Breaking News

ರಾಜ್ಯ

ಉಲ್ಟಾ ಹೊಡೆದ ರೈತರ ಲೆಕ್ಕಾಚಾರ, ಪ್ರಕೃತಿಯ ಮುನಿಸು ದೇಶ ವಿದೇಶಕ್ಕೆ ಟೊಮೇಟೊ ರಪ್ತು ಮಾಡುತ್ತಿದ್ದ ಮಾರುಕಟ್ಟೆಗೆ ಬರಗಾಲ

ಏಷ್ಯಾದಲ್ಲೇ ಎರಡನೇ ದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆ ಸದಾ ಜನರಿಂದ ತುಂಬಿ ತುಳುಕುತ್ತಿದ್ದು ಈಗ ಖಾಲಿ ಖಾಲಿ ಹೊಡೆಯುತ್ತಿದೆ. ಅಲ್ಲಲ್ಲಿ ಅಲ್ಪ ಸ್ವಲ್ಪ ಟೊಮೇಟೊ ಬಾಕ್ಸ್ಗಳು ಕಂಡು ಬರುತ್ತಿವೆ.ಕೋಲಾರ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಹಾಗೂ ಉಲ್ಟಾಹೊಡೆದ ರೈತರ ಲೆಕ್ಕಾಚಾರದ ಪರಿಣಾಮವಾಗಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲೇ ಟೊಮೇಟೊಗೆ ಬರ …

Read More »

ಬೆಳಗಾವಿ: ‘ಪ್ರವಾಹ ಸಂದರ್ಭದಲ್ಲಿ ಜನ-ಜಾನುವಾರು ತಕ್ಷಣ ರಕ್ಷಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು.: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ‘ಪ್ರವಾಹ ಸಂದರ್ಭದಲ್ಲಿ ಜನ-ಜಾನುವಾರು ತಕ್ಷಣ ರಕ್ಷಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಜೀವ ಹಾನಿಯಾದರೆ 24 ಗಂಟೆಗಳಲ್ಲಿ ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.   ಸಂಭವನೀಯ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಶನಿವಾರ ವಿಡಿಯೊ ಸಂವಾದ ನಡೆಸಿದರು. ‘ಮನೆಗಳಿಗೆ ನೀರು ನುಗ್ಗಿದಾಗ ಆ ಕುಟುಂಬಗಳಿಗೆ ಪರಿಹಾರ ಒದಗಿಸುವಲ್ಲಿ ವಿಳಂಬ ಮಾಡಬಾರದು. ಮಳೆಗಾಲ ಆರಂಭಗೊಳ್ಳಲಿರುವುದರಿಂದ ನದಿತೀರದ ಗ್ರಾಮಗಳಿಗೆ ಭೇಟಿ ನೀಡಿ …

Read More »

ಬೆಳಗಾವಿ: ‘ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗಿ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ’

ಬೆಳಗಾವಿ: ‘ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗಿ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ’ ಎಂದು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ತಿಳಿಸಿದರು.   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಹಾಗೂ ಟಿಎಚ್‌ಒ ಕಾರ್ಯಾಲಯಗಳ ಸಹಯೋಗದಲ್ಲಿ ಇಲ್ಲಿನ ವಡಗಾವಿಯ ಮಾಧವಾಪುರದ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಮಳೆಯಾದಾಗ ಡೆಂಗಿ, ಮಲೇರಿಯಾ, ಚಿಕೂನ್ …

Read More »

ಲೋಕಾಯುಕ್ತ: ಅಹವಾಲು ಸ್ವೀಕಾರ 24ರಿಂದ

ಬೆಳಗಾವಿ: ಜಿಲ್ಲೆಯ ತಾಲ್ಲೂಕುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡಲು ವಿಳಂಬ ಮತ್ತಿತರ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರು, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಕರ್ನಾಟಕ ಲೋಕಾಯುಕ್ತ ಕಾಯ್ದೆಯಲ್ಲಿ ಅಹವಾಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.   ಮೇ 24ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ರಾಮದುರ್ಗದ ಪ್ರವಾಸಿ ಮಂದಿರದಲ್ಲಿ ಡಿಎಸ್ಪಿ ಜೆ.ರಘು, ಖಾನಾಪುರ ಪ್ರವಾಸಿ ಮಂದಿರದಲ್ಲಿ ಡಿಎಸ್ಪಿ ಬಿ.ಎಸ್. ಪಾಟೀಲ ಅವರಿಗೆ ದೂರು ನೀಡಬಹುದು. ಮೇ 25ರಂದು ಚಿಕ್ಕೋಡಿ, ನಿಪ್ಪಾಣಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ …

