Home / ರಾಜ್ಯ (page 1539)

ರಾಜ್ಯ

ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‌ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರದಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಲೋಳಸೂರ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿ.ಜಿ, ಮಸಗುಪ್ಪಿ …

Read More »

ಉಗ್ರರ ಉಪಟಳಕ್ಕೆ ಲಗಾಮು ಹಾಕುವುದು ಅನಿವಾರ್ಯ

ಅಫ್ಘಾನಿಸ್ತಾನವನ್ನು ತಾಲಿಬಾನಿ ಗುಂಪು ವಶಕ್ಕೆ ಪಡೆದ ಬಳಿಕ, ಕೆಲ ಗಂಟೆಗಳ ಕಾಲ ಶಾಂತಿ ಪ್ರಿಯವಾಗಿದ್ದೇವೆ ಎನ್ನುವ ಮಾತನ್ನು ಹೇಳಿಕೊಂಡಿತ್ತು. ಈ ಮಾತು ತಾಲಿಬಾನ್ ಉಗ್ರರು ಹೇಳಿದಾಗ ಬಹುತೇಕ ರಾಷ್ಟ್ರಗಳು ಒಪ್ಪದಿದ್ದರೂ, ಬಹುತೇಕ ರಾಷ್ಟ್ರಗಳು ತಟಸ್ಥ ನೀತಿಯನ್ನು ಅನುಸರಿಸಿದ್ದವು.   ಆದರೆ ಅಧಿಕಾರ ಹಿಡಿದ ಮರುದಿನವೇ ತಮ್ಮ ಉಪಟಳವನ್ನು ತೋರಿಸಲು ಶುರುಮಾಡಿರುವ ತಾಲಿಬಾನ್ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕಗೆ ಗುಡುವು ನೀಡಿದೆ. ಇದಿಷ್ಟೇ ಅಲ್ಲದ್ದೇ, ಅಫ್ಘಾನಿಸ್ತಾನ ದಲ್ಲಿ ಅರಾಜಕತೆ ಸೃಷ್ಟಿಸಿ, ನೂರಾರು …

Read More »

ದುರಹಂಕಾರದಿಂದ ಸಿಎಂ ಸ್ಥಾನ ಕಳೆದುಕೊಂಡ ಎಚ್‌ಡಿಕೆ: ಕೃಷಿ ಸಚಿವ ಬಿ.ಸಿ.ಪಾಟೀಲ

ಹಾವೇರಿ: ‘ಎಚ್‌.ಡಿ.ಕುಮಾರಸ್ವಾಮಿ ತಮ್ಮ ದುರಹಂಕಾರ ಮತ್ತು ಸ್ವೇಚ್ಛಾಚಾರದಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆಯೇ ಹೊರತು ಬೇರೆ ಯಾರೂ ಕಳೆದಿಲ್ಲ. ಸಿ.ಎಂ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು. ರಟ್ಟೀಹಳ್ಳಿ ತಾಲ್ಲೂಕಿನ ಮದಗ ಮಾಸೂರು ಕೆರೆಗೆ ಮಂಗಳವಾರ ಬಾಗಿನ ಅರ್ಪಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಸ್ವಾರ್ಥ ಭಾವನೆಯಿಂದ ಎರಡು ಮೂರು ಜಿಲ್ಲೆಗಳಿಗೆ ಸೀಮಿತವಾದ ಆಡಳಿತ ನೀಡಿ, ಇಡೀ ಕರ್ನಾಟಕಕ್ಕೆ ಅನ್ಯಾಯ ಮಾಡಿದರು. …

Read More »

ಲಿಂಗಾಯತ ಧರ್ಮ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ: ಎಂ.ಬಿ.ಪಾಟೀಲ್

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿಲ್ಲ. ಈ ಹೋರಾಟವೂ ನನ್ನಿಂದ ಆರಂಭಗೊಂಡಿಲ್ಲ.‌ ವೀರಶೈವ ಮಹಾಸಭೆ ಆರಂಭಿಸಿದ್ದ ಹೋರಾಟವನ್ನು ನಾವು ಮುಂದುವರೆಸಿದ್ದು ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮದೇ ಪಕ್ಷದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನಾನು ಮಾಡಿದ ನೀರಾವರಿ ಯೋಜನೆ ಸಾಧನೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಹೊಟ್ಟೆಕಿಚ್ಚಿನಿಂದ ಅನಗತ್ಯವಾಗಿ ನನ್ನ …

Read More »

58 ವಾರ್ಡಗಳಿಗೆ ಚುನಾವಣೆ ,ಮತದಾನದ ಅವಧಿ ಒಂದು ಗಂಟೆ ವಿಸ್ತರಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 2021 ರ ಕುರಿತು 58 ವಾರ್ಡಗಳಿಗೆ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರನ್ನು ನಿಯೋಜಿಸಿಲಾಗಿದೆ. ಭೂ ಸ್ವಾಧೀನ (ಪು.ವ.ಮತ್ತು ಪುನಿ) ಬೃಹತ್ ನೀರಾವರಿ ಯೋಜನೆಗಳ ವಿಶೇಷ ಜಿಲ್ಲಾಧಿಕಾರಿಗಳಾದ ಗೀತಾ ಕೌಲಗಿ (ಮೊ. ಸಂಖ್ಯೆ-9448933533) ಅವರನ್ನು ವಾರ್ಡ ಸಂಖ್ಯೆ 1 ರಿಂದ 29 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ. ಅದೇ ರೀತಿ, ಕೃಷಿ ಇಲಾಖೆಯ …

