Breaking News
Home / ರಾಜ್ಯ (page 1542)

ರಾಜ್ಯ

ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ-ಕಮಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ಚುನಾವಣೆಯ ಕಾವು ರಂಗೇರುತ್ತಿದೆ. ಸೆಪ್ಟೆಂಬರ್ 3 ರಂದು 58 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ನಡುರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿಯಿಂದ ರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ 21 ಜನರ ಅಭ್ಯರ್ಥಿಗಳ ಮೊದಲ ಹಂತದ ಮೊದಲ …

Read More »

ಬೆಳಗಾವಿ :ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ 28 ಜನರ ಬಂಧನ ನಗದು ಜಪ್ತಿ: ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ–  ಮೂರು ಕಡೆಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 28 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾ್ರೆ. ದಿ. 21/08/2021 ರಂದು ರಾತ್ರಿ  ಅಂಬೇಡ್ಕರ ನಗರದ ಸಾವ೯ಜನಿಕ ಸ್ಥಳದಲ್ಲಿ ಕುಳಿತುಕೊಂಡು  ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಣಕ್ಕೆ ಕಟ್ಟಿ ಅಂದರ ಬಾಹರ್ ಅನ್ನುವ ಜುಗಾರ ಆಟ ಆಡುತ್ತಿರುವವರ ದಾಳಿ ಮಾಡಿದ್ದು, ದಾಳಿ ಕಾಲಕ್ಕೆ 10 ಜನ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ.  ಅವರಿಂದ  …

Read More »

ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದರು; ಸ್ಥಳದಲ್ಲೇ ಸಾವಿಗೀಡಾದ ದಂಪತಿ

ಆನೇಕಲ್: ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತ ಎರಡು ಜೀವಗಳನ್ನು ಬಲಿ ಪಡೆದಿದ್ದು, ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದಂತಾಗಿದೆ. ಆನೇಕಲ್ ತಾಲೂಕಿನ ಚೂಡಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು. ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು …

Read More »

‘2ಎ’ಗೆ ಪಂಚಮಸಾಲಿ ಸೇರ್ಪಡೆಗೆ ವಿರೋಧ

ತುಮಕೂರು: ಹಿಂದುಳಿದ ಪ್ರವರ್ಗ 2ಎಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆಮಾಡಿ, ಮೀಸಲಾತಿ ಕಲ್ಪಿಸಬಾರದು. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಜನರ ಮುಂದಿಡಬೇಕು ಎಂದು ಅತಿ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಒಮ್ಮತದಿಂದ ಒತ್ತಾಯಿಸಿದರು. ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ನೇತೃತ್ವದಲ್ಲಿ ಶನಿವಾರ ನಡೆದ ಹಿಂದುಳಿದ ವರ್ಗಗಳ ಜಾಗೃತಿ ಸಭೆಯಲ್ಲಿ ಮಾತನಾಡಿದ ಮುಖಂಡರು, ‘ಸದಾಶಿವ ಆಯೋಗದ ವರದಿಯಲ್ಲಿ ಒಳಮೀಸಲಾತಿ ಪ್ರಸ್ತಾಪಿಸಿ ರುವ ಮಾದರಿಯಲ್ಲಿ ಹಿಂದುಳಿದ …

Read More »

ಫೇಸ್​ಬುಕ್​ನಲ್ಲಿ ಪರಿಚಯವಾದ ಮಹಿಳೆಯಿಂದ ವಿಡಿಯೋ ಕಾಲ್‌ನಲ್ಲಿ ಅಸಭ್ಯ ವರ್ತನೆ, ಹಣಕ್ಕಾಗಿ ಬೆದರಿಕೆ: ಬಿಜೆಪಿ ಮುಖಂಡನಿಂದ ದೂರು

