Breaking News
Home / ರಾಜ್ಯ (page 1780)

ರಾಜ್ಯ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿ ವಿಸ್ತರಿಸಿದ ಸರಕಾರ

ಬೆಂಗಳೂರು, ಎ.12: ಸಾರಿಗೆ ನೌಕರರು ಮುಷ್ಕರ ನಿರತರಾಗಿರುವುದರಿಂದ ಖಾಸಗಿ ವಾಹನ ಮಾಲಕರು ಸರಕಾರದ ಕೋರಿಕೆಗೆ ಸ್ಪಂದಿಸಿ ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯಿದೆ 1957ರ ಕಲಂ4(1) ನಿಯಮಗಳನ್ನು ಸಡಿಲಗೊಳಿಸಿ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎ.15ರೊಳಗಾಗಿ …

Read More »

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ: ಈಶ್ವರಪ್ಪ

ಧಾರವಾಡ: ನೋಟು ಕೌಂಟಿಂಗ್ ಮಷಿನ್ ಇಟ್ಟುಕೊಳ್ಳುವದರಲ್ಲಿ ತಪ್ಪಿಲ್ಲ, ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಹುಚ್ಚರ ರೀತಿಯಲ್ಲಿ ಮಾತನಾಡುವುದು ಶೋಭೆ ತರಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ವ್ಯಾಪಾರ ಮಾಡುವವರ ಮನೆಯಲ್ಲಿ ನೋಟು ಕೌಂಟಿಂಗ್ ಮಷಿನ್ ಇರುತ್ತದೆ. ಇದನ್ನು ಹೊರತು ನೋಟು ಪ್ರಿಂಟ್ ಮಷಿನ್ ಇಲ್ಲವಲ್ಲಾ ಎಂದರು. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿ ಬಂದವರು. ಹೀಗಾಗಿ ಏನೇನೂ ಮಾತನಾಡುತ್ತಾರೆ. …

Read More »

ಮಸ್ಕಿಯಲ್ಲಿ ಮಾಜಿ ಶಾಸಕ ಎನ್.ಎಸ್.ನಂದೀಶ್ ಹಣ ಹಂಚಿಕೆ

ರಾಯಚೂರು: ಮಸ್ಕಿ ಉಪ ಚುನಾವಣಾ ಸಮರ ದಿನೇ ದಿನೇ ರಂಗೇರುತ್ತಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಮತ ನೀಡುವಂತೆ ಬಿಜೆಪಿ ಮಾಜಿ ಶಾಸಕ ಎನ್.ಎಸ್. ನಂದೀಶ್ ಹಣ ಹಂಚಿಕೆ ಮಾಡಿದ್ದಾರೆ. ಹಣ ಹಂಚಿಕೆ ಮಾಡಿದವರ ಹಾಗೂ ಹಣ ಪಡೆದವರ ವಿರುದ್ಧ ಮಸ್ಕಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಅಮಿತ್, ಚಿಟ್ಟಿಬಾಬು, ಹಣ ಪಡೆದ ವೃದ್ದೆ ತಾಯಮ್ಮ ಮೂವರನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. …

Read More »

ಬಾಲಚಂದ್ರ ಜಾರಕಿಹೊಳಿ ಉಪಚುನಾವಣಾ ಅಖಾಡಕ್ಕೆ ,ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಇರುವುದರಿಂದ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್

ಬೆಳಗಾವಿ: ಕೆಲಸದ ಒತ್ತಡಗಳಿಂದಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಲು ಸಾಧ್ಯವಾಗಿರಲಿಲ್ಲ. ಇಂದಿನಿಂದ ಉಪಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಮಂಗಳಾ ಅಂಗಡಿ ಪರ ಪ್ರಚಾರ ನಡೆಸುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಇರುವುದರಿಂದ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಇಂದು ವರದಿಯಲ್ಲಿ ಏನು ಬರಲಿದೆ ಎಂಬುದನ್ನು ನೋಡಿಕೊಂಡು ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ನಿರ್ಧರಿಸುತ್ತಾರೆ. ಬೆಳಗಾವಿ ಕ್ಷೇತ್ರದಿಂದ ಮಂಗಲಾ ಅಂಗಡಿಯವರನ್ನು ಗೆಲ್ಲಿಸಿ ಸಂಸತ್ …

Read More »

ಜಾರಕಿಹೊಳಿ ಸಿಡಿ ಪ್ರಕರಣ: ಸಿಡಿ ಲೇಡಿ ಹೇಳಿಕೆ ಯುಟರ್ನ್, ಏನಿದರ ಸತ್ಯಾಸತ್ಯತೆ?

