Breaking News

ರಾಜ್ಯ

ಹೊಸ ಕಾರ್ಮಿಕ ನೀತಿ ಬಂದ್ರೆ ವಾರಕ್ಕೆ 4 ದಿನ ಕೆಲಸ, ಉಳಿತಾಯ ಜಾಸ್ತಿ!

ಬೆಂಗಳೂರು, ಜೂ. 14: ಪ್ರತಿ ದಿನ 12 ತಾಸು ಕೆಲಸ.. ನಾಲ್ಕು ದಿನಕ್ಕೆ ವಾರದ 48 ಗಂಟೆ ಕೆಲಸ ಮಾಡಿದ್ರೆ ಸಾಕು, ಉಳಿದ ಮೂರು ದಿನ ರಜೆ! ಹೊಸ ಕಾರ್ಮಿಕ ನೀತಿಯನ್ನು ಜಾರಿಗೆ ತರಲು ಕೇಂದ್ರ ಕಾರ್ಮಿಕ ಸಚಿವಾಲಯ ಮುಂದಾಗಿದೆ. ಅಂದಹಾಗೆ ಜುಲೈ 1 ನೇ ತಾರೀಖಿನಿಂದ ಈ ಹೊಸ ಕಾರ್ಮಿಕ ನೀತಿ ಜಾರಿಗೆ ಬರಲಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಈ ಹೊಸ ಕಾರ್ಮಿಕ ನೀತಿ ಜಾರಿಗೆ …

Read More »

ಲಾಡ್ಜ್ ನ‌ಲ್ಲಿ ಕತ್ತು ಹಿಸುಕಿ ಪ್ರೇಯಸಿಯನ್ನು ಕೊಂದು ಪರಾರಿಯಾದ ಪ್ರಿಯಕರ

ಬೆಂಗಳೂರು: ಪ್ರೇಯಸಿಯನ್ನು ಪ್ರಿಯಕರನೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಡಿಶಾ ಮೂಲದ ದೀಪ ಪದಮ್‌(32) ಕೊಲೆ ಯಾದ ಮಹಿಳೆ. ಕೃತ್ಯ ಎಸಗಿದ ಆರೋಪಿ ಅನ್ಮಲ್‌ ರತನ್‌ ಕಂದರ್‌ಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.   ಆರೋಪಿ ಅನ್ಮಲ್‌ ರತನ್‌ ಕಂದರ್‌ ಕೆಲ ವರ್ಷಗಳ ಹಿಂದೆ ದೀಪಾಲಿ ಎಂಬಾಕೆಯನ್ನು ಒಡಿಶಾದಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಆರೋಪಿ ಬಾಟಾ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ದಂಪತಿ ಬೆಂಗಳೂರಿನ …

Read More »

ಆ ಗಂಡಿಗೆ ಉತ್ತರ ಕೊಡುತ್ತೇನೆ’ : ಮತ್ತೆ ರಾಮನಗರದಲ್ಲಿ “ಗಂಡಿನ ಗದ್ದಲ”

ಬೆಂಗಳೂರು: ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ ನಾರಾಯಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯೆ ಮತ್ತೆ ವಾಗ್ವಾದ ತಾರಕಕ್ಕೆ ಏರಿದ್ದು “ಆ ಗಂಡಿಗೆ ಉತ್ತರ ಕೊಡುತ್ತೇನೆ” ಎಂದು ಶಿವಕುಮಾರ್ ತಿರುಗೇಟು ನೀಡಿದ್ದಾರೆ.   ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿದ್ದ ಅಶ್ವತ್ಥನಾರಾಯಣ, ಡಿ.ಕೆ‌.ಶಿವಕುಮಾರ್ ಗೆ ಇಡಿ, ಐಟಿ ಅನುಭವ ಚೆನ್ನಾಗಿದೆ. ಅವರು ತಿಹಾರ್ ಕಡೆ ಪ್ರಯಾಣ ಬೆಳೆಸಬೇಕು ಎಂದು ವ್ಯಂಗ್ಯವಾಡಿದ್ದರು. ಇದರಿಂದ ಕೆರಳಿರುವ ಶಿವಕುಮಾರ್, ‘ಆ ಗಂಡಿಗೆ ಉತ್ತರ ನೀಡುತ್ತೇನೆ’ …

Read More »

ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಕಾರಿ ಅಧಿಕಾರಿಗಳಿಗೆ ಫೋನ್ ಮಾಡಿ ಅಕೌಂಟ್‍ಗೆ ಹಣ ಹಾಕುವಂತೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಾವು ಎಸಿಬಿ ಅಧಿಕಾರಿಗಳೆಂದು ನಂಬಿಸಿ ಸರಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡುತ್ತಿದ್ದ ಮೂವರು ಖದೀಮರನ್ನು ಬೆಳಗಾವಿಯ ಸಿಎಎನ್ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರ್‍ಪಡಿಸಿದ್ದಾರೆ. ಬಂಧಿತರನ್ನು ಚಿಕ್ಕೋಡಿಯ ಸದಲಗಾ ಮೂಲದ 56ವರ್ಷದ ಮುರಗೆಪ್ಪ ನಿಂಗಪ್ಪ ಪೂಜಾರ್, …

Read More »

ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವ ಮೈಕ್ರೋಸಾಫ್ಟ್‌

ಸಾಫ್ಟ್‌ವೇರ್‌ ದಿಗ್ಗಜ ಮೈಕ್ರೋಸಾಫ್ಟ್‌ ಕಂಪನಿಯು ತನ್ನ ಪ್ರಸಿದ್ಧ ವೆಬ್‌ ಬ್ರೌಸರ್‌ ಇಂಟರ್ನೆಟ್ ಎಕ್ಸ್‌ಪ್ಲೋರರ್ (IE) ಗೆ ನಿವೃತ್ತಿ ಘೋಷಿಸಿದೆ. ಈ ಹಿಂದೆ ಕಳೆದ ವರ್ಷವೇ ಈ ಕುರಿತು ಸುದ್ದಿಗಳು ಹರಿದಾಡಿದ್ದವು. ಪ್ರಸ್ತುತ ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವುದಾಗಿ ಹೇಳಿದೆ. ಇದರ ಬದಲಾಗಿ ಕ್ರೋಮಿಯಂ-ಆಧಾರಿತ ಎಡ್ಜ್ ಅನ್ನು ವಿಂಡೋಸ್ ಪಿಸಿಗಳಿಗೆ ಪ್ರಾಥಮಿಕ ಬ್ರೌಸರ್‌ ಆಗಿ ಮಾರ್ಪಡಿಸಲಾಗುತ್ತದೆ. ಪ್ರಸ್ತುತ ಜನರೇಷನ್ನಿನ ವಿಂಡೋಸ್‌ ಎಡ್ಜ್‌ ಬ್ರೌಸರ್‌ “ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ಗಿಂತ ವೇಗವಾದ, …

Read More »

ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ ಅನುಶ್ರೀ

ಸ್ಯಾಂಡಲ್‌ವುಡ್‌ನ ಖ್ಯಾತ ನಿರೂಪಕಿ ಅನುಶ್ರೀಗೆ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಮದುವೆಯಾಗಲೂ ಇದೀಗ ಮನಸ್ಸು ಮಾಡಿದ್ದಾರೆ. ಹಾಗಂತ ಸ್ವತಃ ಅನುಶ್ರೀ ಅವರೇ ಹೇಳಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿರುವ ಅನುಶ್ರೀ, ತಮ್ಮ ವಿಭಿನ್ನ ನಿರೂಪಣೆಯ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮನೆಮಾತಾಗಿದ್ದಾರೆ. ಚಿತ್ರರಂಗದ ಕಾರ್ಯಕ್ರಮಗಳ ಜೊತೆಗೆ ಟಿವಿ ಶೋ ಮುಖಾಂತರ ಅನುಶ್ರೀ, ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಮತ್ತೆ ನಟಿ ಕಮ್ ನಿರೂಪಕಿ ಅನುಶ್ರೀ ಸುದ್ದಿಯಲ್ಲಿದ್ದಾರೆ. ಈ ಬಾರಿ ಮದುವೆಯ ವಿಚಾರದ ಮೂಲಕ ಗಾಂಧಿನಗರದಲ್ಲಿ …

Read More »

ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಚಾರಿ ಅರಣ್ಯ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ಪ್ರೀತಮ್(31), ಜಗದೀಶ್(21), ಪುನೀತ್(28) ಬಂಧನಕ್ಕೆ ಒಳಗಾದರೆ ಹೇಮಂತ್ ಪರಾರಿಯಾಗಿದ್ದಾನೆ.  ಬೆಡ್ ಶಿಟ್‌ನಲ್ಲಿ ಆನೆ ದಂತ ಸುತ್ತಿಕೊಂಡು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಕಾರನ್ನು ಅಡ್ಡ ಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಆನೆ ದಂತ, ಕಾರು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. …

