ಬೆಂಗಳೂರು : ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ …
Read More »ಜೀವನದಲ್ಲಿ ನೀವು ನಿಮ್ಮ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ ಅವರು ಮಾತನಾಡಿದರು. ಜೀವನದಲ್ಲಿ ನೀವು ನಿಮ್ಮ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ. ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು. ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು …
Read More »ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ.
VR ಪ್ರಪಂಚ..!ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ. ಹಾಗಾದ್ರೆ ವಿಕ್ರಾಂತ್ ರೋಣ ಹೇಗಿದ್ದಾನೆ ಅಂದ್ರೆ…. ಅದೊಂದು ದಟ್ಟಾರಣ್ಯದ ಮಧ್ಯೆ ಇರೋ ಊರು. ಆ ಊರ ಹೆಸರು ಕಮರೊಟ್ಟು.. ಅಲ್ಲಿ ಹೆಣ್ಣು ಮಕ್ಕಳ ಸರಣಿ ಕೊಲೆಗಳು ಆಗುತ್ತಿರುತ್ತವೆ. ಪೋಲಿಸ್ ಇನ್ಸ್ಪೆಕ್ಟರ್ ಆಗಿ ಕೊಲೆಗಳ ತನಿಖೆಗೆಗಾಗಿ ಕಮರೊಟ್ಟು ಊರಿಗೆ ಬರೋ ವಿಕ್ರಾಂತ್ ರೋಣ. ಈ ಇನ್ಸ್ಪೆಕ್ಟರ್ಗೆ ಈ ಸರಣಿ ಕೊಲೆಗಳ ಕೇಸುಗಳ ಮೇಲೆ …
Read More »ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ನೀರುಪಾಲು.. ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ
ಕಲಬುರಗಿ: ಬಾವಿಯೊಂದರಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಶ್ರೀಶೈಲ್ ಲಕ್ಷ್ಮಣ (13) ಹಾಗೂ ಲಕ್ಷ್ಮಣ ಗುಂಡಪ್ಪ(12) ಈಜಲು ಹೋಗಿ ಸಾವನ್ನಪ್ಪಿದ ದುರ್ದೈವಿಗಳು. ಈ ಇಬ್ಬರು ಮಕ್ಕಳು ಹೇಬಳಿ ರೋಡ್ ನ್ಯೂ ಬಾಳೇನಕೇರಿ ನಿವಾಸಿಗಳು ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಇಬ್ಬರು ಈಜಲು ಎಂದು ಬಾವಿಗೆ ತೆರಳಿದ್ದಾರೆ. ಈಜು ಸರಿಯಾಗಿ ಬಾರದಿದ್ದರೂ ಬಾವಿಗೆ ಇಳಿದು ದುಸ್ಸಾಹಸ ಮಾಡಿದ್ದರಿಂದ ಅವಘಡ ಸಂಭವಿಸಿದೆ ಎಂದು …
Read More »ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಬೆಳ್ಳಾರೆ ನಿವಾಸಿ ಮೊಹ್ಮದ್ ಶಫೀಕ್ (27) , ಸವಣೂರು ನಿವಾಸಿ ಝಾಕೀರ್ (29) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯ ನೇತ್ರತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ …
Read More »ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ; 25 ಲಕ್ಷ ರೂ. ಪರಿಹಾರ
ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇರಲಿದೆ ಎಂದು ಧೈರ್ಯ ತುಂಬಿದರು. 25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಿಎಂ …
Read More »ಹುಬ್ಬಳ್ಳಿ: ಗೋಡೆ ಕುಸಿದು ಬಾಲಕ ಸಾವು
ಹುಬ್ಬಳ್ಳಿ: ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಬುಧವಾರ ಸಾಯಂಕಾಲ ನಗರದಲ್ಲಿ ಏಕಾಏಕಿ ರಭಸವಾಗಿ ಸುರಿಯಿತು. ಅಬ್ಬರದ ಮಳೆಗೆ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದ ಪಕ್ಕದಲ್ಲಿರುವ ಶ್ರೇಯಾ ಜ್ಯುಪಿಟರ್ ಕಾಂಪ್ಲೆಕ್ಸ್ನ ತಡೆಗೋಡೆ ಕುಸಿದು ಕಲಬುರ್ಗಿ ಮೂಲದ, ಇಲ್ಲಿನ ಬೆಂಗೇರಿ ನಿವಾಸಿ ದರ್ಶನ್(16) ಮೃತಪಟ್ಟಿದ್ದಾರೆ. ಮಾರುಕಟ್ಟೆ ಪ್ರದೇಶ ಸೇರಿದಂತೆ, ಕೆಲವು ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಹೊಸೂರು ವೃತ್ತ, ಹೊಸೂರು ಬಿಆರ್ಟಿಎಸ್ ಬಸ್ ನಿಲ್ದಾಣ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ …
Read More »ಅಗತ್ಯ ಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಎಂದ ಸಿಎಂ..!
