Breaking News

ರಾಜ್ಯ

ಡಬಲ್ ಎಂಜಿನ್‌ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ

ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು.   ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್‌ ಫಾರ್‌ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …

Read More »

ಪ್ರದೀಪ್‌ ಆತ್ಮಹತ್ಯೆ: ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಗುತ್ತಿಗೆದಾರ ಪ್ರದೀಪ್‌ ಆತ್ಮಹತ್ಯೆ ಪ್ರಕರಣ ಸಂಬಂಧ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌, ಲಿಂಬಾವಳಿ ವಿರುದ್ಧ ಇನ್ನೂ ಯಾಕೆ ತನಿಖೆ ಆರಂಭವಾಗಿಲ್ಲ ಎಂದು ಪ್ರಶ್ನೆ ಮಾಡಿದೆ.   ಈ ಪ್ರಕರಣದಲ್ಲಿ ಹೆಚ್ಚಿನ ಅವ್ಯವಹಾರ ನಡೆದಿರುವ ಸಂಭವವಿದೆ ಎಂದು ಹೇಳಿರುವ ಕಾಂಗ್ರೆಸ್, #ArrestLimbavali ಎನ್ನುವ ಹ್ಯಾಷ್‌ ಟ್ಯಾಗ್‌ ಬಳಕೆ ಮಾಡಿ ವಾಗ್ದಾಳಿ ನಡೆಸಿದೆ.   ‘ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಬಿಜೆಪಿ …

Read More »

ಸಾಹಿತ್ಯ ಸಮ್ಮೇಳನ: ಪಾರ್ಕಿಂಗ್‌ಗೆ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ವ್ಯವಸ್ಥೆ

ಹಾವೇರಿ: ನಗರದಲ್ಲಿ ಜನವರಿ 6 ರಿಂದ 8ರವರೆಗೆ ಮೂರು ದಿನಗಳ ಕಾಲ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಸುಗಮ ಸಂಚಾರಕ್ಕಾಗಿ ಜ.6 ರಿಂದ ಜ.8ರವರೆಗೆ ದೈನಂದಿನ ಸಂಚಾರ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.   ದಾವಣಗೆರೆ ಮಾರ್ಗವಾಗಿ ಬರುವ ವಾಹನಗಳು ತೋಟದ ಯಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಕೆಳ ಸೇತುವೆ ಸರ್ವಿಸ್ ರಸ್ತೆ ಮುಖಾಂತರ ಹಳೇ ಪಿಬಿ …

Read More »

ಕೆಪಿಟಿಸಿಎಲ್ 505 ಹುದ್ದೆ: 501 ಅಭ್ಯರ್ಥಿಗಳಷ್ಟೆ ಅರ್ಹರು!

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್), ಬೆಸ್ಕಾಂ, ಸೆಸ್ಕ್‌, ಹೆಸ್ಕಾಂ, ಮೆಸ್ಕಾಂ ಮತ್ತು ಜೆಸ್ಕಾಂಗಳ ಆಡಳಿತ ವ್ಯಾಪ್ತಿಯ ಕಚೇರಿಗಳಲ್ಲಿ ಖಾಲಿ ಇರುವ 1,492 ವಿವಿಧ ಹುದ್ದೆಗಳ ನೇಮಕಾತಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆಗೆ ನಿಗದಿಪಡಿಸಿದ ಅಂಕಗಳಿಸಿದ ಅಭ್ಯರ್ಥಿಗಳ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳವಾರ ಪ್ರಕಟಿಸಿದೆ.   ಆದರೆ, ಸಹಾಯಕ ಎಂಜಿನಿಯರ್‌ (ವಿದ್ಯುತ್‌) 505 ಹುದ್ದೆಗಳಿಗೆ (ಉಳಿಕೆ ವೃಂದದ 393, ಬ್ಯಾಕ್‌ಲಾಗ್‌ 6 , …

Read More »

‘ಕೈ’ ಟಿಕೆಟ್‌: ಡಿಕೆಶಿ ಇಂದು ದೆಹಲಿಗೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸುಮಾರು 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಂಕ್ರಾಂತಿ (ಜ.14) ಕಳೆಯುತ್ತಿದ್ದಂತೆ ಘೋಷಿಸಲು ತಯಾರಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲು ಬುಧವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.   ‘ಬುಧವಾರ ಬೆಳಿಗ್ಗೆ ತುರುವೇಕೆರೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಹುಲ್‌ ಗಾಂಧಿ, ಕೆ.ಸಿ.ವೇಣುಗೋಪಾಲ್‌ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲ ಅವರನ್ನು …

Read More »

ಶಾಲಾ ಪಠ್ಯದಲ್ಲಿ ಸಿದ್ಧೇಶ್ವರ ಸ್ವಾಮೀಜಿ ಜೀವನಗಾಥೆ: ಸಿ.ಎಂ ಬೊಮ್ಮಾಯಿ

ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.

