ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಘಟಪ್ರಭಾ ಪಟ್ಟಣದ ಡಾ.ಎನ್.ಎಸ್.ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಸತೀಶ ಜಾರಕಿಹೊಳಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ ತಾಂತ್ರಿಕತೆ ಅಳವಡಿಸಿಕೊಳ್ಳಬೇಕು. …
Read More »ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್ ಜಾರಕಿಹೊಳಿ
ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …
Read More »ಸಚಿವ ಉಮೇಶ್ ಕತ್ತಿ ಅವನೊಬ್ಬ ಬುದ್ದಿ ಇಲ್ಲದ ಅವಿವೇಕಿ: ಹೆಚ್.ಸಿ ಮಹಾದೇವಪ್ಪ
ಮೈಸೂರು: ಸಚಿವ ಉಮೇಶ್ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ಆದರೆ ಅವನೊಬ್ಬ ಬುದ್ಧಿ ಇಲ್ಲದ ಅವಿವೇಕಿ. ಮಾಡೋದಕ್ಕೆ ಕೆಲಸ ಇಲ್ಲದೇ ಏನೇನೋ ಕೆರೆದುಕೊಳ್ಳುತ್ತಿದ್ದಾನೆ. ಅರಣ್ಯ ಇಲಾಖೆಯಂತ ಬಹುಮುಖ್ಯ ಖಾತೆ ಇದ್ದರೂ ಕೆಲಸ ಇಲ್ಲದಂತೆ ಇದ್ದಾನೆ ಎಂದು ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕತ್ತಿ ಮುಖ್ಯಮಂತ್ರಿ ಆಗುವ ಆಸೆ ಇದ್ರೆ ಇಲ್ಲೇ ಆಗಲಿ. ಅದಕ್ಯಾಕೆ ಪ್ರತ್ಯೇಕ ರಾಜ್ಯ ಬೇಕು ನಿನಗೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಲಿಲ್ಲ …
Read More »ಬಳ್ಳಾರಿ ಪಾಲಿಕೆಯಲ್ಲಿ ಹೈಡ್ರಾಮಾ: ಕಮಿಷನರ್ಗೆ ಕನ್ನಡದಲ್ಲೇ ಮಾತಾಡಿ ಮೇಡಂ ಎಂದು ಪಾಲಿಕೆ ಸದಸ್ಯರಿಂದ ತರಾಟೆ
ಬಳ್ಳಾರಿ: ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ತಡವಾಗಿ ಬಂದು ಕನ್ನಡ ಬಳಸದ ಪಾಲಿಕೆ ಆಯಕ್ತೆಯನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಗೆ ಮೇಯರ್ ಮೊದಲು ಬಂದು ಆಯುಕ್ತರಿಗಾಗಿ ಕಾದರೂ ಅವರ ಪತ್ತೆಯೇ ಇರಲಿಲ್ಲ, ಇದರಿಂದ ಅಸಮಾಧಾನಗೊಂಡ ಸದಸ್ಯರು ತಡವಾಗಿ ಬಂದ ಪ್ರೀತಿ ಗೆಹ್ಲೋಟ್ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು. ಇದೇ ವೇಳೆ ಕಾದು ಸುಸ್ತಾದ ಮೇಯರ್ ರಾಜೇಶ್ವರಿ ಅವರು ಕೆಲಕಾಲ ಹೊರಹೋಗಿದ್ದರು, ಈ ವೇಳೆಯೇ ಬಂದ …
Read More »ಸಿಎಂಗೆ ಮುಜುಗರ ತಂದಿಟ್ಟ ಕಳಪೆ ರಸ್ತೆ; ಸ್ಪಷ್ಟನೆ ಕೇಳಿದ ಪ್ರಧಾನಿ ಕಚೇರಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿ ಸಂದರ್ಭದಲ್ಲಿ ಆರು ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿರುವುದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ” ಕಾಮನ್ ಮ್ಯಾನ್ ಸಿಎಂ” ಖ್ಯಾತಿಗೆ ಈಗ ಕಳಂಕ ತಂದಿದೆ. ಸಿಎಂ ಬೊಮ್ಮಾಯಿ ದಿಲ್ಲಿಯಲ್ಲಿ ಇರುವಾಗಲೇ ಈ ಕಳಪೆ ಕಾಮಗಾರಿ ಬಗ್ಗೆ ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ ಕೇಳಿದೆ. ತಮ್ಮ ಬೆಂಗಳೂರು ಭೇಟಿ ಸಂದರ್ಭದಲ್ಲಿ ಬೊಮ್ಮಾಯಿ ಅವರನ್ನು ” ಜನಪ್ರಿಯ …
Read More »ಕಳ್ಳರನ್ನು ಹಿಡಿದ ಗ್ರಾಮಸ್ಥರಿಗೆ ಉದ್ಧಟತನ ಹೇಳಿಕೆ; ಬಿಜಿ ಇದ್ದೀವಿ ಎಂದು ಬೆಲೆ ತೆತ್ತ ಕಾನ್ಸ್ಟೇಬಲ್
ವಿಜಯಪುರ/ಬೆಂ.ಗ್ರಾಮಾಂತರ: ಸಾರ್, ಕೊಳವೆಬಾವಿಗಳಲ್ಲಿ ಕೇಬಲ್ ಕದಿಯುತ್ತಿದ್ದ ಕಳ್ಳರನ್ನು ಹಿಡಿದಿದ್ದೀವಿ ಬೇಗ ಬನ್ನಿ ಎಂದು ಕರೆ ಮಾಡಿದವರಿಗೆ ನಾವು ಬಿಜಿ ಇದ್ದೀವ್ರೀ..ನೀವೆ ಅವರನ್ನು ಠಾಣೆಗೆ ಕರೆದುಕೊಂಡು ಬನ್ನಿ ಎಂದು ಪೊಲೀಸರು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಆಡಿಯೋ ಪೊಲೀಸರ ವೈಖರಿಯನ್ನು ಅಣುಕ ಮಾಡಿದೆ. ಕಳ್ಳರನ್ನು ಹಿಡಿದವರೇ ಠಾಣೆಗೆ ಕರೆತನ್ನಿ ಎಂದ ಪೊಲೀಸಪ್ಪ ಅಮಾನತು ಶಿಕ್ಷೆಗೂ ಗುರಿಯಾಗಿದ್ದಾರೆ. ಏನಿದು ಪ್ರಕರಣ?: ಆವತಿ ಗ್ರಾಪಂ ವ್ಯಾಪ್ತಿಯ ಎಂಬ್ರಹಳ್ಳಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ …
Read More »ಶಿಂಧೆ ಬಣದಿಂದ ಶಾಸಕ ದೇಶ್ಮುಖ್ ಅಪಹರಣಕ್ಕೆ ಟ್ವಿಸ್ಟ್: ಫೋಟೋ ಬಿಡುಗಡೆ ಮಾಡಿದ ರೆಬೆಲ್ ಶಾಸಕರು!
