ಹಾಸನ: ಸೊಸೆಗೆ ಲೈಂಗಿಕ ಕಿರುಕುಳ ನೀಡಿದ ಮಾವ ಕೊಲೆಯಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕೋಪದ ಕೈಗೆ ಬುದ್ಧಿ ಕೊಟ್ಟ ಬೀಗರು ಬಂಧಿತರಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಕಾವಲು ಗ್ರಾಮದ ಕೆರೆ ಬಳಿ ನವೆಂಬರ್ 13ರಂದು ದೊಡ್ಡಹಳ್ಳಿ ತಮ್ಮೇಗೌಡನ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ತಮ್ಮೇಗೌಡನ ಬೀಗರನ್ನು ಬಂಧಿಸಿದ್ದಾರೆ. ವಿಕಲಚೇತನ ಮಗನಿಗೆ ಮದುವೆ ಮಾಡಿದ್ದ ತಮ್ಮೇಗೌಡ ಅಜ್ಜನಾಗುವ ಕನಸು ಕಂಡಿದ್ದ. …
Read More »ಸಿದ್ದಾರಾಮಯ್ಯಗೆ ನನ್ನ ಕ್ಷೇತ್ರ ಬಿಟ್ಟು ಕೊಡುತ್ತೇನೆ: ಸಂತೋಷ ಲಾಡ್
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಘಟಗಿ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾದರೇ ಅವರಿಗೆ ಕ್ಷೇತ್ರ ಬಿಟ್ಟು ಕೊಡುವೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜ್ಯದ ಹಲವೆಡೆಗಳಲ್ಲಿ ಅನೇಕರು ಆಹ್ವಾನಿಸುತ್ತಿದ್ದಾರೆ. ಈ ದಿಸೆಯಲ್ಲಿ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅದು ಅವರಿಗೆ ಬಿಟ್ಟ ವಿಷಯ. ಒಂದು ವೇಳೆ ಕಲಘಟಗಿಯಿಂದಲೂ ಸ್ಪರ್ಧಿಸಲು ಇಚ್ಛಿಸಿದರೆ ಆ ಕ್ಷೇತ್ರ ಬಿಟ್ಟುಕೊಡುವೆ …
Read More »ಪ್ರೀತಿಸಿ ಮದುವೆಯಾಗಿ ಒಟ್ಟಿಗೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ದಂಪತಿ ಬಂಧನ
ಬೆಂಗಳೂರು: ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ನಗರದ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ನಾಗರಾಜ ಹಾಗೂ ರಮ್ಯಾ ಬಂಧಿತ ದಂಪತಿ. ಬೈಕ್ ಕಳ್ಳನೊಬ್ಬನ ಮೂಲಕ ನಾಗರಾಜ್ ಹಾಗೂ ರಮ್ಯಾಗೆ ಪರಿಚಯ ಆಗಿತ್ತು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ದಿನಕಳೆದಂತೆ ಇಬ್ಬರ ನಡುವೆ ಪ್ರೇಮಾಂಕುವಾಗಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಇಬ್ಬರು ಒಟ್ಟಿಗೆ ಕಳ್ಳತನ ಮಾಡಲು ಆರಂಭಿಸಿದರು. ಒಂಟಿ …
Read More »ಬಿಜೆಪಿಗರೇ, ನಾನು ರೌಡಿಶೀಟರ್, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?
