ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಹೀಗಾಗಿ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಡೆದ ಬಳಿಕ ಹೇಮಂತ್ ಕುಮಾರ್ ಅವರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್ ಎಂಬಾತ ನಾಪತ್ತೆಯಾಗಿದ್ದು, ಆತನೇ ಈ ಕೊಲೆ ಮಾಡಿರಬಹುದು ಎಂಬ ಅನುಮಾನದ ಮೇರೆಗೆ …
Read More »‘ಆದಿಪುರುಷ್’ ಟೀಸರ್ ನೋಡಿ ಓಂ ರಾವುತ್ ಮೇಲೆ ಪ್ರಭಾಸ್ ಗರಂ?
ಆದಿಪುರುಷ್’ ಟೀಸರ್ ನೋಡಿ ಸಾಕಷ್ಟು ಜನ ನಿರ್ದೇಶಕ ಓಂ ರಾವುತ್ ಮೇಲೆ ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ. ಟೀಸರ್ ರಿಲೀಸ್ ಈವೆಂಟ್ ನಂತರ ಸ್ವತಃ ಪ್ರಭಾಸ್ ಕೂಡ ನಿರ್ದೇಶಕರ ಮೇಲೆ ಗರಂ ಆಗಿದ್ದರು ಎನ್ನಲಾಗ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭಾನುವಾರಷ್ಟೇ ಅಯೋಧ್ಯೆಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ‘ಆದಿಪುರುಷ್’ ಸಿನಿಮಾ ಟೀಸರ್ ಲಾಂಚ್ ಮಾಡಲಾಗಿತ್ತು. ರಾಮಾಯಣ ಕಾವ್ಯವನ್ನು ಆಧರಿಸಿ ಈ ಮೋಷನ್ ಕ್ಯಾಪ್ಚರ್ ಆನಿಮೇಷನ್ ಸಿನಿಮಾ ಕಟ್ಟಿಕೊಡಲಾಗ್ತಿದೆ. …
Read More »ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು: ಸಿದ್ದರಾಮಯ್ಯಗೆ ಕಾನ್ಸ್ಟೆಬಲ್ ಸವಾಲು!
ವಿಜಯಪುರ: ‘ಭಾರತ ಜೋಡೊ’ ಪಾದಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿ ಪೊಲೀಸ್ನವರೇನಾದರೂ ಶಾಮೀಲಾದ್ರೆ…’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆ ವಿಜಯಪುರ ಗ್ರಾಮೀಣ ಠಾಣೆ ಕಾನ್ಸ್ಟೆಬಲ್ವೊಬ್ಬರು ವಿರೋಧ ವ್ಯಕ್ತಪಡಿಸಿ ಫೇಸ್ಬುಕ್ನಲ್ಲಿ ಕಾಮೆಂಟ್ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್ಸ್ಟೆಬಲ್ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ …
Read More »ಕಾರ್ಮಿಕ ಇಲಾಖೆಯಲ್ಲಿ ನೇಮಕಾತಿ: ಪದವೀಧರರಿಂದ ಅರ್ಜಿ ಆಹ್ವಾನ- 62 ಸಾವಿರ ರೂ.ವರೆಗೆ ಸಂಬಳ
ಕಾರ್ಮಿಕ ಇಲಾಖೆಯಲ್ಲಿರುವ ಕಾರ್ಮಿಕ ನಿರೀಕ್ಷಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಉಳಿಕೆ ಮೂಲ ವೃಂದದ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅ.29ರೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಕಾರ್ಮಿಕ ನಿರೀಕ್ಷಕ- ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಪರಿಶೀಲನೆ ನಡೆಸಿದ ಬಳಿಕ ಕನ್ನಡ ಭಾಷಾ ಪರೀಕ್ಷೆ , ಸ್ಪರ್ಧಾತ್ಮಕ ಪರೀಕ್ಷೆ ಯಲ್ಲಿ ಗಳಿಸಿದ ಅಂಕ, ಚಾಲ್ತಿಯಲ್ಲಿರುವ ಮೀಸಲಾತಿ ನಿಯಮದನ್ವಯ …
Read More »ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರಿಗೆ 43ನೇ ಸ್ಥಾನ: ಸಾರ್ವಜನಿಕರಿಂದ ಟೀಕೆ
ಬೆಂಗಳೂರು: ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ 2022ರ ಪ್ರಕಾರ 45 ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ 43ನೇ ಸ್ಥಾನ ಪಡೆದುಕೊಂಡಿದೆ. ಈ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ರ್ಯಾಂಕಿಂಗ್ನಲ್ಲಿ 15ರಷ್ಟು ಕುಸಿತ ಕಂಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ವಿವಿಧ ಅಂಕಿ ಅಂಶಗಳನ್ನು ಆಧರಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 45 ನಗರಗಳಲ್ಲಿ ಬೆಂಗಳೂರು 43ನೇ …
