Breaking News

ರಾಜ್ಯ

ಬಾಗಲಕೋಟೆ ಮೂಲದ ಬಿಎಸ್‍ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಮೂಲದ ಬಿಎಸ್‍ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಅಶೋಕ್ ಮುಂಡಾಸ್(41) ಮೃತ ಬಿಎಸ್‍ಎಫ್ ಯೋಧ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಅಶೋಕ್ ಅವರು ಬಿಎಸ್‍ಎಫ್ 31 ಬಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಸ್ಸಾಂನ ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಶನಿವಾರ ರಾತ್ರಿ ಸಿಡಿಲು ಬಡಿದ ರಭಸಕ್ಕೆ ಅಶೋಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅಶೋಕ್ ಅವರು ಬಿಎಸ್‍ಎಫ್‍ನಲ್ಲಿ 16 ವರ್ಷದಿಂದ ಸೇವೆಯಲ್ಲಿದ್ದು, ಈಗ ಪತ್ನಿ, ಇಬ್ಬರು …

Read More »

ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ

ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು. ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್‌ ಆನ್‌ ಮಾಡಿ ಸಂಚರಿಸಿದರು.

Read More »

ಮುತಾಲಿಕ್‌ಗೆ ಬೀದರ್ ಪ್ರವೇಶ ನಿರಾಕರಣೆ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾದ

ಕಲಬುರಗಿ: ಬೀದರ್ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಮಂಠಾಳ ಗ್ರಾಮದ ಬಳಿಯಲ್ಲಿ ಶನಿವಾರ ಮಧ್ಯಾಹ್ನ ಬೀದರ ಜಿಲ್ಲೆಗೆ ಹೊರಟಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಮತ್ತು ರಾಜ್ಯಾಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಪೊಲೀಸರು ತಡೆದು ವಾಪಸ್ಸು ಕಳಿಸಿರುವ ಘಟನೆ ನಡೆದಿದೆ. ‌ ಬೀದರನಲ್ಲಿ ಜೂ.4ರಿಂದ 12ರ ವರೆಗೆ ಮೂಲ ಅನುಭವ ಮಂಟಪ ರಕ್ಷಣೆಗಾಗಿ ನಡೆಯುತ್ತಿರುವ “ಮಠಾಧೀಶರ ನಡೆ ಬಸವಕಲ್ಯಾಣದ ಕಡೆ’ ಕಾರ್ಯಕ್ರಮದಲ್ಲಿ …

Read More »

ವಯಸ್ಸಾದರೂ ಯಂಗ್ ಆಗಿ ಕಾಣಲು ಭಾಗ್ಯಶ್ರೀ ತಿಳಿಸಿದ ಈ ಆಹಾರ ಸೇವಿಸಿ.!

ನಮಗೆ ವಯಸ್ಸಾದಂತೆ ನಮ್ಮ ಚರ್ಮ ಕಡಿಮೆ ಕಾಲಜನ್ ಅನ್ನು ಉತ್ಪಾದನೆ ಮಾಡುತ್ತದೆ. ಇದರಿಂದ ವಯಸ್ಸಾದಂತೆ ಚರ್ಮ ತೆಳ್ಳಗಾಗುತ್ತದೆ ಮತ್ತು ಸುಕ್ಕುಗಟ್ಟಿದಂತೆ ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಹಾಗಾಗಿ ಬಾಲಿವುಡ್ ನಟಿ ಭಾಗ್ಯಶ್ರೀ ಅವರು ಕಾಲಜನ್ ಸಮೃದ್ಧವಾಗಿರುವ ಆಹಾರದ ಬಗ್ಗೆ ತಿಳಿಸಿದ್ದಾರೆ. ಇದನ್ನು ಸೇವಿಸಿದರೆ ಅವರಂತೆ ವಯಸ್ಸಾದ ಮೇಲೂ ಯಂಗ್ ಆಗಿ ಕಾಣಬಹುದಂತೆ. ದೇಹದಲ್ಲಿ ಕಾಲಜನ್ ಉತ್ಪಾದನೆಯಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಸಾಕಷ್ಟು ವಿಟಮಿನ್ ಸಿ ಪಡೆಯುವುದು ಬಹಳ ಮುಖ್ಯ. …

Read More »

ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಚಂಡೀಗಢ: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಗ್ಯಾಂಗ್‍ವೊಂದು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಜೂನ್ 4ರ ಶನಿವಾರದಂದು ಪಂಜಾಬ್‍ನ ಮೋಗಾ ಜಿಲ್ಲೆಯ ಬಧ್ನಿ ಕಾಲಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪಂಜಾಬಿನ ಜನಪ್ರಿಯ ಗಾಯಕ ಸಿಧು ಮೂಸೆ ವಾಲಾ ಅವರನ್ನು ಕಳೆದ ಭಾನುವಾರ ದುಷ್ಕರ್ಮಿಗಳು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಭಯಾನಕ ಘಟನೆ ಪಂಜಾಬ್ ಜನತೆಯನ್ನು ಬೆಚ್ಚಿಬೀಳಿಸಿದೆ. 

