Breaking News

ರಾಜ್ಯ

ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಬಹುದು : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ : ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನವನ್ನ ಪ್ರಾರಂಭಿಸುವುದರೊಂದಿಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ನೀದು ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡುತ್ತದೆ. ಪ್ರಗತಿಪರ ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು. ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ …

Read More »

‘ಕೃಷಿ ಹೊಂಡಗಳನ್ನು ಮಾಡದೇ ಅದರ ಫಲಾನುಭವಿಗಳು ಎಂದು ಹೇಳಿ ಹಣ ಲೂಟಿ

ಬೆಳಗಾವಿ: ‘ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವೆಂಕಟಾಪುರ ಗ್ರಾಮದಲ್ಲಿ ಮೂರು ಕೃಷಿ ಹೊಂಡ ನಿರ್ಮಿಸದೇ ಬಿಲ್‌ ಎತ್ತಿದ್ದು ಗೊತ್ತಾಗಿದೆ. ಇದನ್ನು ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಕ್ರಮ ವಹಿಸಬೇಕು. ಸರ್ಕಾರಿ ಯೋಜನೆ ದುರ್ಬಳಕೆ ಮಾಡಿಕೊಂಡವರಿಂದ ಹಣ ವಸೂಲಿ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ವಿ.ದರ್ಶನ್‌ ತಿಳಿಸಿದರು. ‘ಕೃಷಿ ಹೊಂಡಗಳನ್ನು ಮಾಡದೇ ಅದರ ಫಲಾನುಭವಿಗಳು ಎಂದು ಹೇಳಿ ಹಣ ಲೂಟಿ ಮಾಡಲಾಗಿದೆ. …

Read More »

ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುವ ಹೇಳಿಕೆಗೆ ಬಿಎಸ್‌ವೈ -U TURN ???!!

ನಿನ್ನೆ ನೀಡಿದ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಲಾಗುತ್ತಿದೆ. ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ. ನನ್ನನ್ನು ಶಿಕಾರಿಪುರದ ಜನ ಚುನಾವಣೆಗೆ ನಿಲ್ಲಲು ಒತ್ತಾಯ ಮಾಡಿದ್ರು. ಆದ್ರೆ ನಾನು ನಿಲ್ಲೋದಿಲ್ಲ, ವಿಜಯೇಂದ್ರ ನಿಲ್ತಾರೆ ಎಂದು ಹೇಳಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಿನ್ನೆ ನಾನು ಹೇಳಿದ ಹೇಳಿಕೆ ಅನಿರೀಕ್ಷಿತ, ಅಲ್ಲಿನ ಜನ ನೀವೇ ಶಿಕಾರಿಪುರದಿಂದ ಸ್ಪರ್ಧೆ ಮಾಡಬೇಕೆಂದು ಒತ್ತಾಯ ಮಾಡಿದ್ದರು. ಅದಕ್ಕೆ …

Read More »

ಕಂಠಪೂರ್ತಿ ಕುಡಿದು ಟೈಟಾಗಿ ಶಾಲೆಗೆ ಬಂದ ಶಿಕ್ಷಕಿ ಮಾಡಿದ್ದಾಳೆ ಇಂಥಾ ಕೆಲಸ..!

ಛತ್ತೀಸ್‌ಗಢದ ಟಿಕಾಯತ್‌ಗಂಜ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಿಕ್ಷಕಿಯೊಬ್ಬಳು ಕಂಠಪೂರ್ತಿ ಕುಡಿದು ಶಾಲೆಗೆ ಬಂದಿದ್ದಾಳೆ. ಮಕ್ಕಳಿಗೆ ಪಾಠ ಹೇಳುವಷ್ಟು ತ್ರಾಣವೇ ಅವಳಿಗೆ ಇರಲಿಲ್ಲ. ಕುಡಿದ ಅಮಲಿನಲ್ಲಿ ಪ್ರಜ್ಞೆಯೇ ಇಲ್ಲದಂತೆ ತರಗತಿಯಲ್ಲಿ ಬಿದ್ದುಕೊಂಡಿದ್ದಾಳೆ.   ಅದೇ ಸಮಯದಲ್ಲಿ ಶಿಕ್ಷಣಾಧಿಕಾರಿ ಶಾಲೆಯ ಪರಿಶೀಲನೆಗಾಗಿ ಸ್ಥಳಕ್ಕೆ ಬಂದರು. ಕುಡಿದು ತರಗತಿಯಲ್ಲಿ ಮಲಗಿದ್ದ ಶಿಕ್ಷಕಿಯನ್ನು ನೋಡಿ ದಂಗಾಗಿ ಹೋಗಿದ್ದಾರೆ. ಆಕೆಯನ್ನು ಎಬ್ಬಿಸಲು ಪ್ರಯತ್ನಿಸಿದ್ರೂ ಸಾಧ್ಯವಾಗಲೇ ಇಲ್ಲ. ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಕ್ಷಣಾಧಿಕಾರಿ ಶಾಲೆಗೆ ಆಗಮಿಸಿದ್ದರು. …

Read More »

‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ.: ಕೆ.ಬಿ.ಕೋಳಿವಾಡ

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಪ್ರಕಾಶ ಕೋಳಿವಾಡ ಅವರಿಗೆ ರಾಣೆಬೆನ್ನೂರು ಕ್ಷೇತ್ರ ಬಿಟ್ಟು ಕೊಡುತ್ತಿದ್ದೇನೆ’ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದರು.   ಇಲ್ಲಿನ ವಾಗೀಶನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನನ್ನ ನಿರ್ಧಾರವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಪುತ್ರನೇ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ’ ಎಂದರು. ‘ರಾಜ್ಯ ಚುನಾವಣಾ ರಾಜಕೀಯದಿಂದ …

