Breaking News

ರಾಜ್ಯ

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನ

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನವಾಗಿರುವ ಘಟನೆ ನಡೆದಿದೆ. ಹೌದು ಕಳ್ಳರು ಮನೆ, ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದರು ಆದರೆ. ಇದೀಗ ತಹಶೀಲ್ದಾರ್ ಕಚೇರಿ ಮೇಲೂ ತಮ್ಮ ವಕ್ರದೃಷ್ಟಿ ಬೀರಿದ್ದು. ಪಹಣಿ ಪತ್ರಿಕೆ ನೀಡುವ ಕಂಪ್ಯೂಟರ್‍ನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಪಾಸ್ವರ್ಡ್, ಲಾಗಿನ್ ಲಾಕ್ ಮಾಡಲಾಗಿದೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಕಳ್ಳರಿಗೆ ಬಲೆ ಬೀಸಿದ್ದಾರೆ. ಈ ಸಂಬಂಧ ಶಹರ ಠಾಣೆಯಲ್ಲಿ ಕೇಸ್ …

Read More »

ಅಂಗವಿಕಲರು ಸರ್ಕಾರಿ ಸೌಲಭ್ಯ ಪಡೆದು ಸ್ವಾವಲಂಬಿಯಾಗಿ – ರಮೇಶ ಕತ್ತಿ.

ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೋಳ್ಳಬೇಕು ಎಂದು ಬಿ ಡಿ ಸಿ ಸಿ ಬ್ಯಾಂಕ್ ಅದ್ಯಕ್ಷ ರಮೇಶ ಕತ್ತಿ ಹೇಳಿದರು. ಹುಕ್ಕೇರಿ ತಾಲೂಕಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೆತನ ಮತ್ತು ಹಿರಿಯ ನಾಗರಿಕ ಸಬಲಿಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ದಿವಂಗತ ಉಮೇಶ ಕತ್ತಿ ಯವರ ಅನುದಾನದಲ್ಲಿ ಅಂಗವಿಕಲರಿಗೆ ಕೋಡಮಾಡಿದ ತ್ರಿಚಕ್ರ ವಾಹನಗಳನ್ನು ಪಡೆದ ಫಲಾನುಭವಿಗಳು …

Read More »

ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣ

ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದ ಆನೆಬಾಯಿಕೋಡಿಯಲ್ಲಿ ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣವಾಗಿದೆ‌. ಅ ಲಾಲಪುರ- ರಾಯಬಾಗ ರಸ್ತೆಯಲ್ಲಿರುವ ಆನೆಬಾಯಿ ಕೋಡಿಯಲ್ಲಿ ವಿದ್ಯುತ್ ಕಂಬ್ ಸಮೀಪದ ಮತ್ತೊಂದು ವಿದ್ಯುತ್ ಕಂಬಕ್ಕೆ ತಾಗುತ್ತಿದೆ. ಇದರಿಂದ ಜನರು ಭಯಭೀತಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಯಾರೂ ಇತ್ತ ಕಡೆ ಗಮನಹರಿಸುತ್ತಿಲ್ಲ ಎಂದು ಜನರು ಗಂಭೀರ ಆರೋಪ ಮಾಡುತ್ತಿದ್ದಾರೆ. ವಿದ್ಯುತ್ ಕಂಬ …

Read More »

ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತ: C.M. ಬೊಮ್ಮಾಯಿ

ಬೆಂಗಳೂರು : ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ತಮ್ಮ ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ಬಗ್ಗೆ ಸಭೆ ನಡೆಸಲಾಗಿದೆ. ತಂಡವು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ ಹಿರಿಯ ವಕೀಲರಾದ ಉದಯ್ ಹೊಳ್ಳ , ಬೆಳಗಾವಿಯ ಮಾರುತಿ ಜಿರ್ಲೆ, ವಕೀಲರಾದ ರಘುಪತಿ ಅವರನ್ನೊಳಗೊಂಡಿದೆ ಎಂದರು. …

Read More »

ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ಮಹಾರಾಷ್ಟ್ರ ಸರ್ಕಾರ

ಮುಂಬೈ: ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ಮಹಾರಾಷ್ಟ್ರ ಸರ್ಕಾರ ಈಗ ಒಂದು ಹೆಜ್ಜೆ ಮುಂದೆ ಹೋಗಿ, ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಅಂಗಳಕ್ಕೆ ಕರೆದೊಯ್ಯಲು ಮುಂದಾಗಿದೆ.   ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ಮಹಾರಾಷ್ಟ್ರ ಸಲ್ಲಿಕೆ ಮಾಡಿರುವ ಬೆಳಗಾವಿ ಗಡಿ ವಿವಾದ ಸಂಬಂಧದ ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಏಕ್‌ನಾಥ್‌ ಶಿಂಧೆ …

Read More »

‘ಶಬರಿಮಲೆ’ಗೆ ತೆರಳೋ ‘ಅಯ್ಯಪ್ಪನ ಭಕ್ತ’ರಿಗೆ ಗುಡ್ ನ್ಯೂಸ್: KSRTCಯಿಂದ ‘ರಾಜಹಂಸ, ವೋಲ್ವೋ ಬಸ್’ ಸಂಚಾರ ವ್ಯವಸ್ಥೆ

ಬೆಂಗಳೂರು: ಕರ್ನಾಟಕದಿಂದ ( Karnataka ) ಶಬರಿಮಲೆಯ ಅಯ್ಯಪ್ಪ ಸ್ವಾಮಿ (Sabarimala Ayyappa Swamy ) ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿಯಿಂದ ಶಬರಿಮಲೆಗೆ ರಾಜಹಂಸ, ವೋಲ್ವೋ ಬಸ್ ( KSRTC Rajahamsa, Volvo Bus ) ಸಂಚಾರದ ವ್ಯವಸ್ಥೆಯನ್ನು ಮಾಡಿದೆ.     ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ( Karnataka State Road Transport …

