Breaking News
Home / ರಾಜ್ಯ (page 1788)

ರಾಜ್ಯ

ಎಸ್‌ಎಸ್‌ಎಲ್ ಸಿ, ಪಿಯು ಪರೀಕ್ಷೆ ಸಿದ್ದತೆ ಪರಿಶೀಲನಾ ಸಭೆ: ಸಚಿವ ಸುರೇಶ್ ಕುಮಾರ್ ಭಾಗಿ

ಧಾರವಾಡ: ಕೋವಿಡ್ ಹಾವಳಿ‌ ಮಧ್ಯೆಯೂ ಕಳೆದ ವರ್ಷ ಎಸ್‌ಎಸ್‌ಎಲ್ ಸಿ, ಪಿಯು ಪರೀಕ್ಷೆ ನಡೆಸಿದಂತೆ ಈ ವರ್ಷ ನಿಗದಿಯಾಗಿರುವ ಪರೀಕ್ಷೆಗಳ ಯಶಸ್ವಿಯಾಗಿ ನಡೆಸಲು ಧಾರವಾಡದ ಡಯಟ್ ಸಭಾಂಗಣದಲ್ಲಿ ಇಂದು ಸಭೆ ನಡೆಸಲಾಗುತ್ತಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಬೆಳಗಾವಿ ವಿಭಾಗದ ಶೈಕ್ಷಣಿಕ ಜಿಲ್ಲೆಗಳ ಎಸ್‌ಎಸ್‌ಎಲ್ ಸಿ, ಪಿಯುಸಿ ಪರೀಕ್ಷಾ ಪೂರ್ವಸಿದ್ಧತಾ ಪರಿಶೀಲನೆ ಸಭೆ ನಡೆಸಿದರು. ಸಂಜೆವರೆಗೂ ಎಲ್ಲಾ ಒಂಭತ್ತು ಶೈಕ್ಷಣಿಕ ಜಿಲ್ಲೆಗಳಲ್ಲಿನ ಪರೀಕ್ಷಾ ಸಿದ್ದತೆ ಕುರಿತು …

Read More »

ಮತಗಟ್ಟೆಯಲ್ಲಿ ಅಭಿಮಾನಿಯ ಫೋನ್ ಕಿತ್ತುಕೊಂಡು ಟ್ರೋಲ್ ಗೆ ಗುರಿಯಾದ ತಮಿಳು ಸ್ಟಾರ್ ಅಜಿತ್!ವಿಡಿಯೋ

ಚೆನ್ನೈ: ಮತಗಟ್ಟೆ ಬಳಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಮಾಸ್ಕ್ ಧರಿಸದ ಅಭಿಮಾನಿಯೊಬ್ಬರ ಫೋನ್ ನ್ನು ಕಾಲಿವುಡ್ ಸೂಪರ್ ಸ್ಟಾರ್ ಅಜಿತ್ ಕಸಿದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೆನ್ನೈ ಪಕ್ಕದಲ್ಲಿರುವ ತಿರುವಣ್ ಮಿಯೂರ್ ನ ಮತಗಟ್ಟೆಯೊಂದರ ಬಳಿ ಇಂದು ಬೆಳಗ್ಗೆ ಪತ್ನಿ ಶಾಲಿನಿ ಜೊತೆಗೆ ಮತದಾನ ಮಾಡಲು ವಿಜಯ್ ಬಂದಾಗ ಈ ಘಟನೆ ನಡೆದಿದೆ. ವಿಡಿಯೋ ದೃಶ್ಯಾವಳಿಗಳು ಇದೀಗ ವೈರಲ್ ಆಗಿವೆ. ಅಜಿತ್ ಅವರ ಒಪ್ಪಿಗೆ …

Read More »

ಜೊಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್‍ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ಕಾರವಾರ: ಜೊಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್‍ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಜೋಯಿಡಾದ ನಂದಿಗದ್ದಾ ಗ್ರಾಮದ ಗ್ರಾಮಪಂಚಾಯ್ತಿ ಅಧಿಕಾರಿ ರಾತ್ರಿ 8 ಗಂಟೆಯಾದರೂ ಕಚೇರಿ ಮುಂದೆ ಹಾರಾಡುತ್ತಿದ್ದ ರಾಷ್ಟ್ರಧ್ವಜವನ್ನು ಇಳಿಸದೆ ನಿರ್ಲಕ್ಷ್ಯದಿಂದ ತೆರಳಿದ್ದಾರೆ. ಈ ಘಟನೆ ಸ್ಥಳೀಯ ಜನರ ಗಮನಕ್ಕೆ ಬಂದಿದ್ದು ನಂತರ ಪಂಚಾಯ್ತಿ ಸಿಬ್ಬಂದಿ ರಾಷ್ಟ್ರಧ್ವಜವನ್ನು ಇಳಿಸಿದ್ದಾರೆ. ನಿಯಮದ ಪ್ರಕಾರ ಎಲ್ಲಾ ಗ್ರಾ.ಪಂಗಳಲ್ಲೂ ರಾಷ್ಟ್ರಧ್ವಜ ಬೆಳಗ್ಗೆ ಏರಿಸಿ ಸೂರ್ಯಾಸ್ತದ ವೇಳೆ ಇಳಿಸಬೇಕು. ಆದರೆ …

Read More »

ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ

ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು. ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ …

Read More »

