ಛತ್ತೀಸಗಢದ ರಾಯ್ಪುರದ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಿದ್ದು, ಅಪರಾಧ ನಿಗ್ರಹ ಮತ್ತು ಸೈಬರ್ ಘಟಕದ ಸಿಬ್ಬಂದಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ. ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್ಪಿನ್ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಯುವತಿ ಹೊರತುಪಡಿಸಿ ನೇಪಾಳ, ಮುಂಬೈ, ದೆಹಲಿ, ಗುಜರಾತ್ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಇವರ ಸ್ಮಾರ್ಟ್ಫೋನ್ಗಳನ್ನು ತನಿಖೆಗೆ ಒಳಪಡಿಸಿದಾಗ …
Read More »ಪಂಪಸೆಟ್ ಕೇಬಲ್ ಕಳ್ಳರನ್ನು ಹಿಡಿದ ರೈತರು
ಜಮೀನಿನ ಪಂಪ್ ಸೆಟ್ಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ರೈತರು ಧರ್ಮದೇಟು ನೀಡಿರುವ ಘಟನೆ ಗೋಕಾಕ್ನ ಭಗೀರಥ ಕಾಲೋನಿಯಲ್ಲಿ ನಡೆದಿದೆ. ಜಮೀನಿನ ಪಂಪ್ ಸೆಟ್ನಲ್ಲಿ ಇರೋ ಕೇಬಲ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ತಾಮ್ರದ ತಂತಿಯನ್ನು ಹೆಚ್ಚಿನ ಹಣಕ್ಕೆ ಈ ಖದೀಮರು ಮಾರಾಟ ಮಾಡುತ್ತಿದ್ದರು. ಕಳೆದ ಅನೇಕ ದಿನಗಳಿಂದ ಈ ರೀತಿ ಕೇಬಲ್ ಕಳ್ಳತನ ನಡೆದಿತ್ತು. ಇದರಿಂದ ಕಂಗೆಟ್ಟಿದ್ದ ರೈತರು ಇಂದು ಇಬ್ಬರು ಕಳ್ಳರನ್ನು …
Read More »ಹಿರೇಬಾಗೇವಾಡಿ ಆರೋಗ್ಯ ಇಲಾಖೆ ವಸತಿ ಗೃಹಗಳು, ಆತಂಕದ ನಡುವೆ ವಾಸ
ಹಿರೇಬಾಗೇವಾಡಿ: ಜನರ ಆರೋಗ್ಯ ರಕ್ಷಣೆಗೆ ದಿನರಾತ್ರಿ ಶ್ರಮಿಸುವ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹಗಳು ಸಂಪೂರ್ಣ ಶಿಥಿಲಗೊಂಡಿದ್ದು, ಅವುಗಳನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಗೆ 45 ಗ್ರಾಮಗಳು ಇದ್ದು, ಈ ಭಾಗದ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸುಮಾರು 12 ವರ್ಷಗಳ ಹಿಂದೆ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. …
Read More »20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ
ಬೆಂಗಳೂರು, ಜುಲೈ 25;ಬಸವರಾಜ ಬೊಮ್ಮಾಯಿನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರ್ಣಗೊಳಿಸುವಾಗ ಹಲವಾರು ನೇಮಕಾತಿಗಳನ್ನು ಮಾಡಲಾಗಿದೆ. ಪ್ರಕಟವಾದ ಆದೇಶದ ಪ್ರಕಾರ ಯಾರಿಗೆ ಯಾವ ನಿಗಮದ …
Read More »ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥ
ಬೆಳಗಾವಿ: ಅನಿಮಿಯ ಮುಕ್ತ ಭಾರತ್ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಕಬ್ಬಿಣದ ಅಂಶದ ಮಾತ್ರೆ ಅಂದರೆ ಐರನ್ ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು …
Read More »ಬಾಳೆಹಣ್ಣಿನ ದರ ಏರಿಕೆ, ಶಾಲಾ ಮಕ್ಕಳಿಗೆ ಹಣ್ಣಿನ ಬದಲು ಶೇಂಗಾ ಚಿಕ್ಕಿ
