ಬೆಳಗಾವಿ: ಅತ್ಯಂತ ತಳಮಟ್ಟದಿಂದ ಬದುಕು ಆರಂಭಿಸಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದವರೆಗೂ ಪಯಣ ಬೆಳೆಸಿರುವ ಏಕನಾಥ ಶಿಂದೆ ತಮ್ಮ ಹೋರಾಟದ ಬದುಕಿನಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 40 ದಿನಗಳ ಕಾಲ ಬೆಳಗಾವಿಯ ಹಿಂಡಲಗಾ ಹಾಗೂ ಬಳ್ಳಾರಿ ಜೈಲಿನಲ್ಲಿ ಕಳೆದಿದ್ದರು. 1985 ರಲ್ಲಿ ಭುಗಿಲೆದ್ದಿದ್ದ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ದಳ್ಳುರಿ ಬೆಳಗಾವಿಯನ್ನು ಅಕ್ಷರಶಃ ಬೆಂಕಿಯುಂಡೆಯಾಗಿಸಿತ್ತು. ಈ ವೇಳೆ ಬೆಳಗಾವಿಯಲ್ಲಿ ಶರದ್ ಪವಾರ್ ನೀಡಿದ ಕರೆಯಂತೆ ನಡೆದ ಗಡಿ …
Read More »ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಬಯಸಿದರಾ ಮಾಜಿ ಶಾಸಕ?
ಹಾಸನ: ರಾಜಕಾರಣಿಗಳು ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ ಎಂಬುದು ಪದೇ ಪದೇ ಗೋಚರಿಸುತ್ತಿರುತ್ತದೆ. ಆದರೆ ಅದು ಮಾಜಿ ಪ್ರಧಾನಿಯೊಬ್ಬರ ಸಾವನ್ನು ಬಯಸುವ ಮಟ್ಟಕ್ಕೆ ಹೋಗುತ್ತದೆ ಎಂಬುದು ವಿಪರ್ಯಾಸ. ಇಂಥದ್ದೊಂದು ವಿವಾದವನ್ನು ಸೃಷ್ಟಿಸಿದ್ದಾರೆ ಮಾಜಿ ಶಾಸಕ ಕೆ.ಎನ್.ರಾಜಣ್ಣ. ಸಮಾರಂಭವೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಶಾಸಕ ಕೆ.ಎನ್ ರಾಜಣ್ಣ, ಪರೋಕ್ಷವಾಗಿ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದು, ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ. ಹೆಚ್.ಡಿ.ದೇವೇಗೌಡರು ಈಗಾಗಲೇ …
Read More »ಬೆಳಗಾವಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್
ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ-ನಿಪ್ಪಾಣಿ ನಡುವಿನ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ಚಿಕ್ಕೋಡಿಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೂ ಅನುದಾನ ಬಿಡುಗಡೆ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಬೆಳಗಾವಿ ಜಿಲ್ಲೆಯ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. 32 ಕೋಟಿ ರೂ ವೆಚ್ಚದಲ್ಲಿ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ಹಲವು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ : ಅಶೋಕ ಪಾಟೀಲ…
ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-45 ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …
Read More »ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ನೇರ ನೇಮಕಾತಿ ಸೇರಿದಂತೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಕಲ್ಯಾಣ ಸೌಲಭ್ಯಗಳನ್ನ ನೀಡುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಸ್ವಚ್ಛತಾ ಕಾರ್ಮಿಕರ ಮುಷ್ಕರದಿಂದಾಗಿ ತ್ಯಾಜ್ಯ ಸಮಸ್ಯೆ ಉಲ್ಬಣಿಸಲಿದೆ. ಪೌರ ಕಾರ್ಮಿಕರ ಬೇಡಿಕೆ ಏನು?: ಕೆಲಸದ ಖಾಯಮಾತಿ ಪೌರಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಮಾಸಿಕ ಸುಮಾರು 14,000 …
Read More »ಬೆಳಗಾವಿ ಆರೋಗ್ಯ ಇಲಾಖೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ರಿಂದ ಮೇಜರ್ ಸರ್ಜರಿ..
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸನ್ನವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿರುತ್ತಾರೆ. ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು. ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ ಅವರು ಸಮರ್ಪಕವಾಗಿ …
Read More »ಆಟೋರಾಜ ಬನ್ ಗಯಾ ‘ಮಹಾ’ ರಾಜ
ಮಹಾರಾಷ್ಟ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಈಗ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ಶಿವಸೇನಾ ಮುಖಂಡ ಏಕನಾಥ್ ಶಿಂಧೆ ಇಟ್ಟಿರುವ ನಡೆ ಒಂದು ಕ್ಷಣ ಶಿವಸೇನಾ ಕಾರ್ಯಕರ್ತರನ್ನು ದಂಗು ಬಡಿಸಿತ್ತು. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಎಂ ಸ್ಥಾನ ಕಿತ್ತುಕೊಂಡಿದ್ದಲ್ಲದೆ, ರಾಜಕೀಯ ಭವಿಷ್ಯಕ್ಕೆ ಮಾರಕವಾಗುವಂಥ ಪೆಟ್ಟನ್ನು ಏಕನಾಥ್ ಕೊಟ್ಟಿದ್ದಾರೆ. ಜೂನ್ 30ರಂದು ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಪರ್ವ ಆರಂಭವಾಗಿದ್ದು, ಏಕನಾಥ್ ಶಿಂಧೆ ಹೊಸ …
Read More »ಇದು ಪ್ರಧಾನಿಗೆ ವಿದಾಯ ಹೇಳುವ ಸಮಯ;K.T.R.
ಹೈದರಾಬಾದ್, ಜೂ.30: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಕಾರ್ಯಾಧ್ಯಕ್ಷ ಕೆ. ಟಿ. ರಾಮರಾವ್ ಗುರುವಾರ ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳು ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಿನ್ನೆಲೆ ಇದು ಬಿಜೆಪಿ ಸಾಧನೆಗಳೆಂದು ಹೇಳುತ್ತಾ “ಬೈ ಬೈ ಮೋದಿ” ಎಂದು ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಹೈದರಾಬಾದ್ನಲ್ಲಿ ತಮ್ಮ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಮರಾವ್, ಜುಲೈ 2 ಮತ್ತು 3 …
Read More »ಏಕ ಬಳಕೆಯ ಪ್ಲಾಸ್ಟಿಕ್ಗೆ ಮತ್ತೆ ನಿಷೇಧ: ಉಲ್ಲಂಘಿಸಿದರೆ ವ್ಯಾಪಾರಿಗಳಿಗೆ ಬೀಳಲಿದೆ ಭಾರಿ ದಂಡ
ಬೆಂಗಳೂರು, ಜುಲೈ 1: ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಆದೇಶಕ್ಕೆ ಬದ್ಧವಾಗಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದಲ್ಲಿ ಜುಲೈ1ರಿಂದ ನಿಷೇಧ ಜಾರಿಗೊಳಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ. ಕೆಎಸ್ಪಿಸಿಬಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ನಾಗರಿಕ ಸಂಸ್ಥೆಗಳು ನಿಷೇಧವನ್ನು ಜಾರಿಗೊಳಿಸುತ್ತವೆ. ನಾವು ಮೇಲ್ವಿಚಾರಣೆ ಮಾಡುತ್ತೇವೆ. ಜುಲೈ1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ.
Read More »ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ
ಮುಂಬೈ; ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಫಡ್ನವಿಸ್, ಶಿವಸೇನೆಯ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7:30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದರು. ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರದ …
Read More »
Laxmi News 24×7