ಬೆಂಗಳೂರು, ಆ.23: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ (K. S. Eshwarappa) ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ …
Read More »35 ಸಾವಿರಕ್ಕೂ ಅಧಿಕ ಉರಗಗಳ ರಕ್ಷಣೆ ಮಾಡಿದ್ದ ‘ಸ್ನೇಕ್ ಲೋಕೇಶ್’ ಇನ್ನಿಲ್ಲ: ಹಾವಿನಿಂದಲೇ ದಾರುಣ ಅಂತ್ಯ
ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ 35 ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಣೆ ಮಾಡಿ, ಸ್ನೇಕ್ ಲೋಕೇಶ್ ಎಂದೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್ ಲೋಕೇಶ್ ಮೃತಪಟ್ಟಿದ್ದಾರೆ. ಹಾವು ಕಡಿತದಿಂದಲೇ ಅವರು ದಾರುಣ ಅಂತ್ಯ ಕಂಡಿದ್ದಾರೆ! ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ …
Read More »NDTV ಖರೀದಿಸಿದ ಗೌತಮ್ ಅದಾನಿ
ನವದೆಹಲಿ, ಆಗಸ್ಟ್ 23: ನ್ಯೂ ಡೆಲ್ಲಿ ಟೆಲಿವಿಷನ್(NDTV) ಮಾಧ್ಯಮ ಸಂಸ್ಥೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಾಧ್ಯಮ ಕ್ಷೇತ್ರಕ್ಕೆ ಉದ್ಯಮಿ ಗೌತಮ್ ಅದಾನಿ ಎಂಟ್ರಿ ಕೊಟ್ಟಿದ್ದಾರೆ. ಸರಿ ಸುಮಾರು 29.18 ರಷ್ಟು ಪಾಲನ್ನು ಅದಾನಿ ಎಂಟರ್ ಪ್ರೈಸಸ್ ಖರೀದಿಸಿದ್ದು, ಈ ಮೂಲಕ NDTV ಅದಾನಿ ಸಂಸ್ಥೆ ಪಾಲಾಗಿದೆ ಎನ್ನಬಹುದು. ಅದಾನಿ ಎಂಟರ್ಪ್ರೈಸಸ್ ಮಂಗಳವಾರ ತನ್ನ ಮಾಧ್ಯಮ ಘಟಕವು ನವದೆಹಲಿ ಟೆಲಿವಿಷನ್ ಲಿಮಿಟೆಡ್ನಲ್ಲಿ ಪರೋಕ್ಷವಾಗಿ ಶೇಕಡಾ 29.18 ಪಾಲನ್ನು ಖರೀದಿಸಲಿದೆ ಮತ್ತು …
Read More »ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …
Read More »4ಲಕ್ಷ ರೂಪಾಯಿಯನ್ನು ದೋಚಿ ಅವರನ್ನು ಅಪಹರಿಸಿ ಮತ್ತೆ 20 ಲಕ್ಷ ಬೇಡಿಕೆಯಿಟ್ಟಿದ್ದ ಐವರನ್ನು ಬೆಳಗಾವಿ ಹಿರೇಬಾಗೇವಾಡಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ನಿವೃತ್ತ ಸರ್ಕಾರಿ ನೌಕರರೋರ್ವರ ಬಳಿಯಿದ್ದ ೪ ಲಕ್ಷ ರೂಪಾಯಿಯನ್ನು ದೋಚಿ ಅವರನ್ನು ಅಪಹರಿಸಿ ಮತ್ತೆ ೨೦ ಲಕ್ಷ ಬೇಡಿಕೆಯಿಟ್ಟಿದ್ದ ಐವರನ್ನು ಬೆಳಗಾವಿ ಹಿರೇಬಾಗೇವಾಡಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದೇ ಆಗಸ್ಟ್ ೨೧ ರಂದು ಬೆಳಗಾವಿಯ ಮುತ್ನಾಳ ಗ್ರಾಮದ ರಾಷ್ಟಿçÃಯ ಹೆದ್ದಾರಿ ೦೪ ರಲ್ಲಿ ಸಂಚರಿಸುತ್ತಿದ್ದ ಅರಣ್ಯ ಇಲಾಖೆಯ ನಿವೃತ್ತ ಅಧೀಕ್ಷಕಯೋರ್ವರನ್ನು ಅಡ್ಡಗಟ್ಟಿ ಅವರ ಬಳಿಯಿದ್ದ ೪ ಲಕ್ಷ ರೂಪಾಯಿಯನ್ನು ದೋಚಲಾಗಿತ್ತು. ಅಲ್ಲದೇ ಅವರನ್ನು ಅಪಹರಿಸಿ ಇನ್ನು ೨೦ ಲಕ್ಷ ರೂಪಾಯಿಯ …
Read More »ಬಿಎಸ್ವೈ ಬೆಂಗಾವಲು ವಾಹನಗಳ ಹಿಂದೆ ಬರ್ತಿದ್ದ ಕಾರುಗಳ ಮಧ್ಯೆ ಭೀಕರ ಅಪಘಾತ
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಾವಲು ವಾಹನಗಳ ಹಿಂದೆ ಬರುತ್ತಿದ್ದ ಕಾರುಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ಕೊಲಂಬಿಯಾ ಏಷ್ಯಾ ವೃತ್ತದ ಬಳಿ ನಡೆದಿದೆ. ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಿಎಸ್ವೈ ಹಿಂದೆ ಸಾಗುವ ಬರದಲ್ಲಿ KSIIDC ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಸಂದೇಶ್ ಇರುವ ಕಾರುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಬಿಜೆಪಿ ಮುಂಖಂಡ ಹಾಗೂ KSIIDC ನಿರ್ದೇಶಕ ಮಹದೇವಸ್ವಾಮಿ ಮಧ್ಯೆ ವಾಗ್ವಾದ ನಡೆದಿದೆ.