Read More »

ನನ್ನಂತೆ ರಾಜಕೀಯಕ್ಕೆ ಕುಟುಂಬದವರನ್ನು ಕರೆತರದಿರಲು ನಿಮ್ಮಿಂದ ಸಾಧ್ಯವೇ?: ಎಚ್​ಡಿಕೆಗೆ ಪ್ರಹ್ಲಾದ್​ ಜೋಶಿ ಸವಾಲು

ಗದಗ, ಜ.3: ‘ನಾನು ರಾಜಕೀಯಕ್ಕೆ ಬಂದು 25 ವರ್ಷವಾಯಿತು. ನಾನು ನನ್ನ ಕುಟುಂಬದಿಂದ ಯಾರನ್ನೂ ರಾಜಕೀಯಕ್ಕೆ ಕರೆ ತರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳುತ್ತೇನೆ. ಅದರಂತೆಯೇ ಕುಮಾರಸ್ವಾಮಿ ಅವರು ಹೇಳಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸವಾಲು ಹಾಕಿದ್ದಾರೆ.   ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಯಾರ ಗುಂಡಿ ಯಾರು ತೋಡಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಜೆಡಿಎಸ್ ಅಂತ ಬಂದಾಗ ಕುಮಾರಸ್ವಾಮಿ, ದೇವೇಗೌಡ್ರು, ರೇವಣ್ಣ, …

Read More »

ಬೆಳಗಾವಿ ಜಿಲ್ಲೆಯ ಭಕ್ತರೊಂದಿಗೆ ಸಿದ್ಧೇಶ್ವರ ಸ್ವಾಮೀಜಿ ದಶಕಗಳ ಆಪ್ತತೆ

ಬೆಳಗಾವಿ: ವಿಶ್ವಸಂತ, ನಡೆದಾಡುವ ದೇವರು ಎಂದೇ ಹೆಸರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರಿಗೂ ಬೆಳಗಾವಿ ಜಿಲ್ಲೆಗೂ ಎರಡು ದಶಕಗಳ ನಂಟಿದೆ. ಅವರ ಅತಿ ಹೆಚ್ಚು ಪ್ರವಚನಗಳು ಬೆಳಗಾವಿ ಜಿಲ್ಲೆಯಲ್ಲೇ ನಡೆದಿವೆ. ಇಂದೋ ನಿನ್ನೆಯೋ ಶ್ರೀಗಳು ಕಣ್ಣ ಮುಂದೆ ತಮ್ಮ ಜ್ಞಾನ ಬಿತ್ತಿದ್ದಾರೆ ಎನ್ನುವಷ್ಟು ಆಪ್ತತೆ ಜಿಲ್ಲೆಯ ಜನರಲ್ಲಿದೆ. ಶ್ರೀಗಳು ಇನ್ನಿಲ್ಲ ಎನ್ನುವ ಸುದ್ದಿ ತಿಳಿದು ಜಿಲ್ಲೆಯ ಭಕ್ತರೂ ದಿಗಿಲುಗೊಂಡಿದ್ದಾರೆ. ಕಳೆದೊಂದು ವಾರದಿಂದ ಅಪಾರ ಸಂಖ್ಯೆಯ ಜನ ಶ್ರೀಗಳನ್ನು ನೋಡಲು …

Read More »

ದಶಕ ಕಾದರೂ ಸಿಗದ ಸಮರ್ಪಕ ನೀರು

ನಾಗರಮುನ್ನೋಳಿ: ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಲುವಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡು ದಶಕ ಕಳೆದಿದೆ. ಆದರೆ, ಕಳೆದ ಏಳು ತಿಂಗಳಿಂದ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ. ಇದರಿಂದ ಜನರ ಕೊಡ ನೀರಿಗೂ ಮೈಲುದ್ದ ಅಲೆಯಬೇಕಾದ ಸ್ಥಿತಿ ಬಂದಿದೆ.   ನಾಗರಮುನ್ನೋಳಿ ಹೋಬಳಿ ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ನೀರು ಕೊಡಬೇಕು ಎಂಬ ಉದ್ದೇಶದಿಂದ ಘಟಪ್ರಭಾ ನದಿಯಿಂದ ಬಹುಗ್ರಾಮ ಯೋಜನೆ 2012-13ರಲ್ಲಿ ಮಂಜೂರಾಗಿತ್ತು. ₹15.88 ಕೋಟಿ ಅನುದಾನ ಬಳಕೆಯಾಗಿದೆ. …

Read More »

ಶ್ರದ್ಧೆ, ಭಕ್ತಿ ಇದ್ದಲ್ಲಿ ದೇವರಿದ್ದಾನೆ: ಮುರಘೇಂದ್ರ ಸ್ವಾಮೀಜಿ

ತಲ್ಲೂರ: ಎಲ್ಲಿ ಭಕ್ತಿ, ಶ್ರದ್ಧೆ ಇರುತ್ತದೆಯೋ ಅಲ್ಲಿ ಭಗವಂತ ನೆಲೆಸುತ್ತಾನೆ ಎಂದು ಮುನವಳ್ಳಿ ಸೋಮಶೇಖರ ಮಠದ ಮುರಘೇಂದ್ರ ಸ್ವಾಮೀಜಿ ಹೇಳಿದರು. ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ 16ನೇ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಜ್ಯೋತಿ ಮೆರವಣಿಗೆ ಹಾಗೂ ಪಲ್ಲಕ್ಕಿ ಉತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ‘ಭಗವಂತನ ಒಲುಮೆ ಆಗಬೇಕಾದರೆ ನಿರ್ಮಲವಾದ ಭಕ್ತಿ ಬೇಕು. ಅಂತಹ ಶ್ರದ್ಧಾಭಕ್ತಿ ಹಾಗೂ ಪರಿಶ್ರಮವನ್ನು ನಾನು ತಲ್ಲೂರಿನ ಅಯ್ಯಪ್ಪ ಭಕ್ತರಲ್ಲಿ ಕಂಡಿದ್ದೇನೆ. …

Read More »