Breaking News
Home / ರಾಜ್ಯ (page 1820)

ರಾಜ್ಯ

ಬೈಕ್ ಸ್ಟಂಟ್ ರಾಣಿಯರಿಗೆ ಬಿತ್ತು ಭಾರೀ ದಂಡ

ಲಕ್ನೋ: ಹುಡುಗಿಯರಿಬ್ಬರು ಬೈಕ್‍ನಲ್ಲಿ ಸ್ಟಂಟ್ ಮಾಡಿ ಅದನ್ನು ಚಿತ್ರೀಕರಣ ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಇದನ್ನು ಗಮನಿಸಿರುವ ಪೊಲೀಸರು ಬೈಕ್ ರೈಡ್ ಮಾಡಿದ ಹುಡುಗಿಯ ಮೇಲೆ 28 ಸಾವಿರ ರೂಪಾಯಿ ದಂಡ ಪ್ರಯೋಗ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಉತ್ತರ ಪ್ರದೇಶದ ಗಾಜಿಯಾಬಾದ್‍ನ ಶಿವಾಂಗಿ ದಬಾಸ್ ತನ್ನ ಸ್ನೇಹಿತೆ ಕುಸ್ತಿಪಟು ಸ್ನೇಹಾ ರಘವಂಶಿಯ ಹೆಗಲ ಮೇಲೆ ಕೂತು ಬುಲೆಟ್ ಬೈಕ್‍ನಲ್ಲಿ ಗಾಜಿಯಾಬಾದ್‍ನಲ್ಲಿ ರೌಂಡ್ಸ್ ಹೊಡೆದಿದ್ದಾಳೆ. ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ …

Read More »

ಗೋಕಾಕ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನುರುಲ್ಲಾ ಕೋತ್ವಾಲಗೌಡ..

  ಗೋಕಾಕ: ನಗರದಲ್ಲಿ “ನಗರ ಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ನುರುಲ್ಲಾ ಕೋತ್ವಾಲಗೌಡ ಅವರು ನಗರಸಭೆ ಕಾರ್ಯಲಯದ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ 26 ನೇ ವಾರ್ಡ ನಂಬರನಿಂದ ಸ್ಪರ್ಧಿಸುತ್ತಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಅವರು ವಾರ್ಡ್ ನಂಬರ 26ನೇ ವಾರ್ಡಿನಿಂದ ನಾನು ಸ್ಪರ್ಧಿಸುತ್ತಿದ್ದು, ಮೊದಲು ನಮ್ಮ ಸಹೋದರ ಸ್ಪರ್ಧಿಸುತ್ತಿದ್ದು ಅವರು ಅಗಲಿದ ಬಳಿಕ ಅವರ ಸ್ಥಾನದಲ್ಲಿ ನಾನು ಸ್ಪರ್ಧಿಸುತ್ತಿದೆನೆ. ಇದರ ಬಗ್ಗೆಯು ಜಾರಕಿಹೊಳಿ ಮೂರು ಸಹೋದರರ …

Read More »

ಕನ್ನಡ ದ್ರೋಹಿ MES ನಿಷೇಧಿಸಿ: ಶುಭಂ ಸೆಳಕೆ ಗಡಿಪಾರು ಮಾಡಿ ಎಂದು ಕನ್ನಡ ಸಂಘಟನೆ ಆಗ್ರಹ..

ಘಟಪ್ರಭಾ: ಬೆಳಗಾವಿಯಲ್ಲಿ ಇರುವ ಕನ್ನಡ ನಾಡ ದ್ರೋಹಿ ಶುಭಂ ಸೆಳಕೆ ಇತನು ಕನ್ನಡದ ಶಾಲು ಹಾಕಿಕೊಂಡು ಅಲೆದಾಡುವವರ ವಿರುದ್ಧ ಅಟ್ಟಿಸಿಕೊಂಡು ಹೊಡೆಯುವ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶಿಸಿ ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಮೃತ್ಯುಂಜಯ ಸರ್ಕಲನಲ್ಲಿ ಪ್ರತಿಭಟನೆ ಮಾಡಲಾಯಿತು. ಶ್ರೀಶೈಲ ಬ್ಯಾಕೂಡ ನಿರೀಕ್ಷಕರು, ಘಟಪ್ರಭಾ ಪೋಲಿಸ್ ಠಾಣೆ ಇವರ ಮುಖಾಂತರ ಲಕ್ಷ್ಮಣ ಣ ನಿಂಬರಗಿ ಪೋಲಿಸ್ ಅಧಿಕ್ಷಕರು ಬೆಳಗಾವಿ ಅವರಿಗೆ ಮನವಿ …

Read More »

ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ

ಬೆಂಗಳೂರು – ರಾಜ್ಯದಲ್ಲಿ ಕೊರೋನಾದಿಂದ ತತ್ತರಿಸಿರುವ ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ. ಕೆಲವರು ಗುಳೆ ಹೋಗಿದ್ದರೆ ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರ ತಕ್ಷಣ ಅವರ ನೆರವಿಗೆ ಬರಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಜವಳಿ ಸಚಿವರು ನಮ್ಮ …

Read More »

ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ

ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ …

Read More »

ಗರಿಗೆದರಿದ ಉಪಚುನಾವಣೆ ಕಣ : ಕಾಂಗ್ರೆಸ್-ಬಿಜೆಪಿ ಭರ್ಜರಿ ಪ್ರಚಾರ

ರಾಯಚೂರು : ಮಸ್ಕಿ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾ ಆರಂಭಿಸಿದ್ದಾರೆ. ಕಾಂಗ್ರಸ್ ದ್ವಿಚಕ್ರ ವಾಹನ ಹಾಗೂ ಮನೆ ಮನೆ ಪ್ರಚಾರಕ್ಕಿಳಿದಿದೆ. ಕಾಂಗ್ರೆಸ್ ನಾಯಕ ಬಸನಗೌಡ ತುರುವಿಹಾಳ ಬೂತ್ ಮಟ್ಟದಿಂದ ಮತಬೇಟೆ ಆರಂಭಿಸಿದ್ದಾರೆ. ಇತ್ತ ಬಿಜೆಪಿ ಪಕ್ಷದಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಸ್ಕಿಯಲ್ಲಿ ಮಾರ್ಚ್​ 20ರಂದು ಸಂಜೆ …

Read More »

ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು

ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.

Read More »

ಮೋದಿ ಪ್ರಧಾನ ಸಲಹೆಗಾರ ಪಿ.ಕೆ ಸಿನ್ಹಾ ರಾಜೀನಾಮೆ PM Modi’s principal advisor P K Sinha resigns

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರರಾಗಿದ್ದ ಪ್ರದೀಪ್ ಕುಮಾರ್ ನಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಿಕೆ ಸಿನ್ಹಾ ಅವರು ಈ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 1977ನೇ ಬ್ಯಾಚ್ ನ ನಿವೃತ್ತಿ ಐಎಎಸ್ ಅಧಿಕಾರಿಯಾಗಿರುವ ಸಿನ್ಹಾ ಅವರನ್ನ 2019ರ ಆಗಸ್ಟ್ ತಿಂಗಳಲ್ಲಿ ಮೋದಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಇದಲ್ಲದೆ ಸಿನ್ಹಾ ಅವರು ನಾಲ್ಕು ವರ್ಷಗಳ ಕಾಲ ಕ್ಯಾಬಿನೆಟ್ …

Read More »

ರಾಜಕಾರಣದಲ್ಲಿ ಬದ್ಧತೆ ಕೊರತೆ: ಬಸವರಾಜ ಹೊರಟ್ಟಿ ವಿಷಾದ

ಗದಗ: ‘ಇಂದಿನ ರಾಜಕಾರಣದಲ್ಲಿ ಬದ್ಧತೆ ಇಲ್ಲ. ಚುನಾವಣೆ ಮಾಡುವ ಎಲ್ಲ ಪಕ್ಷದವರೂ ಹಣ, ಹೆಂಡ ಹಂಚುತ್ತಾರೆ’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ‘ಇಂತಹ ಕಲುಷಿತ ವಾತಾವರಣದಲ್ಲಿ ನಾವು ಇನ್ನೂ ರಾಜಕಾರಣ ಮಾಡಬೇಕಿದೆ. ಓಟು ಹಾಕುವವರು ಮೂವರಿಂದಲೂ ಪಡೆದುಕೊಂಡು ಒಬ್ಬರಿಗೆ ವೋಟು ಹಾಕಿ ಇನ್ನಿಬ್ಬರಿಗೆ ಟೋಪಿ ಹಾಕುತ್ತಾರೆ. ಟೋಪಿ ಹಾಕಿಸಿಕೊಂಡವನು ಸೋಲುತ್ತಾನೆ. ಎಂದಾರೂ ಆರಿಸಿ ಬಂದರೆ ಅವನು ಎಲ್ಲರಿಗೂ ಟೋಪಿ ಹಾಕುತ್ತಾನೆ. ಇವತ್ತು ದುಡ್ಡಿದ್ದವರದ್ದೇ ರಾಜಕಾರಣವಾಗಿದೆ. ಪಕ್ಷಗಳು …

Read More »

ಲೋಕಸಭಾ ಉಪ‌ಚುನಾವಣೆ ಘೋಷಣೆ ನೀತಿಸಂಹಿತೆ ತಕ್ಷಣವೇ ಜಾರಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಲೋಕಸಭಾ ಉಪ‌ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ಸಂಜೆ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿರುತ್ತದೆ. ಇದೀಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ …

Read More »