ಬೆಂಗಳೂರು: ಬಿಜೆಪಿ ಮುಖಂಡ, ಡಾ.ಅಂಬೇಡ್ಕರ್ ಫೌಂಡೇಷನ್‌ ನಿರ್ದೇಶಕ ಚಿ.ನಾ.ರಾಮು ತಮಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಒಡ್ಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿ ಫೋನ್‌ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಪರಿಚಯವಾಗಿದ್ದ ಮಹಿಳೆ ಮೊಬೈಲ್ ನಂಬರ್ ಪಡೆದು ವಿಡಿಯೋ ಕಾಲ್ ಮಾಡಿದ್ದಳು. ವಿಡಿಯೋ ಕಾಲ್‌ನಲ್ಲಿ ಅಸಭ್ಯವಾಗಿ ವರ್ತಿಸಿದ್ದಳು. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಒಡ್ಡುತ್ತಿದ್ದಾನೆ. ‘ಯುವತಿಯೊಂದಿಗೆ ನಗ್ನವಾಗಿರುವ ವಿಡಿಯೋ …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಮುಂದಿನ ನಡೆ ಏನು?

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ (Vinay Kulkarni) ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಇದೀಗ ಜಾಮೀನು ಮೇಲೆ ಬಿಡುಗಡೆ ಆಗಿದ್ದಾರೆ. ಆದರೆ ಅವರು ಧಾರವಾಡ ಜಿಲ್ಲೆಗೆ ಹೋಗುವಂತಿಲ್ಲ ಅಂತಾ ಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಅವರು ಬೆಂಗಳೂರಿನಲ್ಲಿಯೇ ಇರಬೇಕು ಅನ್ನುವುದು ಕೂಡ ನ್ಯಾಯಾಲಯದ ಆದೇಶದಲ್ಲಿ ಸ್ಪಷ್ಟವಾಗಿದೆ. ಹಾಗಾದರೆ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ ಎಲ್ಲಿಗೆ ಹೋದರು ಎನ್ನುವುದು ಇದೀಗ ಕುತೂಹಲ ಮೂಡಿಸಿದೆ. …

Read More »

ಮೈಸೂರು ದಸರಾಗೆ ಭರ್ಜರಿ ತಯಾರಿ.. ನಾಡ ಹಬ್ಬಕ್ಕೆ ಮೆರಗು ನೀಡಲು ಗಜಪಡೆ ರೆಡಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗಜಪಡೆ ಆಯ್ಕೆಯ ಕಸರತ್ತಿನಲ್ಲಿ ತೊಡಗಿದೆ. 4 ಆನೆ, ಕ್ಯಾಂಪ್‌ಗಳಿಗೆ ತೆರಳಿ 11 ಗಂಡಾನೆ, 3 ಹೆಣ್ಣಾನೆಯುಳ್ಳ ತಾತ್ಕಾಲಿಕ ಪಟ್ಟಿ ರೆಡಿಯಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಸಾಲಿನ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಇಂದಿನಿಂದ ಆರಂಭಿಸಿದೆ. ಮೈಸೂರು ವನ್ಯಜೀವಿ ಭಾಗದ ಡಿಸಿಎಫ್ ಡಾ. ವಿ.ಕರಿಕಾಳನ್, ಪಶುವೈದ್ಯರಾದ ಡಾ.ರಮೇಶ್, ಡಾ.ಚಿಟ್ಟಿಯಪ್ಪ ಹಾಗೂ …

Read More »

ಜಿಮ್​​ನಲ್ಲಿ ಒಟ್ಟಿಗೇ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ, ದೇವರಕೊಂಡ

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಜೋಡಿ ಟಾಲಿವುಡ್​ ಅಂಗಳದಲ್ಲಿ ಈಗಾಗಲೇ ಸಖತ್​ ಫೇರ್ ಎನಿಸಿಕೊಂಡಿದೆ. ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಸಿನಿಮಾಗಳ ಬಳಿಕ ಈ ಜೋಡಿ ಸಿನಿ ಪ್ರೇಕ್ಷಕರ ಹೃದಯವನ್ನ ಗೆದ್ದಿತ್ತು. ಇನ್ನು ಇಬ್ಬರ ಸಂಬಂಧದ ಬಗ್ಗೆ ಅಂತೆ ಕಂತೆಗಳು ಆಗಾಗ ಕೇಳೆ ಬರುತ್ತಲೇ ಇರುತ್ತೆ. ಸದ್ಯ ಇಬ್ಬರು ಈಗ ಒಟ್ಟಿಗೆ ಸಿನಿಮಾ ಮಾಡದೆ ಇದ್ದರೂ ಕೂಡ ವಿಜಯ್​, ರಶ್ಮಿಕಾ ಅಗಾಗ ಭೇಟಿಯಾಗಿ ಸದಾ ಸುದ್ದಿಯಾಗುತ್ತಾರೆ. ಇದೀಗ ರಶ್ಮಿಕಾ …

