Breaking News

ರಾಜ್ಯ

ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಸತೀಶ ಜಾರಕಿಹೊಳಿ ಬಹಿರಂಗ ಸವಾಲು

ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಿಎಂ ಬೊಮ್ಮಾಯಿ ಅವರು ಒಂದು ಕಮೀಟಿ ರಚನೆ ಮಾಡಲಿ. ಈ ಸಮೀತಿ ಒಂದು ತಿಂಗಳಲ್ಲಿ ವರದಿ ಕೊಟ್ಟು, ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಹೌದು ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಸಮಾವೇಶದಲ್ಲಿ ಹಿಂದೂ ಶಬ್ದದ ಬಗ್ಗೆ ಸತೀಶ ಜಾರಕಿಹೊಳಿ …

Read More »

ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ; H.D.K.

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು ಪ್ರಕರಣದ ಸಂಬಂಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ ಸರ್ಕಾರಿ ಆಸ್ಪತ್ರೆ ಕಾರ್ಯವೈಖರಿಯ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಸಮಸ್ಯೆ ಹಲವಾರಿದೆ. ಸಿಬ್ಬಂದಿಗಳ ನಡವಳಿಕೆಯನ್ನು ನೋಡಿ, ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.   ಜನರು ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳಲು ಪ್ರಮುಖ ಹುದ್ದೆಗಳ ಮೇಲೆ ಸರ್ಕಾರ ತೆಗೆದುಕೊಳ್ಳುತ್ತಿರುವ ನೀತಿಗಳು ಕಾರಣ. ಇದರಿಂದಾಗಿ ಎಲ್ಲರೂ ಆಸ್ಪತ್ರೆಯ ಮೇಲಿನ …

Read More »

ಕೆಲವೇ ತಿಂಗಳುಗಳಲ್ಲಿ ಜನರೇ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವೇ ತಿಂಗಳುಗಳಲ್ಲಿ ಜನರೇ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ. ಆಡಳಿತ ಸರ್ಕಾರವನ್ನು ಸೋಲಿಸುವ ಮೂಲಕ ನಿಮಗೆ ಗೌರವ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಯ ನೀಡಿದ್ದಾರೆ.   ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪಕ್ಷದ ಹಿರಿಯ ನಾಯಕರಾಗಿ ನಮಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದೀರಿ. …

Read More »

ನ.11ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಕಾರ್ಯಕ್ರಮ ಎಲ್ಲೆಲ್ಲಿ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನ. 11ರಂದು ಬೆಂಗಳೂರು ನಗರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಕಾರ್ಯಕ್ರಮಗಳ ವಿವರ ಇಂತಿದೆ‌. 1. ಶಾಸಕರ ಭವನದ ಆವರಣದಲ್ಲಿರುವ ಶ್ರೀ ಕನಕದಾಸ ಪುತ್ಥಳಿಗೆ ಮಾಲಾರ್ಪಣೆ. 2. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ. (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ) 3. ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್-2 ಲೋಕಾರ್ಪಣೆ. 4. ನಾಡಪ್ರಭು …

Read More »

ರಾಹುಲ್​ ಹೋದಲ್ಲಿ ಕಾಂಗ್ರೆಸ್​ಗೆ ಸೋಲು: B.S.Y.

ಉಡುಪಿ: ಪ್ರಧಾನ ನರೇಂದ್ರ ಮೋದಿ ಅವರ ಮುಂದೆ ರಾಹುಲ್​ ಗಾಂಧಿ ಬಚ್ಚಾ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಲೇವಡಿ ಮಾಡಿದರು. ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಸೋಮವಾರ ಹಮ್ಮಿಕೊಂಡ ‘ಜನಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್​ನ​ ಕೆಲ ನಾಯಕರು ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಅವರಿಗೆ ವಾಸ್ತವ ಸಂಗತಿ ತಿಳಿಸಲಿದ್ದೇವೆ. ಮೋದಿ ಟೀಕಿಸುವ ನೈತಿಕತೆ ಅವರಿಗೆ ಇಲ್ಲ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದರು. ಮೋದಿ ಪ್ರಧಾನಿಯಾಗಿ 8 …

Read More »

ವಿಕೋಪಕ್ಕೆ ತಿರುಗಿದ ಪ್ರತಿಭಟನೆ: ಸಿಪಿಐ ಎದೆಗೇ ಬಿತ್ತು ಪ್ರತಿಭಟನಾಕಾರರು ಎಸೆದ ಕಲ್ಲು, ಪೊಲೀಸರಿಗೆ ಗಾಯ