Read More »

ಅರ್ಜುನ್ ಸರ್ಜಾಗೆ ಮತ್ತೊಂದು ಆಘಾತ: ತಾಯಿ ಲಕ್ಷ್ಮೀದೇವಿ ವಿಧಿವಶ

ಬೆಂಗಳೂರು: ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಧ್ರುವ ಸರ್ಜಾ ಅಜ್ಜಿ, ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಇಂದು ಮಾಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎನ್ನು ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀದೇವಿ ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಕಳೆದ 22 ದಿಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »

ಹೊನ್ನಾಳಿಯ ರೇಣುಕಾಚಾರ್ಯ ಮನೆಗೆ ಬಂದ ಯಡಿಯೂರಪ್ಪ; BSY ಕಂಡು ಕಣ್ಣೀರಾದ ಶಾಸಕ

ದಾವಣಗೆರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮನೆಗೆ ಭೇಟಿ ನೀಡಿದ್ದು, ಮಾಜಿ ಸಿಎಂ ಅವರನ್ನು ಕಂಡು ರೇಣುಕಾಚಾರ್ಯ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಕೆಲ ಕಾಲ ಚರ್ಚೆ ನಡೆಸಿದರು. ಈ ವೇಳೆ ಯಡಿಯೂರಪ್ಪನವರ ಆಡಳಿತ ವೈಖರಿ ನೆನೆದು ರೇಣುಕಾಚಾರ್ಯ ಭಾವುಕರಾದರು. ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಆದರೆ ಪಕ್ಷ …

Read More »

ನನ್ನ ಅಶ್ಲೀಲ ವೀಡಿಯೊಗಳನ್ನು ಖಾಸಗಿ ವೆಬ್‍ಸೈಟ್‍ವೊಂದಕ್ಕೆ ರಾಜಕುಮಾರ್ ಟಾಕಳೆ ಮಾರಿಕೊಂಡಿದ್ದಾನೆ

ರಾಜಕುಮಾರ್ ಟಾಕಳೆ ನನ್ನನ್ನು ಮದುವೆಯಾಗಿ ನನ್ನೊಂದಿಗಿನ ಏಕಾಂತದಲ್ಲಿನ ವೀಡಿಯೋ ಮಾಡಿ ಅವನ್ನು ವೆಬ್‍ಸೈಟ್‍ವೊಂದಕ್ಕೆ ಮಾರಿಕೊಂಡಿರುವ ಬಗ್ಗೆ ನನಗೆ ಮಾಹಿತಿ ಇದೆ. ಆತನಿಂದ ನನಗೆ ಹನಿಟ್ರ್ಯಾಪ್ ಆಗಿದೆ. ಇದರಿಂದ ನನ್ನ ಹಣ ಹಾಗೂ ಗೌರವ ಹಾನಿಯಾಗಿದೆ ಎಂದು ನವ್ಯಶ್ರೀ ರಾವ್ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ನವ್ಯಶ್ರೀ ರಾವ್ ಸಾಮಾಜಿಕ ಜಾಲತಾಣದಲ್ಲಿ ಅವರ ಅಶ್ಲೀಲ ವಿಡಿಯೋ, PHOTO  ವೈರಲ್ ಆದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು. ನಾನು ಭಾರತದಲ್ಲಿ ಇಲ್ಲದೇ ಇರೋ …

Read More »

ನಮ್ಮ ಪಕ್ಷದ ಬಾಹುಬಲಿ ಜಮೀರ್: ಸತೀಶ ಜಾರಕಿಹೊಳಿ‌

ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್‌ಖಾನ್. ಅವರನ್ನು ನೀವು ಎಲ್ಲ ರೀತಿಯಿಂದ ಬೆಳಸಬೇಕು.ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು. ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 3ರಂದು ಸಿದ್ದರಾಮಯ್ಯನವರ ಹುಟ್ಟು ಹಬ್ಬ ದಾವಣಗೆರೆಯಲ್ಲಿ ಮಾಡ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ ನಮ್ಮ ನಾಯಕ ಸಿದ್ದರಾಮಯ್ಯ ನವರ ಹುಟ್ಟು ಹಬ್ಬ ಆಚರಣೆ …

Read More »

ರಕ್ಷಣೆ ಕೇಳಲು ಬಂದ ಸಲ್ಮಾನ್ ಖಾನ್ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಮುಂಬೈ ಪೊಲೀಸ್..!

ಶುಕ್ರವಾರದಂದು ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈ ಪೊಲೀಸ್ ಕಮೀಷನರ್ ವಿವೇಕ್ ಪಾನ್ಸಲ್ಕರ್ ಅವರನ್ನು ಭೇಟಿ ಮಾಡಿದ್ದರು. ಸಂಜೆ 4:00 ಸುಮಾರಿಗೆ ಕ್ರಾಫರ್ಡ್ ಮಾರ್ಕೆಟ್ ಎದುರಿಗಿರುವ ಮುಂಬೈ ಪೊಲೀಸ್ ಮುಖ್ಯ ಕಚೇರಿಗೆ ಆಗಮಿಸಿದ್ದ ಅವರು ಬಳಿಕ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದಾರೆ.   ತಮ್ಮ ಈ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಲ್ಮಾನ್ ಖಾನ್, ಇದೊಂದು ಸೌಜನ್ಯದ ಭೇಟಿ ಇದರಲ್ಲಿ ಯಾವುದೇ ವಿಶೇಷವಿಲ್ಲ ಎಂದು ಹೇಳಿದ್ದಾರೆ. ಆದರೆ …

Read More »