Read More »

ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ.. ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಭಕ್ತಿಯ ಝೇಂಕಾರ

ರಾಯಚೂರು: ಕಲಿಯುಗದ ಕಾಮಧೇನು.. ಬೇಡಿದ ವರ ಕರುಣಿಸೋ.. ತುಂಗಾ ತೀರದಿ ನೆಲೆಸಿದ ಪ್ರಭು, ಶ್ರೀ ರಾಘವೇಂದ್ರ ಸ್ವಾಮಿಗಳು. ಸದಾ ಭಕ್ತಿಯ ಝೇಂಕಾರ ತುಂಬಿ ತುಳುಕೋ ರಾಯರ ಸನ್ನಿಧಿಯಲ್ಲಿ ನಿನ್ನೆಯಿಂದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೀತಾ ಇದೆ. ಸ್ವಾಮಿಯ ಭಕ್ತಗಣ ತುಂಗೆಯಲ್ಲಿ ಮಿಂದೆದ್ದು ರಾಯರ ದರ್ಶನ ಪಡೆದು ಪುನೀತರಾದ್ರು.     ರಾಯರ ಆವರಣದಲ್ಲಿ ಬಣ್ಣ ಬಣ್ಣದ ದೀಪಗಳಿಂದ ಅಲಂಕಾರ.. ವಿವಿಧ ವಾದ್ಯಗಳಿಂದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಭಕ್ತಿಯ ಝೇಂಕಾರ.. ತುಂಗಾ …

Read More »

ತಾಲಿಬಾನ್ ಜೊತೆಗೆ ಪಾಕ್​ ISI ಮುಖ್ಯಸ್ಥನ ಕಳ್ಳಾಟ.. ಅಫ್ಘಾನ್ ಅರಾಜಕತೆಯ ಹಿಂದೆ ಪಾಕ್ ಕೈವಾಡ?

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿ ಇಂದಿಗೆ ಒಂದು ವಾರವಾಗ್ತಿದೆ. ಒಡಲಾಳದಲ್ಲಿ ಸಾಕಷ್ಟು ನೋವು, ಹತಾಶೆ, ವಿಕೃತಿಯ ಹುದುಗಿಸಿಕೊಂಡಿರುವ ಆ ದೇಶದಲ್ಲೀಗ ನರರಾಕ್ಷಸರದ್ದೇ ಪಾರುಪತ್ಯ.. ಆದ್ರೆ, ಇವೆಲ್ಲಾ ಅಮಾನವೀಯತೆಯ ಹಿಂದೆ ಪಾಕಿಸ್ತಾನದ ಐಎಸ್​ಐ ಕೈವಾಡ ಇದೆ ಅಂತಾ ಹೇಳಲಾಗ್ತಿತ್ತು.. ಬಟ್​ ಈಗ ಅದು ಕನ್ಫರ್ಮ್​ ಆಗಿದೆ. ತಾಲಿಬಾನ್ ಉಗ್ರರ ಅಟ್ಟಹಾಸಕ್ಕೆ ಬೆಟ್ಟ ಗುಡ್ಡಗಳ ದೇಶ ಅಫ್ಘಾನಿಸ್ತಾನ ತತ್ತರಿಸಿ ಹೋಗ್ತಿದೆ. ಇವತ್ತಿಗೆ ಸರಿಯಾಗಿ ಒಂದು ವಾರದ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದ ಅಫ್ಘಾನಿಸ್ತಾನವನ್ನು …

Read More »