Read More »ಭ್ರಷ್ಟರ ವಿರುದ್ಧ ಸಮರಕ್ಕೆ ಲೋಕಾಯುಕ್ತ ಅಣಿ
ಬೆಂಗಳೂರು : ಸರ್ಕಾರದಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಧಿಕಾರ ದುರ್ಬಳಕೆ ವಿರುದ್ಧ ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯ ಅಸ್ತ್ರ ಝಳಪಿಸಲು ಲೋಕಾಯುಕ್ತ ಮತ್ತೆ ಸಜ್ಜಾಗಿದೆ. ದೂರು ಬಂದರೆ ತಕ್ಷಣದಲ್ಲೇ ಪ್ರಕರಣ ದಾಖಲಿಸಲು ಲೋಕಾ ಯುಕ್ತ ಪೊಲೀಸ್ ಘಟಕವು ಸನ್ನದ್ಧವಾಗಿದೆ. ಹೈಕೋರ್ಟ್ ತೀರ್ಪಿನ ಕುರಿತು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ, ಸಂಸ್ಥೆಯ ಪೊಲೀಸ್ ಘಟಕ ಹಾಗೂ ನ್ಯಾಯಾಂಗ ವಿಭಾಗದ ಅಧಿಕಾರಿಗಳ ಜತೆಗೂ ಸರಣಿ ಸಭೆಗಳನ್ನು ನಡೆಸಿದ್ದಾರೆ. ಭ್ರಷ್ಟಾಚಾರ, ಅಧಿಕಾರ …
Read More »ಮೀಸಲಾತಿ ಘೋಷಿಸದಿದ್ದರೆ ಸಿಎಂ ಮನೆ ಮುಂದೆ ಧರಣಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಶಿವಮೊಗ: ಸರ್ಕಾರ ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಿಸದಿದ್ದರೆ ಆ. 23ರ ಬೆಳಿಗ್ಗೆ 10ಕ್ಕೆ ಶಿಗ್ಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ ಬಳಿಕ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ‘ಲಿಂಗಾಯತ ಪಂಚಮಸಾಲಿ, ಮಲೆಗೌಡ ಲಿಂಗಾಯತ ಸಮಾಜವನ್ನು ಪ್ರವರ್ಗ ‘2ಎ’ ಮೀಸಲಾತಿಗೆ ಸೇರಿಸಲು ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಸೋಮವಾರ ಮುಕ್ತಾಯ ವಾಗಲಿದೆ. ಮೀಸಲಾತಿ …
Read More »ಬಿಜೆಪಿ ಭ್ರಷ್ಟೋತ್ಸವ ಜಾತ್ರೆಯಲ್ಲಿ ನೂರಾರು ಹಗರಣಗಳ ಮೆರವಣಿಗೆ: ಕಾಂಗ್ರೆಸ್ ಲೇವಡಿ
ಬೆಂಗಳೂರು: ಸಚಿವ ಸಂಪುಟಕ್ಕೆ ಮಾತ್ರವಲ್ಲ ಇಡೀ ಸರ್ಕಾರಕ್ಕೆ ಸೂಕ್ತ ಸರ್ಜರಿ ನಡೆಯಬೇಕಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ಜನಪರ ಆಡಳಿತ ನೀಡುವುದಕ್ಕಿಂತ ಚುನಾವಣೆ ದೃಷ್ಟಿಕೋನವೇ ಮುಖ್ಯ. ಸಂಪುಟಕ್ಕೆ ಮಾತ್ರವಲ್ಲ, ಐಸಿಯುನಲ್ಲಿರುವ ಇಡೀ ಸರ್ಕಾರಕ್ಕೇ ಸರ್ಜರಿ ಮಾಡಬೇಕಿದೆ. ಯಾವ ಸರ್ಜರಿ ಮಾಡಿದರೂ, ಎಷ್ಟೇ ಡಿಸಿಎಂ ಹುದ್ದೆ ಸೃಷ್ಟಿಸಿದರೂ ತಳ್ಳಿಕೊಂಡು ಹೋಗುತ್ತಿರುವ ಸರ್ಕಾರದ ಇಂಜಿನ್ ಸ್ಟಾರ್ಟ್ ಮಾಡಲಾಗದು. ಮ್ಯಾನೇಜ್ಮೆಂಟ್ ಸರ್ಕಾರ ಟೇಕಾಫ್ ಆಗಲಾರದು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಶೇ. 40ರಷ್ಟು …
Read More »ಬಸ್, ಕ್ರೂಜರ್ ನಡುವೆ ಮುಖಾಮುಖಿ ಡಿಕ್ಕಿ: ಹುಬ್ಬಳ್ಳಿಗೆ ಮೃತದೇಹ ತರಲು ಹೋದ ಮೂವರ ದಾರುಣ ಸಾವು
ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕ್ರೂಜರ್ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಮೃತರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದರು. ಆಸ್ಪತ್ರೆಯಲ್ಲಿ ಕ್ರೂಜರ್ ಚಾಲಕ ಮಾರುತಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿಯೇ ಮೃತಪಟ್ಟವರನ್ನು ಶಿವನಗೌಡ ಮತ್ತು ಅಮೃತ …
Read More »
Laxmi News 24×7