Breaking News
Home / ರಾಜ್ಯ (page 1760)

ರಾಜ್ಯ

ಅಕಾಲಿಕ ಆಲಿಕಲ್ಲು ಮಳೆಗೆ ಬೆಳೆ ನಾಶ; ರೈತರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ: ಜಿಲ್ಲೆಯ ರೈತರು ಎರಡು ಸಾವಿರ ಅಡಿಗಳ ಪಾತಾಳದಿಂದ ನೀರು ತೆಗೆದು, ತರಕಾರಿ ಹಾಗೂ ಹಣ್ಣು ಬೆಳೆದು ಜೀವನ ಸಾಗಿಸುತ್ತಿದ್ದಾರೆ. ಹಗಲು ರಾತ್ರಿ ಕಷ್ಟ ಪಟ್ಟು ಬೆಳೆದ ಬೆಳೆಗಳನ್ನು ಇನ್ನೇನು ಕಟಾವು ಮಾಡಿ ಅದರಿಂದ ಆದಾಯ ಗಳಿಸಬಹುದು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಅಷ್ಟರಲ್ಲಿ ಶುಕ್ರವಾರ ಸಂಜೆ ಸುರಿದ ಆಲಿಕಲ್ಲು ಮಳೆಗೆ ಎಲ್ಲವೂ ಮಣ್ಣು ಪಾಲಾಗಿವೆ. ಮತ್ತೊಂದೆಡೆ ಲಕ್ಷಾಂತರ ರೂಪಾಯಿ ಸಾಲ ಮಾಡಿ ಕಟ್ಟಿದ್ದ ಪಾಲಿ ಹೌಸ್​ಗಳು ಅಸ್ತವ್ಯಸ್ತವಾಗಿವೆ. ಕೊರೊನಾ …

Read More »

ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೈಸೂರು: ವಾರಾಂತ್ಯದ ಕರ್ಫ್ಯೂ ನಿಯಮ ಉಲ್ಲಂಘಿಸಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಳಿ ಕಾರಿನಲ್ಲಿ ತೆರಳುತ್ತಿದ್ದ ಪ್ರಸಿದ್ಧ ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ಕರ್ಫ್ಯೂ ನಿಯಮ ಉಲ್ಲಂಘಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮೈಸೂರಿನ ಗ್ರಾಮೀಣ ಪ್ರದೇಶಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಜನರಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಂಟು ನೆಪ ಹೇಳಿ ತಿರುಗಾಡುವವರನ್ನು ಖಾಕಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ …

Read More »

ಮುಸ್ಲಿಂ ಯುವಕರ ತಂಡದಿಂದ ಕೊವಿಡ್​ಗೆ ಬಲಿಯಾದವರ ಉಚಿತ ಅಂತ್ಯಸಂಸ್ಕಾರ; ತುಮಕೂರಿನಲ್ಲೊಂದು ಮಾನವೀಯ ಕಾರ್ಯ

ತುಮಕೂರು: ಕೊವಿಡ್ ಸೋಂಕು ಎಲ್ಲರನ್ನೂ ಭಾವನಾತ್ಮಕವಾಗಿ, ಮಾನಸಿಕವಾಗಿ ಒಗ್ಗೂಡಿಸುತ್ತಿದೆ. ಮನುಷ್ಯರೆಲ್ಲರೂ ಒಂದೇ ಎಂಬ ಭಾವವನ್ನು ಎಲ್ಲರ ಮನಸ್ಸಿನಲ್ಲಿಯೂ ಮೂಡಿಸುತ್ತಿದೆ. ಕೊವಿಡ್​ನಿಂದ ಉಂಟಾದ ಸಮಸ್ಯೆಯನ್ನು ಪರಿಹರಿಸಲು ಮುಸ್ಲಿಂ ಯುವಕರ ತಂಡವೊಂದು ನಡೆಸುತ್ತಿರುವ ಮಾನವೀಯ ಕಾರ್ಯಕ್ಕೆ ತುಮಕೂರು ಸಾಕ್ಷಿಯಾಗುತ್ತಿದೆ. ನಿನ್ನೆಯಿಂದ ಜಿಲ್ಲೆಯ ಮಧುಗಿರಿಯ ಎಂಟು ಮುಸ್ಲಿಂ ಯುವಕರ ತಂಡವೊಂದು ಸ್ವಯಂ ಪ್ರೇರಿತರಾಗಿ ತಾಲ್ಲೂಕು ಆಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆ ಗಳಲ್ಲಿ ಕೊವಿಡ್​ನಿಂದ ಮೃತಪಟ್ಟ ಶರೀರವನ್ನು ಆಯಾ ಗ್ರಾಮಗಳಲ್ಲಿ ಅವರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಿಕೊಡುತ್ತಿದೆ. …

Read More »

ತೊದಲು ನುಡಿಯಲ್ಲೇ ಲೋಕಜ್ಞಾನ ತೆರೆದಿಡುವ ಮಗು; ಎರಡೂವರೆ ವರ್ಷದ ಬಾಲಕಿ ಜ್ಞಾಪಕ ಶಕ್ತಿಗೆ ಬೆರಗಾದ ಬಾಗಲಕೋಟೆ ಮಂದಿ

