Breaking News

ರಾಜ್ಯ

ಸದ್ದು ಮಾಡಿದ ಬೆಳೆ-ಮನೆ ಹಾನಿ, ಭೂಸ್ವಾಧೀನ

ಸವದತ್ತಿ: ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಸಾರ್ವಜನಿಕರ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಬೆಳೆ ಹಾನಿ, ಮನೆ ಹಾನಿ, ಭೂಸ್ವಾಧೀನ ವಿಷಯಗಳು ಭಾರೀ ಸದ್ದು ಮಾಡಿದವು. ಮೂರು ವರ್ಷ ಕಳೆದರೂ ಬೆಳೆ ಹಾನಿ ಪರಿಹಾರ ಸಿಕ್ಕಿಲ್ಲ. ಜಮೀನು ವಾಟ್ನಿ ಕುರಿತು ತಲಾಠಿಗಳು ಸೂಕ್ತ ಕ್ರಮ ವಹಿಸುತ್ತಿಲ್ಲ. ರೈತರ ಪಹಣಿಯಲ್ಲಿ ನೀರಾವರಿ ನಿಗಮದ ಹೆಸರು, ರೈತರ ಕಡೆಗಣನೆ. ಕಾರ್ಖಾನೆಯಲ್ಲಿ ತೂಕ ಮಾಡಿದ ಹಾಗೂ ಪ್ರತ್ಯೇಕವಾಗಿ ಮಾಡಿದ ಕಬ್ಬು ಬೆಳೆ ತೂಕದಲ್ಲಿ ಅತೀವ ವ್ಯತ್ಯಾಸ ಬರುತ್ತಿದೆ …

Read More »

ದ್ರಾಕ್ಷಿ ಬೆಳೆ ಬೆಂಬಿಡದ ರೋಗ ಕಾಟ

ಕೋಹಳ್ಳಿ: ಕಳೆದ ಮೂರ್‍ನಾಲ್ಕು ದಿನಗಳಿಂದ ದಿನಗಳಿಂದ ಸುರಿಯುತ್ತಿರುವ ಮಳೆ, ಮೋಡ ಕವಿದ ವಾತಾವರಣ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬೆಳೆಗೆ ಡೌನಿ ಮಿಲ್ಡಿವ್‌ (ಭೂಜು ತುಪ್ಪಟ) ರೋಗ ತಗುಲಿ ಬೆಳೆ ನಾಶವಾಗುತ್ತಿದೆ.   ಅಥಣಿ ತಾಲೂಕಿನ ಸುಮಾರು 4 ಸಾವಿರ ಹೆಕ್ಟರ್‌ಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತದೆ. ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತದೆ. ಶೇ.70 …

Read More »

ಬೆಳಗಾವಿ: ವಡಗಾವ್‌ನಲ್ಲಿ ಪ್ರತಿದಿನ 2 ಗಂಟೆ ಟಿವಿ, ಮೊಬೈಲ್‌ ಬಂದ್‌!

ಬೆಳಗಾವಿ: ಕೊರೊನಾ ನೆಪದಲ್ಲಿ ಮೊಬೈಲ್‌ ದಾಸರಾಗಿದ್ದ ಜನರನ್ನು ವಿಶೇಷವಾಗಿ ಮಕ್ಕಳನ್ನು ಅದರಿಂದ ಹೊರತರುವಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕಾಡೇಗಾವ್‌ ತಾಲೂಕಿನ ಮೋಹಿತೆ ವಡಗಾವ್‌ ಗ್ರಾಮದ ಮುಖಂಡರು ಯಶಸ್ವಿಯಾಗಿದ್ದಾರೆ. ಒಂದೇ ತಿಂಗಳ ಅವಧಿಯಲ್ಲಿ ಮಾಡಿದ ಗ್ರಾಮದ ಈ ಯಶೋಗಾಥೆ ಈಗ ಇಡೀ ದೇಶದ ತುಂಬಾ ಸದ್ದು ಮಾಡುತ್ತಿದೆ.   ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರು ಗ್ರಾಮಸ್ಥರ ಸಹಕಾರದಿಂದ ತೆಗೆದುಕೊಂಡ ಈ ನಿರ್ಣಯ ಮಕ್ಕಳ ಜೀವನ ಚಿತ್ರಣವನ್ನೇ ಬದಲಾಯಿಸಿದೆ. ಮೋಹಿತೆ ವಡಗಾವ್‌ನ ಜನಸಂಖ್ಯೆ ಕೇವಲ …