Read More »ಅ.28 ರಂದು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಹಾಗೂ ಗಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. 2022ರ ಆಗಸ್ಟ್ನಿಂದ ನವೆಂಬರ್ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಿಸಿದೆ. ಅದರಂತೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ. ಅ.18 ನಾಮಪತ್ರ ಸಲ್ಲಿಸಲು …
Read More »ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ
ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು, ಬೈಕ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತವಾಗಿದ್ದು, ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಎರಡು ಕಾರು, ಟ್ರಕ್ ಹಾಗೂ 4ಕ್ಕೂ ಹೆಚ್ಚು ಬೈಕ್ಗಳ ನಡುವೆ ಸರಣಿ ಅಪಘಾತವಾಗಿದೆ. ಇದಕ್ಕೂ ಮೊದಲು ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮೊಲ್ಯಾಸೀಸ್ ಸೋರಿಕೆಯಾಗಿದೆ. ಈ …
Read More »ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ
ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ ಎಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದರು. ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ ವಾಗ್ದಾಳಿ ನಡೆಸಿ, ವಿಜಯೇಂದ್ರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ. ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ. ಪಾಪ ಬಿಎಸ್ವೈ ಅಧಿಕಾರಿ ಕಳೆದುಕೊಂಡ್ರೂ, ಇಲ್ಲದೇ ಹೋದ್ರೇ ಅವರೇ ಸಿಎಂ ಇರ್ತಾ ಇದ್ರೂ, ವಿಜಯೇಂದ್ರ ಯಾವಾಗ …
Read More »ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ.
ತುಮಕೂರು: ಸ್ವಗ್ರಾಮಕ್ಕೆ ಮಗುವಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಾಣಂತಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಗೋಪನಾಳ್ ಗ್ರಾಮದ ಮಂಜುನಾಥ್ ಮತ್ತು ಗೌರಮ್ಮ ದಂಪತಿ ತುಮಕೂರು ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ನಾಲ್ಕು ದಿನದ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಗೌರಮ್ಮ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಇಂದು(ಸೋಮವಾರ) ಮುಂಜಾನೆ 4 ಗಂಟೆಯಲ್ಲಿ ಆಸ್ಪತ್ರೆಯಲ್ಲೇ ಮಗು ಮೃತಪಟ್ಟಿದೆ. ಮಗುವಿನ ಶವ ತೆಗೆದುಕೊಂಡು ಹೋಗುವಂತೆ ವೈದ್ಯರು ತಿಳಿಸಿದ್ದಾರೆ. ಆದರೆ, …
Read More »ಈ ವರ್ಷವೇ ಸುವರ್ಣಸೌಧದಲ್ಲಿ ಚನ್ನಮ್ಮ, ರಾಯಣ್ಣ ಪ್ರತಿಮೆ ಸ್ಥಾಪನೆ: ಬೊಮ್ಮಾಯಿ
ಬೆಂಗಳೂರು: ‘ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿಯ ಸುವರ್ಣಸೌಧದಲ್ಲಿ ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡ ‘ಕಿತ್ತೂರು ಚನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆ’ಗೆ ಚಾಲನೆ ನೀಡಿ, ಮಾತನಾಡಿದರು. ‘ಕಿತ್ತೂರು ಉತ್ಸವ …
Read More »
Laxmi News 24×7