ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಸಿಎಂ ಬೊಮ್ಮಾಯಿಯವರು ಉದ್ಘಾಟಿಸಿಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. …
Read More »ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಕರವೇ ಕಾರ್ಯಕರ್ತರು ಪ್ರತಿಭಟನೆ
ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ರಸ್ತೆ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ಹೋರಹಾಕಿದರು. ಕೆಲಹೊತ್ತು ಚಿಕ್ಕೋಡಿ-ಮಿರಜ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು. ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತೆ ಮಾಡುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ …
Read More »ಸಿದ್ದರಾಮಯ್ಯ ಅವರು ಭ್ರಮೆಯಲ್ಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ: ಜನ ಕಾಂಗ್ರೆಸನ್ನು ಗೆಲ್ಲಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ ಎಂದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಐದು ವರ್ಷ ಆಡಳಿತ ಮಾಡಿದಾಗಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ ಎನ್ನುತ್ತಿದ್ದರು. 77 ಸ್ಥಾನಗಳಿಗೆ ಬಂದುನಿಂತರು. ಅಧಿಕಾರ ನಡೆಸಿ ಕಾರ್ಯಕ್ರಮಗಳನ್ನು ಕೊಟ್ಟಾಗಲೇ, ಜನ …
Read More »ಯಾರ ಕಂಡ್ರೆ ಭಯ ಇರುತ್ತೋ ಅವರ ಮೇಲೆ ಕೇಸ್ ಹಾಕ್ತಾರೆ: ಡಿಕೆಶಿ
ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನ ಕ್ರಿಮಿನಲ್ ಮಾಡಿದ್ದಾರೆ. ಯಾರು ಕಂಡ್ರೇ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್ಗಳನ್ನ ಹಾಕುವುದು ತೊಂದರೆ ಕೊಡುವುದು ಮಾಡ್ತಾರೆ. ಹೀಗಾಗಿ ವಿನಯ್ ಕುಲಕರ್ಣಿ ಮೇಲೆ ಪೆÇಲೀಸರು ಬಿ ರಿಪೆÇೀರ್ಟ್ ಸಲ್ಲಿಸಿದ್ದನ್ನ ಸಿಬಿಐಗೆ ಒಪ್ಪಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, …
Read More »ಡಾ.ಪ್ರಭಾಕರ್ ಕೋರೆ ಅವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭವನ್ನು ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಇದೇ ನವೆಂಬರ್ 11ರಂದು
75ನೇ ವರ್ಷಕ್ಕೆ ಕಾಲಿಟ್ಟಿರುವ ಧಣಿವರಿಯದ ಧೀಮಂತ ನಾಯಕರು, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಕೆಎಲ್ಇ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಕೋರೆ ಅವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭವನ್ನು ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಇದೇ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಾಹಿತಿ ನೀಡಿದ್ದಾರೆ. ನಾಗನೂರು ರುದ್ರಾಕ್ಷಿ ಮಠದಲ್ಲಿ ಸೋಮವಾರ ಬೆಳಗಾವಿ ಜಿಲ್ಲೆಯ ಹಲವು ಮಠಾಧೀಶರ ಸಮ್ಮುಖದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಲ್ಇ ನಿರ್ದೇಶಕ …
Read More »ಅಮಿತ್ ಷಾ ಕೂಡ ಕೊಲೆ ಆರೋಪಿಯಾಗಿ ಗಡಿಪಾರು ಆಗಿದ್ದರು: ಸಿದ್ದರಾಮಯ್ಯ ಲೇವಡಿ
ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧ ಹಳಸಿಕೊಂಡು ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನ್ನ ಮತ್ತು ಡಿ.ಕೆ.ಶಿವಕುಮಾರ ಸಂಬಂದ ಚೆನ್ನಾಗಿಯೇ ಇದೆ. ಆದರೆ ಬಿಜೆಪಿಯವರು ಸರಿ ಇಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ …
Read More »ನಾಳೆ ವರ್ಷದ ಎರಡನೆ ಹಾಗೂ ಕೊನೆಯ ಚಂದ್ರಗ್ರಹಣ: ಸ್ಪರ್ಶ ಕಾಲ, ಮೋಕ್ಷ ಕಾಲ ವಿವರ ಇಲ್ಲಿದೆ…
ನಾಳೆ ನವೆಂಬರ್ 8ರಂದು ಸಂಪೂರ್ಣ ಚಂದ್ರಗ್ರಹಣ(Lunar eclipse) ಸಂಭವಿಸಲಿದೆ. ಭಾರತದ ಪ್ರಮುಖ ಸ್ಥಳಗಳಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದೆ. ಬೆಂಗಳೂರು: ನಾಳೆ ನವೆಂಬರ್ 8ರಂದು ಸಂಪೂರ್ಣ ಚಂದ್ರಗ್ರಹಣ(Lunar eclipse) ಸಂಭವಿಸಲಿದೆ. ಭಾರತದ ಪ್ರಮುಖ ಸ್ಥಳಗಳಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದೆ. ಗ್ರಹಣವು ಮಧ್ಯಾಹ್ನ 2.39ಕ್ಕೆ ಸ್ಪರ್ಶಿಸಿ ಅಪರಾಹ್ನ 4.29ಕ್ಕೆ ಉಚ್ಛ್ರಾಯ ಮಧ್ಯ ಸ್ಥಿತಿ ಗೆ ತಲುಪಿ ಸಂಜೆ 6.19ಕ್ಕೆ ಮೋಕ್ಷವಾಗಲಿದೆ. ಚಂದ್ರೋದಯ ಆಗುವುದು ಸಂಜೆ 5.59ಕ್ಕೆ. ಆ ನಂತರ ಕಾಣಿಸುತ್ತದೆ. ಆದರೆ ಮೋಕ್ಷ …
Read More »ಮುರುಘಾ ಶ್ರೀ ಲೈಂಗಿಕ ಕಿರುಕುಳ ಪ್ರಕರಣ ಕುರಿತಂತೆ ಸ್ಪೋಟಕ ಮಾಹಿತಿ ಬಹಿರಂಗ; ಚಾರ್ಜ್ ಶೀಟ್ ನಲ್ಲಿದೆಯಂತೆ ಬೆಚ್ಚಿ ಬೀಳಿಸುವ ಸಂಗತಿ.!
