ವರ್ಷದ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್​ ಪ್ರದೇಶದಲ್ಲಿ ನಿನ್ನೆ (ಜ.9) ರಾತ್ರಿ ನಡೆದಿದೆ. ಸಾಕ್ಷಿಯನ್ನು ನಾಶ ಮಾಡಲು ಮಗಳ ಶವವನ್ನು ಸುಟ್ಟು ಹಾಕಿರುವುದಾಗಿ ವರದಿಯಾಗಿದೆ.   ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್​ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಾಚರಣ …

Read More »

ಕಳಸಾ ತಿರುವು ಯೋಜನೆ: ಪರಿಶೀಲನೆ

ನವದೆಹಲಿ: ಮಹದಾಯಿ ಯೋಜನೆಯ ಭಾಗವಾದ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್‌ ಮೀಸಲು ಅರಣ್ಯ ಬಳಕೆಗೆ ಪರಿಸರ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ಸಹಾಯಕ ಮಹಾನಿರ್ದೇಶಕರು (ಎಐಜಿ) ಯೋಜನಾ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ    ಈ ಯೋಜನೆಗೆ ಬೆಳಗಾವಿ ಜಿಲ್ಲೆಯಖಾನಾಪುರ ತಾಲ್ಲೂಕಿನ ಏಳು ಗ್ರಾಮಗಳ ಅರಣ್ಯ ಬಳಸಲು (ಜಾಕ್‌ವೆಲ್‌ ನಿರ್ಮಾಣ, ಪಂಪ್‌ ಹೌಸ್‌, ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌, …

Read More »

ಧ್ವನಿ ಎತ್ತಿದರೆ ಕಠಿಣ ಕ್ರಮ: ಅಕ್ಕಲಕೋಟೆ ಕನ್ನಡಿಗರಿಗೆ ಮಹಾರಾಷ್ಟ್ರ ಬೆದರಿಕೆ

ಕನ್ನಡಪರ ಘೋಷಣೆ ಕೂಗಿದ ಮಹಾರಾಷ್ಟ್ರದ ಅಕ್ಕಲಕೋಟೆ ತಾಲ್ಲೂಕಿನ 17 ಕನ್ನಡಿಗರಿಗೆ ನೋಟಿಸ್‌ ನೀಡಿರುವ ಸ್ಥಳೀಯ ಪೊಲೀಸರು, ಈ ನಡವಳಿಕೆ ಮುಂದುವರಿಸಿದರೆ ‘ರಾಜ್ಯ ದ್ರೋಹ’ ಆರೋಪ ಹೊರಿಸಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.   ಅಲ್ಲದೆ, ತಾಲ್ಲೂಕಿನ ಉಡಗಿ ಗ್ರಾಮವನ್ನು ಕರ್ನಾಟಕಕ್ಕೆ ಸೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಖಾಸಗಿ ಕನ್ನಡ ಶಾಲೆಯ ಸಿಬ್ಬಂದಿಯನ್ನು ಶಾಲಾಡಳಿತ ಅಮಾನತು ಮಾಡಿದೆ. ಜತ್ತ ತಾಲ್ಲೂಕಿನಲ್ಲಿ ಕನ್ನಡ ಸರ್ಕಾರಿ ಶಾಲೆಯೊಂದರ ಶಿಕ್ಷಕರೊಬ್ಬರಿಗೆ ನೋಟಿಸ್‌ ನೀಡಲಾಗಿದೆ. ಡಿಸೆಂಬರ್‌ನಲ್ಲಿ ಗಡಿ …

Read More »

ಸ್ಯಾಂಟ್ರೊ ರವಿ ಬಂಧನಕ್ಕೆ ತಂಡ ರಚನೆ, ಲುಕ್ ಔಟ್ ನೋಟಿಸ್ ಜಾರಿ:ಅಲೋಕ್ ಕುಮಾರ್

ಮೈಸೂರು: ತಲೆ ಮರೆಸಿಕೊಂಡಿರುವ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ ಬಂಧನಕ್ಕೆ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ರವಿ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರವಿ ವಿರುದ್ದ ಮೈಸೂರು ನಗರದ ವಿಜಯನಗರ ಠಾಣೆಯಲ್ಲಿ ಅತ್ಯಾಚಾರ ಮತ್ತು ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ …

Read More »

ರಾಜ್ಯದಲ್ಲಿ ಆಲಿಬಾಬಾ, 40 ಕಳ್ಳರ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಆಲಿಬಾಬಾ ಮತ್ತು 40 ಕಳ್ಳರ ಸರ್ಕಾರ ಅಧಿಕಾರದಲ್ಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ಭ್ರಷ್ಟ ಮುಖ್ಯಮಂತ್ರಿಯಷ್ಟೇ ಅಲ್ಲ, ಅತ್ಯಂತ ದುರ್ಬಲ ಮುಖ್ಯಮಂತ್ರಿ. ಇವರಿಂದ ರಾಜ್ಯದ ಘನತೆಗೆ ಕಳಂಕ ಬಂದಿದೆ ಎಂದು ದೂರಿದರು. ಬಿಜೆಪಿ ಸರ್ಕಾರ ಅನೈತಿಕ ಮಾರ್ಗದ ಮೂಲಕ ರಚನೆಯಾದ ಸರ್ಕಾರ. 2018ರಲ್ಲಿ ಇವರಿಗೆ ಜನ ಪೂರ್ಣ ಪ್ರಮಾಣದಲ್ಲಿ ಆಶೀರ್ವಾದ ಮಾಡಿರಲಿಲ್ಲ, 104 ಸ್ಥಾನಗಳಲ್ಲಿ …

Read More »

ಅತಿಥಿಗೃಹ ಶುಲ್ಕ ಏರಿಕೆ; ಟಿಟಿಡಿ ವಿರುದ್ಧ ಆಕ್ಷೇಪ

ಹೈದರಾಬಾದ್‌: ತಿರುಪತಿ ತಿರುಮಲ ದೇಗುಲಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆಯೇ, ದೇವಸ್ಥಾನ ಮಂಡಳಿ ದೇಗುಲದ ಅತಿಥಿಗೃಹ ಹಾಗೂ ಕಾಟೇಜ್‌ಗಳ ಶುಲ್ಕ ಏರಿಕೆ ಮಾಡಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿದೆ. 750ರೂ. ಶುಲ್ಕವಿದ್ದ ನಾರಾಯಣ ಗಿರಿಯಲ್ಲಿರುವ ಅತಿಥಿಗೃಹಗಳಿಗೆ ಇನ್ನು ಮುಂದೆ 1,700 ರೂ. ಪಾವತಿಸಬೇಕಿದ್ದು, ಕಾಟೇಜ್‌ ಶುಲ್ಕ 2 ಸಾವಿರ ರೂ.ಗಳಿಗೆ ಟಿಟಿಡಿ ಏರಿಕೆ ಮಾಡಿದೆ. ತಿರುಪತಿ ಅತಿ ಹೆಚ್ಚು ಭಕ್ತಾದಿಗಳು ಭೇಟಿ ನೀಡುವ ಧಾರ್ಮಿಕ ಕ್ಷೇತ್ರವಾಗಿದ್ದು, ಶುಲ್ಕ ಹೆಚ್ಚಳ ಭಕ್ತರಿಗೆ …

Read More »