ಕೋಮು ಭಾವನೆ ಕದಡುವ ಶಕ್ತಿಗಳನ್ನು ಸದೆಬಡಿಯುತ್ತೇವೆ. ಬಾಯಿ ಮಾತಿನಲ್ಲಿ ಅಲ್ಲ ಕಠಿಣ ಕ್ರಮಕೈಗೊಂಡಿದ್ದೇವೆ. ರಾಜ್ಯದಲ್ಲಿ ಅಪರಾಧಗಳ ತಡೆಗೆ ಹಲವು ಕ್ರಮಕೈಗೊಂಡಿದ್ದೇವೆ. ಅಗತ್ಯ ಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮ್ಮ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ …
Read More »ಕುಂದಾನಗರಿಯಲ್ಲಿ ಕಿಚ್ಚ ಸುದೀಪ್ “ವಿಕ್ರಾಂತ ರೋಣ”ನ ಅಬ್ಬರ:
ಕಿಚ್ಚ ಸುದೀಪ ಅಭಿನಯದ ವಿಕ್ರಾಂತ್ ರೋಣ ಚಿತ್ರಕ್ಕೆ ಬೆಳಗಾವಿಯಲ್ಲಿ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಕಿಚ್ಚನ ಅಭಿಮಾನಿಗಳು ಭರ್ಜರಿ ಬೈಕ್ ರ್ಯಾಲಿ ನಡೆಸಿದ್ದು, ಚಿತ್ರ ಮಂದಿರ ಮುಂದೆ ಕುಣಿದು ಕುಪ್ಪಳಿಸಿ, ಸಂಭ್ರಮಿಸಿದ್ದಾರೆ. ಹೌದು ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಬಹು ನಿರೀಕ್ಷಿತ ವಿಕ್ರಾಂತ ರೋಣ ಸಿನಿಮಾ ಗುರುವಾರ ವಿಶ್ವದಾಧ್ಯಂತ ರಿಲೀಸ್ ಆಗಿರುವ ಹಿನ್ನೆಲೆ ಬೆಳಗಾವಿ ಚೆನ್ನಮ್ಮ ವೃತ್ತದಿಂದ ಚಿತ್ರಾ ಟಾಕೀಸ್ವರೆಗೂ ಕಿಚ್ಚ ಅಭಿಮಾನಿಗಳು ಬೈಕ್ ರ್ಯಾಲಿ ನಡೆಸಿದರು. ಕಿಚ್ಚ ಸುದೀಪ್ ಸೇನಾ …
Read More »ವಿವಿಧ ಬೇಡಿಕೆ ಈಡೇರಿಸುವಂತೆ ಬೆಳಗಾವಿಯಲ್ಲಿ ಕೂಲಿ ಕಾರ್ಮಿಕ ಪ್ರತಿಭಟನೆ
ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕಾರ್ಮಿಕ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಗುರುವಾರ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು 2021ರ ಫೆಬ್ರುವರಿ, ಮಾರ್ಚ ಹಾಗೂ 2022ರ ಏಪ್ರೀಲ್, ಮೇ, ಜೂನ್ ತಿಂಗಳ ಕೂಲಿ ಹಣ ಈವರೆಗೂ ಬಿಡುಗಡೆ ಆಗಿಲ್ಲ. ತಕ್ಷಣವೇ ಈ ಕೂಲಿ ಹಣ ಬಿಡುಗಡೆ ಮಾಡುವುದು …
Read More »
Laxmi News 24×7