ಬಾಗಲಕೋಟೆ: ಮಕ್ಕಳಿರಲವ್ವ ಮನೆ ತುಂಬ, ಕೂಸು ಕಂದಯ್ಯ ಒಳ ಹೊರಗಾ ಆಡಿದರ ಬೀಸಣಿಕೆ ಗಾಳಿ ಸುಳಿದಾವ ಎಂಬ ಮಾತು ಇದೆ. ಮಕ್ಕಳಿದ್ದ ಮನೆಯಲ್ಲಿ ಪ್ರತಿದಿನವೂ ಸಂಭ್ರಮ, ಅವುಗಳ ತೊದಲು ನುಡಿ ತುಂಟಾಟ ನೋಡುವುದೇ ಅಂದ ಎಂಬುವುದು ಇದರ ಅರ್ಥ. ಇದಕ್ಕೆ ಪುಷ್ಠಿ ನೀಡುವಂತೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಓರ್ವ ಅಸಾಮಾನ್ಯ ಬಾಲಕಿ ಇದ್ದು, ಆಕೆಯ ಹೆಸರು ಸಮನ್ವಿತಾ ಕರಕಟ್ಟಿ. ವಯಸ್ಸು ಕೇವಲ ಎರಡುವರೆ ವರ್ಷ,ಆದರೆ ಈಕೆಯ ಸಾಧನೆ ಮಾತ್ರ …

Read More »

ಮುಂಗಡ ಹಣ ವಾಪಸ್ ನೀಡಲು ಕಲ್ಯಾಣ ಮಂಟಪ ಮಾಲೀಕರಿಂದ ನಕಾರ

ಚಿಕ್ಕಮಗಳೂರು: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಿಗೆ ಕಠಿಣ ನಿಯಮವನ್ನು ಹೇರಲಾಗಿದೆ. ಸಾವಿರಾರು ಜನರನ್ನ ಸೇರಿಸಿ ಮದುವೆ ಮಾಡಬೇಕು ಎಂದು ಆಸೆಪಟ್ಟವರು ಇದೀಗ 50 ಮಂದಿಯನ್ನ ಸೇರಿಸಿ ಮದುವೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ದೊಡ್ದ ದೊಡ್ಡ ಹಾಲ್​ಗಳಲ್ಲಿ ಬುಕ್ ಮಾಡಿದ ಮದುವೆಗಳೇಲ್ಲ ಮನೆಗಳಲ್ಲಿ ಮತ್ತು ದೇವಸ್ಥಾನಗಳಲ್ಲಿ ಮಾಡಲು ನಿರ್ಧರಿಸಲಾಗಿದೆ. ಆದರೆ ಕನ್ಷೆಷನ್ ಹಾಲ್​ಗಳಿಗೆ ಮುಂಗಡವಾಗಿ ಕಟ್ಟಿದ ಹಣವನ್ನ ಮಾತ್ರ ಕೇಳಬೇಡಿ ಎಂದು ಮಾಲೀಕರು ಹೇಳುತ್ತಿದ್ದಾರೆ. ಹೀಗಾಗಿ ಕುಟುಂಬಸ್ಥರಲ್ಲಿ …

Read More »

‘ಲಸಿಕೆ ಪಡೆಯುವ ಮೊದಲು ರಕ್ತದಾನ ಮಾಡಿ ಪ್ಲೀಸ್’: ಶಿರಸಿ ವೈದ್ಯೆಯ ಜಾಗೃತಿ ಅಭಿಯಾನ

ಶಿರಸಿ: ಕೇಂದ್ರ ಸರಕಾರ ಕೋವಿಡ್ 19ರ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಲು ಮುಕ್ತ ಅವಕಾಶ ಪ್ರಕಟಿಸಿದೆ. ಸರಕಾರಗಳಿಂದ ಕೋವಿಡ್ ನಿಯಂತ್ರಣಕ್ಕೆ ಇದು ಅತ್ಯಂತ ಮಹತ್ವದ ನಡಯಾಗಿದೆ. ಈ ನಡೆಯ ಬೆನ್ನಲ್ಲೇ ಶಿರಸಿಯ ವೈದ್ಯೆಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೊದಲು ಅರ್ಹ ದಾನಿಗಳು ‘ರಕ್ತದಾನ ಮಾಡಿ ಪ್ಲೀಸ್’ ಎಂಬ ವಿನೂತನ ಜಾಗೃತಿ ಅಭಿಯಾನವನ್ನೂ ಆರಂಭಿಸಿದ್ದಾರೆ. ಏನಿದು ಅಡಚಣೆ? ಕೋವಿಡ್ ನಿರೋಧಕ ಲಸಿಕೆ …

Read More »

ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಚರ್ಚೆ ನಡೆಸಿದ ಅವರು ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ …

Read More »