Read More »

ಮುರುಘಾ ಮಠದಲ್ಲಿ ಅನಾಥ ಮಕ್ಕಳು ನಾಪತ್ತೆ ಸಾಧ್ಯತೆ: ಒಡನಾಡಿ

ಚಿತ್ರದುರ್ಗ: ಮುರುಘಾ ಮಠದಲ್ಲಿ ಆಶ್ರಯ ಪಡೆದಿದ್ದ 11 ಅನಾಥ ಮಕ್ಕಳ ಮಾಹಿತಿಯನ್ನು ಮರೆಮಾಚಲಾಗಿದ್ದು, ಆ ಎಲ್ಲ ಮಕ್ಕಳು ನಾಪತ್ತೆಯಾಗಿರುವ ಅನುಮಾನ ಕಾಡುತ್ತಿದೆ ಎಂದು ಒಡನಾಡಿ ಸೇವಾ ಸಂಸ್ಥೆಯ ಎಂ.ಎಲ್‌.ಪರಶುರಾಮ್‌ ಆರೋಪಿಸಿದರು. ‘ಮಠದಲ್ಲಿದ್ದ ಅನಾಥ ಮಕ್ಕಳನ್ನು ದತ್ತು ಪ್ರಕ್ರಿಯೆಗೆ ಒಳಪಡಿಸಿರುವುದಕ್ಕೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿಲ್ಲ. ಮಕ್ಕಳ ಕಲ್ಯಾಣ ಸಮಿತಿ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಈ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗಿರುವ ಆತಂಕ ಕಾಡುತ್ತಿದೆ’ ಎಂದು ಸೋಮವಾರ ಸುದ್ದಿಗಾರರೊಂದಿಗೆ ಕಳವಳ ವ್ಯಕ್ತಪಡಿಸಿದರು. ‘ಮಠದಲ್ಲಿದ್ದ ಇನ್ನೂ ಹತ್ತು …

Read More »

ಮತಪಟ್ಟಿ ಹಗರಣ ನಡೆದಿದೆ, ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಿ: ಸತೀಶ್ ಜಾರಕಿಹೊಳಿ

ಕೊಪ್ಪಳ: ರಾಜ್ಯದಲ್ಲಿ ಮತಪಟ್ಟಿ ಪರಿಷ್ಕರಣೆಯಲ್ಲಿ ಬಹುದೊಡ್ಡ ಹಗರಣ ನಡೆಯುತ್ತಿದೆ. ಇದರ ಬಗ್ಗೆ ನಾವೆಲ್ಲ ಜಾಗೃತರಾಗಬೇಕು. ಕೇವಲ ಬೆಂಗಳೂರು ಒಂದೇ ಅಲ್ಲ, ಎಲ್ಲ ಜಿಲ್ಲೆಯಲ್ಲಿಯೂ ನಡೆದಿದೆ. ನಮ್ಮೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು.   ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮತದಾರರ ಪಟ್ಟಿಯಲ್ಲಿ ನಮ್ಮ ಪರ ಇರುವ ಮತದಾರರನ್ನು ಡಿಲಿಟ್ ಮಾಡುವ ಕೆಲಸ ನಡೆದಿದೆ. ಈ ಬಗ್ಗೆ ನಾವು ಜಾಗೃತರಾಗಬೇಕಿದೆ. ಬಿಜೆಪಿ ಗೆಲ್ಲಲು ನಮ್ಮ …

Read More »

ಕಲಾವಿದರಿಂದ ರಚನೆಗೊಂಡ ನಾಡದೇವತೆಯ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದ ನಾಡದೇವತೆಯ ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯು ನಿಯೋಜಿತ ಕಲಾವಿದರಿಂದ ರಚನೆಗೊಂಡ ನಾಡದೇವತೆಯ ಚಿತ್ರವನ್ನು ಸ್ವೀಕರಿಸಿದೆ. ಹಲವಾರು ಕಾರ್ಯಕ್ರಮಗಳಲ್ಲಿ ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವತೆಗಳ ಚಿತ್ರಗಳನ್ನು ಬಳಸಲಾಗುತ್ತಿದ್ದು, ಒಂದು ನಿರ್ದಿಷ್ಟ ಚಿತ್ರಕೃತಿಯ ಕೊರತೆಯಿರುವುದನ್ನು ಮನಗಂಡ ಸರ್ಕಾರವು ಚಿತ್ರವನ್ನು ಆಯ್ಕೆ ಮಾಡಲು ಹಿಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.   ಲಲಿತ …

Read More »

ಯು.ಬಿ.ಬಣಕಾರ್ ಸೇರಿ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಈ ರಾಜ್ಯ ನಾಶ ಆಗುತ್ತದೆ. ಸರ್ವನಾಶ ಆಗುತ್ತದೆ. ಹೀಗಾಗಿ ಬಿಜೆಪಿ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ನಾವೆಲ್ಲರೂ ಸೇರಿಕೊಂಡು ಸೋಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದರು. 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ. ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ ಯು.ಬಿ.ಬಣಕಾರ್ ತಮ್ಮ ಬೆಂಬಲಿಗರಾದ ಮಂಜಣ್ಣ, ಶಿವರಾಜ್, ಹೇಮಣ್ಣ, ಷಣ್ಮುಖಯ್ಯ ಮಳಿಮಠ ಸೇರಿದಂತೆ …

Read More »