Breaking News

ರಾಜ್ಯ

ರಾಷ್ಟ್ರಪತಿಯವರಿಂದ ದಸರಾ ಉದ್ಘಾಟನೆ: ಸಾರ್ವಜನಿಕರಿಗೆ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ಮೈಸೂರು: ಸೆಪ್ಟಂಬರ್ 26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂದು ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.   ಅಂದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇದೇ …

Read More »

ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. 25 ಕೋಟಿ ರೂ. ಲಾಟರಿ ಗೆದ್ದಿದ್ದರೂ ಕಂಗಾಲಾಗಿ ಹೋಗಿರುವ ಆಟೋ ಚಾಲಕ!

ತಿರುವನಂತಪುರಂ: ಕಳೆದ ವಾರ ಲಕ್ಕಿ ಡ್ರಾ ಮೂಲಕ 25 ಕೋಟಿ ಬಹುಮಾನ ಗೆದ್ದಿದ್ದ, ಆಟೋ ಚಾಲಕ ಕಂಗಾಲಾಗಿ ಹೋಗಿದ್ದಾನೆ. ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದ ಆಟೋ ಚಾಲಕ ಅನೂಪ್, ಮಲೇಷ್ಯಾಕ್ಕೆ ತೆರಳಿ ದುಡಿಯಲು ದಾರಿ ಕಂಡು ಕೊಂಡಿದ್ದ. ಇನ್ನೇನು ಮಲೇಷ್ಯಾಗೆ ತೆರಳಬೇಕು ಅನ್ನುವಷ್ಟರಲ್ಲಿ ಲಾಟರಿ ಗೆದ್ದಿರುವುದು ತಿಳಿದಿದೆ.   ಲಾಟರಿಯಲ್ಲಿ ಕೋಟಿ ಬಹುಮಾನ ಬಂದಿದೆ. ಇನ್ನು ಮುಂದೆ ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ನಿರ್ಧರಿಸಿದ್ದರು. ಆದರೆ ಆಗಿದ್ದೇ ಬೇರೆ. ಬಹುಮಾನ ಬಂದಿರುವುದು ಗೊತ್ತಾಗುತ್ತಿದ್ದಂತೆ …

Read More »

ಧರ್ಮಸ್ಥಳ, ಕುಕ್ಕೆ ದೇಗುಲದಲ್ಲಿ ಶರ್ಟ್, ಬನಿಯನ್ ಬಿಚ್ಚಿಸುವ ಪದ್ಧತಿ ರದ್ದಿಗೆ ಮನವಿ

ಧರ್ಮಸ್ಥಳ, ಸೆಪ್ಟೆಂಬರ್ 24: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನ ಹಾಗೂ ಕುಕ್ಕೆಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ತಮ್ಮ ಶರ್ಟ್ ಹಾಗೂ ಬನಿಯನ್ ಅನ್ನು ಬಿಚ್ಚಿಕೊಂಡು ಹೋಗುವ ಪದ್ಧತಿಯು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪದ್ಧತಿಯನ್ನು ರದ್ದು ಮಾಡುವಂತೆ ಇದೀಗ ಮನವಿ ಸಲ್ಲಿಸಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ಹಾಗೂ …

Read More »

ನಕಲಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು : ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೌಕರಿ ಪಡೆದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ವಿಧಾನಪರಿಷತ್ ನಲ್ಲಿ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ …

Read More »

ನವರಾತ್ರಿಗೆ ಕರೆಂಟ್ ಶಾಕ್; ಕೇಂದ್ರದ ಹಾದಿಯಲ್ಲೇ ರಾಜ್ಯ ಸರ್ಕಾರ: H.D.K.

ಬೆಂಗಳೂರು: ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಸರ್ಕಾರ ಇಂಧನ ದರ ಏರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದಾರೆ. ಈ ಕುರಿತು ‘ನವರಾತ್ರಿಗೆ ಕರೆಂಟ್ ಶಾಕ್’ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೇಳಿದ್ದಾರೆ.     …

Read More »

ರಮೇಶ್ ಜಾರಕಿಹೊಳಿಗೆ ಮಾತ್ರ ಸರಕಾರ ಉರುಳಿಸುವ ಶಕ್ತಿ ಇದೆ: ಸತೀಶ್ ಜಾರಕಿಹೊಳಿ

ಸಹೋದರ ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇz.ೆ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸಹೋದರ ರಮೇಶ ಜಾರಕಿಹೊಳಿ ಕಾಲೆಳೆದಿದ್ದಾರೆ. ಗೋಕಾಕ್ ನಗರದಲ್ಲಿ ಇಂದು ಶನಿವಾರ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸಹೋದರಿಗೆ ಸರ್ಕಾರ …