Read More »

ದೇಶನೂರ| ನಿರ್ಲಕ್ಷ್ಯಕ್ಕೊಳಗಾದ ಪ್ರೇಮದ ಸಂಕೇತ ‘ನಿರಂಜನಿ ಮಹಲ್‌’

ನೇಸರಗಿ (ಬೆಳಗಾವಿ ಜಿಲ್ಲೆ): ಕಿತ್ತೂರು ರಾಣಿ ಚನ್ನಮ್ಮನ ಕಾಲದಲ್ಲಿ ಉಪರಾಜಧಾನಿಯಾಗಿ ಮೆರೆದ ಬೈಲಹೊಂಗಲ ತಾಲ್ಲೂಕಿನ ದೇಶನೂರ ಗ್ರಾಮ ಕಿತ್ತೂರಿನಷ್ಟೇ ಖ್ಯಾತಿ ಪಡೆದಿತ್ತು. ಕಿತ್ತೂರ ಸಂಸ್ಥಾನಕ್ಕೆ ಸಂಬಂಧಿಸಿದ ಅಮರ ಪ್ರೇಮದ ಸಂಕೇತವಾಗಿರುವ ನಿರಂಜನಿ ಮಹಲ್ ನಿರ್ಲಕ್ಷಕ್ಕೆ ಒಳಗಾಗಿದೆ.   ದೇಶನೂರ ಗ್ರಾಮವು ಕೋಟೆ-ಕೊತ್ತಲ, ಮಸೀದಿ, ಮಂದಿರ, ಪ್ರೇಮಮಹಲು ಮುಂತಾದ ಐತಿಹಾಸಿಕ ತಾಣಗಳಿಂದ ಮನಸಳೆಯುತ್ತದೆ. ಅಲ್ಲಿನ ನಿರಂಜನ ಮಹಲ್ ಅನ್ನು ಮುನ್ನೂರು ವರ್ಷಗಳಷ್ಟು ಹಿಂದೆ ಕಟ್ಟಲಾಗಿದೆ ಎನ್ನಲಾಗಿದೆ. ಅದು ಅವನತಿಯತ್ತ ಸಾಗಿರುವುದು ಪ್ರಜ್ಞಾವಂತರ ಕಳವಳಕ್ಕೆ …

Read More »

ಇದು ಸಹೋದರತ್ವ- ಬಂಧುತ್ವ ಅಂತ ‘ಶಾಸಕ ಜಮೀರ್ ಅಹ್ಮದ್’ ಮಾಡಿದ್ದೇನು ಗೊತ್ತಾ.? ಈ ವೀಡಿಯೋ ನೋಡಿ.!

ಬೆಂಗಳೂರು: ಜಾತಿ, ಧರ್ಮಗಳನ್ನು ( Caste, religion ) ಮೀರಿದ್ದು ಮಾನವೀಯತೆ. ನಮ್ಮೆಲ್ಲರ ಜಾತಿ ಒಂದೇ. ಅದುವೇ ಮನುಷ್ಯ ಜಾತಿ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ( MLA Zameer Ahamad Khan ) ಅಭಿಪ್ರಾಯ ಪಟ್ಟರು. ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದ …

Read More »

15 ದಿನ ಅಧಿಕಾರಿಗಳಿಗಿಲ್ಲ ರಜೆ; ಮುಖ್ಯಮಂತ್ರಿ ಕಟ್ಟಪ್ಪಣೆ: ಡಿಸಿ, ಸಿಇಒಗಳೊಂದಿಗೆ ವಿಡಿಯೋ ಸಂವಾದ

ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರಿ ಮಳೆ ಬಾಧಿತ ಪ್ರದೇಶದಲ್ಲಿ ಯುದ್ಧೋಪಾದಿ ತುರ್ತು ಕೆಲಸಗಳ ಜತೆಗೆ ಪರಿಹಾರ ವಿತರಿಸಬೇಕಾಗಿದ್ದು, ಯಾವುದೇ ಅಧಿಕಾರಿಗಳಿಗೆ ಮುಂದಿನ 15 ದಿನ ರಜೆ ಮಂಜೂರು ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟಪ್ಪಣೆ ಮಾಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳ ಜತೆಗೆ ಶನಿವಾರ ಸಭೆ ನಡೆಸಿದ ಅವರು, ಮಳೆ ಹಾನಿ ಪರಿಸ್ಥಿತಿ ಹಾಗೂ ಕೈಗೊಂಡ ಕ್ರಮಗಳನ್ನು ಪರಾಮಶಿಸಿದರು. ಎಲ್ಲ ಅಧಿಕಾರಿಗಳು …