Read More »

ಸೂ.. ಮಕ್ಕಳಾ ಅಂತ ಕಾಂಗ್ರೆಸ್ ಪಕ್ಷದವರನ್ನ ನಿಂದಿಸಿದ ಬಿಜೆಪಿ ಸಂಸದ

ಚಿಕ್ಕೋಡಿ(ಬೆಳಗಾವಿ): ಸೂ.. ಮಕ್ಕಳಾ ಎಂದು ಕಾಂಗ್ರೆಸ್ ಪಕ್ಷದವರನ್ನು ಅವಾಚ್ಯ ಶಬ್ದಗಳಿಂದ ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಗಣಿ ನಿಂದಿಸಿರುವ ಘಟನೆ ನಡೆದಿದೆ. ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವನ ಸಂಸದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರ್‌ಎಸ್‍ಎಸ್ ಸಂಘಟನೆಯಿಂದ ಜಿಗಜಿಣಗಿ ಅವರು ದೂರ ಇದ್ದೀರಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ನಿಂದನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ಜನತಾ ಪರಿವಾರದ ಮುಖಂಡರ ಸಹವಾಸದಿಂದ ಬೆಳೆದಿದ್ದೇವೆ. ಮಾಜಿ …

Read More »

ವಿಶ್ವ ಪರಿಸರ ದಿನಾಚರಣೆ ನಿಮಿತ್ತ 500ವಿವಿಧ ಬಗೆಯ ಸಸಿ ಗಳನ್ನೂ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂತೋಷ್ ಜಾರಕಿಹೊಳಿ ಅವರು

ಗೋಕಾಕ: ಮೊದಲನೆಯ ದಾಗಿ ವಿಶ್ವ ಪರಿಸರ ದಿನ ಶುಭಾಶಯಗಳು ಇಂದು ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತ್ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ 500ಕ್ಕು ಹೆಚ್ಚಿನ ಸಸಿ ಗಳನ್ನ ನೆಡುವ ಕಾರ್ಯಕ್ರಮ ಹಮ್ಮಿ ಕೊಂಡಿದ್ದಾರೆ. ಹೌದು ಇವಾಗ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಾವಿರುರು ಗಿಡ ಮರ ಗಳಿದ್ದರು ಕೂಡ ಈ ವಿಶ್ವ ಪರಿಸರ ದಿನಾಚರಣೆ ಅನುಗುಣವಾಗಿ …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಇಂದಿನಿಂದ ಜೂನ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೂರು ದಿನ ಯೆಲ್ಲೋ ಅಲರ್ಟ್ …

Read More »

ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ.   ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಪಠ್ಯದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. …

Read More »

ಗೋಕರ್ಣದಲ್ಲಿ ವೇಶ್ಯಾವಾಟಿಕೆ ದಂಧೆ: ನಾಲ್ವರು ಯುವತಿಯರ ರಕ್ಷಣೆ, ಓರ್ವನ ಬಂಧನ

ಕಾರವಾರ(ಉತ್ತರಕನ್ನಡ): ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಫಾರ್ಮ್ ಹೌಸ್ ಮೇಲೆ ದಾಳಿ‌ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ.   ಖಾಸಗಿ ಫಾರ್ಮ್ ಹೌಸ್​​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಮುಂಬೈ, ಕೋಲ್ಕತ್ತಾ ಹಾಗೂ ಬಳ್ಳಾರಿ ಮೂಲದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಮುರುಡೇಶ್ವರದ ತಿಮ್ಮಪ್ಪ ನಾಯ್ಕ ಎಂಬುವರನ್ನು ಬಂಧಿಸಿದ್ದಾರೆ. ಪ್ರವಾಸಿ ಮಂದಿರದ ಪಕ್ಕದಲ್ಲೇ ಇರುವ ಫಾರ್ಮ್ …

Read More »