Read More »

ಲೋಕಮಾನ್ಯ ಸೊಸೈಟಿ ಭ್ರಷ್ಟಾಚಾರದ ವಿರುದ್ಧ ಇಡಿ, ಸಿಬಿಐ ತನಿಖೆ ಆಗಬೇಕು: ಅಭಯ್ ಪಾಟೀಲ್

ಲೋಕಮಾನ್ಯ ಸೊಸೈಟಿ ಮೂರು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇದ್ದ ಕೆಲವೊಂದು ದಾಖಲೆಗಳನ್ನು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಕೊಟ್ಟಿದ್ದೇನೆ. ಈ ಕೇಸ್‍ನ್ನು ಸಿಬಿಐ, ಇಡಿ ತನಿಖೆ ಆಗಬೇಕು ಎಂದು ವಿಧಾನಸಭೆಯಲ್ಲಿ ಗಮನವನ್ನೂ ಸೆಳೆದಿದ್ದೇನೆ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅಭಯ್ ಪಾಟೀಲ್ ಲೋಕಮಾನ್ಯ ಸೊಸೈಟಿಯಲ್ಲಿ ಯಾವುದೇ ರೀತಿ ಭದ್ರತೆ ಇಲ್ಲದೇ ಕೋಟ್ಯಾಂತರ …

Read More »

ಕರ್ನಾಟಕದಲ್ಲಿ ಪಿಎಫ್‍ಐ ಇಷ್ಟು ಬೆಳೆಯಲು ಸಿದ್ದರಾಮಯ್ಯ ಕಾರಣ:

ದೇಶದಲ್ಲಿ ಪಿಎಫ್‍ಐ ಬೆಳೆಯಲು ಕುಮ್ಮಕ್ಕು ನೀಡಿದ್ದು ಕಾಂಗ್ರೆಸ್ ಪಕ್ಷ. ಪಿಎಫ್‍ಐ ಮೇಲೆ ಹಾಕಿದ್ದ ಕೇಸ್ ವಾಪಸ್ ಪಡೆದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಬೆಳಗಾವಿಯ ದಕ್ಷಿಣ ಶಾಸಕ ಅಭಯ್ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪಿಎಫ್‍ಐ ಮೇಲೆ ಹಾಕಿದ್ದ ಕೇಸ್ ಸಿದ್ದರಾಮಯ್ಯ ವಾಪಸ್ ಪಡೆದಿದ್ದರಿಂದ ಪಿಎಫ್‍ಐಗೆ ಬಲ ಬಂದಿತು. ದೇಶ ವಿರೋಧ ಕೆಲಸ ಮಾಡಿದ್ರು ಕಾಂಗ್ರೆಸ್ ಸರ್ಕಾರ ನಮ್ಮ …

Read More »

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ R.C.U.

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವಿರುದ್ಧ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳು ಧಿಡೀರ್ ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿ ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೌದು ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳು ಸಮರ ಸಾರಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ ಕಡಿಮೆ ಶಿಷ್ಯವೇತನ ಮಂಜೂರಾಗಿದೆ. ಮಂಜೂರಾದ ಮೊತ್ತದಲ್ಲಿ ನೀಡಿದ ಮೊತ್ತಕ್ಕಿಂತ …

Read More »

ಇನ್ನುಮುಂದೆ ಬ್ಯಾಂಕ್ ಗಳು ರೈತರ ಆಸ್ತಿ ಮುಟ್ಟುಗೋಲು ಹಾಕುವಂತಿಲ್ಲ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ರೈತರ ಮನೆ, ಆಸ್ತಿ- ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.   ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಬ್ಯಾಂಕ್, ಫೈನಾನ್ಸ್ ಗಳು ಆಸ್ತಿ ಜಪ್ತಿ ಮಾಡುವುದು ಸರಿಯಲ್ಲ. ಈ‌ ಕುರಿತು ಬೆಂಗಳೂರಿಗೆ ಹೋದ ತಕ್ಷಣ ಅಗತ್ಯ ಕಾನೂನು ತಿದ್ದುಪಡಿ …

Read More »