Read More »

ಕರ್ನಾಟಕ ಶಿಕ್ಷಕರ ಹುದ್ದೆ ನೇಮಕಾತಿ 2022: ಐವರಲ್ಲಿ ಒಬ್ಬರಿಗೆ ಉದ್ಯೋಗ ಖಚಿತ

ಬೆಂಗಳೂರು,ಮೇ22: ಶಿಕ್ಷಕರಾಗಬೇಕು ಅನ್ನೋ ಹಂಬಲ, ಛಲವನ್ನು ಹೊಂದಿರುವ ಅಭ್ಯರ್ಥಿಗಳು ಈಗಾಗಲೇ ಸಂಪೂರ್ಣ ತಯಾರಿಯನ್ನು ಮುಗಿಸಿ ಶಿಕ್ಷಕರ ಹುದ್ದೆ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಈ ವೇಳೆ ಭಾವಿ ಶಿಕ್ಷಕರಿಗೊಂದು ಗುಡ್ ನ್ಯೂಸ್ ಸಿಕ್ಕಿದೆ. ನೀವು ಶಿಕ್ಷಕರಾಗಬೇಕಾದರೇ ನಾಲ್ವರು ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಗೆದ್ದರೇ ಸಾಕು ಸರ್ಕಾರಿ ಶಿಕ್ಷಕ ಹುದ್ದೆ ಖಾತ್ರಿಯಾಗಲಿದೆ. ಶಿಕ್ಷಕರ ಹುದ್ದೆ ನೇಮಕಾತಿ 2022ರ ಪರೀಕ್ಷೆಯು ಮೇ21 ಶನಿವಾರ ಮತ್ತು ಮೇ22 ಭಾನುವಾರ ನಡೆಯುತ್ತಿದೆ.ಮೊದಲ ದಿನದ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು …

Read More »

ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತ

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತವಾಗಿವೆ. ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿನ ಹಿನ್ನೀರಿನಲ್ಲಿ ಮೆಕ್ಕೆಜೋಳ ಬೆಳೆ ನೀರು ಪಾಲಾಗಿದೆ. ಇದರಿಂದ ರೈತ ಮಂಜುನಾಥ್ ಕಂಗಲಾಗಿದ್ದಾರೆ. ಸಾಮಾನ್ಯವಾಗಿ ಜುಲೈ ಕೊನೆಯ ವಾರ ಟಿಬಿ ಡ್ಯಾಂನಲ್ಲಿ ಹೆಚ್ಚಿನ ಒಳ ಹರಿವು ಹೆಚ್ಚಾಗುತ್ತದೆ. ಆದರೆ ಈ ಬಾರಿ ತುಂಗಭದ್ರಾ ಜಲಾಶಯಕ್ಕೆ ನಿರೀಕ್ಷೆಗೂ ಮೊದಲೇ 85 ಸಾವಿರ ಕ್ಯೂಸೆಕ್ ಒಳ ಹರಿವು ಹೆಚ್ಚಾಗಿದ್ದು, ಸದ್ಯ ಜಲಾಶಯದಲ್ಲಿ …

Read More »

ಇಂಟರ್‌ವ್ಯೂಗೆಂದು ಹೋದ ಯುವತಿ, ಟ್ಯಾಲಿಕ್ಲಾಸ್‌ಗೆ ಹೋಗ್ತೀನೆಂದಿದ್ದ ಯುವಕ – ಆತ್ಮಹತ್ಯೆ!

ಉಡುಪಿ: ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು ಎನ್ನುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ಕಳೆದ ಮೂರು ದಿನಗಳ ಹಿಂದೆಯೇ ಮಿಸ್ಸಿಂಗ್ ಕಂಪ್ಲೈಂಟ್‌ ದಾಖಲಾಗಿತ್ತು. ಯುವತಿ ತಾಯಿ ರತ್ನಮ್ಮ ಹಾಗೂ ಮೃತ ಯುವಕನ ತಂದೆ ವೆಂಕಟರಮನ್ ರಾವ್ ಅವರಿಂದ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?: ಮೇ 19ರಂದು ಇಂಟರ್‌ವ್ಯೂಗೆ …

Read More »