Breaking News

ರಾಜ್ಯ

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ

ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ.   ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು …

Read More »

ಬೇಡಿಕೆ ಈಡೇರಿಸುವಂತೆ ಖಾನಾಪುರ ಎಂಇಎಸ್ ಯುವ ಘಟಕ ಆಗ್ರಹ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಖಾನಾಪುರ ತಾಲೂಕಿನ ಎಂಇಎಸ್ ಯುವ ಘಟಕದ ಸದಸ್ಯರು ಖಾನಾಪುರ ತಹಶೀಲ್ದಾರ್, ಸಮೂಹ ಶಿಕ್ಷಣಾಧಿಕಾರಿಗಳು, ಹಾಗೂ ಕೆಎಸ್‍ಆರ್‍ಟಿಸಿ ಡಿಪೊ ಮ್ಯಾನೇಜರ್‍ರವರಿಗೆ ಮನವಿ ಮಾಡಿದರು. ಕಳೆದ ಎರಡು ವರ್ಷಗಳಿಂದ ಆಹಾರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಕೂಡ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹಣದುಬ್ಬರ ದರ ತಗ್ಗಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಇದಕ್ಕೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ್ದು …

Read More »

ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ

ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು ಎಬಿಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ …

Read More »

ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಹೆಬ್ಬಾಳ್ಕರ್, ನಿಂಬಾಳ್ಕರ್ ಹಾಗೂ ಕೌಜಲಗಿ ಮೊದಲಾದ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಗೈರ

ರಾಜ್ಯದಲ್ಲಿ ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ ನಗರದ ಖಾಸಗಿ ಹೋಟಲ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಪರಿಷತ್ ಚುನಾವಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆಯಲ್ಲಿ, ಮಾಜಿ ಸಚಿವ ಎ ಬಿ ಪಾಟೀಲ್, ವೀರಕುಮಾರ್ ಪಾಟೀಲ್ ಭಾಗಿ ಮೊದಲಾದ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಿದ್ದರು. ಈ …

Read More »

ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ :

ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕೆ’ ಎಂದು ಪ್ರಶ್ನಿಸಿದರು. ‘ಅಲ್ಪ‌ ಸಂಖ್ಯಾತರ ಹಕ್ಕುಗಳು, ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ನಮ್ಮ ಧರ್ಮದಲ್ಲಿ ನಿಷ್ಠೆಯ …

Read More »

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್‌ ಮುಖಂಡರು: ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರ ಕೈವಾಡವಿದೆ. ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.   ‘ಪಿಎಸ್‌ಐ ಹಗರಣ ಕುರಿತು ಸಿಐಡಿ ವಿಶೇಷ ತನಿಖೆ ನಡೆಸುತ್ತಿದೆ. ಈಗಾಗಲೇ ಕಲಬುರಗಿಯಲ್ಲಿ ₹ 1 ಕೋಟಿ, ಬೆಂಗಳೂರಿನಲ್ಲಿ ₹ 2.19 ಕೋಟಿ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು. …

Read More »

ಸಿಲಿಕಾನ್‌ ಸಿಟಿ’ಯನ್ನು ‘ಸ್ವಿಮ್ಮಿಂಗ್‌ ಪೂಲ್‌’ ಮಾಡಿದ ಹೆಗ್ಗಳಿಕೆ ‘ಬಿಜೆಪಿ ಸರ್ಕಾರ’ದ್ದು:H.D.K.

ಬೆಂಗಳೂರು: ಸಿಲಿಕಾನ್‌ ಸಿಟಿಯನ್ನು ( Silicon City ) ಸ್ವಿಮ್ಮಿಂಗ್‌ ಪೂಲ್‌ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ( BJP Government ) ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವಾಗ್ದಾಳಿ ನಡೆಸಿದ್ದಾರೆ. …

Read More »

ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ – ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ

ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ.     ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು …

Read More »

ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯವು ಈಗಾಗಲೇ ಮಳೆಯಿಂದ ತತ್ತರಿಸಿದೆ. ಇನ್ನೂ ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ …

Read More »

ರಾಜ್ಯದಲ್ಲೂ ಪೆಟ್ರೋಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕೇಂದ್ರ ಇಳಿಕೆ ಮಾಡಿದ ಬೆನ್ನಲ್ಲೇ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ರಾಜ್ಯಗಳು ತೆರಿಗೆ ಇಳಿಕೆ ಮಾಡಿವೆ. ಇದರಿಂದಾಗಿ ಪೆಟ್ರೋಲ್‌ 2 ರೂ ಮತ್ತು ಡೀಸೆಲ್‌ 1 ರೂ. ನಷ್ಟು ಅಗ್ಗವಾಗಿದೆ.   ಇದದ ಬೆನ್ನಲ್ಲೇ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ತೆರಿಗೆ ಕಡಿಮೆ ಮಾಡಬೇಕು ಎಂಬ ವ್ಯಾಪಕ ಆಗ್ರಹ ಕೇಳಿ ಬಂದಿದೆ. ಹೀಗಾಗಿ, ತೆರಿಗೆ ಇಳಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ …

Read More »