ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಸೇರುವದಿಲ್ಲ.ನಾನು ಬಿಜೆಪಿ ಬಿಡೋಲ್ಲ,ಬಿಡೋಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಸಮೀಪದಲ್ಲಿ ರಮೇಶ್ ಜಾರಕಿಹೊಳಿ ಅವರ ಆಪ್ತ ನಾಗೇಶ್ ಮನ್ನೋಳಕರ ಮಾಲಿಕತ್ವದ ಸ್ಮಾರ್ಟ್ ಕ್ಯಾಶ್ಯು ಕಾರ್ಖಾನೆಯನ್ನು ಉದ್ಘಾಟಿಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ನಾನು ಮಂತ್ರಿಯಾಗಿದ್ದೆ. ಆ ಮಂತ್ರಿ ಸ್ಥಾನ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿ ಸರ್ಕಾರ ರಚಿಸಿದ್ದೇವೆ.ಈಗ ನನ್ನನ್ನು ಮಂತ್ರಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಲಕ್ಷ್ಮಣ ಗನಾಪಾಗೋಲ್, ಮಾದೇವ್ ತುಕ್ಕಾನಟ್ಟಿ, ರಾಮಣ್ಣ ವಡೆರ್, …
Read More »ಬಿಜೆಪಿಯಿಂದ ನೀವು ಇದ್ದೀರಿ ಬಿಜೆಪಿ ಇಲ್ಲದೆ ಇದ್ದರೆ ನೀವು ಜೀರೋ.ಯತ್ನಾಳ್ ಹೆಂಡ್ಯಾಗಿನ ಹುಳಾ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ ಉಚ್ಚಾಟಿತ ಅಭ್ಯರ್ಥಿಗಳು ಸೇರಿಕೊಂಡು ಪತ್ರಿಕಾಗೋಷ್ಠಿ ನಡೆಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಟ್ಲರ್ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಇಲ್ಲಿದೆ ಡಿಟೇಲ್ಸ್. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ …
Read More »ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಕೆಲ ದಿನಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿತ್ತು. ಈ ಮೀಸಲಾತಿ ಹೆಚ್ಚಳದ ಅನ್ವಯ ನೇರನೇಮಕಾತಿ, ಮುಂಬಡ್ತಿಯಲ್ಲಿ ಅವಕಾಶ ನೀಡೋ ಸಲುವಾಗಿ, ಈಗ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ( Direct Recruitment, Promotion ) ತಡೆ ನೀಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ( Karnataka Chief Secretory Vandita …
Read More »ಸಿಹಿ ಬೆಳೆದ ಅನ್ನದಾತರಿಗೆ ಕಹಿ ಅನುಭವ
ಕಬ್ಬು ಬೆಳೆಗಾರರ ಸಮಸ್ಯೆ ಪ್ರತೀವರ್ಷವೂ ಕಗ್ಗಂಟು. ಸಕ್ಕರೆ ಕಾರ್ಖಾನೆ ಮಾಲಕರು ಹಾಗೂ ಬೆಳೆಗಾರರ ನಡುವೆ ಬೆಲೆ ತಿಕ್ಕಾಟ ಸಾಮಾನ್ಯವಾಗಿ ಬಿಟ್ಟಿದೆ. ಕೃಷ್ಣಾ ತೀರದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಲೇ ಇರುತ್ತದೆ. ಸರಕಾರವೇ ಮಧ್ಯಸ್ಥಿಕೆ ವಹಿಸಿದರೂ ಪರಿಹಾರ ಎಂಬುದು ಮರೀಚಿಕೆಯಾಗಿದೆ. ಈ ವರ್ಷವೂ ಪ್ರತಿಭಟನೆ ಕಾವು ತುಸು ಹೆಚ್ಚೇ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 50 ದಿನಗಳಿಂದ ಹೋರಾಟದ ಕಿಚ್ಚು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಂಘರ್ಷ, ಸಂಧಾನದ …
Read More »ಖಾನಾಪುರ ಬಳಿ ಟೆಂಪೋ ಪಲ್ಟಿ: 30 ಜನರಿಗೆ ಗಾಯ
ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 30 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಯಳ್ಳೂರ ಕೆಎಲ್ಇ ಚಾರಿಟೇಬಲ್ ಆಸ್ಪತ್ರೆ ಮತ್ತು ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಎಲ್ಲರೂ ಹುದಲಿ ಗ್ರಾಮದವರಾಗಿದ್ದು, ಗರ್ಲಗುಂಜಿಗೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
