Breaking News

ರಾಜ್ಯ

ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸದಾನಂದ ಹಸೆಮಣೆ ಏರಿದ್ದಾರೆ.

ಕಿರುತೆರೆಯ ಸೂಪರ್ ಹಿಟ್ `ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಸದಾನಂದ ಹಸೆಮಣೆ ಏರಿದ್ದಾರೆ. ಇದೀಗನಟ ಸದಾನಂದ ಮದುವೆಯ ಫೋಟೋಗಳ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕು ಸುಲ್ತಾನ್‌ಪುರ ಗ್ರಾಮದ ಪ್ರತಿಭೆ ಸದಾನಂದ ದುರ್ಗಪ್ಪ ಕಾಳೆ ಅವರು ಖಾಸಗಿ ಚಾನೆಲ್‌ನ್ನ ಕಾಮಿಡಿ ಕಿಲಾಡಿಗಳು ಶೋ ಮೂಲಕ ಗುರುತಿಸಿಕೊಂಡಿದ್ದರು. ತಮ್ಮ ಅಮೋಘ ನಟನೆಯಿಂದ ಗಮನ ಸೆಳೆದಿದ್ದ ನಟ ಸದಾನಂದ ಇಂದು ಸರಳವಾಗಿ ವಿವಾಹವಾಗಿದ್ದಾರೆ. …

Read More »

10 ದಿನ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ‌ ಮಗಳು

26 ವರ್ಷದ ಮಹಿಳೆಯೊಬ್ಬರು ಸುಮಾರು 10 ದಿನಗಳ ಕಾಲ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ ಘಟನೆ ಲಕ್ನೋದಲ್ಲಿ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ಆಕೆಯ ತಾಯಿ ಮೇ ಹತ್ತರಂದು ನಿಧನರಾದರು, ಆದರೆ ಆಕೆ ತಾಯಿಯ ಸಾವಿನ ಬಗ್ಗೆ ತನ್ನ ಸಂಬಂಧಿಕರು ಅಥವಾ ಸ್ನೇಹಿತರಿಗೆ ತಿಳಿಸಲಿಲ್ಲ. ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ತಿಳಿಸಿದ್ದರಿಂದ, ಪೊಲೀಸರು ಬಾಗಿಲು ಒಡೆದು ನೋಡಿದಾಗ ಕೊಳೆತ ಶವ ಪತ್ತೆಯಾಯಿತು. ಎಚ್‌ಎಎಲ್‌ನ ನಿವೃತ್ತ ಎಂಜಿನಿಯರ್ …

Read More »

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮದ್ವೆಯಾದ 21 ವರ್ಷದ ಯುವಕನ ಬರ್ಬರ ಹತ್ಯೆ

ಹೈದರಾಬಾದ್​: ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್​ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ.   ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ …

Read More »

ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು: ವಿಡಿಯೊ ಹಂಚಿ ಟಿಎಸ್‌ಆರ್‌ಟಿಸಿ ಎಚ್ಚರಿಕೆ

ಹೈದರಾಬಾದ್‌: ಮೋಟರ್‌ ಬೈಕ್‌ನ ಹಿಂಬದಿ ಚಕ್ರಕ್ಕೆ ಬುರ್ಖಾ ಸಿಲುಕಿ, ಕೆಳಗೆ ಬಿದ್ದ 18 ವರ್ಷದ ಯುವತಿ ಸಾವಿಗೀಡಾಗಿರುವ ಘಟನೆ ಹೈದರಾಬಾದ್‌ನಲ್ಲಿ ಇತ್ತೀಚೆಗೆ ಸಂಭವಿಸಿದೆ. ಸೋದರನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯ ಬುರ್ಖಾ ಹಿಂಬದಿಯ ಚಕ್ರಕ್ಕೆ ಸುತ್ತಿಕೊಂಡಿದೆ. ಹೀಗಾಗಿ ಇಬ್ಬರೂ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಆದರೆ, ಯುವತಿಗೆ ಗಂಭೀರ ಗಾಯಗಳಾಗಿತ್ತು ಎನ್ನಲಾಗಿದ್ದು, ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ವಿಡಿಯೋವನ್ನು ತೆಲಂಗಾಣದ ಸಾರಿಗೆ ನಿಗಮದ ಎಂಡಿ ವಿಸಿ ಸಜ್ಜನರ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, …

Read More »

ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ…

ಬಾಗಲಕೋಟೆ : ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಮಾನಪ್ಪ ತಳವಾರ (53) ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಜಡ್ಜ್ ಆಗಿದ್ದಾರೆ.   ಅಂದ ಹಾಗೇ ಮೂಲತಃ ಶೆಲ್ಲಿಕೇರಿ ಗ್ರಾಮದವರಾಗಿದ್ದ ಮಾನಪ್ಪ ತಳವಾರ ಬಾಗಲಕೋಟೆಯ ನವನಗರದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು..ಇಂದು ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಸಿಪಿಐ ವಿಜಯಕುಮಾರ್ ಮುರಗುಂಡಿ, ಸಿಪಿಐ ಎಸ್.ಎಂ.ಆವಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

Read More »