Read More »

ಅಪ್ಪಿತಪ್ಪಿ ʼ ಮಕ್ಕಳ ಕೈಗೆ ಬೈಕ್‌ ಕೊಡದಿರಿ ʼ ಇನ್ಮುಂದೆ 25 ಸಾವಿರ ರೂ.ವರೆಗೂ ದಂಡ ಸಾಧ್ಯತೆ

ಬೆಂಗಳೂರು: ನಗರದಲ್ಲಿ ಬೈಕ್‌ಸ್ಟಂಟ್‌ ಮಾಡಿ ಕೇಸ್‌ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ.1 ರಿಂದ ಮೇ 31ರ ನಡುವೆ ಬೈಕ್‌ ಸ್ಟಂಟ್‌ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ. 2020ರಲ್ಲಿ ಶೇ.9ರಷ್ಟು , 2021ರಲ್ಲಿ ಶೇ.13ರಷ್ಟು ಅಪ್ರಾಪ್ತರು ಬೈಕ್‌ಸ್ಟಂಟ್‌ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಪೈಕಿ ಕೆಲವರಿಗೆ ಪಾಲಕರೇ ಬೈಕ್‌ ಕೊಡಿಸಿದ್ದರೆ, ಇನ್ನು ಕೆಲವರು ಸಂಬಂಧಿಕರಿಂದ ಹಾಗೂ …

Read More »

ಬೆಳಗಾವಿಯ ಕಣಬರ್ಗಿಯಲ್ಲಿರುವ ಮಹೇಶ ಫೌಂಢೇಶನ್‍ನಲ್ಲಿ ವಿದ್ಯಾರ್ಥಿನಿಯರ ವಿನೂತನ ಮೂರು ಅಂತಸ್ತಿನ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭ

ಕುಂದಾನಗರಿ ಬೆಳಗಾವಿಯ ಕಣಬರ್ಗಿಯಲ್ಲಿರುವ ಮಹೇಶ ಫೌಂಢೇಶನ್‍ನಲ್ಲಿ ವಿದ್ಯಾರ್ಥಿನಿಯರ ವಿನೂತನ ಮೂರು ಅಂತಸ್ತಿನ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಹೌದು, ಇಂದು ರವಿವಾರ ಬೆಳಗಾವಿಯ ಕಣಬರಗಿಯಲ್ಲಿ ಮೆಡಿಕಲ್ಲಿ ಚಾಂಲೇಂಜ್ಡ್ ಹಾಗೂ ಎಚ್‍ಐವಿ ಪೀಡಿತ ಮಕ್ಕಳ ಶಿಕ್ಷಣ, ಸಮತೋಲನ ಆಹಾರ ಹಾಗೂ ಉತ್ತಮ ಆರೋಗ್ಯ ಸೌಲಭ್ಯವನ್ನು ನೀಡುತ್ತಿರುವ ರಾಜ್ಯದ ಹೆಮ್ಮೆಯ ಸಾಮಾಜಿಕ ಸೇವಾ ಸಂಸ್ಥೆ ಮಹೇಶ ಫೌಂಢೇಶನ್ ನಲ್ಲಿ ವಿದ್ಯಾರ್ಥಿನಿಯರ ವಸತಿನಿಲಯದ ಮೂರು ಮಹಡಿಯ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. …

Read More »

ಮಾಜಿ ಶಾಸಕ, ಕರಾವಳಿಯ ಭೀಷ್ಮ ಎ.ಜಿ. ಕೊಡ್ಗಿ ಇನ್ನಿಲ್ಲ

ಕುಂದಾಪುರ : ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ, ರಾಜಕೀಯ ಚಾಣಾಕ್ಷನಾಗಿ ಸುದೀರ್ಘ‌ 56 ವರ್ಷಗಳ ಕಾಲ ತೊಡಗಿಸಿಕೊಂಡು, ತಾನು ಗುರುತಿಸಿಕೊಂಡ ಪಕ್ಷದಲ್ಲಿ ನಿಷ್ಠೆ ಹಾಗೂ ಬದ್ಧತೆಯನ್ನು ತೋರಿಸಿ, ಪಕ್ಷಕ್ಕೆ ತನ್ನ ಆವಶ್ಯಕತೆಯಿಲ್ಲ ಎಂದೆನಿಸಿದಾಗ ರಾಜಕೀಯದ ಪಡಸಾಲೆಯಿಂದ ನಿರ್ಗಮಿಸಿದವರು ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು. ಕುಂದಾಪುರ …

Read More »