ಮುಂಬೈ: ಮಹಾರಾಷ್ಟ್ರದ ರಾಜಕೀಯದ ಕುತೂಹಲ ಇನ್ನೂ ತಣ್ಣಗಾಗಿಲ್ಲ. ಯಾವಾಗ ಸರ್ಕಾರ ಪತನವಾಗುವುದೋ, ಯಾವಾಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ಕೊಡುವರೋ ಎಂದು ರೆಬೆಲ್ ಶಾಸಕರು ಕಾಯುತ್ತಿದ್ದಾರೆ. ಅದೇ ವೇಳೆ ಕುತೂಹಲದ ಬೆಳವಣಿಗೆಯೊಂದರಲ್ಲಿ ಬುಧವಾರ (ಜೂನ್ 22) ಮಹಾರಾಷ್ಟ್ರ ಸರ್ಕಾರದ ಪತನಕ್ಕೆ ಕಾರಣವಾಗಿರುವ, ಶಿವಸೇನೆಯ ಪ್ರಬಲ ನಾಯಕ ಏಕನಾಥ ಶಿಂಧೆ ಗುಂಪಿನಿಂದ ಶಾಸಕ ನಿತಿನ್ ದೇಶ್ಮುಖ್ ಹಾಗೂ ಶಾಸಕ ಕೈಲಾಸ್ ಪಾಟೀಲ್ ತಪ್ಪಿಸಿಕೊಂಡು ಬಂದಿದ್ದರು. ಸೀದಾ ಉದ್ಧವ್ ಠಾಕ್ರೆ ಬಳಿ ಬಂದಿದ್ದ ಇವರು, …
Read More »ಶಿವಸೇನ- ಶಿಂಧೆ ಸೇರಿ 12 ಶಾಸಕರ ಅನರ್ಹಕ್ಕೆ ಕೋರಿಕೆ
ಮುಂಬೈ: ಮಹಾರಾಷ್ಟ್ರ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಎಳ್ಳುನೀರು ಬಿಡುವ ಕಾಲ ಸನ್ನಿಹಿತವಾಗ್ತಿದೆ. ಏಕನಾಥ್ ಶಿಂಧೆಯ ಬಂಡಾಯದ ಬಲೆಗೆ ಮಹಾ ವಿಕಾಸ್ ಅಘಾಡಿ ಪತರುಗುಟ್ಟಿದೆ. ಈ ಮಧ್ಯೆ ರೆಬೆಲ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಶಿವಸೇನಾ ಸಜ್ಜಾಗಿದೆ. ಸರ್ಕಾರವನ್ನ ಮುಳುಗಿಸಿ ಗುವಾಹಟಿಯಲ್ಲಿರೋ ಶಾಸಕರ ವಿರುದ್ಧ ಅನರ್ಹತೆಯ ಅಸ್ತ್ರ ಪ್ರಯೋಗಕ್ಕೆ ಸಿದ್ಧತೆ ನಡೆಸ್ತಿದೆ. ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಬಾಂಬ್ ಫಿಕ್ಸ್ ಮಾಡಿ ಗುವಾಹಟಿ ಹಾರಿ ಏಕನಾಥ್ ಶಿಂಧೆ ಬಣ ಕೇಕೆ ಹಾಕ್ತಿದೆ. …
Read More »ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ: ಸತೀಶ ಜಾರಕಿಹೊಳಿ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರತಿಕ್ರಿಯೆ: ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಗ್ಗೆ ಸಚಿವ ಉಮೇಶ್ ಕತ್ತಿ ಪುನರುಚ್ಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂರು ಕೋಟಿ ಜನಸಂಖ್ಯೆ ಇದ್ದಲ್ಲಿ ಎರಡು ರಾಜ್ಯ ಮಾಡಲು ಮಸೂದೆ ತರಲು ಬಿಜೆಪಿ ಪ್ಲ್ಯಾನ್ ಇದೆ. ಅದರ ಚಿಂತನೆ ಕೂಡ ನಡೀತಿದೆ. ಒಂದು ವೇಳೆ ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ. ಹಿಂದೆ ಪ್ರಧಾನಿ ಮೋದಿ ಈ …
Read More »ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್ ಕುಮಟಳ್ಳಿ
ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್ ಕುಮಟಳ್ಳಿ …
Read More »
Laxmi News 24×7