ಬೆಂಗಳೂರು, ಏಪ್ರಿಲ್ 12: ಕೊರೋನಾ ಎರಡನೇ ಅಲೆ ಹಾಗೂ ಸಾರಿಗೆ ನೌಕರರ ಮುಷ್ಕರದ ಗದ್ದಲದೊಳಗೆ ಕಣ್ಮರೆಯಾಗಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸೋಮವಾರ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಸಿಡಿ ಸಂತ್ರಸ್ತ ಯುವತಿ “ಸಿಡಿ ಪ್ರಕರಣದ ವಾಸ್ತವವನ್ನು ಎಸ್‌ಐಟಿ ಅಧಿಕಾರಿಗಳ ಮುಂದೆ ಬಿಚ್ಚಿಡಲು ಕೇಳಿಕೊಂಡಿದ್ದಾಳೆ ಎಂಬ ವಿಷಯ ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿದೆ. ಸಿಡಿ ಲೇಡಿ ನಿಜವಾಗಿಯೂ ಉಲ್ಟಾ ಹೊಡೆದಿದ್ದಾಳಾ ? ಅಥವಾ ಮುಂದೆ ಯು ಟರ್ನ್ ಹೊಡೆಯಲಿದ್ದಾಳಾ ? ಒಂದು …

Read More »

ಹಬ್ಬಕ್ಕೆ ಬರಲು ಆಗುತ್ತಿಲ್ಲ: ಪೂನಾದಲ್ಲಿ ಸಿಲುಕಿದ ಕಾರ್ಮಿಕರಿಂದ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ

ಯಾದಗಿರಿ: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಆತಂಕ ತಲೆದೋರಿದ್ದು ದಿನೇ ದಿನೇ ಮಹಾರಾಷ್ಟ್ರದಿಂದ ಯಾದಗಿರಿ ಜಿಲ್ಲೆಗೆ ಕಾರ್ಮಿಕರು ವಾಪಸ್ ಬರುತ್ತಿದ್ದಾರೆ. ರಾಜ್ಯದ ಸಾರಿಗೆ ನೌಕರರ ಮುಷ್ಕರದ ಬಿಸಿ ಈಗ ಮಹಾರಾಷ್ಟ್ರದಲ್ಲಿ ನೆಲೆಸಿರುವ ರಾಜ್ಯದ ಕಾರ್ಮಿಕರಿಗೆ ತಟ್ಟಿದೆ. ಮಹಾರಾಷ್ಟ್ರದಲ್ಲಿ ಹೆಚ್ಚಾಗಿರುವ ಕೊರೋನಾ ಆತಂಕ ಹಾಗೂ ಯುಗಾದಿ ಹಬ್ಬಕ್ಕೆ ವಾಪಸ್ ಊರಿಗೆ ತೆರಬೇಕೆಂದಿರುವ ಜನರಿಗೆ ಈಗ ರಾಜ್ಯದ ಸಾರಿಗೆ ಮುಷ್ಕರ ಸಂಕಷ್ಟ ತಂದಿದ. ಊರಿಗೆ ಬರಲು ಕಾರ್ಮಿಕರು ಪರದಾಡುವಂತಾಗಿದೆ. ಮಹಾರಾಷ್ಟ್ರದ ಪೂನಾ, ಮುಂಬೈ …

Read More »