ಖಾಕಿಯೊಳಗೊಬ್ಬ ಸೃಜನಶೀಲ ಕಲಾವಿದ

ಕಲೆಯ ಹವ್ಯಾಸ ನಮ್ಮ ವ್ಯಕ್ತಿ . ಕೌಶಲ್ಯ ಹಾಗೂ ಜೀವನ ಪಥದಲ್ಲಿ ಎಂದಿಗೂ ಸ್ಫೂರ್ತಿ ನೆಲೆಯಾಗಿರುತ್ತದೆ ಎಂಬುದು ಸುಳ್ಳಲ್ಲ. ನಮ್ಮ ವೃತ್ತಿ ಯಾವುದೇ ಇರಲಿ ಆದರೆ, ನಮ್ಮೊಳಗಿನ ಕಲಾ ಪ್ರತಿಭೆ ಹವ್ಯಾಸವಾಗಿ ಇಂತಹ ಒಂದು ಅಪರೂಪದ ಪ್ರತಿಭೆ ಹಾವೇರಿ ಜಿಲ್ಲೆಯ ಶಿಗ್ಗಾವಿಯ ಶ್ರೀರಾಮುಲು ಕೆ. ಎಂದರೆ ತಪ್ಪಲ್ಲ. ಕೆ.ಶ್ರೀರಾಮುಲು ಅವರುಹೆಚ್.ಸಿ. 215, ಕೆ.ಎಸ್.ಆರ್.ಪಿ. ಹತ್ತನೇ ಪಡೆಯಲ್ಲಿ ಪೋಲೀಸ್ ಹವಾಲ್ದಾರ್ ಸೇವೆ ಸಲ್ಲಿಸುತ್ತಿದ್ದಾರೆ. ಇವರ ತಂದೆ ಕುಪ್ಪಸ್ವಾಮಿ ರೆಡ್ಡಿ, ತಾಯಿ ಸುಶೀಲಮ್ಮ …

Read More »

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸೇವೆ ಖಾಯಂ

ಕುಷ್ಟಗಿ : ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ನೌಕರರ ಸೇವೆಯನ್ನು ಹೊಸ ಹುದ್ದೆಗಳನ್ನು ಸೃಷ್ಠಿಸುವ ಮೂಲಕ ಖಾಯಂಗೊಳಿಸಲಾಗುವುದು ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ …

Read More »

ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್

ಕೋಲ್ಕತ್ತಾ: ಟಿಎಂಸಿ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತಾರೆ ಎಂದು ನಟಿ, ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ನಾಯಕಿಯಾಗಿರುವ ಜಯಾ ಬಚ್ಚನ್ ಇವತ್ತು ಟಿಎಂಸಿ ಅಭ್ಯರ್ಥಿಗಳ ಪರವಾಗಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿ ಮತ ಯಾಚನೆ ಮಾಡಿದರು. ಟಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಅರುಣ್ ವಿಶ್ವಾಸ್ ಕಣಕ್ಕಿಳಿಸಿದ್ದಾರೆ. ಬಿಜೆಪಿ ಪರವಾಗಿ ಕೇಂದ್ರ …

Read More »

ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ; ಸಚಿವ ಈಶ್ವರಪ್ಪ ತಿರುಗೇಟು

ಶಿವಮೊಗ್ಗ, ಏಪ್ರಿಲ್ 6: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ಕದಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು. ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. “”ಮೈಸೂರು ಮೇಯರ್, ಉಪ …

Read More »

ಚುನಾವಣಾ ಆಯೋಗ ಅನುಮತಿ ನೀಡಿದರೆ ಸಾರಿಗೆ ನೌಕರರ ಸಂಬಳ ಜಾಸ್ತಿ : ಸವದಿ

ಬೆಂಗಳೂರು : ಸಾರಿಗೆ ನೌಕರರು ದಿಢೀರ್ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು. ಒಕ್ಕೂಟದ ನೌಕರರು ಮತ್ತು ಟ್ರೇಡ್ ಯುನಿಯನ್ ಅವರು 9 ಬೇಡಿಕೆ ಮುಂದಿಟ್ಟರು. ನಾವು ಅವರ ಬೇಡಿಕೆಗಳ ಭರವಸೆ ಪತ್ರವನ್ನು ಲಿಖಿತ ರೂಪದಲ್ಲಿ ನೀಡಿ, ಎಂಟು ಬೇಡಿಕೆ ಈಡೆರಿಸಿ ಆದೇಶ ಹೊರಡಿಸಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಆರೋಗ್ಯ ಭಾಗ್ಯ ಸಂವೀಜಿವಿನಿ ಯೋಜನೆ, ಕೊರೊನಾ ಸೋಂಕಿನಿಂದ ನಿಧನ ಹೊಂದಿದರೆ …

Read More »

5 ಸಾವಿರದ ಗಡಿ ದಾಟಿದ ಕೊರೊನಾ – ಬೆಂಗಳೂರಿನಲ್ಲಿ 3,728 ಜನಕ್ಕೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಒಂದೇ ದಿನ 5,278 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, 3,728 ಜನಕ್ಕೆ ಸೋಂಕು ದೃಢವಾಗಿದೆ.ಇಂದು ಕೊರೊನಾಗೆ 32 ಜನರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ. 42,483 ಸಕ್ರಿಯ ಪ್ರಕರಣಗಳ ಪೈಕಿ, 345 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 10,20,434ಕ್ಕೇರಿಕೆಯಾಗಿದೆ.ಇಂದು 1,856 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಕೋವಿಡ್-19 ಖಚಿತ ಪ್ರಮಾಣ …

Read More »