ಸಮಗ್ರ ಲಿಂಗಾಯತ ಸಮಾಜ ಒಂದಾಗಲಿ: C.M. ಬೊಮ್ಮಾಯಿ

ಧಾರವಾಡ: ಸಮಗ್ರ ವೀರಶೈವ ಲಿಂಗಾಯತ ಸಮುದಾಯ ಒಳ ಪಂಗಡಗಳನ್ನು ಮರೆತು ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಲಹೆ ನೀಡಿದರು. ಶ್ರಿ ಲಿಂಗರಾಜ್ ವಿವಿದುದ್ದೇಶ ಸಂಸ್ಥೆ ವತಿಯಿಂದ ನಡೆದ ಶಿರಸಂಗಿ ಲಿಂಗರಾಜರ 162 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ಲಿಂಗರಾಜ್ ಸರದೇಸಾಯಿ ಅವರ ಆದರ್ಶಗಳು ಲಿಂಗಾಯತ ಸಮಗ್ರ ಸಮುದಾಯಕ್ಕೆ ಮಾದರಿಯಾಗಬೇಕಿದೆ. ಲಿಂಗಾಯತ ಸಮುದಾಯದ ಶ್ರೇಷ್ಠರನ್ನು ಒಂದು ಪಂಗಡ ಅಥವಾ ಒಳ ಪಂಗಡಕ್ಕೆ ಸೀಮಿತಗೊಳಿಸುವುದು …

Read More »

ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಲು ಪ್ರಜಾಧ್ವನಿ ಯಾತ್ರೆ: ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ವರ್ಷ, ಹೊಸ ಪರ್ವ. ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ. ಈ ಪವಿತ್ರವಾದ ಗಳಿಗೆಯಲ್ಲಿ ಜನರಿಗಾಗಿ ಪ್ರಜಾಧ್ವನಿ ಯಾತ್ರೆ ವಿಚಾರ ತಿಳಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.   ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜನರ ಭಾವನೆ ತಿಳಿಸಲು ಕಳೆದ ಎರಡು ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸತತವಾಗಿ ಪ್ರಯತ್ನಿಸಿದೆ. ಈ ಪ್ರಜಾಧ್ವನಿ ಯಾತ್ರೆ ಪ್ರಜೆಗಳ ಧ್ವನಿ, …

Read More »

ಜಲಜೀವನ್ ಮೀಷನ್ ಕಾಮಗಾರಿ ಆರಂಭವಾಗುವುದು ಯಾವಾಗ..? ರಸ್ತೆ ಅಗೆದು ವರ್ಷವಾದರೂ ಕಾಮಗಾರಿ ಆರಂಭವಿಲ್ಲ

ದೋಟಿಹಾಳ: ಕಳೆದ ವರ್ಷ ಜಾತ್ರೆಗಳು ಆರಂಭಕ್ಕೆ ಒಂದು ತಿಂಗಳ ಇರುವಾಗ ಜೆಜೆಎಂ ಕಾಮಗಾರಿಯ ಕುಡಿಯುವ ನೀರಿ ಪೈಪ್ಲೆöÊನ್ ಹಾಕಲು ಗ್ರಾಮದ ಬಹುತ್ತೇಕ ರಸ್ತೆಗಳು ಸಿಸಿ ರಸ್ತೆಯನ್ನು ಅಗೆದು ಪೈಪುಗಳನ್ನು ಹಾಕದೆ ವರ್ಷವಾದರೂ ಆಗೆ ಬಿಟ್ಟಿದ್ದಾರೆ. ಇದರಿಂದ ರಸ್ತೆಯಲ್ಲಿ ಬೈಕ್ ಸವಾರರು ಮತ್ತು ಸಾರ್ವಜನಿಕರು ಎಡವಿ ಬಿದ್ದಿರುವ ಘಟನೆ ನಡೆದಿದ್ದರೂ ಇದನ್ನು ಸರಿಪಡಿಸಬೇಕಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮಾತ್ರ ಮೂಕಪೆಕ್ಷಕರಾಗಿದ್ದಾರೆ ಎಂಬುವುದು ಸಾರ್ವಜನಿಕರ ಆರೋಪವಾಗಿದೆ. ಗ್ರಾಮದಲ್ಲಿ ಕಳೆದ ಒಂದು ವರ್ಷದ ಹಿಂದೇ ಜಲಜೀವನ್ …

Read More »