ಇಂದಿನಿಂದ ಪದವೀಧರ ಶಿಕ್ಷಕರ ನೇಮಕಾತಿಗೆ `CET’ : ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಭಾರೀ ಅಕ್ರಮಗಳು ಹೊರಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಮೇ. 21, 22 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಭಾರೀ ಕಟ್ಟೆಚ್ಚರ ಮತ್ತು ಕಟ್ಟುನಿಟ್ಟಾಗಿ ನಡೆಸಲು ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.   ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮೊದಲೇ ಹಾಜರಿರಬೇಕಾಗುತ್ತದೆ. ಪ್ರತಿ ಅಭ್ಯರ್ಥಿಯನ್ನೂ ಪರೀಕ್ಷಾ …

Read More »

: ನಗರವೂ ಸೇರಿದಂತೆ ‌ಜಿಲ್ಲೆಯ ಬಹುತೇಕ‌ ಕಡೆಗಳಲ್ಲಿ ‌ಜಿಟಿಜಿಟಿ‌ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ‌ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತ

ಬೆಳಗಾವಿ: ನಗರವೂ ಸೇರಿದಂತೆ ‌ಜಿಲ್ಲೆಯ ಬಹುತೇಕ‌ ಕಡೆಗಳಲ್ಲಿ ‌ಜಿಟಿಜಿಟಿ‌ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ‌ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುರುವಾರ ರಾತ್ರಿಯಿಂದಲೂ ವರ್ಷಧಾರೆ ಮುಂದುವರಿದಿದೆ. ಮೂಡಲಗಿ ತಾಲ್ಲೂಕಿನಲ್ಲಿ ಘಟಪ್ರಭಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ, ಮೂಡಲಗಿ- ಸುಣದೋಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಕೆಳಹಂತದ ಸೇತುವೆ ಇದಾಗಿದ್ದು, ಅದರ ಮೇಲೆಯೇ ಅಪಾಯ ಲೆಕ್ಕಿಸದೆ ಜನರು ಸಂಚರಿಸುತ್ತಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ತೀರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ತಡರಾತ್ರಿ ಮಳೆಯಿಂದಾಗಿ …

Read More »

ಏಣಗಿ ಬಾಳಪ್ಪ ಕುರಿತ ಕೃತಿ ಮೇ 22ರಂದು ಬಿಡುಗಡೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ, ರಂಗ ಸಂಪದ ಹಾಗೂ ಚಂದ್ರಕಾಂತ ಕುಸನೂರ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ರಂಗಕರ್ಮಿ ಏಣಗಿ ಬಾಳಪ್ಪ ಅವರ ರಂಗಾನುಭವಗಳ ಕುರಿತು ಗಣೇಶ ಅಮೀನಗಡ ನಿರೂಪಿಸಿದ ‘ಬಣ್ಣದ ಬದುಕಿನ ಚಿನ್ನದ ದಿನಗಳು’ ಕೃತಿಯ 8ನೇ ಮುದ್ರಣದ ಬಿಡುಗಡೆ ಸಮಾರಂಭವನ್ನು ಇಲ್ಲಿನ ರಾಣಿ ಚನ್ನಮ್ಮ ವೃತ್ತ ಸಮೀಪದ ಕನ್ನಡ ಸಾಹಿತ್ಯ ಭವನದಲ್ಲಿ ಮೇ 22ರಂದು ಸಂಜೆ 4ಕ್ಕೆ ಆಯೋಜಿಸಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಸರಜೂ ಕಾಟ್ಕರ್‌ ಬಿಡುಗಡೆ ಮಾಡಲಿದ್ದಾರೆ. …

Read More »

ರಾಜಧಾನಿಯಲ್ಲಿ ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ,

ಬೆಂಗಳೂರು: ಪಾದಾಚಾರಿ ( pedestrian ) ಗಳ ಮೇಲೆ ಕಾರು ಹರಿದು ಹೋಗಿ ಓರ್ವ ದುರ್ಮರಣ ಹೊಂದಿದ ಘಟನೆ ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತ (Accident)ದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಶಿವರಾಜು, ಶೈಲೇಂದ್ರ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ …

Read More »

ಹೈಕಮಾಂಡ್ ಬುಲಾವ್, ಸಿಎಂ ದೆಹಲಿಗೆ ದೌಡು:

ಬೆಂಗಳೂರು, ಮೇ 20: ಮಳೆಯಿಂದ ಹಾನಿಯಾಗಿರುವ ರಾಜಧಾನಿಯ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ, ಹೈಕಮಾಂಡ್ ನಿಂದ ತುರ್ತು ಬುಲಾವ್ ಬಂದಿದೆ. ಇಂದು ಮಧ್ಯಾಹ್ನದ ನಂತರ ಸಿಎಂ ದೆಹಲಿಗೆ ಹೊರಡಲಿದ್ದಾರೆ ಎಂದು ವರದಿಯಾಗಿದೆ.   ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಕಚೇರಿಯಿಂದಲೇ ದೂರವಾಣಿ ಕರೆ ಬಂದಿದ್ದು, ಇಂದು ಸಂಜೆ ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗುವ ಸಾಧ್ಯತೆಯಿದೆ. ಜೊತೆಗೆ, ಅಪಾಯಿಂಟ್ಮೆಂಟ್ ಸಿಕ್ಕಿದರೆ ಅಮಿತ್ ಶಾ ಅವರನ್ನೂ ಬೊಮ್ಮಾಯಿ …

Read More »