Read More »

ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ

ನವ ದೆಹಲಿ : ದೇಶದಾದಯಂತ ನಡೆಯುತ್ತಿರುವ ಲಸಿಕಾ ಅಭಿಯಾನಕ್ಕೆ ವೇಗ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿತ್ಯ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಮೈ ಗವರ್ನಮೆಂಟ್ ನೊಂದಿಗೆ ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಲ್ಲಿ ಒಂದಾದ ವಾಟ್ಸ್ಯಾಪ್ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಿದೆ. ಇನ್ಮುಂದೆ ಯಾವುದೇ ವಾಟ್ಸ್ಯಾಪ್ ಬಳಕೆದಾರರು ಲಸಿಕೆ ಪಡೆಯಲು ತಮ್ಮ ಸ್ಲಾಟ್ ಗಳನ್ನು ವಾಟ್ಸ್ಯಾಪ್ ನಲ್ಲಿಯೇ ಬುಕ್ ಮಾಡಬಹುದಾಗದೆ. ಈ ಬಗ್ಗೆ ತಮ್ಮ ಅಧಿಕೃತ …

Read More »

ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಕಾಂಗ್ರೆಸ್‍ನ ಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರದ ಕಾಂಗ್ರೆಸ್‍ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್‍ಗೆ ಇರುವ ಒಂದು ಮಾದರಿ ಎಂದರು. ಡಿಕೆ ಶಿವಕುಮಾರ್ ಅವರು ಬೆಳೆದ ಬಂದ …

Read More »

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ

ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು. ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು …

Read More »

ಬೆಂಗಳೂರಿನಲ್ಲಿ ನಟ ‘ಅಮಿತಾಬ್ ಬಚ್ಚನ್’ ಕಾರ್ ಸೀಜ್!

ಬೆಂಗಳೂರು : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹೆಸರಿನಲ್ಲಿ ನೊಂದಣಿಯಾಗಿದ್ದ ಕಾರನ್ನು ಬೆಂಗಳೂರಿನಲ್ಲಿ ಸೀಜ್ ಮಾಡಲಾಗಿದೆ. ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಹೆಸರಲ್ಲಿ ನೋಂದಣಿಯಾಗಿದ್ದ ಸೂಕ್ತ ದಾಖಲೆ ಇಲ್ಲದ ರೋಲ್ಸ್ ರಾಯ್ಸ್ ಕಾರನ್ನು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಅಮಿತಾಬ್ ಬಚ್ಚನ್ ಹೆಸರಲ್ಲಿ ನೋಂದಣಿ ಆಗಿದ್ದ ಕಾರನ್ನು ಬೆಂಗಳೂರಿನ ಯುಬಿ ಸಿಟಿಯಲ್ಲಿ ಸೀಜ್ ಮಾಡಲಾಗಿದೆ. MH 02, BB 2 ಸಂಖ್ಯೆಯ ರೋಲ್ಸ್ ರಾಯ್ಸ್ ಕಾರು …

Read More »

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರದಂದು ನಡೆಸಿದ ಸಿನಿಮೀಯ ಶೈಲಿ ಕಾರ್ಯಾಚರಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರದಂದು ನಡೆಸಿದ ಸಿನಿಮೀಯ ಶೈಲಿ ಕಾರ್ಯಾಚರಣೆಯೊಂದರಲ್ಲಿ ಕಾಶ್ಮೀರದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಅಬ್ಬಾಸ್ ಶೇಖ್ ಹಾಗೂ ಅವನ ಸಹರನೊಬ್ಬನನ್ನು ಕೊಂದಿದ್ದಾರೆ. ಲಷ್ಕರ್-ಎ-ತೊಯ್ಬಾದ ಟಾಪ್ ಕಮಾಂಡರ್ ಅಗಿದ್ದ ಶೇಖ್ ಮತ್ತು ಅವನೊಂದಿಗಿದ್ದ ಮತ್ತೊಬ್ಬನನ್ನು ಮಫ್ತಿಯಲ್ಲಿದ್ದ ಪೊಲೀಸರು ಗುಂಡಿಟ್ಟು ಕೊಂದರು. ಕೇಂದ್ರಾಡಳಿತ ಪ್ರದೇಶ ರಾಜಧಾನಿಯ ಅಲೂಚಿ ಬಾಗ್ ಪ್ರದೇಶದಲ್ಲಿ ಸಾದಾ ಉಡುಪಿನಲ್ಲಿದ್ದ 10 ಜನ ಪೊಲೀಸರು ಉಗ್ರರನ್ನು ಸುತ್ತುವರಿದು ಕೊಂದು ಹಾಕಿದರು. ಕಾಶ್ಮೀರ ಪೊಲೀಸ್ …

Read More »