ಬೆಲೆ ಏರಿಕೆ ಎಫೆಕ್ಟ್ ಈಗ ಕಲ್ಯಾಣ ಕರ್ನಾಟಕದ ಶಾಲಾ ಮಕ್ಕಳಿಗೂ ತಟ್ಟಿದೆ. ಬಾಳೆಹಣ್ಣಿನ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ನೀಡಲು ಮೌಖಿಕವಾಗಿ ಸೂಚಿಸಲಾಗಿದೆ. ಪೌಷ್ಟಿಕಾಂಶ ಹೆಚ್ಚಳಕ್ಕಾಗಿ ಕಲ್ಯಾಣ ಕರ್ನಾಟಕದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಆದರೆ ಇದಕ್ಕಾಗಿ ನಿಗದಿಪಡಿಸಿರುವ ದರಕ್ಕಿಂತ ಮಾರುಕಟ್ಟೆಯಲ್ಲಿ ಬಾಳೆಹಣ್ಣು ದರ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಈ …
Read More »ರಾಷ್ಟ್ರಪತಿ ಪದಗ್ರಹಣ ಸಮಾರಂಭದಲ್ಲಿ ಖರ್ಗೆಗೆ ಅಪಮಾನವಾಗಿಲ್ಲ: ಜೋಶಿ
ನವದೆಹಲಿ, ಜುಲೈ 25: ”ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ ಮಾಡಿ, ಅಗೌರವ ತೋರಲಾಗಿದೆ” ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ತಿರುಗೇಟು ನೀಡಿದ್ದಾರೆ. Respecting the position and seniority of @kharge ji, he was offered to be seated in the first row …
Read More »ಜುಲೈ 28ಕ್ಕೆ ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ‘ವಿಕ್ರಾಂತ್ ರೋಣ’:
ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್ ಮಂಜು ಮಾಹಿತಿ ನೀಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ …
Read More »ಜುಲೈ 30ರಂದು ಸಿಇಟಿ ಫಲಿತಾಂಶ
ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಜುಲೈ 30ರಂದು ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಸಂಜೆಯೊಳಗೆ ಅಂಕಗಳನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವಂತೆ ಸೂಚಿಸಿದ್ದಾರೆ. ಜೂನ್ ತಿಂಗಳಲ್ಲಿ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಸಂಬಂಧಿಸಿ ಪರೀಕ್ಷೆ ನಡೆದಿತ್ತು. ಈ ಬಾರಿ ೧೨ನೇ ತರಗತಿ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿತ್ತು.
Read More »ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣು
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಯು ಮಿಷನ್ 150 ಮಂತ್ರ ಜಪಿಸುತ್ತಿದ್ದು, ಅದನ್ನು ಸಾಕಾರಗೊಳಿಸಲು ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಮೇಲೆ ಕಣ್ಣು ಹಾಕಿದೆ. ರಾಜ್ಯದಲ್ಲಿ ಕಿತ್ತೂರು ಕರ್ನಾಟಕ, ಕರಾವಳಿ ಹಾಗೂ ಮಧ್ಯ ಕರ್ನಾಟಕ, ಮಲೆನಾಡು ಭಾಗದಲ್ಲಿ ಪ್ರಬಲವಾಗಿರುವ ಬಿಜೆಪಿಗೆ ಹಳೆ ಮೈಸೂರು ಹಾಗೂ ಕಲ್ಯಾಣ ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂಬುದು ಈಚೆಗೆ ನಡೆದ ಚಿಂತನ ಸಭೆಯಲ್ಲಿ ಚರ್ಚೆಯಾಗಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳೇ ಗುರಿ: ಕಲ್ಯಾಣ ಕರ್ನಾಟಕ …
Read More »
Laxmi News 24×7