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಈಗಾಗಲೇ ಜೈಲು ಪಾಲಾಗಿದ್ದಾರೆ. ಅವರ ವಿರುದ್ಧ ಈಗ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಮಧ್ಯೆ ವಿಚಾರಣೆ ವೇಳೆ ಲೈಂಗಿಕ ಕಿರುಕುಳಕ್ಕೊಳಗಾದ ಬಾಲಕಿಯರು ಪೊಲೀಸರ ಮುಂದೆ ಬೆಚ್ಚಿ ಬೀಳಿಸುವ ಸಂಗತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದ್ದು, ಇದೆಲ್ಲವೂ ಚಾರ್ಜ್ ಶೀಟ್ ನಲ್ಲಿ …
Read More »ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಇಂದು ಬಹುನಿರೀಕ್ಷಿತ 7 ನೇ ವೇತನ ಆಯೋಗ ರಚನೆ
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಇಂದು ಭರ್ಜರಿ ಸಿಹಿಸುದ್ದಿ ನೀಡುವ ಸಾಧ್ಯತೆ ಇದ್ದು, ಏಳನೇ ವೇತನ ಆಯೋಗ ರಚಿಸಬೇಕೆಂಬ ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆಯಂತೆ ರಾಜ್ಯ ಸರ್ಕಾರ ಇಂದು ಆಯೋಗ ರಚಿಸಿ ಆದೇಶ ಹೊರಡಿಸುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ರಚಿಸುವುದಾಗಿ ಪ್ರಕಟಿಸಿದ್ದರು. ಈಗ ಆಯೋಗ ರಚಿಸುವ ಸಂಬಂಧ ಭಾನುವಾರ …
Read More »ಮದ್ಯದ ನಶೆ ಜೋರು: ಬಿಯರ್ ಪ್ರಿಯರ ಸಂಖ್ಯೆ ಏರಿಕೆ
ಬೆಂಗಳೂರು: ಕಳೆದ ಏಳು ತಿಂಗಳ ಅವಧಿಯಲ್ಲಿ ಮದ್ಯ ಪ್ರಿಯರು ನಶೆಯಲ್ಲಿ ತೇಲಿದ್ದು, ಸರ್ಕಾರಕ್ಕೆ ₹16,948 ಕೋಟಿ ವರಮಾನ ಸಂಗ್ರಹವಾಗಿದೆ. ವಿಸ್ಕಿ, ಬ್ರಾಂದಿ ಮತ್ತು ರಮ್ಗಿಂತ ಬಿಯರ್ ಪ್ರಿಯರೇ ಹೆಚ್ಚಿನ ವರಮಾನ ತಂದುಕೊಟ್ಟಿದ್ದಾರೆ. ಮದ್ಯ (ಐಎಂಎಲ್) ಮತ್ತು ಬಿಯರ್ ಮಾರಾಟದಲ್ಲಿ ಏರಿಕೆ ಕಂಡು ಬಂದಿದ್ದರೂ, ಬಿಯರ್ ಸೇವನೆ ಗಣನೀಯವಾಗಿ ಅಂದರೆ ಶೇ 59.66ರಷ್ಟು ಹೆಚ್ಚಾಗಿದೆ. ಏಪ್ರಿಲ್ನಿಂದ ಅಕ್ಟೋಬರ್ ಅಂತ್ಯದ ತನಕದ ಏಳು ತಿಂಗಳ ಅವಧಿಯಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ …
Read More »
Laxmi News 24×7