ಮಗನ ಸಾವಿನ ಬಗ್ಗೆ ಪ್ರಶ್ನಿಸಿದ್ದಕ್ಕೆ ಕೇಸು ಹಾಕುದಾಗಿ ಬೆದರಿಸಿದ ಖಾಸಗಿ ಆಸ್ಪತ್ರೆ

ಬೆಂಗಳೂರು: ಜ್ವರ ಎಂದು ನಗರದ ಖಾಸಗಿ ಆಸ್ಪತ್ರೆಗೆ ಸೇರಿದ ಒಬ್ಬ ಯುವಕ ಇಂದು ಮೃತಪಟ್ಟಿದ್ದಾನೆ. ಆತನ ಮರಣದ ಕುರಿತು ಆಸ್ಪತ್ರೆಯೊಂದಿಗೆ ವಿಚಾರಿಸಿದ ಯುವಕನ ಪೋಷಕರಿಗೆ ಆಸ್ಪತ್ರೆ ಸಿಬ್ಬಂದಿ ನಿಮ್ಮ ಮಗನ ಸಾವಿನ ಬಗ್ಗೆ ಕೇಳಿದರೆ ನಿಮ್ಮ ಮೇಲೆ ಕೇಸು ಹಾಕುದಾಗಿ ಬೆದರಿಕೆ ಹಾಕಿದ್ದಾರೆ. ಕೇಂದ್ರದ ಮಾಜಿ ಅಧಿಕಾರಿಯಾಗಿದ್ದ ದಿವಾಕರ್ ಕೋರೆ ಅವರ ಮಗ ಅಲೋಕ್ ಜ್ವರ ಎಂದು ಅತ್ತಿಬೆಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ. ನಂತರ ಆತನಿಗೆ ಕೊರೊನಾ ಪಾಸಿಟಿವ್ ಆಗಿತ್ತು. …

Read More »

ವರನಟ ಡಾ.ರಾಜ್‍ಕುಮಾರ್ 92ನೇ ಜನ್ಮದಿನ ಸಂಭ್ರಮಾಚರಣೆಯನ್ನು ರಾಜ್ ಅವರ ಮೂವರು ಮಕ್ಕಳು ಒಂದೊಂದು ರೀತಿಯಾಗಿ ವಿಶೇಷವಾಗಿ ಆಚರಿಸುವ ಮೂಲಕವಾಗಿ ತಂದೆಗೆ ಪ್ರೀತಿಯನ್ನು ತೋರಿಸಿದ್ದಾರೆ.

ಬೆಂಗಳೂರು: ವರನಟ ಡಾ.ರಾಜ್‍ಕುಮಾರ್ 92ನೇ ಜನ್ಮದಿನ ಸಂಭ್ರಮಾಚರಣೆಯನ್ನು ರಾಜ್ ಅವರ ಮೂವರು ಮಕ್ಕಳು ಒಂದೊಂದು ರೀತಿಯಾಗಿ ವಿಶೇಷವಾಗಿ ಆಚರಿಸುವ ಮೂಲಕವಾಗಿ ತಂದೆಗೆ ಪ್ರೀತಿಯನ್ನು ತೋರಿಸಿದ್ದಾರೆ. ನಟನೆ ಸರಳತೆ, ವ್ಯಕ್ತಿತ್ವದ ಮೂಲಕವಾಗಿ ಅಪಾರ ಸಂಖ್ಯೆ ಅಭಿಮಾನಿಗಳನ್ನು ಗಳಿಸಿಕೊಂಡಿದ್ದ ರಾಜ್‍ಕುಮಾರ್ ಅವರಿಗೆ ಅವರು ಮಕ್ಕಳು ದೊಡ್ಡ ಅಭಿಮಾನಿಗಳಾಗಿದ್ದಾರೆ. ತಾವು ಮಾಡುವ ಯಾವುದೇ ಕೆಲಸಗಳಿಗೆ ರಾಜ್‍ಮಕ್ಕಳು ತಮ್ಮ ತಂದೆಯನ್ನು ನೆನೆಯುತ್ತಾರೆ. ನಾವು ನಮ್ಮ ತಂದೆಗೆ ದೊಡ್ಡ ಅಭಿಮಾನಿಗಳು ಎಂದು ಆಗಾಗ ಹೇಳುತ್ತಿರುತ್ತಾರೆ. ರಾಜ್‍ಕುಮಾರ್ ಅವರ …

Read More »

ನಿಯಮ ಉಲ್ಲಂಘಿಸಿದರೆ ಲಾಠಿ ಚಾರ್ಜ್

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ. ರಾತ್ರಿ 9ಗಂಟೆಯಿಂದ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಇರಲಿದೆ. ಇದೀಗ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ನೀಡಿದ್ದ ಸಮಯ ಮುಗಿದಿದ್ದು, ದಿನಸಿ, ತರಕಾರಿ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ. ಮನೆಯಿಂದ ಯಾರೊಬ್ಬರು ಹೊರಬರದಂತೆ ಎಚ್ಚರಿಕೆ ನಿದಲಾಗಿದೆ. ಅನಗತ್ಯವಾಗಿ ಜನರು ಓಡಾಟ ನಡೆಸಿದರೆ ಲಾಠಿ …

Read More »