ಮೈಸೂರು: ‘ಬಿಜೆಪಿಗರೇ, ನಾನು ರೌಡಿಶೀಟರ್, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?’ ಎಂದು ಬರೆದಿದ್ದ ಬ್ಯಾನರ್ ಹಿಡಿದು, ಮಂಜು ಅಲಿಯಾಸ್ ಪಾನಿಪುರಿ ಮಂಜ ಎನ್ನುವವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಸಾರ್ವಜನಿಕರ ಗಮನಸೆಳೆದರು. ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ, ಕನಕದಾಸ, ವಾಲ್ಮೀಕಿ, ಅಂಬೇಡ್ಕರ್ ಚಿತ್ರ ಹಾಕಿದ್ದ ಬ್ಯಾನರ್ ಹಿಡಿದಿದ್ದರು. ಗಣೇಶ ನಗರದ ನಿವಾಸಿಯಾದ ಅವರು, 2013ರಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ. …
Read More »ಬದಲಾದೀತೇ ಗುಜರಾತ್ ಗಾದಿ? ನಾಳೆ ಮೋದಿ ತವರಿನಲ್ಲಿ 2ನೇ ಹಂತದ ಮತದಾನ
ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಒಂದು ತಿಂಗಳಿನಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಜನಮನ್ನಣೆ ಗಳಿಸಿಕೊಳ್ಳುವುದಕ್ಕಾಗಿ ಇನ್ನಿಲ್ಲದ ಶ್ರಮ ಪಟ್ಟಿವೆ. ಬಿಜೆಪಿ ಪ್ರಚಾರಕ್ಕೆ ಪ್ರಧಾನಿ ಮೋದಿಯವರೇ ನೇತೃತ್ವ ವಹಿಸಿಕೊಂಡಿದ್ದರೆ, ಎಎಪಿಗೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಮುಂದಾಳತ್ವ ವಹಿಸಿದ್ದರು. ಕಾಂಗ್ರೆಸ್ ಮಾತ್ರ ದಿಲ್ಲಿ ನಾಯಕರನ್ನು ನಂಬಿಕೊಳ್ಳದೆ ಸಾಮೂಹಿಕ ನಾಯಕತ್ವದಡಿ ಪ್ರಚಾರ ನಡೆಸಿದೆ. ಹಿಂದಿನ ಸಂಖ್ಯೆ ಹೆಚ್ಚು ಮಾಡಿಕೊಂಡೀತೇ ಬಿಜೆಪಿ? …
Read More »ರೌಡಿಗಳು, ಅಪರಾಧ ಹಿನ್ನೆಲೆ ಉಳ್ಳವರಿಗೆ ಪಕ್ಷ ಸೇರಲು ಅವಕಾಶ ಇಲ್ಲ: ಅರುಣ್ ಸಿಂಗ್
ಬೆಂಗಳೂರು, ಡಿಸೆಂಬರ್ 3: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು …
Read More »ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ನೇಮಕ ವಿಚಾರ: ಕೋರ್ಟ್ ಮೊರೆಗೆ ತೀರ್ಮಾನ
ಚಿತ್ರದುರ್ಗ: ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ಅಥವಾ ಆಡಳಿತಾಧಿಕಾರಿ ನೇಮಕ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಮುಂದುವರಿಸಿದರೆ ನ್ಯಾಯಾಲಯದ ಮೆಟ್ಟಿಲೇರಲು ವೀರಶೈವ ಲಿಂಗಾಯತ ಸಮಾಜದ ಸಭೆ ಶನಿವಾರ ಒಮ್ಮತದ ನಿರ್ಣಯ ಕೈಗೊಂಡಿತು. ತಾಲ್ಲೂಕಿನ ಸೀಬಾರದಲ್ಲಿರುವ ಎಸ್. ನಿಜಲಿಂಗಪ್ಪ ಸ್ಮಾರಕದಲ್ಲಿಮಾಜಿ ಸಚಿವ ಎಚ್. ಏಕಾಂತಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಮೂರು ನಿರ್ಣಯಗಳನ್ನು ಅನುಮೋದಿಸಿತು. ಸಭೆಯ ತೀರ್ಮಾನದ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು. ‘ಶಿವಮೂರ್ತಿ ಶರಣರ ಬಂಧನದ ಬಳಿಕ ಮುರುಘಾ ಮಠ ಹಾಗೂ …