Read More »

ಬೆಳ್ಳಂಬೆಳಗ್ಗೆ ಬಾಲಕಿಗೆ ಆಟೋ ಚಾಲಕನಿಂದ ಕಿರುಕುಳ.. ಸಿಸಿಟಿವಿಯಲ್ಲಿ ಸೆರೆಯಾಯ್ತು ಡ್ರೈವರ್​ನ ಕೃತ್ಯ, ಬಂಧನ

ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಆಟೋ ಚಾಲಕನೊಬ್ಬ ಬಾಲಕಿಗೆ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆಟೋ ಚಾಲಕ ಬಾಲಕಿಯನ್ನು ಬಲವಂತವಾಗಿ ಆಟೋದೊಳಗೆ ಎಳೆಯಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲ ಚಾಲಕ ಬಾಲಕಿಯ ಕೈ ಹಿಡಿದು ಆಟೋವನ್ನು ಚಲಾಯಿಸಿಕೊಂಡು ಸ್ವಲ್ಪ ದೂರದವರೆಗೆ ಎಳೆದೊಯ್ದಿದ್ದಾನೆ. ಬಳಿಕ ಬಾಲಕಿ ನೆಲಕ್ಕೆ ಉರುಳಿಬಿದ್ದಿದ್ದಾಳೆ. ಕೂಡಲೇ ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆಟೋ ಚಾಲಕನ ಕೃತ್ಯ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆ ಆಗಿದೆ. ಸ್ಥಳೀಯ …

Read More »

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ ನಡೆಸಿದರು. ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್. ಪಾಟೀಲ ಕೂಚಬಾಳ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪಿ. ರಾಜೀವ ಮಹತ್ವದ ಸಭೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹಿಸಿದರು. ಅಲ್ಲದೇ, ಪಕ್ಷದ ಪದಾಧಿಕಾರಿಗಳು ಹಾಗೂ ಕೆಲವೇ ಕೆಲವು ಮುಖಂಡರು ಮಾತ್ರ ಭಾಗವಹಿಸಿದರು.

Read More »

ದೂಧ್ ಸಾಗರ್ ಪ್ರವಾಸೋದ್ಯಮ ಆರಂಭ ; ಹೆಚ್ಚಿನ ಸಂಖ್ಯೆಯ ಪ್ರವಾಸಿಗರ ಆಗಮನ

ಪಣಜಿ: ಗೋವಾದ ಜಗತ್ಪ್ರಸಿದ್ಧ ದೂಧ್ ಸಾಗರ್ ಪ್ರವಾಸೋದ್ಯಮ ಸೋಮವಾರದಿಂದ ಆರಂಭಗೊಂಡಿದ್ದು, ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ಸದ್ಯ ಪ್ರತಿದಿನ 150 ಕ್ಕೂ ಜೀಪ್‍ಗಳ ಮೂಲಕ ಪ್ರವಾಸಿಗರು ಜಲಪಾತ ವೀಕ್ಷಣೆಗೆ ತೆರಳುತ್ತಿದ್ದಾರೆ.   ಗೋವಾದ ದೂಧ್ ಸಾಗರ್ ಜಲಪಾತವು ದೇಶ ವಿದೇಶದ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ದೂಧಸಾಗರ ಜಲಪಾತ ವೀಕ್ಷಣೆಗೆರ ಗೋವಾದ ಕುಳೆ ಮೂಲಕ ಹೆಚ್ಚಿನ ಮಳೆಯಾಗುವ ಸಂದರ್ಭದಲ್ಲಿ ತೆರಳಲು ಅಸಾಧ್ಯವಾಗಿದೆ. ಇದೀಗ ಮಳೆ ಕಡಿಮೆಯಾಗಿರುವುದರಿಂದ ಜಲಪಾತ ವೀಕ್ಷಣೆಗೆ ತೆರಳಲು ಸಾಧ್ಯವಾಗಿದೆ. …

Read More »

ಸಂತೋಷ್ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ಶನಿವಾರ ಸಲಾಹಳ್ಳಿ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ

ಸಾಲಹಳ್ಳಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಬೀರಪ್ಪ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಇಂದು ಕೈ ಶಕ್ತಿ ಪ್ರದರ್ಶನ; ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ

ಬೆಂಗಳೂರು/ಬಳ್ಳಾರಿ: ರಾಜ್ಯದಲ್ಲಿನ ಜೋಡೋ ಯಾತ್ರೆಯ ಪ್ರಮುಖ ಘಟ್ಟವಾದ ಬಳ್ಳಾರಿ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್‌ನ ಶಕ್ತಿಪ್ರದರ್ಶನಕ್ಕೂ ವೇದಿಕೆ ಸೃಷ್ಟಿಯಾದಂತಾಗಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಹಾಗೂ ಗಣಿನಾಡಿನಲ್ಲಿ ಶಕ್ತಿ ಪ್ರದರ್ಶನ ಎಂದೇ ಬಿಂಬಿತವಾಗಿರುವ ಸಮಾವೇಶಕ್ಕೆ ಮೂರು ಲಕ್ಷ ಜನರ ಸೇರುವ ನಿರೀಕ್ಷೆಯಿದೆ. ಈ ಮಧ್ಯೆ, ಪ್ರಿಯಾಂಕಾ ಗಾಂಧಿ ಬಳ್ಳಾರಿ ಸಮಾವೇಶಕ್ಕೆ ಬರುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ ಅ.22 ರಂದು ರಾಯಚೂರಿಗೆ ಬಂದು ಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿದೆ. 2010ರ ಜುಲೈನಲ್ಲಿ ಪ್ರತಿಪಕ್ಷ …

Read More »

ಗಲಭೆ ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ನಿರ್ಮಿಸುವ ವಂಚಕರನ್ನು ಬಂಧಿಸಿ; ನಳಿನ್ ಕುಮಾರ್ ಕಟೀಲ್

ಹಾವೇರಿ: ರಟ್ಟೀಹಳ್ಳಿಯಲ್ಲಿ ಆರ್​ಎಸ್​ಎಸ್​ ಪ್ರಾಥಮಿಕ ಶಿಕ್ಷಾ ವರ್ಗ ನಡೆಯುತ್ತಿದೆ. ಇದು ಬಾರಿ ರಾಷ್ಟ್ರಭಕ್ತಿಯ ಬಗ್ಗೆ ಜಾಗೃತಿ ಮೂಡಿಸೋ ವ್ಯಕ್ತಿ ನಿರ್ಮಾಣದ ಶಿಬಿರ. ಅ.11 ರಾತ್ರಿ 5 ಜನ ಆರ್​ಎಸ್​ಎಸ್ ಕಾರ್ಯಕರ್ತರು ಪಥಸಂಚಲನದ ಮಾರ್ಗ ವೀಕ್ಷಣೆಗೆ ಹೋಗಿದ್ದರು. ಈ ವೇಳೆ ಅನ್ಯಕೋಮಿನ ಗೂಂಡಾಗಳು ಹಲ್ಲೆ ಮಾಡಿದ್ದರು. ಹಲ್ಲೆಯನ್ನು ನಾನು ತೀವ್ರವಾಗಿ ಖಂಡಿಸ್ತೇನೆ. ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ಸಹಿಸಲು ಅಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕಾರ್ಯಕರ್ತರ ಮೇಲೆ ವಿನಾಕಾರಣ …

Read More »

ಶಾಲೆ ಬಳಿ ಗೂಡು ಕಟ್ಟಿದ್ದ ಹೆಜ್ಜೇನು; 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ದಾವಣಗೆರೆ: ಶಾಲೆಯೊಂದರ ಪ್ರವೇಶ ದ್ವಾರದಲ್ಲೇ ಹೆಜ್ಜೇನು ಗೂಡು ಕಟ್ಟಿದ್ದು, ಶಾಲೆಯ 50ಕ್ಕೂ ಹೆಚ್ಚು ಮಕ್ಕಳನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಹರಿಹರ ತಾಲೂಕು ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯ ಪ್ರವೇಶ ದ್ವಾರದಲ್ಲಿ ಗುರುವಾರ ಸಂಜೆ ಹೆಜ್ಜೇನುಗಳು ಗೂಡು ಕಟ್ಟಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆತಂಕಕ್ಕೆ ಒಳಗಾದರು. ಈ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ದಾವಣಗೆರೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 50ಕ್ಕೂ …

Read More »