Read More »ಸಿಐಟಿಯು ರಾಜ್ಯಾಧ್ಯಕ್ಷೆ ಕಾರು ಘಾಟಿಯಲ್ಲಿ ಅಪಘಾತ: ಪಾರು
ಕುಂದಾಪುರ: ಇಲ್ಲಿ ಮೂರು ದಿನಗಳ ಕಾಲ ನಡೆದ ಸಿಐಟಿಯುವಿನ 15ನೇ ರಾಜ್ಯ ಸಮ್ಮೇಳನ ಮುಗಿಸಿ ಗುರುವಾರ ರಾತ್ರಿ ಹಾಸನಕ್ಕೆ ಹೋಗುತ್ತಿದ್ದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರ ಕಾರು ಆಗುಂಬೆಯಲ್ಲಿ ಅಪಘಾತಕ್ಕೊಳಗಾಗಿದೆ. ಧರ್ಮೇಶ್ ಅವರು ಕಾರು ಚಲಾಯಿಸುತ್ತಿದ್ದು, ಆಗುಂಬೆ ಘಾಟ್ ನಂತರ ಜಯಪುರದಿಂದ ಆಲ್ದೂರಿಗೆ 5 ಕಿ.ಮೀ. ಇದೆ ಎನ್ನುವಾಗ ರಾತ್ರಿ 10.30ರ ಸುಮಾರಿಗೆ ಕಾರು ರಸ್ತೆ ಬಿಟ್ಟು ಪ್ರಪಾತದೆಡೆಗೆ ಹೋಗಿದೆ. 50ಅಡಿಗಿಂತ ಹೆಚ್ಚು ಕೆಳಗಿಳಿದಿತ್ತು. ಮಾಹಿತಿ ತಿಳಿಸಲು ನೆಟ್ವರ್ಕ್ ಕೂಡಾ …
Read More »ಮತದಾರರ ಗೌಪ್ಯತೆ: ಪಾರದರ್ಶಕವಾಗಿ ತನಿಖೆ ನಡೆಯಲಿ
ಬೆಂಗಳೂರಿನ 28 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ದೊಡ್ಡ ಗದ್ದಲವೇ ಏರ್ಪಟ್ಟಿದ್ದು, ರಾಜ್ಯ ಸರಕಾರ ಭಾರೀ ಚುನಾವಣ ಅಕ್ರಮ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಗುರುವಾರ ಬೆಳಗ್ಗೆಯಿಂದಲೂ ರಾಜ್ಯದಲ್ಲಿ ಇದೇ ಸುದ್ದಿ ದೊಡ್ಡ ಸದ್ದು ಮಾಡಿದ್ದು, ಚುನಾವಣ ಅಕ್ರಮ ಮಾಡುವ ಸಲುವಾಗಿಯೇ ಮತದಾರರ ಗೌಪ್ಯತೆ ಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ನೇರವಾಗಿಯೇ ಆರೋಪಿಸುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಹೊತ್ತಿರುವ …
Read More »“ಕಾಶ್ಮೀರ್ ಫೈಲ್ಸ್’ನ ಗಳಿಕೆ ದಾಖಲೆ ಮುರಿದ “ಕಾಂತಾರ’
ಮುಂಬೈ: ಬಾಕ್ಸ್ ಆಫಿಸ್ನಲ್ಲಿ ಹಿಂದಿ ಅವತರಿಣಿಕೆಯ “ಕಾಂತಾರ’ ಸಿನಿಮಾದ ಅಬ್ಬರ ಮುಂದುವರಿದಿದೆ. ಬಾಕ್ಸ್ ಆಫಿಸ್ ಗಳಿಕೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾದ “ಕಾಶ್ಮೀರ್ ಫೈಲ್ಸ್’ನ ಎಲ್ಲಾ ದಾಖಲೆಗಳನ್ನು ಕಾಂತಾರಾ ಸಿನಿಮಾ ಮುರಿದಿದೆ. ಗಳಿಕೆಯಲ್ಲಿ ಶೇ. 1,000 ಪಟ್ಟು ಲಾಭ ಗಳಿಸುವ ನಿಟ್ಟಿನಲ್ಲಿ ದಾಪುಗಾಲು ಹಾಕುತ್ತಿದೆ. ರಿಷಭ್ ಶೆಟ್ಟಿ ನಿರ್ದೇಶನ ಮತ್ತು ನಟ ನೆಯ ಕಾಂತಾರ ಸಿನಿಮಾದ ಹಿಂದಿ ಅವ ತರಿಣಿಕೆಯು ಸೆ.30ರಂದು ಬಿಡುಗಡೆಯಾ ಯಿತು. ಈಗಾಗಲೇ ಕೆಜಿಎಫ್-2 ಸಿನಿಮಾದ ದಾಖಲೆಗಳನ್ನು ಕಾಂತಾರ …
Read More »ರೈತರ ಆಕ್ರೋಶಕ್ಕೆ ಕಾರಣವಾಗಿದೆ ಲೈಲಾ ಶುಗರ್ಸ ಕಾರ್ಖಾನೆ
ಖಾನಾಪುರದ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಪೂರೈಕೆ ಮಾಡಿದ ರೈತರು ಸಕ್ಕರೆ ಪಡೆಯಲು ಪರದಾಡಿದ ಘಟನೆ ನಡೆದಿದೆ. ಹೌದು ಮಹಾಲಕ್ಷ್ಮೀ ಗ್ರುಪ್ ಸಂಚಾಲಿತ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಳೆದ ದಿನಾಂಕ 14ರಿಂದ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಟನ್ 25 ರೂಪಾಯಿ ದರದಲ್ಲಿ ಸಕ್ಕರೆ ಪಡೆದುಕೊಳ್ಳುವ ವ್ಯವಸ್ಥೆ ಮಾಡಿಕೊಡಲಾಗಿತ್ತು. ಆದರೆ ತಾಲೂಕಿನ ಗಡಿಭಾಗ ಸೇರಿದಂತೆ ತಾಲೂಕಿನ ಬೇರೆ ಕಡೆಯಿಂದ ಬಂದು ತಮ್ಮ ಸ್ಲೀಪ್ ತೋರಿಸಿ ಆಧಾರ್ ಕಾರ್ಡ್ …
Read More »
Laxmi News 24×7