Breaking News

ರಾಜ್ಯ

ರಾಜ್ಯದಲ್ಲಿ ದಿಢೀರ್ ತಾಪಮಾನ ಕುಸಿತ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ

ಬೆಂಗಳೂರು: ರಾಜ್ಯದಲ್ಲಿ ದಿಢೀರ್ ಆಗಿ ತಾಪಮಾನ ಕುಸಿದಿದ್ದು, ಕೆಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಅನುಭವ ಉಂಟಾಗುತ್ತಿದೆ. ‘ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಆಗಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ರಾಜಧಾನಿ ಬೆಂಗ ಳೂರಿನಲ್ಲೂ ತಾಪಮಾನ ಕುಸಿದಿತ್ತು. ಹೊರವಲಯದ ಜನರಿಗೆ ಚಳಿಯ ತೀವ್ರತೆ ಹೆಚ್ಚೇ …

Read More »

ವಿಷನ್ 2047: ಅಯೋಧ್ಯೆಗೆ ಹೊಸ ಸ್ಪರ್ಶ; ಇಲ್ಲಿದೆ ಮಾಹಿತಿ.

ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷ ಜ. 1ರಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ. ನಂತರದಲ್ಲಿ ದಿನಕ್ಕೆ ಕನಿಷ್ಠ 1 ಲಕ್ಷ ಮಂದಿಯಾ ದರೂ ಶ್ರೀರಾಮನ ದರ್ಶನ ಪಡೆಯಲಿದ್ದಾರೆ. ಇದನ್ನು ಗಮನದಲ್ಲಿಟ್ಟು ಕೊಂಡು, ಅಯೋಧ್ಯೆಯನ್ನು ಜಾಗತಿಕ ಪ್ರವಾಸೋದ್ಯಮ ಮತ್ತು ಆಧ್ಯಾತ್ಮಿಕ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಉದ್ದೇಶದಿಂದ ಉತ್ತರಪ್ರದೇಶ ಸರಕಾರವು ಬರೊಬ್ಬರಿ 32 ಸಾವಿರ ಕೋಟಿ ರೂ.ಗಳ ಮೆಗಾ ಯೋಜನೆಯನ್ನು ರೂಪಿಸಿದೆ. ಆ ಯೋಜನೆ ಕುರಿತು ಒಂದಿಷ್ಟು ಮಾಹಿತಿ …

Read More »

ಸ್ಯಾಂಟ್ರೋ ರವಿ ಹಣ ಲೆಕ್ಕ ಮಾಡಿದ್ದು ಆರಗ ಮನೆಯಲ್ಲೇ: H.D.K.

ಆಳಂದ: ಸ್ಯಾಂಟ್ರೋ ರವಿ ಜತೆಗೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆಕಂತೆ ನೋಟುಗಳ ಜತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣ ಲೆಕ್ಕ ಮಾಡುತ್ತಿರುವ ಫೋಟೋ ವೈರಲ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು. ಖಜೂರಿಯಲ್ಲಿ ಸೋಮವಾರ ಜರಗಿದ ಜೆಡಿಎಸ್‌ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ …

Read More »

ಬಿಜೆಪಿಯವರದ್ದು ಬೆನ್ನು ಮೂಳೆ ಇಲ್ಲದ ರಾಜಕೀಯ: ಹಿಂದಿ ದಿವಸ್ ವಿರುದ್ಧ ಜೆಡಿಎಸ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಹಿಂದಿ ದಿವಸ ಆಚರಣೆಯ ವಿರುದ್ಧ ಜೆಡಿಎಸ್ ಕಿಡಿಕಾರಿದ್ದು, ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದೆ. ಬಹು ಭಾಷೆಯ, ಬಹುಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ‌ ಒಂದು ಭಾಷೆಯನ್ನು …

Read More »

ಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ. ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು. ಟ್ವಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ …

Read More »

ಡಿ.ಕೆ ಶಿವಕುಮಾರ್ ಭೇಟಿಯಾದ ಶಾಸಕ H.ನಾಗೇಶ್ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..?

ಬೆಂಗಳೂರು : ಪಕ್ಷೇತರ ಶಾಸಕ ಹೆಚ್. ನಾಗೇಶ್ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷೇತರ ಶಾಸಕನಾಗಿದ್ದರೂ ಬಿಜೆಪಿ ಬೆಂಬಲಿಸಿರುವ ನಾಗೇಶ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಕುತೂಹಲ ಮೂಡಿದೆ. ಕೆಲವು ತಿಂಗಳುಗಳ ಹಿಂದೆಯೇ ನಾಗೇಶ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಆದರೆ ಕಾಂಗ್ರೆಸ್ ಸೇರ್ಪಡೆಯಾಗಿರಲಿಲ್ಲ. ಮಹತ್ತರದ …

Read More »

ಮತಾಂತರ ಗಂಭೀರ ಸಮಸ್ಯೆ, ರಾಜಕೀಯ ಮಾಡಬೇಡಿ: ಸುಪ್ರೀಂ

ನವದೆಹಲಿ, ಜನವರಿ 9: ಧಾರ್ಮಿಕ ಮತಾಂತರಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದಿರುದ ಸುಪ್ರೀಂ ಕೋರ್ಟ್, ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸೋಮವಾರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ನೆರವು ಕೋರಿದೆ.   ಬೆದರಿಕೆ, ಉಡುಗೊರೆಗಳು ಮತ್ತು ಹಣದ ಪ್ರಯೋಜನಗಳ ಮೂಲಕ ವಂಚನೆಯಿಂದ ಆಮಿಷ ಒಡ್ಡಿ ಸಹಾಯ ಮಾಡುವ ಮೂಲಕ ಧಾರ್ಮಿಕ ಮತಾಂತರವನ್ನು ಪರಿಶೀಲಿಸುವಂತೆ …

Read More »

ಮೀಸಲಾತಿಗಾಗಿ ಮತ್ತೊಂದು ಸಮುದಾಯದ ಹೋರಾಟ ತೀವ್ರ: ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸಂಘ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಸಂಬಂಧ ವಿವಿಧ ಸಮುದಾಯಗಳ ಹೋರಾಟ ನಡೆಯುತ್ತಿದ್ದು, ಇದೀಗ ಇದೇ ವಿಚಾರವಾಗಿ ಇನ್ನೊಂದು ಸಮುದಾಯ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ. ಮಾತ್ರವಲ್ಲ, ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದೆ.   ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ ಪ್ರವರ್ಗ ‘2ಎ’ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಿಜ ಸಂಘ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಪ್ರತಿಭಟನಾಕಾರರು ನಮ್ಮಿಂದ ಕಸಿದುಕೊಂಡಿರುವ 2ಎ ಮೀಸಲಾತಿ ವಾಪಸ್ …

Read More »

ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ

ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ.   ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ …

Read More »

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು. ಜನವರಿ 19 ರಂದು ಪ್ರಧಾನಿ …

Read More »