ಬಾಗಲಕೋಟೆ: ಕಬ್ಬು ಬೆಲೆ ನಿಗದಿ ವಿಚಾರವಾಗಿ ಬಾಗಲಕೋಟೆಯ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತೆರಳಿದ್ದು, ಕಲ್ಲು ತೂರಾಟವೂ ನಡೆದಿದೆ. ಮಾತ್ರವಲ್ಲ, ಇನ್​ಸ್ಪೆಕ್ಟರ್ ಸೇರಿ ಮೂವರು ಪೊಲೀಸರಿಗೆ ಗಾಯವಾಗಿದೆ. ಬಾಗಲಕೋಟೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಎದುರು ಕಬ್ಬು ಬೆಲೆ ನಿಗದಿ ವಿಚಾರವಾಗಿ ರೈತರ ಪ್ರತಿಭಟನೆ ನಡೆಸುತ್ತಿದ್ದು, ಅದು ಇದೀಗ ವಿಕೋಪಕ್ಕೂ ತಿರುಗಿದೆ. ಪ್ರತಿಭಟನಾಕಾರರು ಎಸೆದ ಕಲ್ಲು ಸರ್ಕಲ್ ಪೊಲೀಸ್ ಇನ್​ಸ್ಪೆಕ್ಟರ್ ಎದೆಗೇ ಬಿದ್ದಿದ್ದು, ಅವರೂ ಸೇರಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. …

Read More »

ಮೈಸೂರಿಗೆ ಬಂದ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲು

ಮೈಸೂರು: ಚೆನ್ನೈ- ಬೆಂಗಳೂರು- ಮೈಸೂರು ವಂದೇಭಾರತ್ ಎಕ್ಸ್ ಪ್ರೆಸ್ ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿತು. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ.   ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರವು ಸೋಮವಾರ ನಡೆಯಿತು. ರೈಲನ್ನು ಮೊದಲ …

Read More »

ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ವೃದ್ಧೆಯ ಮೇಲೆ ಜೇನು ದಾಳಿ

ಭತ್ತದ ಕಟಾವಿಗೆ ಗದ್ದೆಗೆ ಹೋಗಿದ್ದ ವೃದ್ಧ ರೈತ ಮಹಿಳೆ ಓರ್ವರಿಗೆ ಜೇನು ಹುಳು ಕಚ್ಚಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ನಡೆದಿದೆ. ಯಳ್ಳೂರ ಗ್ರಾಮದ 70 ವರ್ಷದ ಚಾಂಗುನಾ ಕೃಷ್ಣಾ ಕುಗಜಿ ಜೇನು ದಾಳಿಯಿಂದ ಗಾಯಗೊಂಡಿರುವ ವೃದ್ಧ ರೈತ ಮಹಿಳೆ. ತಮ್ಮ ಹೊಲದಲ್ಲಿ ಭತ್ತದ ಕಟಾವು ಮಾಡಲು ಬಂದಿದ್ದ ವೇಳೆ ಏಕಾಏಕಿ ಜೇನುಗಳು ದಾಳಿ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ವೃದ್ಧೆಯ ಮುಖ, ಬಾಯಿ ಮತ್ತು ತುಟಿಗಳಿಗೆ …

Read More »

ಡಿಸಿ ಕಚೇರಿ ಆವರಣ ಅಭಿವೃದ್ಧಿಗೆ ಕೂಡಿ ಬಂದ ಭಾಗ್ಯ..!

ಅಂತೂ ಇಂತೂ ಕೊನೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ರಸ್ತೆ, ಚರಂಡಿ ಸೇರಿ ಇನ್ನಿತರ ಅಭಿವೃದ್ಧಿಗೆ ಕಾಲ ಕೂಡಿ ಬಂದಿದ್ದು. ವಿವಿಧ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದೆ. ಹೌದು ಉತ್ತರ ಶಾಸಕ ಅನೀಲ್ ಬೆನಕೆ, ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ್, ಬುಡಾ ಆಯುಕ್ತ ಪ್ರೀತಮ್ ನಸಲಾಪೂರ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಲಿನ ಪ್ರದೇಶ ಹಾಗೂ ಜಿಲ್ಲಾ ಪಂಚಾಯತಿಯಿಂದ ಸರದಾರ್ಸ ಹೈಸ್ಕೂಲ್ ಕ್ಲಾಸ್‍ವರೆಗೆ ರಸ್ತೆ, …

Read More »

ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ

ರಾಜಕೀಯವಾಗಿ ಅತ್ಯಂತ ಕುತೂಹಲಕಾರಿಯಾಗಿರುವ ನಿಪ್ಪಾಣಿ ಮತಕ್ಷೇತ್ರವು ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಮೂಡಿವೆ. ರಾಜ್ಯದಲ್ಲಿ ಸಾಕಷ್ಟು ನೆಲಕಚ್ಚಿರುವ ಜೆಡಿಎಸ್ ಪಕ್ಷದ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ವಿಧಾನಸಭೆಯ ಚುನಾವಣೆಯಲ್ಲಿ ತನ್ನ ಚಾಪನ್ನು ಮೂಡಿಸಲು ಸಾಕಷ್ಟು ಹೋರಾಟ ಮಾಡುತ್ತಿರುವ ಜೆಡಿಎಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಈಗ ರಾಜ್ಯದ ಉಸ್ತುವಾರಿಯನ್ನು ಹೊತ್ತಿರುವ ಜೆ ಡಿ ಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು …

Read More »