Read More »ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸ್ಪೋಟಕ ಟ್ವಿಸ್ಟ್: ಸಿಐಡಿ ತನಿಖೆಯಲ್ಲಿ ಮತ್ತೊಂದು ಹಗರಣ ರಿವೀಲ್
ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಮತ್ತೊಂದು ಸ್ಪೋಟಕ ಟ್ವಿಸ್ಟ್ ದೊರೆತಿದೆ. ಪರೀಕ್ಷಾ ಅಕ್ರಮದ ಬಗ್ಗೆ ಪರೀಕ್ಷಾ ಉಸ್ತುವಾರಿ ಅಮೃತ್ ಪಾಲ್ ಗೆ ಪರೀಕ್ಷೆಯ ಬಳಿಕ ಅಭ್ಯರ್ಥಿಗಳು ದೂರು ನೀಡಿದ್ದರೂ, ಗೊತ್ತಿದ್ದೂ ಗೊತ್ತಿಲ್ಲದಂತೆ ವರ್ತಿಸಿರುವಂತ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಸಿಐಡಿ ರಿವೀಲ್ ಮಾಡಿದೆ. ಪಿಎಸ್ಐ ನೇಮಕಾತಿ ಅಕ್ರಮವನ್ನು ಸ್ವತಹ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದಂತ ಅಮೃತ್ ಪಾಲ್ ಅವರೇ …
Read More »ಮರಾಠಾ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ
ಬಿಜೆಪಿ ಕರ್ನಾಟಕ ರಾಜ್ಯ ಕರ್ನಾಟಕ ಮರಾಠ ಸಮಾಜದ ಅಡಿಯಲ್ಲಿ ನಮ್ಮ ಮರಾಠಾ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಕಿರಣ ಜಾಧವ್ ತಿಳಿಸಿದರು ಮರಾಠ ಸಮುದಾಯದವರೆಲ್ಲರೂ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನ ವನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತ್ತು ಈ ಪ್ರತಿಭಟನೆ ಜಾಗೃತಿ ಮತ್ತು ಮಹತ್ವವನ್ನು ತಿಳಿಸುವುದರ ಮೂಲಕ ಮತ್ತು ಮುಂಬರುವ ದಿನಗಳಲ್ಲಿ …
Read More »ತಟ್ಟೆ ತೊಳೆಯಲು ಹೋದ ಮಗಳನ್ನು ಚಿರತೆ ಎಳೆದುಕೊಂಡು ಹೋಯಿತು..
ತಿ.ನರಸೀಪುರ: ಸಂಜೆ 6.45ರ ಸಮಯ.ನಾವು ಟಿವಿ ನೋಡುತ್ತಾ ಕುಳಿತಿದ್ದೆವು. ತಟ್ಟೆ ತೊಳೆದು ಬರುತ್ತೇನೆ ಎಂದು ಮೇಘನಾ ಹಿಂದೆ ಹೋಗಿದ್ದಳು. ಎಷ್ಟು ಹೊತ್ತಾದರೂ ಬಂದಿರಲಿಲ್ಲ. ಏಕಾಏಕಿ ಕೂಗಿಕೊಂಡ ಶಬ್ದ ಕೇಳಿ ನಾವೆಲ್ಲಾ ಓಡಿ ಹೋದೆವು. ಅಷ್ಟರಲ್ಲಿ ಚಿರತೆ ಎಳೆದುಕೊಂಡು ಹೋಗಿದ್ದನ್ನು ಕಣ್ಣಾರೆ ಕಂಡೆವು. ಕೂಗು ಹಾಕಿದ್ದರಿಂದ ಬಿಟ್ಟು ಚಿರತೆ ಓಡಿತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆ ಆಸ್ಪತ್ರೆಯಲ್ಲೇ ಮೃತಪಟ್ಟಳು. ಕಣ್ಣ ಮುಂದೆಯೇ ಪ್ರಾಣಿಯೊಂದು ದಾಳಿ ಮಾಡಿ ಮಗಳು ಸತ್ತಿದ್ದನ್ನು ನೋಡಲು ಆಗುತ್ತಿಲ್ಲ. ಹೀಗೆ …
Read More »
Laxmi News 24×7