ಮಾಸ್ಕ್, ಸಾಮಾಜಿಕ ಅಂತರ ಇಲ್ಲದ ಮೇಕೆ ಸಂತೆ

ಕೊರಟಗೆರೆ: ಯುಗಾದಿ ಹಬ್ಬದ ವರ್ಷದ ತೊಡಕಿಗೆ ಈಗಲೇ ಕುರಿ ಮೇಕೆಗಳನ್ನುಕೊಂಡುಕೊಳ್ಳಲು ಜನರು ಮುಂದಾಗಿದ್ದರಿಂದ, ಮಾರುಕಟ್ಟೆಗಳಲ್ಲಿ ಜನದಟ್ಟನೆ ಕಂಡು ಬಂತು. ಮಂಗಳವಾರ ಯುಗಾದಿ ಹಬ್ಬ. ಹಬ್ಬದ ಮರುದಿನ ವರ್ಷದ ತೊಡಕು. ಮಂಗಳವಾರ ಹಬ್ಬ ಇರುವುದರಿಂದ ಅಂದು ಮೇಕೆ-ಕುರಿ ಮಾರುಕಟ್ಟೆಇರುವುದಿಲ್ಲ. ಹಾಗಾಗಿ ಜನರು ಮೊದಲೇ ಖರೀದಿಗೆ ಮುಂದಾದರು. ಹಬ್ಬದ ಮರುದಿನ ವರ್ಷ ತೊಡಕು ಭರ್ಜರಿಯಾಗಿ ನಡೆಯುತ್ತದೆ. ಬಾಡೂಟದ ಘಮಲು ಮೂಗು, ಮನಸನ್ನು ಸೆಳೆಯುತ್ತದೆ. ಅಕ್ಕಿರಾಂಪುರ ಮೇಕೆ ಕುರಿತಂತೆ ರಾಜ್ಯದಲ್ಲಿಯೇ ಹೆಸರಾಗಿದ್ದು, ನಾನಾ ಮೂಲೆಗಳಿಂದ …

Read More »

ಕೋವಿಡ್ ಹೆಚ್ಚಳ ಹಿನ್ನೆಲೆ : ಸರ್ವಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ

ಬೀದರ್ : ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಏಪ್ರಿಲ್ 18, 19ರಂದು ಎಲ್ಲಾ ಪಕ್ಷದ ಹಿರಿಯರ ಜೊತೆ ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸುವುದಾಗಿ ಸೋಮವಾರ ಸಿಎಂ ಯಡಿಯೂರಪ್ಪ ತಿಳಿಸಿದ್ರು. ಬಸವ ಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಸರ್ವ ಪಕ್ಷಗಳ ಹಿರಿಯರ ಜೊತೆ ಸಭೆ ನಡೆಸುವುದಾಗಿ ಸಿಎಂ ತಿಳಿಸಿದ್ದಾರೆ. ಸಭೆಯಲ್ಲಿ ಕಠಿಣ …

Read More »

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ : ಯಡಿಯೂರಪ್ಪ

ಬಸವಕಲ್ಯಾಣ : ಬಸವಕಲ್ಯಾಣದಲ್ಲೇ ಐತಿಹಾಸಿಕ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಗೊಳಲ್ಲಿದೆ. ಮಾಜಿ ಸಚಿವ ಬಸವರಾಜ ಸೆಡಂ ಅವರಿಗೆ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ ಎಂದು ಸೋಮವಾರ ಬಸವಕಲ್ಯಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದೇ 17 ರಂದು ನಡೆಯಲಿರುವ ಉಪಚುನಾಣೆಯ ಪ್ರಚಾರಕ್ಕೆ ತೆರಳಿರುವ ಯಡಿಯೂರಪ್ಪ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿಯೂ ಗೆಲವು ಸಾಧಿಸುತ್ತದೆ ಎಂಬ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಮಲ್ಲಿಕಾರ್ಜುನ ಖರ್ಗೆ …

Read More »

ಬೀದಿಗಿಳಿದ ಸಾರಿಗೆ ಕುಟುಂಬಸ್ಥರು ಬೆಳಗಾವಿಯಲ್ಲಿ ಪ್ರತಿಭಟನೆ

6ನೇ ವೇತನ ಆಯೋಗ ಜಾರಿ ಮಾಡುವಂತೆ ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ.ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರದ ನಡೆಗೆ ನೌಕರರ ಕುಟುಂಬಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಕ್ಕಳು, ಮಹಿಳೆಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಮಕ್ಕಳು ಕೈಯಲ್ಲಿ ತಟ್ಟೆ ಹಿಡಿದು ಬಾರಿಸುತ್ತಾ ವಿನೂನತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆರನೇ ವೇತನ ಅಸಯೋಗ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ್ದಾರೆ‌. ಸಾರಿಗೆ ನೌಕರರು …

Read More »